
IPL 2023: ಐಪಿಎಲ್ನ 36ನೇ ಪಂದ್ಯದಲ್ಲಿ ಆರ್ಸಿಬಿ ಹಾಗೂ ಕೆಕೆಆರ್ ತಂಡಗಳು ಮುಖಾಮುಖಿಯಾಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಾದರೂ ಕರ್ನಾಟಕದ ಯುವ ಆಲ್ರೌಂಡರ್ಗೆ ಅವಕಾಶ ಸಿಗಲಿದೆಯಾ ಎಂಬುದೇ ಪ್ರಶ್ನೆ.

ಏಕೆಂದರೆ ಆರ್ಸಿಬಿ ಆಡಿರುವ 7 ಪಂದ್ಯಗಳಲ್ಲಿ 4 ಜಯ ಹಾಗೂ 3 ಸೋಲಿನೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ 5ನೇ ಸ್ಥಾನದಲ್ಲಿದೆ. ಇಲ್ಲಿ ಆರ್ಸಿಬಿ ತಂಡದ ಸೋಲಿಗೆ ಪ್ರಮುಖ ಕಾರಣ ಮಧ್ಯಮ ಕ್ರಮಾಂಕದ ಬ್ಯಾಟರ್ಗಳ ವೈಫಲ್ಯ ಹಾಗೂ ಕೆಲ ಬೌಲರ್ಗಳ ಕಳಪೆ ಪ್ರದರ್ಶನ.

ಅದರಲ್ಲೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ದಿನೇಶ್ ಕಾರ್ತಿಕ್ 7 ಪಂದ್ಯಗಳಿಂದ ಒಟ್ಟು 61 ರನ್ಗಳಿಸಿದರೆ, ಶಹಬಾಝ್ ಅಹ್ಮದ್ 40 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಇನ್ನು ಮಹಿಪಾಲ್ ಲೋಮ್ರರ್ 5 ಪಂದ್ಯಗಳಿಂದ 41 ರನ್ ಕಲೆಹಾಕಿದರೆ, ಸುಯಶ್ ಪ್ರಭುದೇಸಾಯಿ 3 ಪಂದ್ಯಗಳಿಂದ ಕಲೆಹಾಕಿದ್ದು ಕೇವಲ 19 ರನ್ ಮಾತ್ರ. ಅಂದರೆ ಆರ್ಸಿಬಿ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ಸಂಪೂರ್ಣ ವಿಫಲರಾಗುತ್ತಿರುವುದು ಸ್ಪಷ್ಟ.

ಇದಾಗ್ಯೂ ತಂಡದಲ್ಲಿರುವ ಕರ್ನಾಟಕದ ಯುವ ಆಲ್ರೌಂಡರ್ ಮನೋಜ್ ಭಾಂಡಗೆಗೆ ಮಾತ್ರ ಆರ್ಸಿಬಿ ಅವಕಾಶ ನೀಡುತ್ತಿಲ್ಲ. ದೇಶೀಯ ಅಂಗಳದಲ್ಲಿ ಎಡಗೈ ಬ್ಯಾಟಿಂಗ್ ಹಾಗೂ ಬಲಗೈ ಬೌಲಿಂಗ್ ಮೂಲಕ ಆಲ್ರೌಂಡರ್ ಆಗಿ ಮಿಂಚಿರುವ ಮನೋಜ್ ಆರ್ಸಿಬಿ ಮುಂದಿರುವ ಅತ್ಯುತ್ತಮ ಆಯ್ಕೆ.

ಏಕೆಂದರೆ 24 ವರ್ಷದ ಮನೋಜ್ ಭಾಂಡಗೆ ಇದುವರೆಗೆ 16 ಟಿ20 ಪಂದ್ಯಗಳನ್ನು ಆಡಿದ್ದು ಈ ವೇಳೆ 7 ಇನಿಂಗ್ಸ್ನಲ್ಲಿ 116 ರನ್ ಕಲೆಹಾಕಿದ್ದಾರೆ. ಹಾಗೆಯೇ 8 ವಿಕೆಟ್ಗಳನ್ನು ಕೂಡ ಕಬಳಿಸಿದ್ದಾರೆ. ಅಂದರೆ ದೇಶೀಯ ಅಂಗಳದಲ್ಲಿ ಮನೋಜ್ ಅತ್ಯುತ್ತಮ ಪ್ರದರ್ಶನವನ್ನೇ ನೀಡಿದ್ದಾರೆ ಎನ್ನಬಹುದು.

ಹೀಗಾಗಿ ತವರು ಮೈದಾನದಲ್ಲಿ ನಡೆಯುತ್ತಿರುವ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕರ್ನಾಟಕದ ಯುವ ಆಲ್ರೌಂಡರ್ ಮನೋಜ್ ಭಾಂಡಗೆಗೆ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್ವೆಲ್, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಖ್ ವಿಜಯಕುಮಾರ್.