AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅರ್ಧಕ್ಕಿಂತ ಹೆಚ್ಚು ತಂಡಗಳ ನಾಯಕರ ಬದಲಾವಣೆ

IPL 2024: ಐಪಿಎಲ್ ಆರಂಭಕ್ಕೂ ಮೊದಲು ಈ ಲೀಗ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ನಾಯಕನನ್ನು ಬದಲಿಸಿದೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ತಂಡದ ನಾಯಕನನ್ನು ಬದಲಿಸಿದ ಆರನೇ ತಂಡ ಎನಿಸಿಕೊಂಡಿದೆ.

ಪೃಥ್ವಿಶಂಕರ
|

Updated on: Mar 21, 2024 | 8:07 PM

Share
ಐಪಿಎಲ್ ಆರಂಭಕ್ಕೂ ಮೊದಲು ಈ ಲೀಗ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ನಾಯಕನನ್ನು ಬದಲಿಸಿದೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ತಂಡದ ನಾಯಕನನ್ನು ಬದಲಿಸಿದ ಆರನೇ ತಂಡ ಎನಿಸಿಕೊಂಡಿದೆ.

ಐಪಿಎಲ್ ಆರಂಭಕ್ಕೂ ಮೊದಲು ಈ ಲೀಗ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ನಾಯಕನನ್ನು ಬದಲಿಸಿದೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ತಂಡದ ನಾಯಕನನ್ನು ಬದಲಿಸಿದ ಆರನೇ ತಂಡ ಎನಿಸಿಕೊಂಡಿದೆ.

1 / 7
ಚೆನ್ನೈ ಸೂಪರ್ ಕಿಂಗ್ಸ್​ಗೂ ಮೊದಲು ಮುಂಬೈ ಇಂಡಿಯನ್ಸ್ , ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಕೂಡ ತಮ್ಮ ತಂಡದ ನಾಯಕರನ್ನು ಬದಲಿಸಿವೆ.

ಚೆನ್ನೈ ಸೂಪರ್ ಕಿಂಗ್ಸ್​ಗೂ ಮೊದಲು ಮುಂಬೈ ಇಂಡಿಯನ್ಸ್ , ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಕೂಡ ತಮ್ಮ ತಂಡದ ನಾಯಕರನ್ನು ಬದಲಿಸಿವೆ.

2 / 7
ಮುಂಬೈ ಇಂಡಿಯನ್ಸ್: 17 ನೇ ಆವೃತ್ತಿಗೂ ಮೊದಲು ತಂಡದ ನಾಯಕನನ್ನು ಬದಲಿಸಿದ ಮೊದಲ ತಂಡವೆಂದರೆ ಅದು ಮುಂಬೈ ಇಂಡಿಯನ್ಸ್. ದುಬೈನಲ್ಲಿ ನಡೆದ ಮಿನಿ ಹರಾಜಿನ ನಂತರ ಹಾರ್ದಿಕ್ ಪಾಂಡ್ಯರನ್ನು ಟ್ರೇಡಿಂಗ್ ಮೂಲಕ ತಂಡಕ್ಕೆ ಸೇರಿಸಿಕೊಂಡ ಮುಂಬೈ, ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯಗೆ ಅಂದೇ ನಾಯಕತ್ವವನ್ನು ಹಸ್ತಾಂತರಿಸಿತು.

ಮುಂಬೈ ಇಂಡಿಯನ್ಸ್: 17 ನೇ ಆವೃತ್ತಿಗೂ ಮೊದಲು ತಂಡದ ನಾಯಕನನ್ನು ಬದಲಿಸಿದ ಮೊದಲ ತಂಡವೆಂದರೆ ಅದು ಮುಂಬೈ ಇಂಡಿಯನ್ಸ್. ದುಬೈನಲ್ಲಿ ನಡೆದ ಮಿನಿ ಹರಾಜಿನ ನಂತರ ಹಾರ್ದಿಕ್ ಪಾಂಡ್ಯರನ್ನು ಟ್ರೇಡಿಂಗ್ ಮೂಲಕ ತಂಡಕ್ಕೆ ಸೇರಿಸಿಕೊಂಡ ಮುಂಬೈ, ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯಗೆ ಅಂದೇ ನಾಯಕತ್ವವನ್ನು ಹಸ್ತಾಂತರಿಸಿತು.

3 / 7
ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಸೇರಿಕೊಂಡ ನಂತರ ಗುಜರಾತ್ ಟೈಟಾನ್ಸ್ ಫ್ರಾಂಚೈಸ್ ತನ್ನ ತಂಡದ ನಾಯಕತ್ವವನ್ನು ಯುವ ಆರಂಭಿಕ ಆಟಗಾರ ಶುಭ್​ಮನ್​ ಗಿಲ್​ಗೆ ಹಸ್ತಾಂತರಿಸಿತು.

ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಸೇರಿಕೊಂಡ ನಂತರ ಗುಜರಾತ್ ಟೈಟಾನ್ಸ್ ಫ್ರಾಂಚೈಸ್ ತನ್ನ ತಂಡದ ನಾಯಕತ್ವವನ್ನು ಯುವ ಆರಂಭಿಕ ಆಟಗಾರ ಶುಭ್​ಮನ್​ ಗಿಲ್​ಗೆ ಹಸ್ತಾಂತರಿಸಿತು.

4 / 7
ಸನ್ ರೈಸರ್ಸ್ ಹೈದರಾಬಾದ್: ಮಿನಿ ಹರಾಜಿನಲ್ಲಿ ಬರೋಬ್ಬರಿ 20.50 ಕೋಟಿ ನೀಡಿ ಖರೀದಿಸಿದ್ದ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ತಂಡದ ನೂತನ ನಾಯಕನಾಗಿ ನೇಮಿಸಿತು. ಕಮಿನ್ಸ್​ಗೂ ಮೊದಲು ಈ ತಂಡದ ನಾಯಕತ್ವ ಐಡೆನ್ ಮಾರ್ಕ್ರಾಮ್ ಕೈನಲ್ಲಿತ್ತು.

ಸನ್ ರೈಸರ್ಸ್ ಹೈದರಾಬಾದ್: ಮಿನಿ ಹರಾಜಿನಲ್ಲಿ ಬರೋಬ್ಬರಿ 20.50 ಕೋಟಿ ನೀಡಿ ಖರೀದಿಸಿದ್ದ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ತಂಡದ ನೂತನ ನಾಯಕನಾಗಿ ನೇಮಿಸಿತು. ಕಮಿನ್ಸ್​ಗೂ ಮೊದಲು ಈ ತಂಡದ ನಾಯಕತ್ವ ಐಡೆನ್ ಮಾರ್ಕ್ರಾಮ್ ಕೈನಲ್ಲಿತ್ತು.

5 / 7
ದೆಹಲಿ ಕ್ಯಾಪಿಟಲ್ಸ್: 2022 ರ ಅಂತ್ಯದಲ್ಲಿ ರಸ್ತೆ ಅಪಘಾತಕ್ಕೀಡಾಗಿ ಕ್ರಿಕೆಟ್​ನಿಂದ ದೂರ ಉಳಿದಿದ್ದ ರಿಷಬ್ ಪಂತ್ ಇದೀಗ ಚೇತರಿಸಿಕೊಂಡು ಮತ್ತೆ ಐಪಿಎಲ್ ಅಖಾಡಕ್ಕಿಳಿದಿದ್ದಾರೆ. ಪಂತ್ ಅನುಪಸ್ಥಿತಿಯಲ್ಲಿ ಕಳೆದ ಆವೃತ್ತಿಯಲ್ಲಿ ಡೇವಿಡ್ ವಾರ್ನರ್ ತಂಡದ ನಾಯಕತ್ವ ನಿರ್ವಹಿಸಿದ್ದರು. ಆದರೀಗ ಪಂತ್ ವಾಪಸ್ಸಾತಿಯಿಂದಾಗಿ ವಾರ್ನರ್ ತಮ್ಮ ನಾಯಕತ್ವ ಸ್ಥಾನದಿಂದ ಕೆಳಗಿಳಿಯಬೇಕಾಯಿತು.

ದೆಹಲಿ ಕ್ಯಾಪಿಟಲ್ಸ್: 2022 ರ ಅಂತ್ಯದಲ್ಲಿ ರಸ್ತೆ ಅಪಘಾತಕ್ಕೀಡಾಗಿ ಕ್ರಿಕೆಟ್​ನಿಂದ ದೂರ ಉಳಿದಿದ್ದ ರಿಷಬ್ ಪಂತ್ ಇದೀಗ ಚೇತರಿಸಿಕೊಂಡು ಮತ್ತೆ ಐಪಿಎಲ್ ಅಖಾಡಕ್ಕಿಳಿದಿದ್ದಾರೆ. ಪಂತ್ ಅನುಪಸ್ಥಿತಿಯಲ್ಲಿ ಕಳೆದ ಆವೃತ್ತಿಯಲ್ಲಿ ಡೇವಿಡ್ ವಾರ್ನರ್ ತಂಡದ ನಾಯಕತ್ವ ನಿರ್ವಹಿಸಿದ್ದರು. ಆದರೀಗ ಪಂತ್ ವಾಪಸ್ಸಾತಿಯಿಂದಾಗಿ ವಾರ್ನರ್ ತಮ್ಮ ನಾಯಕತ್ವ ಸ್ಥಾನದಿಂದ ಕೆಳಗಿಳಿಯಬೇಕಾಯಿತು.

6 / 7
ಕೋಲ್ಕತ್ತಾ ನೈಟ್ ರೈಡರ್ಸ್: ಗಾಯದ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ಕಳೆದ ಐಪಿಎಲ್ ಆಡಲು ಸಾಧ್ಯವಾಗಲಿಲ್ಲ. ಅವರ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಕೆಕೆಆರ್ ತಂಡವನ್ನು ಮುನ್ನಡೆಸಿದ್ದರು. ರಾಣಾ ನಾಯಕತ್ವದಲ್ಲಿ ತಂಡದ ಪ್ರದರ್ಶನವು ಸರಾಸರಿಯಾಗಿತ್ತು. ತಂಡವು ಆಡಿದ 14 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮತ್ತೊಮ್ಮೆ ಕೆಕೆಆರ್ ತಂಡವನ್ನು ಸೇರಿಕೊಂಡಿರುವ ಶ್ರೇಯಸ್ ಅಯ್ಯರ್​ಗೆ ನಾಯಕತ್ವ ಹಸ್ತಾಂತರಿಸಲಾಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್: ಗಾಯದ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ಕಳೆದ ಐಪಿಎಲ್ ಆಡಲು ಸಾಧ್ಯವಾಗಲಿಲ್ಲ. ಅವರ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಕೆಕೆಆರ್ ತಂಡವನ್ನು ಮುನ್ನಡೆಸಿದ್ದರು. ರಾಣಾ ನಾಯಕತ್ವದಲ್ಲಿ ತಂಡದ ಪ್ರದರ್ಶನವು ಸರಾಸರಿಯಾಗಿತ್ತು. ತಂಡವು ಆಡಿದ 14 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮತ್ತೊಮ್ಮೆ ಕೆಕೆಆರ್ ತಂಡವನ್ನು ಸೇರಿಕೊಂಡಿರುವ ಶ್ರೇಯಸ್ ಅಯ್ಯರ್​ಗೆ ನಾಯಕತ್ವ ಹಸ್ತಾಂತರಿಸಲಾಗಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ