AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್ ಇತಿಹಾಸವನ್ನೇ ಬದಲಿಸಿದ ಸಿಎಸ್​ಕೆ ಸೋಲು..!

IPL 2024: ಳೆದ ಸೀಸನ್​ನಲ್ಲಿ ಸಿಎಸ್‌ಕೆ ಹೊರತುಪಡಿಸಿ, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದವು. ಈ ನಾಲ್ಕರಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಫೈನಲ್​ಗೇರಿದ್ದವು. ಆ ಫೈನಲ್​ನಲ್ಲಿ ಸಿಎಸ್​ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಈ ಬಾರಿ ಈ 4 ತಂಡಗಳಿಗೂ ತಂಡಗಳು ಪ್ಲೇ ಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ.

ಪೃಥ್ವಿಶಂಕರ
|

Updated on: May 19, 2024 | 6:46 PM

Share
ಐಪಿಎಲ್ 2024ರ 68 ನೇ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ ಮೂಲಕ ಪ್ಲೇಆಫ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿತು. ಇದರೊಂದಿಗೆ ಪ್ಲೇ ಆಫ್ ತಲುಪಿದ ನಾಲ್ಕನೇ ತಂಡ ಎನಿಸಿಕೊಂಡಿತು.

ಐಪಿಎಲ್ 2024ರ 68 ನೇ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ ಮೂಲಕ ಪ್ಲೇಆಫ್‌ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿತು. ಇದರೊಂದಿಗೆ ಪ್ಲೇ ಆಫ್ ತಲುಪಿದ ನಾಲ್ಕನೇ ತಂಡ ಎನಿಸಿಕೊಂಡಿತು.

1 / 8
ಆರ್​ಸಿಬಿಯ ಆಗಮನದೊಂದಿಗೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆದ ಎಲ್ಲಾ ನಾಲ್ಕು ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಇದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ಈಗಾಗಲೇ ಸ್ಥಾನ ಪಡೆದಿವೆ.

ಆರ್​ಸಿಬಿಯ ಆಗಮನದೊಂದಿಗೆ ಪ್ಲೇಆಫ್‌ನಲ್ಲಿ ಸ್ಥಾನ ಪಡೆದ ಎಲ್ಲಾ ನಾಲ್ಕು ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಇದರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ಈಗಾಗಲೇ ಸ್ಥಾನ ಪಡೆದಿವೆ.

2 / 8
ಈ ಸೋಲಿನೊಂದಿಗೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್​ನಿಂದ ಹೊರಬಿದ್ದಿದೆ. ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಹಿಂದೇದು ನಡೆಯದ ಘಟನೆಯೊಂದು ಈ ಐಪಿಎಲ್ ಆವೃತ್ತಿಯಲ್ಲಿ ನಡೆದಿದೆ.

ಈ ಸೋಲಿನೊಂದಿಗೆ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್​ನಿಂದ ಹೊರಬಿದ್ದಿದೆ. ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲಿ ಹಿಂದೇದು ನಡೆಯದ ಘಟನೆಯೊಂದು ಈ ಐಪಿಎಲ್ ಆವೃತ್ತಿಯಲ್ಲಿ ನಡೆದಿದೆ.

3 / 8
ವಾಸ್ತವವಗಾಗಿ ಕಳೆದ ಸೀಸನ್​ನಲ್ಲಿ ಸಿಎಸ್‌ಕೆ ಹೊರತುಪಡಿಸಿ, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದವು. ಈ ನಾಲ್ಕರಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಫೈನಲ್​ಗೇರಿದ್ದವು. ಆ ಫೈನಲ್​ನಲ್ಲಿ ಸಿಎಸ್​ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

ವಾಸ್ತವವಗಾಗಿ ಕಳೆದ ಸೀಸನ್​ನಲ್ಲಿ ಸಿಎಸ್‌ಕೆ ಹೊರತುಪಡಿಸಿ, ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆದಿದ್ದವು. ಈ ನಾಲ್ಕರಲ್ಲಿ ಸಿಎಸ್​ಕೆ ಹಾಗೂ ಗುಜರಾತ್ ಫೈನಲ್​ಗೇರಿದ್ದವು. ಆ ಫೈನಲ್​ನಲ್ಲಿ ಸಿಎಸ್​ಕೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.

4 / 8
ಆದರೆ ಈ ಬಾರಿ ಈ 4 ತಂಡಗಳಿಗೂ ತಂಡಗಳು ಪ್ಲೇ ಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಕಳೆದ ಸೀಸನ್​ನ ಅಗ್ರ 4 ತಂಡಗಳ ಪೈಕಿ ಯಾವ ತಂಡವೂ ಪ್ಲೇಆಫ್ ತಲುಪದೆ ಇರುವುದು ಇದೇ ಮೊದಲ ಬಾರಿಗೆ ಸಂಭಾವಿಸಿದೆ.

ಆದರೆ ಈ ಬಾರಿ ಈ 4 ತಂಡಗಳಿಗೂ ತಂಡಗಳು ಪ್ಲೇ ಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಕಳೆದ ಸೀಸನ್​ನ ಅಗ್ರ 4 ತಂಡಗಳ ಪೈಕಿ ಯಾವ ತಂಡವೂ ಪ್ಲೇಆಫ್ ತಲುಪದೆ ಇರುವುದು ಇದೇ ಮೊದಲ ಬಾರಿಗೆ ಸಂಭಾವಿಸಿದೆ.

5 / 8
ಇನ್ನು ಐಪಿಎಲ್ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇ ಆಫ್ ತಲುಪಲು ಸಾಧ್ಯವಾಗಲಿಲ್ಲ. ಈ ಹಿಂದೆ 2020 ಮತ್ತು 2022ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿರಲಿಲ್ಲ.

ಇನ್ನು ಐಪಿಎಲ್ ಇತಿಹಾಸದಲ್ಲಿ ಇದು ಮೂರನೇ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಪ್ಲೇ ಆಫ್ ತಲುಪಲು ಸಾಧ್ಯವಾಗಲಿಲ್ಲ. ಈ ಹಿಂದೆ 2020 ಮತ್ತು 2022ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ನಲ್ಲಿ ಸ್ಥಾನ ಪಡೆಯಲು ಸಾಧ್ಯವಾಗಿರಲಿಲ್ಲ.

6 / 8
ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್ ಪ್ರಶಸ್ತಿ ಗೆದ್ದಿದ್ದವು. ಆದರೆ ಈ ಬಾರಿ ಪ್ಲೇಆಫ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರ ಇನ್ನೂ ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ.

ಈ ಹಿಂದೆ ಕೋಲ್ಕತ್ತಾ ನೈಟ್ ರೈಡರ್ಸ್, ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್ ಪ್ರಶಸ್ತಿ ಗೆದ್ದಿದ್ದವು. ಆದರೆ ಈ ಬಾರಿ ಪ್ಲೇಆಫ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರ ಇನ್ನೂ ಐಪಿಎಲ್ ಟ್ರೋಫಿಯನ್ನು ಗೆದ್ದಿಲ್ಲ.

7 / 8
ಹೀಗಿರುವಾಗ ಈ ಬಾರಿ ಹೊಸ ಚಾಂಪಿಯನ್ ಪಟ್ಟಕ್ಕೇರುವುದು ತುಂಬಾ ಕಷ್ಟವಾದರೂ ಆರ್​ಸಿಬಿಯ ಫಾರ್ಮ್ ನೋಡಿದರೆ ಅದೂ ಅಸಾಧ್ಯವೆಂದು ಹೇಳಲಾಗದು. 2008ರಲ್ಲಿ ರಾಜಸ್ಥಾನ್ ರಾಯಲ್ಸ್, 2012-2014ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಚಾಂಪಿಯನ್ ಆಗಿವೆ.

ಹೀಗಿರುವಾಗ ಈ ಬಾರಿ ಹೊಸ ಚಾಂಪಿಯನ್ ಪಟ್ಟಕ್ಕೇರುವುದು ತುಂಬಾ ಕಷ್ಟವಾದರೂ ಆರ್​ಸಿಬಿಯ ಫಾರ್ಮ್ ನೋಡಿದರೆ ಅದೂ ಅಸಾಧ್ಯವೆಂದು ಹೇಳಲಾಗದು. 2008ರಲ್ಲಿ ರಾಜಸ್ಥಾನ್ ರಾಯಲ್ಸ್, 2012-2014ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು 2016ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಚಾಂಪಿಯನ್ ಆಗಿವೆ.

8 / 8
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?