AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐದಕ್ಕೆ ಐದು ಗೆಲುವು; ತವರಿನ ಲಾಭ ಪಡೆದ 5 ತಂಡಗಳು

IPL 2024: 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈಗಾಗಲೇ ಲೀಗ್​ನಲ್ಲಿ ಐದು ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳು ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಆಡಿದ ಐದು ಪಂದ್ಯಗಳಲ್ಲಿ ತವರು ತಂಡಗಳೇ ಗೆಲುವು ಸಾಧಿಸಿರುವುದು ಪ್ರವಾಸಿ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನುಂಟು ಮಾಡಿದೆ.

ಪೃಥ್ವಿಶಂಕರ
|

Updated on:Mar 25, 2024 | 4:37 PM

Share
17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈಗಾಗಲೇ ಲೀಗ್​ನಲ್ಲಿ ಐದು ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳು ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಆಡಿದ ಐದು ಪಂದ್ಯಗಳಲ್ಲಿ ತವರು ತಂಡಗಳೇ ಗೆಲುವು ಸಾಧಿಸಿರುವುದು ಪ್ರವಾಸಿ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನುಂಟು ಮಾಡಿದೆ.

17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಈಗಾಗಲೇ ಲೀಗ್​ನಲ್ಲಿ ಐದು ಪಂದ್ಯಗಳು ನಡೆದಿದ್ದು, ಈ ಐದೂ ಪಂದ್ಯಗಳು ಅಭಿಮಾನಿಗಳನ್ನು ರಂಜಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಆಡಿದ ಐದು ಪಂದ್ಯಗಳಲ್ಲಿ ತವರು ತಂಡಗಳೇ ಗೆಲುವು ಸಾಧಿಸಿರುವುದು ಪ್ರವಾಸಿ ತಂಡದ ಅಭಿಮಾನಿಗಳಿಗೆ ಕೊಂಚ ನಿರಾಸೆಯನ್ನುಂಟು ಮಾಡಿದೆ.

1 / 8
ವಾಸ್ತವವಾಗಿ ಐಪಿಎಲ್​ನಲ್ಲಿ ಇದುವರೆಗೆ ಆಡಿರುವ ಐದೂ ಪಂದ್ಯಗಳಲ್ಲಿ ಆತಿಥೇಯ ತಂಡವೇ ಗೆಲುವು ಸಾಧಿಸಿದೆ. ಅಲ್ಲದೆ ಗುರಿ ಬೆನ್ನಟ್ಟಿದ ತಂಡಗಳಿಗಿಂತ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳೆ ಹೆಚ್ಚು ಗೆಲುವು ಸಾಧಿಸಿವೆ. ಅದರ ಸಂಪೂರ್ಣ ಅಂಕಿಅಂಶಗಳು ಹೀಗಿವೆ.

ವಾಸ್ತವವಾಗಿ ಐಪಿಎಲ್​ನಲ್ಲಿ ಇದುವರೆಗೆ ಆಡಿರುವ ಐದೂ ಪಂದ್ಯಗಳಲ್ಲಿ ಆತಿಥೇಯ ತಂಡವೇ ಗೆಲುವು ಸಾಧಿಸಿದೆ. ಅಲ್ಲದೆ ಗುರಿ ಬೆನ್ನಟ್ಟಿದ ತಂಡಗಳಿಗಿಂತ ಮೊದಲು ಬ್ಯಾಟಿಂಗ್ ಮಾಡಿದ ತಂಡಗಳೆ ಹೆಚ್ಚು ಗೆಲುವು ಸಾಧಿಸಿವೆ. ಅದರ ಸಂಪೂರ್ಣ ಅಂಕಿಅಂಶಗಳು ಹೀಗಿವೆ.

2 / 8
ಲೀಗ್​ನ ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 176 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಸಿಎಸ್​ಕೆ ತವರಿನ ಲಾಭ ಪಡೆದು 6 ವಿಕೆಟ್​ಗಳಿಂದ ಗೆದ್ದುಬೀಗಿತ್ತು.

ಲೀಗ್​ನ ಉದ್ಘಾಟನಾ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಚೆನ್ನೈನ ಎಂ ಚಿದಂಬರಂ ಮೈದಾನದಲ್ಲಿ ನಡೆದಿತ್ತು. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 176 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಸಿಎಸ್​ಕೆ ತವರಿನ ಲಾಭ ಪಡೆದು 6 ವಿಕೆಟ್​ಗಳಿಂದ ಗೆದ್ದುಬೀಗಿತ್ತು.

3 / 8
ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ 174 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಆತಿಥೇಯ ಪಂಜಾಬ್ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ 174 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಆತಿಥೇಯ ಪಂಜಾಬ್ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು.

4 / 8
ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ನಡೆದ ಮೂರನೇ ಪಂದ್ಯದಲ್ಲೂ ಆತಿಥೇಯ ಕೋಲ್ಕತ್ತಾ, ಪ್ರವಾಸಿ ಹೈದರಾಬಾದ್ ತಂಡವನ್ನು 4 ರನ್​ಗಳಿಂದ ಮಣಿಸಿತು.

ಕೋಲ್ಕತ್ತಾ ನೈಟ್ ರೈಡರ್ಸ್​ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ನಡುವೆ ನಡೆದ ಮೂರನೇ ಪಂದ್ಯದಲ್ಲೂ ಆತಿಥೇಯ ಕೋಲ್ಕತ್ತಾ, ಪ್ರವಾಸಿ ಹೈದರಾಬಾದ್ ತಂಡವನ್ನು 4 ರನ್​ಗಳಿಂದ ಮಣಿಸಿತು.

5 / 8
ನಾಲ್ಕನೇ ಪಂದ್ಯದಲ್ಲೂ ತವರು ತಂಡವೇ ಗೆಲುವು ಸಾಧಿಸಿತು. ರಾಜಸ್ಥಾನದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ತಂಡ 20 ರನ್​ಗಳ ಗೆಲುವು ದಾಖಲಿಸಿತು.

ನಾಲ್ಕನೇ ಪಂದ್ಯದಲ್ಲೂ ತವರು ತಂಡವೇ ಗೆಲುವು ಸಾಧಿಸಿತು. ರಾಜಸ್ಥಾನದಲ್ಲಿ ನಡೆದ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಪಂದ್ಯದಲ್ಲಿ ಆತಿಥೇಯ ರಾಜಸ್ಥಾನ ತಂಡ 20 ರನ್​ಗಳ ಗೆಲುವು ದಾಖಲಿಸಿತು.

6 / 8
ನಿನ್ನೆ ಅಹಮದಾಬಾದ್​ನಲ್ಲಿ ನಡೆದ ಐಪಿಎಲ್ ಐದನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ತವರು ನೆಲದ ಲಾಭ ಪಡೆದುಕೊಂಡಿದೆ.

ನಿನ್ನೆ ಅಹಮದಾಬಾದ್​ನಲ್ಲಿ ನಡೆದ ಐಪಿಎಲ್ ಐದನೇ ಪಂದ್ಯದಲ್ಲಿ ಆತಿಥೇಯ ಗುಜರಾತ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ತವರು ನೆಲದ ಲಾಭ ಪಡೆದುಕೊಂಡಿದೆ.

7 / 8
ಇನ್ನು ಇಂದಿನ ಪಂದ್ಯದಲ್ಲಿ ಆರ್​ಸಿಬಿ ತನ್ನ ತವರು ನೆಲದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಈ ಹಿಂದಿನ ಐದು ಪಂದ್ಯಗಳ ಫಲಿತಾಂಶದಂತೆ ಇಂದಿನ ಪಂದ್ಯದ ಫಲಿತಾಂಶವೂ ತವರು ತಂಡದ ಪರ ವಾಲುತ್ತಾ ಎಂಬುದನ್ನು ಕಾದುನೋಡಬೇಕಿದೆ.

ಇನ್ನು ಇಂದಿನ ಪಂದ್ಯದಲ್ಲಿ ಆರ್​ಸಿಬಿ ತನ್ನ ತವರು ನೆಲದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಈ ಹಿಂದಿನ ಐದು ಪಂದ್ಯಗಳ ಫಲಿತಾಂಶದಂತೆ ಇಂದಿನ ಪಂದ್ಯದ ಫಲಿತಾಂಶವೂ ತವರು ತಂಡದ ಪರ ವಾಲುತ್ತಾ ಎಂಬುದನ್ನು ಕಾದುನೋಡಬೇಕಿದೆ.

8 / 8

Published On - 4:35 pm, Mon, 25 March 24

Follow Us
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು