AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡೆಲ್ಲಿಗೆ ಶಾಕ್ ನೀಡಿ ಮೊದಲ ಪಂದ್ಯದಲ್ಲೇ ದಾಖಲೆ ಬರೆದ ಕನ್ನಡಿಗ ವೈಶಾಕ್

IPL 2023 Kannada: ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 175 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್​ ನಷ್ಟಕ್ಕೆ 151 ರನ್​ಗಳಿಸಲಷ್ಟೇ ಶಕ್ತರಾದರು.

TV9 Web
| Edited By: |

Updated on: Apr 15, 2023 | 8:29 PM

Share
IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ವೇಗಿ ವೈಶಾಕ್ ವಿಜಯಕುಮಾರ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಚೊಚ್ಚಲ ಐಪಿಎಲ್​ ಪಂದ್ಯದ ಮೂಲಕ ಎಂಬುದೇ ವಿಶೇಷ.

IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ವೇಗಿ ವೈಶಾಕ್ ವಿಜಯಕುಮಾರ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಚೊಚ್ಚಲ ಐಪಿಎಲ್​ ಪಂದ್ಯದ ಮೂಲಕ ಎಂಬುದೇ ವಿಶೇಷ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 174 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 174 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

2 / 7
ಆರಂಭಿಕ ಆಟಗಾರ ಪೃಥ್ವಿ ಶಾ ರನೌಟ್ ಆದರೆ, ಮಿಚೆಲ್ ಮಾರ್ಷ್​ ಪಾರ್ನೆಲ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ಯಶ್ ಧುಲ್ ಸಿರಾಜ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು. ಇದಾಗ್ಯೂ ಕ್ರೀಸ್ ಕಚ್ಚಿ ನಿಂತಿದ್ದ ಡೇವಿಡ್ ವಾರ್ನರ್ ವಿಕೆಟ್ ಆರ್​ಸಿಬಿ ಪಾಲಿಗೆ ಅತ್ಯಗತ್ಯವಾಗಿತ್ತು.

ಆರಂಭಿಕ ಆಟಗಾರ ಪೃಥ್ವಿ ಶಾ ರನೌಟ್ ಆದರೆ, ಮಿಚೆಲ್ ಮಾರ್ಷ್​ ಪಾರ್ನೆಲ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ಯಶ್ ಧುಲ್ ಸಿರಾಜ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು. ಇದಾಗ್ಯೂ ಕ್ರೀಸ್ ಕಚ್ಚಿ ನಿಂತಿದ್ದ ಡೇವಿಡ್ ವಾರ್ನರ್ ವಿಕೆಟ್ ಆರ್​ಸಿಬಿ ಪಾಲಿಗೆ ಅತ್ಯಗತ್ಯವಾಗಿತ್ತು.

3 / 7
ಈ ಹಂತದಲ್ಲಿ ಐಪಿಎಲ್​ನ ಮೊದಲ ಓವರ್ ಎಸೆಯಲು ಬಂದ ಕನ್ನಡಿಗ ವೈಶಾಕ್ ತಮ್ಮ 4ನೇ ಎಸೆತದಲ್ಲಿ ಡೇವಿಡ್ ವಾರ್ನರ್ ಅವರ ವಿಕೆಟ್ ಪಡೆದರು. ಆನಂತರದ ಓವರ್​ಗಳಲ್ಲಿ ಡೇಂಜರಸ್ ಅಕ್ಷರ್ ಪಟೇಲ್ ಹಾಗೂ ಲಲಿತ್ ಯಾದವ್ ವಿಕೆಟ್ ಕಬಳಿಸಿ ಮಿಂಚಿದರು.

ಈ ಹಂತದಲ್ಲಿ ಐಪಿಎಲ್​ನ ಮೊದಲ ಓವರ್ ಎಸೆಯಲು ಬಂದ ಕನ್ನಡಿಗ ವೈಶಾಕ್ ತಮ್ಮ 4ನೇ ಎಸೆತದಲ್ಲಿ ಡೇವಿಡ್ ವಾರ್ನರ್ ಅವರ ವಿಕೆಟ್ ಪಡೆದರು. ಆನಂತರದ ಓವರ್​ಗಳಲ್ಲಿ ಡೇಂಜರಸ್ ಅಕ್ಷರ್ ಪಟೇಲ್ ಹಾಗೂ ಲಲಿತ್ ಯಾದವ್ ವಿಕೆಟ್ ಕಬಳಿಸಿ ಮಿಂಚಿದರು.

4 / 7
ಅಷ್ಟೇ ಅಲ್ಲದೆ ಮೊದಲ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದು ವೈಶಾಕ್ ವಿಜಯಕುಮಾರ್ ನೀಡಿರುವುದು ಕೇವಲ 20 ರನ್ ಮಾತ್ರ. ಇದರ ಜೊತೆಗೆ 3 ವಿಕೆಟ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದರು.

ಅಷ್ಟೇ ಅಲ್ಲದೆ ಮೊದಲ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದು ವೈಶಾಕ್ ವಿಜಯಕುಮಾರ್ ನೀಡಿರುವುದು ಕೇವಲ 20 ರನ್ ಮಾತ್ರ. ಇದರ ಜೊತೆಗೆ 3 ವಿಕೆಟ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದರು.

5 / 7
ಅಂದರೆ ಆರ್​ಸಿಬಿ ಪರ ಪಾದಾರ್ಪಣೆ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ವೇಗಿ ಎಂಬ ದಾಖಲೆ ವೈಶಾಕ್ ವಿಜಕುಮಾರ್ ಪಾಲಾಗಿದೆ. ಅಲ್ಲದೆ ಮುಂಬರುವ ಪಂದ್ಯಗಳಿಗೂ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ.

ಅಂದರೆ ಆರ್​ಸಿಬಿ ಪರ ಪಾದಾರ್ಪಣೆ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ವೇಗಿ ಎಂಬ ದಾಖಲೆ ವೈಶಾಕ್ ವಿಜಕುಮಾರ್ ಪಾಲಾಗಿದೆ. ಅಲ್ಲದೆ ಮುಂಬರುವ ಪಂದ್ಯಗಳಿಗೂ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 175 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್​ ನಷ್ಟಕ್ಕೆ 151 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಆರ್​ಸಿಬಿ ತಂಡವು 23 ರನ್​ಗಳ ಭರ್ಜರಿ ಜಯ ಸಾಧಿಸಿತು.

ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 175 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್​ ನಷ್ಟಕ್ಕೆ 151 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಆರ್​ಸಿಬಿ ತಂಡವು 23 ರನ್​ಗಳ ಭರ್ಜರಿ ಜಯ ಸಾಧಿಸಿತು.

7 / 7
Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ