AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB vs LSG ಪಂದ್ಯದಲ್ಲಿ ಕನ್ನಡಿಗನಿಗೆ ಸಿಗುತ್ತಾ ಚಾನ್ಸ್​..?

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್.

TV9 Web
| Edited By: |

Updated on: Apr 10, 2023 | 12:07 AM

Share
IPL 2023 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

IPL 2023 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದೆ. ಸೋಮವಾರ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆರ್​ಸಿಬಿ ತಂಡದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

1 / 8
ಏಕೆಂದರೆ ಆರ್​ಸಿಬಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೂ, 2ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತ್ತು. ಹೀಗಾಗಿ ಮೂರನೇ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ.

ಏಕೆಂದರೆ ಆರ್​ಸಿಬಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದರೂ, 2ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತ್ತು. ಹೀಗಾಗಿ ಮೂರನೇ ಪಂದ್ಯದ ಮೂಲಕ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ ಫಾಫ್ ಡುಪ್ಲೆಸಿಸ್ ಪಡೆ.

2 / 8
ಇದಕ್ಕಾಗಿ ತಂಡದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಲ್ಲಿ ಮುಖ್ಯವಾದ ಬದಲಾವಣೆ ಬೌಲಿಂಗ್ ಲೈನಪ್​ನಲ್ಲಿ ಕಂಡು ಬರಬಹುದು. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಕಾಶ್ ದೀಪ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ.

ಇದಕ್ಕಾಗಿ ತಂಡದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಅದರಲ್ಲಿ ಮುಖ್ಯವಾದ ಬದಲಾವಣೆ ಬೌಲಿಂಗ್ ಲೈನಪ್​ನಲ್ಲಿ ಕಂಡು ಬರಬಹುದು. ಏಕೆಂದರೆ ಮೊದಲೆರಡು ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಆಕಾಶ್ ದೀಪ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ.

3 / 8
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಕಾಶ್ ದೀಪ್ 3 ಓವರ್​ನಲ್ಲಿ 29 ರನ್​ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಹಾಗೆಯೇ ಕೆಕೆಆರ್ ವಿರುದ್ಧ 2 ಓವರ್​ಗಳಲ್ಲಿ 30 ರನ್​ ಬಿಟ್ಟುಕೊಟ್ಟಿದ್ದರು. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಆಕಾಶ್ ದೀಪ್ ಅವರನ್ನು ಕೈ ಬಿಡುವ ಸಾಧ್ಯತೆಯಿದೆ.

ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಕಾಶ್ ದೀಪ್ 3 ಓವರ್​ನಲ್ಲಿ 29 ರನ್​ ನೀಡಿ ಕೇವಲ 1 ವಿಕೆಟ್ ಮಾತ್ರ ಪಡೆದಿದ್ದರು. ಹಾಗೆಯೇ ಕೆಕೆಆರ್ ವಿರುದ್ಧ 2 ಓವರ್​ಗಳಲ್ಲಿ 30 ರನ್​ ಬಿಟ್ಟುಕೊಟ್ಟಿದ್ದರು. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಿಂದ ಆಕಾಶ್ ದೀಪ್ ಅವರನ್ನು ಕೈ ಬಿಡುವ ಸಾಧ್ಯತೆಯಿದೆ.

4 / 8
ಇತ್ತ ಆಕಾಶ್ ದೀಪ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಟ್ಟರೆ ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪಟ್ಟಿಯಲ್ಲಿ ಯುವ ವೇಗಿ ವೈಶಾಖ್ ವಿಜಯಕುಮಾರ್ ಹೆಸರು ಕೂಡ ಮುಂಚೂಣಿಯಲ್ಲಿದೆ.

ಇತ್ತ ಆಕಾಶ್ ದೀಪ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಟ್ಟರೆ ಯಾರಿಗೆ ಚಾನ್ಸ್ ಸಿಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪಟ್ಟಿಯಲ್ಲಿ ಯುವ ವೇಗಿ ವೈಶಾಖ್ ವಿಜಯಕುಮಾರ್ ಹೆಸರು ಕೂಡ ಮುಂಚೂಣಿಯಲ್ಲಿದೆ.

5 / 8
ಇದಕ್ಕೆ ಒಂದು ಕಾರಣ, ವೈಶಾಖ್ ಕರ್ನಾಟಕದ ಬೌಲರ್​. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯಲಿದೆ. ಹೀಗಾಗಿ ತವರು ಮೈದಾನದಲ್ಲಿ ಆರ್​ಸಿಬಿ ಕನ್ನಡಿಗನನ್ನು ಕಣಕ್ಕಿಳಿಸಿದರೆ ಅನುಕೂಲ ಹೆಚ್ಚು. ಬೆಂಗಳೂರಿನ ಪಿಚ್​ನಲ್ಲಿ ಆಡಿದ ಅನುಭವ ಹೊಂದಿರುವ ವೈಶಾಖ್ ಪರಿಣಾಮಕಾರಿಯಾಗಿ ದಾಳಿ ಸಂಘಟಿಸಬಲ್ಲರು.

ಇದಕ್ಕೆ ಒಂದು ಕಾರಣ, ವೈಶಾಖ್ ಕರ್ನಾಟಕದ ಬೌಲರ್​. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನಡೆಯಲಿದೆ. ಹೀಗಾಗಿ ತವರು ಮೈದಾನದಲ್ಲಿ ಆರ್​ಸಿಬಿ ಕನ್ನಡಿಗನನ್ನು ಕಣಕ್ಕಿಳಿಸಿದರೆ ಅನುಕೂಲ ಹೆಚ್ಚು. ಬೆಂಗಳೂರಿನ ಪಿಚ್​ನಲ್ಲಿ ಆಡಿದ ಅನುಭವ ಹೊಂದಿರುವ ವೈಶಾಖ್ ಪರಿಣಾಮಕಾರಿಯಾಗಿ ದಾಳಿ ಸಂಘಟಿಸಬಲ್ಲರು.

6 / 8
ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವೈಶಾಖ್ ವಿಜಯಕುಮಾರ್ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ. ಇದಾಗ್ಯೂ ತಂಡದಲ್ಲಿ ಅನುಭವಿ ಭಾರತೀಯ ಬೌಲರ್​ ಆಗಿ ಸಿದ್ಧಾರ್ಥ್​ ಕೌಲ್ ಕೂಡ ಇದ್ದು, ಹೀಗಾಗಿ ಕನ್ನಡಿಗನಿಗೆ ಲಕ್ನೋ ವಿರುದ್ದ ಚಾನ್ಸ್ ಸಿಗಲಿದೆಯಾ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿದೆ.

ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ವೈಶಾಖ್ ವಿಜಯಕುಮಾರ್ ಕಣಕ್ಕಿಳಿದರೂ ಅಚ್ಚರಿಪಡಬೇಕಿಲ್ಲ. ಇದಾಗ್ಯೂ ತಂಡದಲ್ಲಿ ಅನುಭವಿ ಭಾರತೀಯ ಬೌಲರ್​ ಆಗಿ ಸಿದ್ಧಾರ್ಥ್​ ಕೌಲ್ ಕೂಡ ಇದ್ದು, ಹೀಗಾಗಿ ಕನ್ನಡಿಗನಿಗೆ ಲಕ್ನೋ ವಿರುದ್ದ ಚಾನ್ಸ್ ಸಿಗಲಿದೆಯಾ ಎಂಬುದು ಕೂಡ ದೊಡ್ಡ ಪ್ರಶ್ನೆಯಾಗಿದೆ.

7 / 8
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.

8 / 8
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ