AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ಆಡಿದ್ದೇ ದಾಖಲೆಗಾಗಿ ಎಂದ ಸೈಮನ್ ಡೌಲ್

IPL 2023 Kannada: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 15ನೇ ಪಂದ್ಯದಲ್ಲಿ ಆರ್​ಸಿಬಿ ನೀಡಿದ 213 ರನ್​ಗಳ ಗುರಿಯನ್ನು ಬೆನ್ನತ್ತಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 1 ವಿಕೆಟ್​ನಿಂದ ರೋಚಕ ಜಯ ಸಾಧಿಸಿತು.

TV9 Web
| Edited By: |

Updated on: Apr 11, 2023 | 2:58 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರೋಚಕ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಬೃಹತ್ ಮೊತ್ತ ಪೇರಿಸಿತ್ತು.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ರೋಚಕ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಬೃಹತ್ ಮೊತ್ತ ಪೇರಿಸಿತ್ತು.

1 / 7
ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಮೊದಲ ವಿಕೆಟ್​ಗೆ 96 ರನ್​ಗಳ ಜೊತೆಯಾಟವಾಡಿದ್ದರು. 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಕೊಹ್ಲಿ ಆ ಬಳಿಕ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 4 ಫೋರ್​ನೊಂದಿಗೆ 61 ರನ್ ಬಾರಿಸಿ ಔಟಾಗಿದ್ದರು.

ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಮೊದಲ ವಿಕೆಟ್​ಗೆ 96 ರನ್​ಗಳ ಜೊತೆಯಾಟವಾಡಿದ್ದರು. 35 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದ ಕೊಹ್ಲಿ ಆ ಬಳಿಕ 44 ಎಸೆತಗಳಲ್ಲಿ 4 ಭರ್ಜರಿ ಸಿಕ್ಸರ್ ಹಾಗೂ 4 ಫೋರ್​ನೊಂದಿಗೆ 61 ರನ್ ಬಾರಿಸಿ ಔಟಾಗಿದ್ದರು.

2 / 7
ಆದರೆ ಇದೀಗ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಅದರಲ್ಲೂ ಅತ್ಯುತ್ತಮ ಬ್ಯಾಟಿಂಗ್ ಟ್ರಾಕ್​ನಲ್ಲೂ ಕೊಹ್ಲಿ ದಾಖಲೆಗಳಿಗಾಗಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದಾರೆ ಎಂದು ಕಮೆಂಟೇಟರ್ ಸೈಮನ್ ಡೌಲ್ ಆರೋಪಿಸಿದ್ದಾರೆ.

ಆದರೆ ಇದೀಗ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಅದರಲ್ಲೂ ಅತ್ಯುತ್ತಮ ಬ್ಯಾಟಿಂಗ್ ಟ್ರಾಕ್​ನಲ್ಲೂ ಕೊಹ್ಲಿ ದಾಖಲೆಗಳಿಗಾಗಿ ನಿಧಾನಗತಿಯಲ್ಲಿ ಬ್ಯಾಟ್ ಬೀಸಿದ್ದಾರೆ ಎಂದು ಕಮೆಂಟೇಟರ್ ಸೈಮನ್ ಡೌಲ್ ಆರೋಪಿಸಿದ್ದಾರೆ.

3 / 7
ಈ ಪಂದ್ಯದಲ್ಲಿ ನಿಧಾನಗತಿಯ ಆರಂಭದ ಪಡೆದ ಬಳಿಕ ವಿರಾಟ್ ಕೊಹ್ಲಿ ಎರಡನೇ ಓವರ್‌ನಲ್ಲಿ ಸತತ ಸಿಕ್ಸರ್ ಮತ್ತು ಫೋರ್‌ ಸಿಡಿಸಿದರು. ಅವೇಶ್ ಖಾನ್ ಎಸೆದ 4ನೇ ಓವರ್​ನಲ್ಲೂ ಮೂರು ಬೌಂಡರಿ ಬಾರಿಸಿದ್ದರು. ಅಲ್ಲದೆ ಕೃನಾಲ್ ಪಾಂಡ್ಯ ಹಾಗೂ ಮಾರ್ಕ್​ವುಡ್ ಎಸೆತಗಳಿಗೂ ಭರ್ಜರಿ ಉತ್ತರ ನೀಡಿದ್ದರು.

ಈ ಪಂದ್ಯದಲ್ಲಿ ನಿಧಾನಗತಿಯ ಆರಂಭದ ಪಡೆದ ಬಳಿಕ ವಿರಾಟ್ ಕೊಹ್ಲಿ ಎರಡನೇ ಓವರ್‌ನಲ್ಲಿ ಸತತ ಸಿಕ್ಸರ್ ಮತ್ತು ಫೋರ್‌ ಸಿಡಿಸಿದರು. ಅವೇಶ್ ಖಾನ್ ಎಸೆದ 4ನೇ ಓವರ್​ನಲ್ಲೂ ಮೂರು ಬೌಂಡರಿ ಬಾರಿಸಿದ್ದರು. ಅಲ್ಲದೆ ಕೃನಾಲ್ ಪಾಂಡ್ಯ ಹಾಗೂ ಮಾರ್ಕ್​ವುಡ್ ಎಸೆತಗಳಿಗೂ ಭರ್ಜರಿ ಉತ್ತರ ನೀಡಿದ್ದರು.

4 / 7
ಪವರ್​ಪ್ಲೇ ಮುಕ್ತಾಯದ ವೇಳೆಗೆ 42 ರನ್​ಗಳಿಸಿದ್ದ ವಿರಾಟ್ ಕೊಹ್ಲಿ ಆ ಬಳಿಕ ಮತ್ತಷ್ಟು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂದು ಸೈಮನ್ ಡೌಲ್ ಚಾಟಿ ಬೀಸಿದ್ದಾರೆ. ಏಕೆಂದರೆ ಕೊಹ್ಲಿ ಮುಂದಿನ 8 ರನ್​ಗಳನ್ನು ತೆಗೆದುಕೊಂಡಿದ್ದು ಬರೋಬ್ಬರಿ 10 ಎಸೆತಗಳನ್ನು.

ಪವರ್​ಪ್ಲೇ ಮುಕ್ತಾಯದ ವೇಳೆಗೆ 42 ರನ್​ಗಳಿಸಿದ್ದ ವಿರಾಟ್ ಕೊಹ್ಲಿ ಆ ಬಳಿಕ ಮತ್ತಷ್ಟು ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂದು ಸೈಮನ್ ಡೌಲ್ ಚಾಟಿ ಬೀಸಿದ್ದಾರೆ. ಏಕೆಂದರೆ ಕೊಹ್ಲಿ ಮುಂದಿನ 8 ರನ್​ಗಳನ್ನು ತೆಗೆದುಕೊಂಡಿದ್ದು ಬರೋಬ್ಬರಿ 10 ಎಸೆತಗಳನ್ನು.

5 / 7
ಅಂದರೆ ಇಲ್ಲಿ ಅರ್ಧಶತಕ ಪೂರೈಸುವ ಸಲುವಾಗಿ ವಿರಾಟ್ ಕೊಹ್ಲಿ 10 ಎಸೆತಗಳಲ್ಲಿ ಕೇವಲ 8 ರನ್​ ಕಲೆಹಾಕಿದ್ದಾರೆ. ಕೊಹ್ಲಿ ತಮ್ಮ ವೈಯಕ್ತಿಕ ದಾಖಲೆಗಳಿಗಾಗಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರು. ಇಂತಹ ಆಟ ಉತ್ತಮ ನಡೆಯಲ್ಲ ಎಂದು ಸೈಮನ್ ಡೌಲ್ ಹೇಳಿದ್ದಾರೆ.

ಅಂದರೆ ಇಲ್ಲಿ ಅರ್ಧಶತಕ ಪೂರೈಸುವ ಸಲುವಾಗಿ ವಿರಾಟ್ ಕೊಹ್ಲಿ 10 ಎಸೆತಗಳಲ್ಲಿ ಕೇವಲ 8 ರನ್​ ಕಲೆಹಾಕಿದ್ದಾರೆ. ಕೊಹ್ಲಿ ತಮ್ಮ ವೈಯಕ್ತಿಕ ದಾಖಲೆಗಳಿಗಾಗಿ ನಿಧಾನಗತಿಯ ಬ್ಯಾಟಿಂಗ್ ಮಾಡಿದ್ದರು. ಇಂತಹ ಆಟ ಉತ್ತಮ ನಡೆಯಲ್ಲ ಎಂದು ಸೈಮನ್ ಡೌಲ್ ಹೇಳಿದ್ದಾರೆ.

6 / 7
ಇದೀಗ ಸೈಮನ್ ಡೌಲ್ ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಕೆಲವರು ಅಂಕಿ ಅಂಶಗಳನ್ನು ಮುಂದಿಟ್ಟು ನ್ಯೂಜಿಲೆಂಡ್​ನ ಮಾಜಿ ಆಟಗಾರ ಮಾಡಿರುವ ಆರೋಪವನ್ನು ಒಪ್ಪಿದರೆ, ಮತ್ತೆ ಕೆಲವರು ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

ಇದೀಗ ಸೈಮನ್ ಡೌಲ್ ಅವರ ಹೇಳಿಕೆಗೆ ಪರ ವಿರೋಧ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಕೆಲವರು ಅಂಕಿ ಅಂಶಗಳನ್ನು ಮುಂದಿಟ್ಟು ನ್ಯೂಜಿಲೆಂಡ್​ನ ಮಾಜಿ ಆಟಗಾರ ಮಾಡಿರುವ ಆರೋಪವನ್ನು ಒಪ್ಪಿದರೆ, ಮತ್ತೆ ಕೆಲವರು ವಿರಾಟ್ ಕೊಹ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು