Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಹೃದಯ ಅಲ್ಲೆ ಇದೆ’; ಆರ್​ಸಿಬಿ ಸೇರುವ ಇಂಗಿತ ವ್ಯಕ್ತಪಡಿಸಿದ ಎಬಿ ಡಿವಿಲಿಯರ್ಸ್

AB de Villiers: ಐಪಿಎಲ್ ತಂಡದ ಕೋಚ್ ಆಗುವ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಎಬಿ ಡಿವಿಲಿಯರ್ಸ್, ‘ಮುಂದೆ ಏನಾಗಲಿದೆ ಎಂದು ಯಾರಿಗೂ ತಿಳಿದಿಲ್ಲ. ಆದರೆ ಆರ್​ಸಿಬಿಯೊಂದಿಗಿನ ಒಡನಾಟ ಅವಿಸ್ಮರಣೀಯವಾಗಿದೆ. ಇದರಿಂದ ಆರ್ಸಿಬಿ ಕೋಚ್ ಆಗುವ ಅವಕಾಶ ಸಿಕ್ಕರೆ ನಿರಾಕರಿಸುವುದಿಲ್ಲ ಎಂದು ಎಬಿ ಡಿವಿಲಿಯರ್ಸ್ ಸ್ಪಷ್ಟಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: Dec 03, 2023 | 4:35 PM

ಎಲ್ಲಾ ತಂಡಗಳು 2024 ರ ಐಪಿಎಲ್​ಗೆ ತಮ್ಮ ತಯಾರಿಯನ್ನು ಪ್ರಾರಂಭಿಸಿವೆ. ಒಮ್ಮೆಯೂ ಪ್ರಶಸ್ತಿ ಗೆದ್ದಿರದ ಆರ್​ಸಿಬಿ ಕೂಡ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಮಿನಿ ಹರಾಜಿಗೂ ಮುನ್ನ ಬಲಿಷ್ಠ ತಂಡವನ್ನು ತನ್ನಲ್ಲೇ ಉಳಿಸಿಕೊಂಡಿದೆ.

ಎಲ್ಲಾ ತಂಡಗಳು 2024 ರ ಐಪಿಎಲ್​ಗೆ ತಮ್ಮ ತಯಾರಿಯನ್ನು ಪ್ರಾರಂಭಿಸಿವೆ. ಒಮ್ಮೆಯೂ ಪ್ರಶಸ್ತಿ ಗೆದ್ದಿರದ ಆರ್​ಸಿಬಿ ಕೂಡ ಪ್ರಶಸ್ತಿ ಗೆಲ್ಲುವ ಇರಾದೆಯೊಂದಿಗೆ ಮಿನಿ ಹರಾಜಿಗೂ ಮುನ್ನ ಬಲಿಷ್ಠ ತಂಡವನ್ನು ತನ್ನಲ್ಲೇ ಉಳಿಸಿಕೊಂಡಿದೆ.

1 / 7
ಇದಲ್ಲದೆ ಮಿನಿ ಹರಾಜಿನಲ್ಲಿ ತಂಡಕ್ಕೆ ಅವಶ್ಯಕವಿರುವ ಆಟಗಾರರ ಖರೀದಿಗೆ ತಯಾರಿ ಮಾಡಿಕೊಂಡಿದೆ. ಈ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಬಗ್ಗೆ ಒಂದು ದೊಡ್ಡ ಸುದ್ದಿ ಹೊರಬಿದ್ದಿದ್ದು, ಆರ್‌ಸಿಬಿ ಕೋಚ್ ಆಗುವ ಬಗ್ಗೆ ಎಬಿಡಿ ಭರ್ಜರಿ ಸುಳಿವು ನೀಡಿದ್ದಾರೆ.

ಇದಲ್ಲದೆ ಮಿನಿ ಹರಾಜಿನಲ್ಲಿ ತಂಡಕ್ಕೆ ಅವಶ್ಯಕವಿರುವ ಆಟಗಾರರ ಖರೀದಿಗೆ ತಯಾರಿ ಮಾಡಿಕೊಂಡಿದೆ. ಈ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಬಗ್ಗೆ ಒಂದು ದೊಡ್ಡ ಸುದ್ದಿ ಹೊರಬಿದ್ದಿದ್ದು, ಆರ್‌ಸಿಬಿ ಕೋಚ್ ಆಗುವ ಬಗ್ಗೆ ಎಬಿಡಿ ಭರ್ಜರಿ ಸುಳಿವು ನೀಡಿದ್ದಾರೆ.

2 / 7
ಎಬಿ ಡಿವಿಲಿಯರ್ಸ್ ದಕ್ಷಿಣ ಆಫ್ರಿಕಾದಲ್ಲಿ ಮಾತ್ರವಲ್ಲದೆ ಭಾರತದಲ್ಲೂ ಅಭಿಮಾನಿಗಳನ್ನು ಹೊಂದಿದ್ದಾರೆ. ಎಷ್ಟೇ ದೊಡ್ಡ ಟಾರ್ಗೆಟ್ ಇದ್ದರೂ ಎಬಿಡಿ ಮೈದಾನಕ್ಕಿಳಿದರೆ ಆರ್​ಸಿಬಿ ಗೆಲುವು ಬಹುತೇಕ ಖಚಿತ ಎಂದೇ ಭಾವಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಎಬಿಡಿ ತಂಡದಲ್ಲಿರುವಾಗ ಆರ್​ಸಿಬಿ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ.

ಎಬಿ ಡಿವಿಲಿಯರ್ಸ್ ದಕ್ಷಿಣ ಆಫ್ರಿಕಾದಲ್ಲಿ ಮಾತ್ರವಲ್ಲದೆ ಭಾರತದಲ್ಲೂ ಅಭಿಮಾನಿಗಳನ್ನು ಹೊಂದಿದ್ದಾರೆ. ಎಷ್ಟೇ ದೊಡ್ಡ ಟಾರ್ಗೆಟ್ ಇದ್ದರೂ ಎಬಿಡಿ ಮೈದಾನಕ್ಕಿಳಿದರೆ ಆರ್​ಸಿಬಿ ಗೆಲುವು ಬಹುತೇಕ ಖಚಿತ ಎಂದೇ ಭಾವಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಎಬಿಡಿ ತಂಡದಲ್ಲಿರುವಾಗ ಆರ್​ಸಿಬಿ ಒಮ್ಮೆಯೂ ಕಪ್ ಗೆಲ್ಲಲು ಸಾಧ್ಯವಾಗಲಿಲ್ಲ.

3 / 7
ಪ್ರಸ್ತುತ ಅಂತರಾಷ್ಟ್ರೀಯ ಕ್ರಿಕೆಟ್ ಅಲ್ಲದೆ ಐಪಿಎಲ್​ನಿಂದಲೂ ಎಬಿಡಿ ನಿವೃತ್ತಿಯಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅಭಿಮಾನಿಗಳು ಎಬಿಡಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಆರ್​ಸಿಬಿ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದ್ದು, ಆರ್​ಸಿಬಿ ತಂಡವನ್ನು ಮತ್ತೊಮ್ಮೆ ಸೇರಿಕೊಳ್ಳುವ ಇಂಗಿತವನ್ನು ಎಬಿಡಿ ಹೊರಹಾಕಿದ್ದಾರೆ.

ಪ್ರಸ್ತುತ ಅಂತರಾಷ್ಟ್ರೀಯ ಕ್ರಿಕೆಟ್ ಅಲ್ಲದೆ ಐಪಿಎಲ್​ನಿಂದಲೂ ಎಬಿಡಿ ನಿವೃತ್ತಿಯಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅಭಿಮಾನಿಗಳು ಎಬಿಡಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ಆರ್​ಸಿಬಿ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದ್ದು, ಆರ್​ಸಿಬಿ ತಂಡವನ್ನು ಮತ್ತೊಮ್ಮೆ ಸೇರಿಕೊಳ್ಳುವ ಇಂಗಿತವನ್ನು ಎಬಿಡಿ ಹೊರಹಾಕಿದ್ದಾರೆ.

4 / 7
ಐಪಿಎಲ್ ತಂಡದ ಕೋಚ್ ಆಗುವ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಎಬಿ ಡಿವಿಲಿಯರ್ಸ್, ‘ಮುಂದೆ ಏನಾಗಲಿದೆ ಎಂದು ಯಾರಿಗೂ ತಿಳಿದಿಲ್ಲ. ಆದರೆ ಆರ್​ಸಿಬಿಯೊಂದಿಗಿನ ಒಡನಾಟ ಅವಿಸ್ಮರಣೀಯವಾಗಿದೆ. ಇದರಿಂದ ಆರ್ಸಿಬಿ ಕೋಚ್ ಆಗುವ ಅವಕಾಶ ಸಿಕ್ಕರೆ ನಿರಾಕರಿಸುವುದಿಲ್ಲ ಎಂದು ಎಬಿ ಡಿವಿಲಿಯರ್ಸ್ ಸ್ಪಷ್ಟಪಡಿಸಿದ್ದಾರೆ.

ಐಪಿಎಲ್ ತಂಡದ ಕೋಚ್ ಆಗುವ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಎಬಿ ಡಿವಿಲಿಯರ್ಸ್, ‘ಮುಂದೆ ಏನಾಗಲಿದೆ ಎಂದು ಯಾರಿಗೂ ತಿಳಿದಿಲ್ಲ. ಆದರೆ ಆರ್​ಸಿಬಿಯೊಂದಿಗಿನ ಒಡನಾಟ ಅವಿಸ್ಮರಣೀಯವಾಗಿದೆ. ಇದರಿಂದ ಆರ್ಸಿಬಿ ಕೋಚ್ ಆಗುವ ಅವಕಾಶ ಸಿಕ್ಕರೆ ನಿರಾಕರಿಸುವುದಿಲ್ಲ ಎಂದು ಎಬಿ ಡಿವಿಲಿಯರ್ಸ್ ಸ್ಪಷ್ಟಪಡಿಸಿದ್ದಾರೆ.

5 / 7
ನನ್ನ ಹೃದಯ ಆರ್​ಸಿಬಿ ಜೊತೆಗಿದೆ, ಹಲವು ವರ್ಷಗಳಿಂದ ನಾನು ಅಲ್ಲಿ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ನನಗೆ ಉತ್ತಮ ಭಾಂದವ್ಯವಿದೆ. ನಾನು ಯಾವುದನ್ನೂ ಖಚಿತಪಡಿಸಲಾರೆ. ಆದರೆ ಭವಿಷ್ಯದಲ್ಲಿ ನನ್ನನ್ನು ಆರ್​ಸಿಬಿ ತಂಡದಲ್ಲಿ ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ.

ನನ್ನ ಹೃದಯ ಆರ್​ಸಿಬಿ ಜೊತೆಗಿದೆ, ಹಲವು ವರ್ಷಗಳಿಂದ ನಾನು ಅಲ್ಲಿ ಆಡಿದ್ದೇನೆ. ಬೆಂಗಳೂರಿನ ಅಭಿಮಾನಿಗಳೊಂದಿಗೆ ನನಗೆ ಉತ್ತಮ ಭಾಂದವ್ಯವಿದೆ. ನಾನು ಯಾವುದನ್ನೂ ಖಚಿತಪಡಿಸಲಾರೆ. ಆದರೆ ಭವಿಷ್ಯದಲ್ಲಿ ನನ್ನನ್ನು ಆರ್​ಸಿಬಿ ತಂಡದಲ್ಲಿ ನೋಡಲು ನಾನು ಸಂಪೂರ್ಣವಾಗಿ ಇಷ್ಟಪಡುತ್ತೇನೆ ಎಂದಿದ್ದಾರೆ.

6 / 7
ಆರ್​ಸಿಬಿ ಪರ 11 ಐಪಿಎಲ್ ಆವೃತ್ತಿಗಳನ್ನು ಆಡಿದ ಎಬಿ ಡಿವಿಲಿಯರ್ಸ್ ತಂಡದ ಪರವಾಗಿ 184 ಪಂದ್ಯಗಳನ್ನು ಆಡಿದ್ದರು. ಇದರಲ್ಲಿ 151 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಹಾಗೂ 40 ಕ್ಕಿಂತ ಅಧಿಕ ಸರಾಸರಿಯಲ್ಲಿ 5000 ರನ್ ಕಲೆಹಾಕಿದ್ದರು.

ಆರ್​ಸಿಬಿ ಪರ 11 ಐಪಿಎಲ್ ಆವೃತ್ತಿಗಳನ್ನು ಆಡಿದ ಎಬಿ ಡಿವಿಲಿಯರ್ಸ್ ತಂಡದ ಪರವಾಗಿ 184 ಪಂದ್ಯಗಳನ್ನು ಆಡಿದ್ದರು. ಇದರಲ್ಲಿ 151 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ ಹಾಗೂ 40 ಕ್ಕಿಂತ ಅಧಿಕ ಸರಾಸರಿಯಲ್ಲಿ 5000 ರನ್ ಕಲೆಹಾಕಿದ್ದರು.

7 / 7
Follow us
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ