AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಯಾರಾಗ್ತಾರೆ SRH ಕ್ಯಾಪ್ಟನ್: ಮುಂಚೂಣಿಯಲ್ಲಿ ಸೌತ್ ಆಫ್ರಿಕಾ ಆಟಗಾರನ ಹೆಸರು

IPL 2023 Kannada: ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್​ ತಂಡವನ್ನು ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್ ಈ ಬಾರಿಯ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎಸ್​ಆರ್​ಹೆಚ್​ ಫ್ರಾಂಚೈಸಿ ಮುಂದಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Feb 13, 2023 | 6:25 PM

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಉಳಿದಿವೆ. ಅತ್ತ ಎಲ್ಲಾ ಫ್ರಾಂಚೈಸಿಗಳು ಅಭ್ಯಾಸ ಕ್ಯಾಂಪ್​ಗಳನ್ನು ಆರಂಭಿಸಿದೆ. ಇದಾಗ್ಯೂ ಕೆಲ ತಂಡಗಳಿಗೆ ನಾಯಕರು ಯಾರು ಎಂಬುದು ಇನ್ನೂ ಕೂಡ ನಿರ್ಧಾರವಾಗಿಲ್ಲ. ಆ ತಂಡಗಳಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಕೂಡ ಒಂದು.

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಇನ್ನು ತಿಂಗಳುಗಳು ಮಾತ್ರ ಉಳಿದಿವೆ. ಅತ್ತ ಎಲ್ಲಾ ಫ್ರಾಂಚೈಸಿಗಳು ಅಭ್ಯಾಸ ಕ್ಯಾಂಪ್​ಗಳನ್ನು ಆರಂಭಿಸಿದೆ. ಇದಾಗ್ಯೂ ಕೆಲ ತಂಡಗಳಿಗೆ ನಾಯಕರು ಯಾರು ಎಂಬುದು ಇನ್ನೂ ಕೂಡ ನಿರ್ಧಾರವಾಗಿಲ್ಲ. ಆ ತಂಡಗಳಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಕೂಡ ಒಂದು.

1 / 7
ಏಕೆಂದರೆ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್​ ತಂಡವನ್ನು ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್ ಈ ಬಾರಿಯ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎಸ್​ಆರ್​ಹೆಚ್​ ಫ್ರಾಂಚೈಸಿ ಮುಂದಿದೆ.

ಏಕೆಂದರೆ ಕಳೆದ ಸೀಸನ್​ನಲ್ಲಿ ಎಸ್​ಆರ್​ಹೆಚ್​ ತಂಡವನ್ನು ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್ ಈ ಬಾರಿಯ ಹರಾಜಿನಲ್ಲಿ ಗುಜರಾತ್ ಟೈಟಾನ್ಸ್ ತಂಡದ ಪಾಲಾಗಿದ್ದಾರೆ. ಹೀಗಾಗಿ ಹೊಸ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎಸ್​ಆರ್​ಹೆಚ್​ ಫ್ರಾಂಚೈಸಿ ಮುಂದಿದೆ.

2 / 7
ಇದೀಗ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕನ ಆಯ್ಕೆಯ ಚರ್ಚೆಯು ಅಂತಿಮ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಫ್ರಾಂಚೈಸಿಯು ಮೂವರು ಹೆಸರನ್ನು ಫೈನಲ್ ಮಾಡಿದೆ ಎಂದು ತಿಳಿದು ಬಂದಿದೆ. ಇವರಲ್ಲಿ ಒಬ್ಬರು ಕ್ಯಾಪ್ಟನ್ ಆಗುವುದು ಖಚಿತ ಎನ್ನಲಾಗಿದೆ. ಅವರೆಂದರೆ...

ಇದೀಗ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕನ ಆಯ್ಕೆಯ ಚರ್ಚೆಯು ಅಂತಿಮ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಫ್ರಾಂಚೈಸಿಯು ಮೂವರು ಹೆಸರನ್ನು ಫೈನಲ್ ಮಾಡಿದೆ ಎಂದು ತಿಳಿದು ಬಂದಿದೆ. ಇವರಲ್ಲಿ ಒಬ್ಬರು ಕ್ಯಾಪ್ಟನ್ ಆಗುವುದು ಖಚಿತ ಎನ್ನಲಾಗಿದೆ. ಅವರೆಂದರೆ...

3 / 7
ಮಯಾಂಕ್ ಅಗರ್ವಾಲ್: ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ಈ ಬಾರಿ ಎಸ್​ಆರ್​ಹೆಚ್ ಫ್ರಾಂಚೈಸಿ 8.25 ಕೋಟಿಗೆ ಖರೀದಿಸಿದೆ. ಇದರ ಬೆನ್ನಲ್ಲೇ ಮಯಾಂಕ್​ಗೆ ಎಸ್​ಆರ್​​ಹೆಚ್ ಕ್ಯಾಪ್ಟನ್ ಪಟ್ಟ ಒಲಿಯಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಏಕೆಂದರೆ ಕಳೆದ ಸೀಸನ್​ನಲ್ಲಿ ಪಂಜಾಬ್ ತಂಡವನ್ನು 14 ಪಂದ್ಯಗಳಲ್ಲಿ ಮುನ್ನಡೆಸಿದ್ದ ಅಗರ್ವಾಲ್ 7 ಪಂದ್ಯಗಳಲ್ಲಿ ಗೆಲುವಿನ ರುಚಿ ನೋಡಿದ್ದರು. ಇದೀಗ ಹೊಸ ತಂಡ ಕಟ್ಟಿರುವ ಎಸ್​ಆರ್​​ಹೆಚ್ ಭಾರತೀಯ ನಾಯಕನಿಗೆ ಮಣೆಹಾಕಿದರೆ ಮಯಾಂಕ್​ಗೆ ನಾಯಕತ್ವದ ಒಲಿಯಲಿದೆ.

ಮಯಾಂಕ್ ಅಗರ್ವಾಲ್: ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ಕನ್ನಡಿಗ ಮಯಾಂಕ್ ಅಗರ್ವಾಲ್ ಅವರನ್ನು ಈ ಬಾರಿ ಎಸ್​ಆರ್​ಹೆಚ್ ಫ್ರಾಂಚೈಸಿ 8.25 ಕೋಟಿಗೆ ಖರೀದಿಸಿದೆ. ಇದರ ಬೆನ್ನಲ್ಲೇ ಮಯಾಂಕ್​ಗೆ ಎಸ್​ಆರ್​​ಹೆಚ್ ಕ್ಯಾಪ್ಟನ್ ಪಟ್ಟ ಒಲಿಯಲಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಏಕೆಂದರೆ ಕಳೆದ ಸೀಸನ್​ನಲ್ಲಿ ಪಂಜಾಬ್ ತಂಡವನ್ನು 14 ಪಂದ್ಯಗಳಲ್ಲಿ ಮುನ್ನಡೆಸಿದ್ದ ಅಗರ್ವಾಲ್ 7 ಪಂದ್ಯಗಳಲ್ಲಿ ಗೆಲುವಿನ ರುಚಿ ನೋಡಿದ್ದರು. ಇದೀಗ ಹೊಸ ತಂಡ ಕಟ್ಟಿರುವ ಎಸ್​ಆರ್​​ಹೆಚ್ ಭಾರತೀಯ ನಾಯಕನಿಗೆ ಮಣೆಹಾಕಿದರೆ ಮಯಾಂಕ್​ಗೆ ನಾಯಕತ್ವದ ಒಲಿಯಲಿದೆ.

4 / 7
ಐಡೆನ್ ಮಾರ್ಕ್ರಾಮ್: ಎಸ್​ಆರ್​ಹೆಚ್ ತಂಡದ ನಾಯಕರ ರೇಸ್​ನಲ್ಲಿ ಮೂಂಚೂಣಿಯಲ್ಲಿ ಕೇಳಿ ಬರುತ್ತಿರುವ ಹೆಸರೆಂದರೆ ಸೌತ್ ಆಫ್ರಿಕಾದ ಐಡೆನ್ ಮಾರ್ಕ್ರಾಮ್. ಏಕೆಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಎಸ್​ಆರ್​ಹೆಚ್ ಫ್ರಾಂಚೈಸಿಯ ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ತಂಡವನ್ನು ಮಾರ್ಕ್ರಾಮ್ ಮುನ್ನಡೆಸಿ ಮಾರ್ಕ್ರಾಮ್ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದಾರೆ. ಹೀಗಾಗಿ ಐಪಿಎಲ್​ನಲ್ಲೂ ಐಡೆನ್ ಮಾರ್ಕ್ರಾಮ್​ಗೆ ಕ್ಯಾಪ್ಟನ್ ಪಟ್ಟ ಒಲಿಯಲಿದೆ ಎಂದು ಹೇಳಲಾಗುತ್ತಿದೆ.

ಐಡೆನ್ ಮಾರ್ಕ್ರಾಮ್: ಎಸ್​ಆರ್​ಹೆಚ್ ತಂಡದ ನಾಯಕರ ರೇಸ್​ನಲ್ಲಿ ಮೂಂಚೂಣಿಯಲ್ಲಿ ಕೇಳಿ ಬರುತ್ತಿರುವ ಹೆಸರೆಂದರೆ ಸೌತ್ ಆಫ್ರಿಕಾದ ಐಡೆನ್ ಮಾರ್ಕ್ರಾಮ್. ಏಕೆಂದರೆ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಎಸ್​ಆರ್​ಹೆಚ್ ಫ್ರಾಂಚೈಸಿಯ ಸನ್​ರೈಸರ್ಸ್​ ಈಸ್ಟರ್ನ್ ಕೇಪ್ ತಂಡವನ್ನು ಮಾರ್ಕ್ರಾಮ್ ಮುನ್ನಡೆಸಿ ಮಾರ್ಕ್ರಾಮ್ ಚಾಂಪಿಯನ್ ಪಟ್ಟ ತಂದುಕೊಟ್ಟಿದ್ದಾರೆ. ಹೀಗಾಗಿ ಐಪಿಎಲ್​ನಲ್ಲೂ ಐಡೆನ್ ಮಾರ್ಕ್ರಾಮ್​ಗೆ ಕ್ಯಾಪ್ಟನ್ ಪಟ್ಟ ಒಲಿಯಲಿದೆ ಎಂದು ಹೇಳಲಾಗುತ್ತಿದೆ.

5 / 7
ಭುವನೇಶ್ವರ್ ಕುಮಾರ್: ಸನ್​ರೈಸರ್ಸ್​ ಹೈದರಾಬಾದ್ ತಂಡದ ಉಪನಾಯಕನಾಗಿ ಗುರುತಿಸಿಕೊಂಡಿರುವ ವೇಗಿ ಭುವನೇಶ್ವರ್ ಕುಮಾರ್ ಕೂಡ ನಾಯಕತ್ವದ ರೇಸ್​​ನಲ್ಲಿ ಕೇಳಿ ಬರುತ್ತಿದೆ. ಈ ಹಿಂದೆ 7 ಪಂದ್ಯಗಳಲ್ಲಿ ಎಸ್​ಆರ್​ಹೆಚ್​ ತಂಡವನ್ನು ಮುನ್ನಡೆಸಿದ ಅನುಭವವನ್ನೂ ಕೂಡ ಹೊಂದಿದ್ದಾರೆ. ಅದರಂತೆ ಈ ಮೂವರಲ್ಲಿ ಯಾರಿಗೆ ಎಸ್​ಆರ್​​ಹೆಚ್​ ತಂಡ ನಾಯಕನ ಪಟ್ಟ ಸಿಗಲಿದೆ ಕಾದು ನೋಡಬೇಕಿದೆ.

ಭುವನೇಶ್ವರ್ ಕುಮಾರ್: ಸನ್​ರೈಸರ್ಸ್​ ಹೈದರಾಬಾದ್ ತಂಡದ ಉಪನಾಯಕನಾಗಿ ಗುರುತಿಸಿಕೊಂಡಿರುವ ವೇಗಿ ಭುವನೇಶ್ವರ್ ಕುಮಾರ್ ಕೂಡ ನಾಯಕತ್ವದ ರೇಸ್​​ನಲ್ಲಿ ಕೇಳಿ ಬರುತ್ತಿದೆ. ಈ ಹಿಂದೆ 7 ಪಂದ್ಯಗಳಲ್ಲಿ ಎಸ್​ಆರ್​ಹೆಚ್​ ತಂಡವನ್ನು ಮುನ್ನಡೆಸಿದ ಅನುಭವವನ್ನೂ ಕೂಡ ಹೊಂದಿದ್ದಾರೆ. ಅದರಂತೆ ಈ ಮೂವರಲ್ಲಿ ಯಾರಿಗೆ ಎಸ್​ಆರ್​​ಹೆಚ್​ ತಂಡ ನಾಯಕನ ಪಟ್ಟ ಸಿಗಲಿದೆ ಕಾದು ನೋಡಬೇಕಿದೆ.

6 / 7
ಸನ್ ರೈಸರ್ಸ್ ಹೈದರಾಬಾದ್ ತಂಡ: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಅನ್ಮೋಲ್‌ಪ್ರೀತ್ ಸಿಂಗ್, ಅಕೇಲ್ ಹೊಸೈನ್, ನಿತೀಶ್ ಕುಮಾರ್ ರೆಡ್ಡಿ, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಸನ್ವಿರ್ ಸಿಂಗ್, ಸಮರ್ಥ ವ್ಯಾಸ್, ವಿವ್ರಾಂತ್ ಶರ್ಮಾ, ಮಯಾಂಕ್ ಮಾರ್ಕಾಂಡೆ, ಆದಿಲ್ ರಶೀದ್, ಹೆನ್ರಿಕ್ ಕ್ಲಾಸೆನ್, ಮಾರ್ಕೊ ಯಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ.

ಸನ್ ರೈಸರ್ಸ್ ಹೈದರಾಬಾದ್ ತಂಡ: ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ಅಬ್ದುಲ್ ಸಮದ್, ವಾಷಿಂಗ್ಟನ್ ಸುಂದರ್, ಅನ್ಮೋಲ್‌ಪ್ರೀತ್ ಸಿಂಗ್, ಅಕೇಲ್ ಹೊಸೈನ್, ನಿತೀಶ್ ಕುಮಾರ್ ರೆಡ್ಡಿ, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಸನ್ವಿರ್ ಸಿಂಗ್, ಸಮರ್ಥ ವ್ಯಾಸ್, ವಿವ್ರಾಂತ್ ಶರ್ಮಾ, ಮಯಾಂಕ್ ಮಾರ್ಕಾಂಡೆ, ಆದಿಲ್ ರಶೀದ್, ಹೆನ್ರಿಕ್ ಕ್ಲಾಸೆನ್, ಮಾರ್ಕೊ ಯಾನ್ಸೆನ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್, ಟಿ ನಟರಾಜನ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ.

7 / 7
Follow us
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್