AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಆಡಿದ್ದೇ ದಾಖಲೆಗಾಗಿ ಎಂದ ಸೈಮನ್ ಡೌಲ್

IPL 2023 Kannada: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 15ನೇ ಪಂದ್ಯದಲ್ಲಿ ಆರ್​ಸಿಬಿ ನೀಡಿದ 213 ರನ್​ಗಳ ಗುರಿಯನ್ನು ಬೆನ್ನತ್ತಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತು.

TV9 Web
| Edited By: |

Updated on: Apr 11, 2023 | 2:58 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರೋಚಕ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಬೃಹತ್ ಮೊತ್ತ ಪೇರಿಸಿತ್ತು.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರೋಚಕ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಬೃಹತ್ ಮೊತ್ತ ಪೇರಿಸಿತ್ತು.

1 / 7
ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಮೊದಲ ವಿಕೆಟ್​ಗೆ 96 ರನ್​ಗಳ ಜೊತೆಯಾಟವಾಡಿದ್ದರು. 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಕೊಹ್ಲಿ ಆ ಬಳಿಕ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 4 ಫೋರ್​ನೊಂದಿಗೆ 61 ರನ್ ಬಾರಿಸಿ ಔಟಾಗಿದ್ದರು.

ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಮೊದಲ ವಿಕೆಟ್​ಗೆ 96 ರನ್​ಗಳ ಜೊತೆಯಾಟವಾಡಿದ್ದರು. 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಕೊಹ್ಲಿ ಆ ಬಳಿಕ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 4 ಫೋರ್​ನೊಂದಿಗೆ 61 ರನ್ ಬಾರಿಸಿ ಔಟಾಗಿದ್ದರು.

2 / 7
ಆದರೆ ಇದೀಗ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಅದರಲ್ಲೂ ಅತ್ಯುತ್ತಮ ಬ್ಯಾಟಿಂಗ್ ಟ್ರಾಕ್​ನಲ್ಲೂ ಕೊಹ್ಲಿ ದಾಖಲೆಗಳಿಗಾಗಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದಾರೆ ಎಂದು ಕಮೆಂಟೇಟರ್ ಸೈಮನ್ ಡೌಲ್ ಆರೋಪಿಸಿದ್ದಾರೆ.

ಆದರೆ ಇದೀಗ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಅದರಲ್ಲೂ ಅತ್ಯುತ್ತಮ ಬ್ಯಾಟಿಂಗ್ ಟ್ರಾಕ್​ನಲ್ಲೂ ಕೊಹ್ಲಿ ದಾಖಲೆಗಳಿಗಾಗಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದಾರೆ ಎಂದು ಕಮೆಂಟೇಟರ್ ಸೈಮನ್ ಡೌಲ್ ಆರೋಪಿಸಿದ್ದಾರೆ.

3 / 7
ಈ ಪಂದ್ಯದಲ್ಲಿ ನಿಧಾನಗತಿಯ ಆರಂಭದ ಪಡೆದ ಬಳಿಕ ವಿರಾಟ್ ಕೊಹ್ಲಿ ಎರಡನೇ ಓವರ್‌ನಲ್ಲಿ ಸತತ ಸಿಕ್ಸರ್ ಮತ್ತು ಫೋರ್‌ ಸಿಡಿಸಿದರು. ಅವೇಶ್ ಖಾನ್ ಎಸೆದ 4ನೇ ಓವರ್​ನಲ್ಲೂ ಮೂರು ಬೌಂಡರಿ ಬಾರಿಸಿದ್ದರು. ಅಲ್ಲದೆ ಕೃನಾಲ್ ಪಾಂಡ್ಯ ಹಾಗೂ ಮಾರ್ಕ್​ವುಡ್ ಎಸೆತಗಳಿಗೂ ಭರ್ಜರಿ ಉತ್ತರ ನೀಡಿದ್ದರು.

ಈ ಪಂದ್ಯದಲ್ಲಿ ನಿಧಾನಗತಿಯ ಆರಂಭದ ಪಡೆದ ಬಳಿಕ ವಿರಾಟ್ ಕೊಹ್ಲಿ ಎರಡನೇ ಓವರ್‌ನಲ್ಲಿ ಸತತ ಸಿಕ್ಸರ್ ಮತ್ತು ಫೋರ್‌ ಸಿಡಿಸಿದರು. ಅವೇಶ್ ಖಾನ್ ಎಸೆದ 4ನೇ ಓವರ್​ನಲ್ಲೂ ಮೂರು ಬೌಂಡರಿ ಬಾರಿಸಿದ್ದರು. ಅಲ್ಲದೆ ಕೃನಾಲ್ ಪಾಂಡ್ಯ ಹಾಗೂ ಮಾರ್ಕ್​ವುಡ್ ಎಸೆತಗಳಿಗೂ ಭರ್ಜರಿ ಉತ್ತರ ನೀಡಿದ್ದರು.

4 / 7
ಪವರ್​ಪ್ಲೇ ಮುಕ್ತಾಯದ ವೇಳೆಗೆ 42 ರನ್​ಗಳಿಸಿದ್ದ ವಿರಾಟ್ ಕೊಹ್ಲಿ ಆ ಬಳಿಕ ಮತ್ತಷ್ಟು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂದು ಸೈಮನ್ ಡೌಲ್ ಚಾಟಿ ಬೀಸಿದ್ದಾರೆ. ಏಕೆಂದರೆ ಕೊಹ್ಲಿ ಮುಂದಿನ 8 ರನ್​ಗಳನ್ನು ತೆಗೆದುಕೊಂಡಿದ್ದು ಬರೋಬ್ಬರಿ 10 ಎಸೆತಗಳನ್ನು.

ಪವರ್​ಪ್ಲೇ ಮುಕ್ತಾಯದ ವೇಳೆಗೆ 42 ರನ್​ಗಳಿಸಿದ್ದ ವಿರಾಟ್ ಕೊಹ್ಲಿ ಆ ಬಳಿಕ ಮತ್ತಷ್ಟು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂದು ಸೈಮನ್ ಡೌಲ್ ಚಾಟಿ ಬೀಸಿದ್ದಾರೆ. ಏಕೆಂದರೆ ಕೊಹ್ಲಿ ಮುಂದಿನ 8 ರನ್​ಗಳನ್ನು ತೆಗೆದುಕೊಂಡಿದ್ದು ಬರೋಬ್ಬರಿ 10 ಎಸೆತಗಳನ್ನು.

5 / 7
ಅಂದರೆ ಇಲ್ಲಿ ಅರ್ಧಶತಕ ಪೂರೈಸುವ ಸಲುವಾಗಿ ವಿರಾಟ್ ಕೊಹ್ಲಿ 10 ಎಸೆತಗಳಲ್ಲಿ ಕೇವಲ 8 ರನ್​ ಕಲೆಹಾಕಿದ್ದಾರೆ. ಕೊಹ್ಲಿ ತಮ್ಮ ವೈಯಕ್ತಿಕ ದಾಖಲೆಗಳಿಗಾಗಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರು. ಇಂತಹ ಆಟ ಉತ್ತಮ ನಡೆಯಲ್ಲ ಎಂದು ಸೈಮನ್ ಡೌಲ್ ಹೇಳಿದ್ದಾರೆ.

ಅಂದರೆ ಇಲ್ಲಿ ಅರ್ಧಶತಕ ಪೂರೈಸುವ ಸಲುವಾಗಿ ವಿರಾಟ್ ಕೊಹ್ಲಿ 10 ಎಸೆತಗಳಲ್ಲಿ ಕೇವಲ 8 ರನ್​ ಕಲೆಹಾಕಿದ್ದಾರೆ. ಕೊಹ್ಲಿ ತಮ್ಮ ವೈಯಕ್ತಿಕ ದಾಖಲೆಗಳಿಗಾಗಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರು. ಇಂತಹ ಆಟ ಉತ್ತಮ ನಡೆಯಲ್ಲ ಎಂದು ಸೈಮನ್ ಡೌಲ್ ಹೇಳಿದ್ದಾರೆ.

6 / 7
ಇದೀಗ ಸೈಮನ್ ಡೌಲ್ ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಕೆಲವರು ಅಂಕಿ ಅಂಶಗಳನ್ನು ಮುಂದಿಟ್ಟು ನ್ಯೂಜಿಲೆಂಡ್​ನ ಮಾಜಿ ಆಟಗಾರ ಮಾಡಿರುವ ಆರೋಪವನ್ನು ಒಪ್ಪಿದರೆ, ಮತ್ತೆ ಕೆಲವರು ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

ಇದೀಗ ಸೈಮನ್ ಡೌಲ್ ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಕೆಲವರು ಅಂಕಿ ಅಂಶಗಳನ್ನು ಮುಂದಿಟ್ಟು ನ್ಯೂಜಿಲೆಂಡ್​ನ ಮಾಜಿ ಆಟಗಾರ ಮಾಡಿರುವ ಆರೋಪವನ್ನು ಒಪ್ಪಿದರೆ, ಮತ್ತೆ ಕೆಲವರು ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

7 / 7
Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?