AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ವನಿಂದು ಹಸರಂಗ RCB ತಂಡಕ್ಕೆ ಸೇರಿಕೊಳ್ಳುವುದು ಯಾವಾಗ?

IPL 2023 Kannada News: ಆರ್​ಸಿಬಿ ತಂಡವು 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಏಪ್ರಿಲ್ 6 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ ವಿರುದ್ಧ ಸೆಣಸಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Apr 05, 2023 | 10:08 PM

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್​ಸಿಬಿ ಜಯ ಸಾಧಿಸಿದೆ. ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 8 ವಿಕೆಟ್​ಗಳಿಂದ ಜಯಭೇರಿ ಬಾರಿಸಿತ್ತು. ಆದರೆ ಈ ಪಂದ್ಯದಲ್ಲಿ ಆರ್​ಸಿಬಿ ಪರ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ ಕಣಕ್ಕಿಳಿದಿರಲಿಲ್ಲ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಮೊದಲ ಪಂದ್ಯದಲ್ಲೇ ಆರ್​ಸಿಬಿ ಜಯ ಸಾಧಿಸಿದೆ. ಏಪ್ರಿಲ್ 2 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ಈ ಪಂದ್ಯದಲ್ಲಿ ಆರ್​ಸಿಬಿ ತಂಡವು 8 ವಿಕೆಟ್​ಗಳಿಂದ ಜಯಭೇರಿ ಬಾರಿಸಿತ್ತು. ಆದರೆ ಈ ಪಂದ್ಯದಲ್ಲಿ ಆರ್​ಸಿಬಿ ಪರ ಸ್ಟಾರ್ ಆಲ್​ರೌಂಡರ್ ವನಿಂದು ಹಸರಂಗ ಕಣಕ್ಕಿಳಿದಿರಲಿಲ್ಲ.

1 / 7
ಇದೀಗ ಆರ್​ಸಿಬಿ ತಂಡವು 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಏಪ್ರಿಲ್ 6 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ ವಿರುದ್ಧ ಸೆಣಸಲಿದೆ. ಆದರೆ ಈ ಪಂದ್ಯಕ್ಕೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಇದರ ಬೆನ್ನಲ್ಲೇ ಲಂಕಾ ಸ್ಪಿನ್ನರ್ ಆರ್​ಸಿಬಿ ತಂಡವನ್ನು ಸೇರಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆ ಉದ್ಭವಿಸಿದೆ.

ಇದೀಗ ಆರ್​ಸಿಬಿ ತಂಡವು 2ನೇ ಪಂದ್ಯಕ್ಕಾಗಿ ಸಜ್ಜಾಗಿದೆ. ಏಪ್ರಿಲ್ 6 ರಂದು ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲಿ ಆರ್​ಸಿಬಿ ಕೆಕೆಆರ್ ವಿರುದ್ಧ ಸೆಣಸಲಿದೆ. ಆದರೆ ಈ ಪಂದ್ಯಕ್ಕೂ ವನಿಂದು ಹಸರಂಗ ಅಲಭ್ಯರಾಗಿದ್ದಾರೆ. ಇದರ ಬೆನ್ನಲ್ಲೇ ಲಂಕಾ ಸ್ಪಿನ್ನರ್ ಆರ್​ಸಿಬಿ ತಂಡವನ್ನು ಸೇರಿಕೊಳ್ಳುವುದು ಯಾವಾಗ ಎಂಬ ಪ್ರಶ್ನೆ ಉದ್ಭವಿಸಿದೆ.

2 / 7
ಈ ಪ್ರಶ್ನೆಗೆ ಸದ್ಯದ ಉತ್ತರ ಏಪ್ರಿಲ್ 8 ರ ಬಳಿಕ. ಏಕೆಂದರೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯು ಮುಕ್ತಾಯಗೊಳ್ಳುವುದು ಏಪ್ರಿಲ್ 8 ರಂದು. ಇದಾದ ಬಳಿಕವಷ್ಟೇ ವನಿಂದು ಹಸರಂಗ ಭಾರತದತ್ತ ಪ್ರಯಾಣ ಬೆಳೆಸಲಿದ್ದಾರೆ.

ಈ ಪ್ರಶ್ನೆಗೆ ಸದ್ಯದ ಉತ್ತರ ಏಪ್ರಿಲ್ 8 ರ ಬಳಿಕ. ಏಕೆಂದರೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈ ಸರಣಿಯು ಮುಕ್ತಾಯಗೊಳ್ಳುವುದು ಏಪ್ರಿಲ್ 8 ರಂದು. ಇದಾದ ಬಳಿಕವಷ್ಟೇ ವನಿಂದು ಹಸರಂಗ ಭಾರತದತ್ತ ಪ್ರಯಾಣ ಬೆಳೆಸಲಿದ್ದಾರೆ.

3 / 7
ಅಂದರೆ ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಹಸರಂಗ ಲಭ್ಯರಿರಲಿದ್ದಾರೆ. ಆದರೆ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಲಿದೆಯಾ ಎಂಬುದೇ ಪ್ರಶ್ನೆ.

ಅಂದರೆ ಏಪ್ರಿಲ್ 10 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಹಸರಂಗ ಲಭ್ಯರಿರಲಿದ್ದಾರೆ. ಆದರೆ ಅವರಿಗೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗಲಿದೆಯಾ ಎಂಬುದೇ ಪ್ರಶ್ನೆ.

4 / 7
ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಸ್ಪಿನ್ ಆಲ್​ರೌಂಡರ್​ ಆಗಿ ಕಣಕ್ಕಿಳಿದಿದ್ದ ಮೈಕೆಲ್ ಬ್ರೇಸ್​ವೆಲ್ 2 ಓವರ್​ನಲ್ಲಿ 16 ರನ್​ ನೀಡಿ 1 ವಿಕೆಟ್ ಪಡೆದಿದ್ದರು.

ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಆರ್​ಸಿಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಸ್ಪಿನ್ ಆಲ್​ರೌಂಡರ್​ ಆಗಿ ಕಣಕ್ಕಿಳಿದಿದ್ದ ಮೈಕೆಲ್ ಬ್ರೇಸ್​ವೆಲ್ 2 ಓವರ್​ನಲ್ಲಿ 16 ರನ್​ ನೀಡಿ 1 ವಿಕೆಟ್ ಪಡೆದಿದ್ದರು.

5 / 7
ಅತ್ತ ಸ್ಪೋಟಕ ಬ್ಯಾಟರ್ ಎನಿಸಿಕೊಂಡಿರುವ ಮೈಕೆಲ್ ಬ್ರೇಸ್​ವೆಲ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಬೀಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಹಸರಂಗ ಅವರನ್ನು ಕಣಕ್ಕಿಳಿಸಲು ಬ್ರೇಸ್​ವೆಲ್ ಅವರನ್ನು ಕೈ ಬಿಡಲಿದ್ದಾರಾ ಎಂಬುದೇ ಪ್ರಶ್ನೆ.

ಅತ್ತ ಸ್ಪೋಟಕ ಬ್ಯಾಟರ್ ಎನಿಸಿಕೊಂಡಿರುವ ಮೈಕೆಲ್ ಬ್ರೇಸ್​ವೆಲ್ ಯಾವುದೇ ಕ್ರಮಾಂಕದಲ್ಲೂ ಬ್ಯಾಟ್ ಬೀಸುವ ಸಾಮರ್ಥ್ಯ ಹೊಂದಿದ್ದಾರೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಹಸರಂಗ ಅವರನ್ನು ಕಣಕ್ಕಿಳಿಸಲು ಬ್ರೇಸ್​ವೆಲ್ ಅವರನ್ನು ಕೈ ಬಿಡಲಿದ್ದಾರಾ ಎಂಬುದೇ ಪ್ರಶ್ನೆ.

6 / 7
ಇದಾಗ್ಯೂ ಓರ್ವ ವಿದೇಶಿ ವೇಗದ ಬೌಲರ್​ ಅನ್ನು ಕಡಿತಗೊಳಿಸಿದರೂ ಹಸರಂಗಗೆ ಚಾನ್ಸ್ ನೀಡಬಹುದು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರ್​ಸಿಬಿ ಬದಲಾವಣೆ ಮಾಡಲಿದೆಯಾ ಕಾದು ನೋಡಬೇಕಿದೆ.

ಇದಾಗ್ಯೂ ಓರ್ವ ವಿದೇಶಿ ವೇಗದ ಬೌಲರ್​ ಅನ್ನು ಕಡಿತಗೊಳಿಸಿದರೂ ಹಸರಂಗಗೆ ಚಾನ್ಸ್ ನೀಡಬಹುದು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರ್​ಸಿಬಿ ಬದಲಾವಣೆ ಮಾಡಲಿದೆಯಾ ಕಾದು ನೋಡಬೇಕಿದೆ.

7 / 7
Follow us
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ