AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ಗುರುವಿಗೆ ತಕ್ಕ ಶಿಷ್ಯ: ವಿರಾಟ್ ಕೊಹ್ಲಿಯ ನಡೆಗೆ ಭಾರೀ ಮೆಚ್ಚುಗೆ

IPL 2023 Kannada: ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಡುಪ್ಲೆಸಿಸ್ ಹಾಗೂ ವಿರಾಟ್ ಕೊಹ್ಲಿ ಭರ್ಜರಿ ಆರಂಭ ಒದಗಿಸಿದ್ದರು.

TV9 Web
| Edited By: |

Updated on:May 06, 2023 | 9:16 PM

Share
IPL 2023: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯಕ್ಕೂ ಮುನ್ನ ದೆಹಲಿಯ ಅರುಣ್ ಜೇಟ್ಲಿ ಮೈದಾನವು ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ಕುಮಾರ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು.

IPL 2023: ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯಕ್ಕೂ ಮುನ್ನ ದೆಹಲಿಯ ಅರುಣ್ ಜೇಟ್ಲಿ ಮೈದಾನವು ಅಪೂರ್ವ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ಕುಮಾರ್ ಶರ್ಮಾ ಮೈದಾನದಲ್ಲಿ ಕಾಣಿಸಿಕೊಂಡಿದ್ದರು.

1 / 7
ಇತ್ತ ಮೈದಾನದ ಮತ್ತೊಂದು ಬದಿಯಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದ ಕಿಂಗ್ ಕೊಹ್ಲಿ, ಅಭ್ಯಾಸ ನಿಲ್ಲಿಸಿ ಕೋಚ್​ನತ್ತ ಧಾವಿಸಿದರು. ಅಷ್ಟೇ ಅಲ್ಲದೆ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದು ಕೆಲ ಕಾಲ ಕುಶಲೋಪರಿ ನಡೆಸಿದರು.

ಇತ್ತ ಮೈದಾನದ ಮತ್ತೊಂದು ಬದಿಯಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ದ ಕಿಂಗ್ ಕೊಹ್ಲಿ, ಅಭ್ಯಾಸ ನಿಲ್ಲಿಸಿ ಕೋಚ್​ನತ್ತ ಧಾವಿಸಿದರು. ಅಷ್ಟೇ ಅಲ್ಲದೆ ಅವರ ಪಾದ ಮುಟ್ಟಿ ಆಶೀರ್ವಾದ ಪಡೆದು ಕೆಲ ಕಾಲ ಕುಶಲೋಪರಿ ನಡೆಸಿದರು.

2 / 7
ಇದೀಗ ಗುರು ಶಿಷ್ಯರ ಸಂಬಂಧವನ್ನು ಸಾರುವ ರಾಜ್​ಕುಮಾರ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಕೊಹ್ಲಿ ತಮ್ಮ ಬಾಲ್ಯದ ಕೋಚ್​ಗೆ ನೀಡಿದ ಗೌರವಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇದೀಗ ಗುರು ಶಿಷ್ಯರ ಸಂಬಂಧವನ್ನು ಸಾರುವ ರಾಜ್​ಕುಮಾರ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಕೊಹ್ಲಿ ತಮ್ಮ ಬಾಲ್ಯದ ಕೋಚ್​ಗೆ ನೀಡಿದ ಗೌರವಕ್ಕೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

3 / 7
ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಡುಪ್ಲೆಸಿಸ್ ಹಾಗೂ ಕೊಹ್ಲಿ ಭರ್ಜರಿ ಆರಂಭ ಒದಗಿಸಿದ್ದರು.

ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಆರ್​ಸಿಬಿಗೆ ಡುಪ್ಲೆಸಿಸ್ ಹಾಗೂ ಕೊಹ್ಲಿ ಭರ್ಜರಿ ಆರಂಭ ಒದಗಿಸಿದ್ದರು.

4 / 7
ಮೊದಲ ವಿಕೆಟ್​ಗೆ 10 ಓವರ್​ಗಳಲ್ಲಿ 82 ರನ್ ಕಲೆಹಾಕುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಈ ಹಂತದಲ್ಲಿ ಡುಪ್ಲೆಸಿಸ್ (45) ಔಟಾದರು. ಇದರ ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್​ವೆಲ್ (0) ಕೂಡ ಮಿಚೆಲ್ ಮಾರ್ಷ್​ಗೆ ವಿಕೆಟ್ ಒಪ್ಪಿಸಿದರು.

ಮೊದಲ ವಿಕೆಟ್​ಗೆ 10 ಓವರ್​ಗಳಲ್ಲಿ 82 ರನ್ ಕಲೆಹಾಕುವ ಮೂಲಕ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಈ ಹಂತದಲ್ಲಿ ಡುಪ್ಲೆಸಿಸ್ (45) ಔಟಾದರು. ಇದರ ಬೆನ್ನಲ್ಲೇ ಗ್ಲೆನ್ ಮ್ಯಾಕ್ಸ್​ವೆಲ್ (0) ಕೂಡ ಮಿಚೆಲ್ ಮಾರ್ಷ್​ಗೆ ವಿಕೆಟ್ ಒಪ್ಪಿಸಿದರು.

5 / 7
ಮತ್ತೊಂದೆಡೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 46 ಎಸೆತಗಳಲ್ಲಿ 55 ರನ್ ಬಾರಿಸಿ 16ನೇ ಓವರ್​ನಲ್ಲಿ ಮುಕೇಶ್ ಕುಮಾರ್​ಗೆ ವಿಕೆಟ್ ಒಪ್ಪಿಸಿದರು.

ಮತ್ತೊಂದೆಡೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 42 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 46 ಎಸೆತಗಳಲ್ಲಿ 55 ರನ್ ಬಾರಿಸಿ 16ನೇ ಓವರ್​ನಲ್ಲಿ ಮುಕೇಶ್ ಕುಮಾರ್​ಗೆ ವಿಕೆಟ್ ಒಪ್ಪಿಸಿದರು.

6 / 7
ಇನ್ನೊಂದೆಡೆ ಚೊಚ್ಚಲ ಅರ್ಧಶತಕ ಬಾರಿಸುವ ಮೂಲಕ ಮಹಿಪಾಲ್ ಲೋಮ್ರರ್ ತಂಡಕ್ಕೆ ಆಸರೆಯಾದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಆರ್​ಸಿಬಿ ತಂಡವು 4 ವಿಕೆಟ್ ನಷ್ಟಕ್ಕೆ 181 ರನ್​ ಕಲೆಹಾಕಿತು.

ಇನ್ನೊಂದೆಡೆ ಚೊಚ್ಚಲ ಅರ್ಧಶತಕ ಬಾರಿಸುವ ಮೂಲಕ ಮಹಿಪಾಲ್ ಲೋಮ್ರರ್ ತಂಡಕ್ಕೆ ಆಸರೆಯಾದರು. ಪರಿಣಾಮ ನಿಗದಿತ 20 ಓವರ್​ಗಳಲ್ಲಿ ಆರ್​ಸಿಬಿ ತಂಡವು 4 ವಿಕೆಟ್ ನಷ್ಟಕ್ಕೆ 181 ರನ್​ ಕಲೆಹಾಕಿತು.

7 / 7

Published On - 9:15 pm, Sat, 6 May 23

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ