Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಡೆಲ್ಲಿಗೆ ಶಾಕ್ ನೀಡಿ ಮೊದಲ ಪಂದ್ಯದಲ್ಲೇ ದಾಖಲೆ ಬರೆದ ಕನ್ನಡಿಗ ವೈಶಾಕ್

IPL 2023 Kannada: ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 175 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್​ ನಷ್ಟಕ್ಕೆ 151 ರನ್​ಗಳಿಸಲಷ್ಟೇ ಶಕ್ತರಾದರು.

TV9 Web
| Updated By: ಝಾಹಿರ್ ಯೂಸುಫ್

Updated on: Apr 15, 2023 | 8:29 PM

IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ವೇಗಿ ವೈಶಾಕ್ ವಿಜಯಕುಮಾರ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಚೊಚ್ಚಲ ಐಪಿಎಲ್​ ಪಂದ್ಯದ ಮೂಲಕ ಎಂಬುದೇ ವಿಶೇಷ.

IPL 2023 RCB vs DC: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ಆರ್​ಸಿಬಿ ವೇಗಿ ವೈಶಾಕ್ ವಿಜಯಕುಮಾರ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಚೊಚ್ಚಲ ಐಪಿಎಲ್​ ಪಂದ್ಯದ ಮೂಲಕ ಎಂಬುದೇ ವಿಶೇಷ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 174 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯ ಅರ್ಧಶತಕದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 174 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

2 / 7
ಆರಂಭಿಕ ಆಟಗಾರ ಪೃಥ್ವಿ ಶಾ ರನೌಟ್ ಆದರೆ, ಮಿಚೆಲ್ ಮಾರ್ಷ್​ ಪಾರ್ನೆಲ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ಯಶ್ ಧುಲ್ ಸಿರಾಜ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು. ಇದಾಗ್ಯೂ ಕ್ರೀಸ್ ಕಚ್ಚಿ ನಿಂತಿದ್ದ ಡೇವಿಡ್ ವಾರ್ನರ್ ವಿಕೆಟ್ ಆರ್​ಸಿಬಿ ಪಾಲಿಗೆ ಅತ್ಯಗತ್ಯವಾಗಿತ್ತು.

ಆರಂಭಿಕ ಆಟಗಾರ ಪೃಥ್ವಿ ಶಾ ರನೌಟ್ ಆದರೆ, ಮಿಚೆಲ್ ಮಾರ್ಷ್​ ಪಾರ್ನೆಲ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ಯಶ್ ಧುಲ್ ಸಿರಾಜ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು. ಇದಾಗ್ಯೂ ಕ್ರೀಸ್ ಕಚ್ಚಿ ನಿಂತಿದ್ದ ಡೇವಿಡ್ ವಾರ್ನರ್ ವಿಕೆಟ್ ಆರ್​ಸಿಬಿ ಪಾಲಿಗೆ ಅತ್ಯಗತ್ಯವಾಗಿತ್ತು.

3 / 7
ಈ ಹಂತದಲ್ಲಿ ಐಪಿಎಲ್​ನ ಮೊದಲ ಓವರ್ ಎಸೆಯಲು ಬಂದ ಕನ್ನಡಿಗ ವೈಶಾಕ್ ತಮ್ಮ 4ನೇ ಎಸೆತದಲ್ಲಿ ಡೇವಿಡ್ ವಾರ್ನರ್ ಅವರ ವಿಕೆಟ್ ಪಡೆದರು. ಆನಂತರದ ಓವರ್​ಗಳಲ್ಲಿ ಡೇಂಜರಸ್ ಅಕ್ಷರ್ ಪಟೇಲ್ ಹಾಗೂ ಲಲಿತ್ ಯಾದವ್ ವಿಕೆಟ್ ಕಬಳಿಸಿ ಮಿಂಚಿದರು.

ಈ ಹಂತದಲ್ಲಿ ಐಪಿಎಲ್​ನ ಮೊದಲ ಓವರ್ ಎಸೆಯಲು ಬಂದ ಕನ್ನಡಿಗ ವೈಶಾಕ್ ತಮ್ಮ 4ನೇ ಎಸೆತದಲ್ಲಿ ಡೇವಿಡ್ ವಾರ್ನರ್ ಅವರ ವಿಕೆಟ್ ಪಡೆದರು. ಆನಂತರದ ಓವರ್​ಗಳಲ್ಲಿ ಡೇಂಜರಸ್ ಅಕ್ಷರ್ ಪಟೇಲ್ ಹಾಗೂ ಲಲಿತ್ ಯಾದವ್ ವಿಕೆಟ್ ಕಬಳಿಸಿ ಮಿಂಚಿದರು.

4 / 7
ಅಷ್ಟೇ ಅಲ್ಲದೆ ಮೊದಲ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದು ವೈಶಾಕ್ ವಿಜಯಕುಮಾರ್ ನೀಡಿರುವುದು ಕೇವಲ 20 ರನ್ ಮಾತ್ರ. ಇದರ ಜೊತೆಗೆ 3 ವಿಕೆಟ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದರು.

ಅಷ್ಟೇ ಅಲ್ಲದೆ ಮೊದಲ ಪಂದ್ಯದಲ್ಲಿ 4 ಓವರ್​ಗಳನ್ನು ಎಸೆದು ವೈಶಾಕ್ ವಿಜಯಕುಮಾರ್ ನೀಡಿರುವುದು ಕೇವಲ 20 ರನ್ ಮಾತ್ರ. ಇದರ ಜೊತೆಗೆ 3 ವಿಕೆಟ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದರು.

5 / 7
ಅಂದರೆ ಆರ್​ಸಿಬಿ ಪರ ಪಾದಾರ್ಪಣೆ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ವೇಗಿ ಎಂಬ ದಾಖಲೆ ವೈಶಾಕ್ ವಿಜಕುಮಾರ್ ಪಾಲಾಗಿದೆ. ಅಲ್ಲದೆ ಮುಂಬರುವ ಪಂದ್ಯಗಳಿಗೂ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ.

ಅಂದರೆ ಆರ್​ಸಿಬಿ ಪರ ಪಾದಾರ್ಪಣೆ ಪಂದ್ಯದಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ವೇಗಿ ಎಂಬ ದಾಖಲೆ ವೈಶಾಕ್ ವಿಜಕುಮಾರ್ ಪಾಲಾಗಿದೆ. ಅಲ್ಲದೆ ಮುಂಬರುವ ಪಂದ್ಯಗಳಿಗೂ ತಂಡದಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 175 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್​ ನಷ್ಟಕ್ಕೆ 151 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಆರ್​ಸಿಬಿ ತಂಡವು 23 ರನ್​ಗಳ ಭರ್ಜರಿ ಜಯ ಸಾಧಿಸಿತು.

ಇನ್ನು ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 175 ರನ್​ಗಳ ಟಾರ್ಗೆಟ್ ಅನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್​ ನಷ್ಟಕ್ಕೆ 151 ರನ್​ಗಳಿಸಲಷ್ಟೇ ಶಕ್ತರಾದರು. ಇದರೊಂದಿಗೆ ಆರ್​ಸಿಬಿ ತಂಡವು 23 ರನ್​ಗಳ ಭರ್ಜರಿ ಜಯ ಸಾಧಿಸಿತು.

7 / 7
Follow us
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮಾಲೂರು ಆಸ್ಪತ್ರೆ ಸಿಬ್ಬಂದಿ ಪೋನ್​ ಪೇ ವಹಿವಾಟು ನೋಡಿ ದಂಗಾದ ಉಪ ಲೋಕಾಯುಕ್ತ
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!