Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಅರ್ಧಕ್ಕಿಂತ ಹೆಚ್ಚು ತಂಡಗಳ ನಾಯಕರ ಬದಲಾವಣೆ

IPL 2024: ಐಪಿಎಲ್ ಆರಂಭಕ್ಕೂ ಮೊದಲು ಈ ಲೀಗ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ನಾಯಕನನ್ನು ಬದಲಿಸಿದೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ತಂಡದ ನಾಯಕನನ್ನು ಬದಲಿಸಿದ ಆರನೇ ತಂಡ ಎನಿಸಿಕೊಂಡಿದೆ.

ಪೃಥ್ವಿಶಂಕರ
|

Updated on: Mar 21, 2024 | 8:07 PM

ಐಪಿಎಲ್ ಆರಂಭಕ್ಕೂ ಮೊದಲು ಈ ಲೀಗ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ನಾಯಕನನ್ನು ಬದಲಿಸಿದೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ತಂಡದ ನಾಯಕನನ್ನು ಬದಲಿಸಿದ ಆರನೇ ತಂಡ ಎನಿಸಿಕೊಂಡಿದೆ.

ಐಪಿಎಲ್ ಆರಂಭಕ್ಕೂ ಮೊದಲು ಈ ಲೀಗ್​ನ ಅತ್ಯಂತ ಯಶಸ್ವಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ತನ್ನ ನಾಯಕನನ್ನು ಬದಲಿಸಿದೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ತಂಡದ ನಾಯಕನನ್ನು ಬದಲಿಸಿದ ಆರನೇ ತಂಡ ಎನಿಸಿಕೊಂಡಿದೆ.

1 / 7
ಚೆನ್ನೈ ಸೂಪರ್ ಕಿಂಗ್ಸ್​ಗೂ ಮೊದಲು ಮುಂಬೈ ಇಂಡಿಯನ್ಸ್ , ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಕೂಡ ತಮ್ಮ ತಂಡದ ನಾಯಕರನ್ನು ಬದಲಿಸಿವೆ.

ಚೆನ್ನೈ ಸೂಪರ್ ಕಿಂಗ್ಸ್​ಗೂ ಮೊದಲು ಮುಂಬೈ ಇಂಡಿಯನ್ಸ್ , ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿಗಳು ಕೂಡ ತಮ್ಮ ತಂಡದ ನಾಯಕರನ್ನು ಬದಲಿಸಿವೆ.

2 / 7
ಮುಂಬೈ ಇಂಡಿಯನ್ಸ್: 17 ನೇ ಆವೃತ್ತಿಗೂ ಮೊದಲು ತಂಡದ ನಾಯಕನನ್ನು ಬದಲಿಸಿದ ಮೊದಲ ತಂಡವೆಂದರೆ ಅದು ಮುಂಬೈ ಇಂಡಿಯನ್ಸ್. ದುಬೈನಲ್ಲಿ ನಡೆದ ಮಿನಿ ಹರಾಜಿನ ನಂತರ ಹಾರ್ದಿಕ್ ಪಾಂಡ್ಯರನ್ನು ಟ್ರೇಡಿಂಗ್ ಮೂಲಕ ತಂಡಕ್ಕೆ ಸೇರಿಸಿಕೊಂಡ ಮುಂಬೈ, ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯಗೆ ಅಂದೇ ನಾಯಕತ್ವವನ್ನು ಹಸ್ತಾಂತರಿಸಿತು.

ಮುಂಬೈ ಇಂಡಿಯನ್ಸ್: 17 ನೇ ಆವೃತ್ತಿಗೂ ಮೊದಲು ತಂಡದ ನಾಯಕನನ್ನು ಬದಲಿಸಿದ ಮೊದಲ ತಂಡವೆಂದರೆ ಅದು ಮುಂಬೈ ಇಂಡಿಯನ್ಸ್. ದುಬೈನಲ್ಲಿ ನಡೆದ ಮಿನಿ ಹರಾಜಿನ ನಂತರ ಹಾರ್ದಿಕ್ ಪಾಂಡ್ಯರನ್ನು ಟ್ರೇಡಿಂಗ್ ಮೂಲಕ ತಂಡಕ್ಕೆ ಸೇರಿಸಿಕೊಂಡ ಮುಂಬೈ, ರೋಹಿತ್ ಶರ್ಮಾ ಬದಲಿಗೆ ಹಾರ್ದಿಕ್ ಪಾಂಡ್ಯಗೆ ಅಂದೇ ನಾಯಕತ್ವವನ್ನು ಹಸ್ತಾಂತರಿಸಿತು.

3 / 7
ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಸೇರಿಕೊಂಡ ನಂತರ ಗುಜರಾತ್ ಟೈಟಾನ್ಸ್ ಫ್ರಾಂಚೈಸ್ ತನ್ನ ತಂಡದ ನಾಯಕತ್ವವನ್ನು ಯುವ ಆರಂಭಿಕ ಆಟಗಾರ ಶುಭ್​ಮನ್​ ಗಿಲ್​ಗೆ ಹಸ್ತಾಂತರಿಸಿತು.

ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಸೇರಿಕೊಂಡ ನಂತರ ಗುಜರಾತ್ ಟೈಟಾನ್ಸ್ ಫ್ರಾಂಚೈಸ್ ತನ್ನ ತಂಡದ ನಾಯಕತ್ವವನ್ನು ಯುವ ಆರಂಭಿಕ ಆಟಗಾರ ಶುಭ್​ಮನ್​ ಗಿಲ್​ಗೆ ಹಸ್ತಾಂತರಿಸಿತು.

4 / 7
ಸನ್ ರೈಸರ್ಸ್ ಹೈದರಾಬಾದ್: ಮಿನಿ ಹರಾಜಿನಲ್ಲಿ ಬರೋಬ್ಬರಿ 20.50 ಕೋಟಿ ನೀಡಿ ಖರೀದಿಸಿದ್ದ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ತಂಡದ ನೂತನ ನಾಯಕನಾಗಿ ನೇಮಿಸಿತು. ಕಮಿನ್ಸ್​ಗೂ ಮೊದಲು ಈ ತಂಡದ ನಾಯಕತ್ವ ಐಡೆನ್ ಮಾರ್ಕ್ರಾಮ್ ಕೈನಲ್ಲಿತ್ತು.

ಸನ್ ರೈಸರ್ಸ್ ಹೈದರಾಬಾದ್: ಮಿನಿ ಹರಾಜಿನಲ್ಲಿ ಬರೋಬ್ಬರಿ 20.50 ಕೋಟಿ ನೀಡಿ ಖರೀದಿಸಿದ್ದ ಆಸ್ಟ್ರೇಲಿಯಾದ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮಿನ್ಸ್ ಅವರನ್ನು ಸನ್ ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತನ್ನ ತಂಡದ ನೂತನ ನಾಯಕನಾಗಿ ನೇಮಿಸಿತು. ಕಮಿನ್ಸ್​ಗೂ ಮೊದಲು ಈ ತಂಡದ ನಾಯಕತ್ವ ಐಡೆನ್ ಮಾರ್ಕ್ರಾಮ್ ಕೈನಲ್ಲಿತ್ತು.

5 / 7
ದೆಹಲಿ ಕ್ಯಾಪಿಟಲ್ಸ್: 2022 ರ ಅಂತ್ಯದಲ್ಲಿ ರಸ್ತೆ ಅಪಘಾತಕ್ಕೀಡಾಗಿ ಕ್ರಿಕೆಟ್​ನಿಂದ ದೂರ ಉಳಿದಿದ್ದ ರಿಷಬ್ ಪಂತ್ ಇದೀಗ ಚೇತರಿಸಿಕೊಂಡು ಮತ್ತೆ ಐಪಿಎಲ್ ಅಖಾಡಕ್ಕಿಳಿದಿದ್ದಾರೆ. ಪಂತ್ ಅನುಪಸ್ಥಿತಿಯಲ್ಲಿ ಕಳೆದ ಆವೃತ್ತಿಯಲ್ಲಿ ಡೇವಿಡ್ ವಾರ್ನರ್ ತಂಡದ ನಾಯಕತ್ವ ನಿರ್ವಹಿಸಿದ್ದರು. ಆದರೀಗ ಪಂತ್ ವಾಪಸ್ಸಾತಿಯಿಂದಾಗಿ ವಾರ್ನರ್ ತಮ್ಮ ನಾಯಕತ್ವ ಸ್ಥಾನದಿಂದ ಕೆಳಗಿಳಿಯಬೇಕಾಯಿತು.

ದೆಹಲಿ ಕ್ಯಾಪಿಟಲ್ಸ್: 2022 ರ ಅಂತ್ಯದಲ್ಲಿ ರಸ್ತೆ ಅಪಘಾತಕ್ಕೀಡಾಗಿ ಕ್ರಿಕೆಟ್​ನಿಂದ ದೂರ ಉಳಿದಿದ್ದ ರಿಷಬ್ ಪಂತ್ ಇದೀಗ ಚೇತರಿಸಿಕೊಂಡು ಮತ್ತೆ ಐಪಿಎಲ್ ಅಖಾಡಕ್ಕಿಳಿದಿದ್ದಾರೆ. ಪಂತ್ ಅನುಪಸ್ಥಿತಿಯಲ್ಲಿ ಕಳೆದ ಆವೃತ್ತಿಯಲ್ಲಿ ಡೇವಿಡ್ ವಾರ್ನರ್ ತಂಡದ ನಾಯಕತ್ವ ನಿರ್ವಹಿಸಿದ್ದರು. ಆದರೀಗ ಪಂತ್ ವಾಪಸ್ಸಾತಿಯಿಂದಾಗಿ ವಾರ್ನರ್ ತಮ್ಮ ನಾಯಕತ್ವ ಸ್ಥಾನದಿಂದ ಕೆಳಗಿಳಿಯಬೇಕಾಯಿತು.

6 / 7
ಕೋಲ್ಕತ್ತಾ ನೈಟ್ ರೈಡರ್ಸ್: ಗಾಯದ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ಕಳೆದ ಐಪಿಎಲ್ ಆಡಲು ಸಾಧ್ಯವಾಗಲಿಲ್ಲ. ಅವರ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಕೆಕೆಆರ್ ತಂಡವನ್ನು ಮುನ್ನಡೆಸಿದ್ದರು. ರಾಣಾ ನಾಯಕತ್ವದಲ್ಲಿ ತಂಡದ ಪ್ರದರ್ಶನವು ಸರಾಸರಿಯಾಗಿತ್ತು. ತಂಡವು ಆಡಿದ 14 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮತ್ತೊಮ್ಮೆ ಕೆಕೆಆರ್ ತಂಡವನ್ನು ಸೇರಿಕೊಂಡಿರುವ ಶ್ರೇಯಸ್ ಅಯ್ಯರ್​ಗೆ ನಾಯಕತ್ವ ಹಸ್ತಾಂತರಿಸಲಾಗಿದೆ.

ಕೋಲ್ಕತ್ತಾ ನೈಟ್ ರೈಡರ್ಸ್: ಗಾಯದ ಸಮಸ್ಯೆಯಿಂದಾಗಿ ಶ್ರೇಯಸ್ ಅಯ್ಯರ್ ಕಳೆದ ಐಪಿಎಲ್ ಆಡಲು ಸಾಧ್ಯವಾಗಲಿಲ್ಲ. ಅವರ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಕೆಕೆಆರ್ ತಂಡವನ್ನು ಮುನ್ನಡೆಸಿದ್ದರು. ರಾಣಾ ನಾಯಕತ್ವದಲ್ಲಿ ತಂಡದ ಪ್ರದರ್ಶನವು ಸರಾಸರಿಯಾಗಿತ್ತು. ತಂಡವು ಆಡಿದ 14 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಮತ್ತೊಮ್ಮೆ ಕೆಕೆಆರ್ ತಂಡವನ್ನು ಸೇರಿಕೊಂಡಿರುವ ಶ್ರೇಯಸ್ ಅಯ್ಯರ್​ಗೆ ನಾಯಕತ್ವ ಹಸ್ತಾಂತರಿಸಲಾಗಿದೆ.

7 / 7
Follow us
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು