AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಮುಂಬೈ ಪಾಳಯದಲ್ಲಿ ಸೋಲಿನ ಭಯ ಹುಟ್ಟಿಸಿದ್ದ ಅಶುತೋಷ್ ಯಾರು ಗೊತ್ತಾ?

IPL 2024: ಪಂಜಾಬ್ ಪರ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಆಶುತೋಷ್ ಶರ್ಮಾ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಮುಂಬೈ ಬೌಲರ್​ಗಳ ಮಾರಕ ದಾಳಿಗೆ ತಕ್ಕ ಉತ್ತರ ನೀಡಿದ ಆಶುತೋಷ್, ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು.

ಪೃಥ್ವಿಶಂಕರ
|

Updated on: Apr 19, 2024 | 3:57 PM

Share
ಪಂಜಾಬ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ 33ನೇ ಪಂದ್ಯದಲ್ಲಿ ಆತಿಥೇಯ ತಂಡ 9 ರನ್​ಗಳಿಂದ ಸೋಲೊಪ್ಪಿಕೊಂಡಿತು. ಆದರೂ ಮುಂಬೈ ವಿರುದ್ಧ ಗೆಲುವಿಗಾಗಿ ಪಂಜಾಬ್ ನೀಡಿದ ಹೋರಾಟ ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಚೊಚ್ಚಲ ಐಪಿಎಲ್ ಆಡುತ್ತಿರುವ ಅಶುತೋಷ್ ಶರ್ಮಾ ಅವರ ಸಿಡಿಲಬ್ಬರದ ಬ್ಯಾಟಿಂಗ್ ಮುಂಬೈ ಪಾಳಯದಲ್ಲಿ ಸೋಲಿನ ಭಯ ಹುಟ್ಟಿಸಿತ್ತು.

ಪಂಜಾಬ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ 33ನೇ ಪಂದ್ಯದಲ್ಲಿ ಆತಿಥೇಯ ತಂಡ 9 ರನ್​ಗಳಿಂದ ಸೋಲೊಪ್ಪಿಕೊಂಡಿತು. ಆದರೂ ಮುಂಬೈ ವಿರುದ್ಧ ಗೆಲುವಿಗಾಗಿ ಪಂಜಾಬ್ ನೀಡಿದ ಹೋರಾಟ ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಚೊಚ್ಚಲ ಐಪಿಎಲ್ ಆಡುತ್ತಿರುವ ಅಶುತೋಷ್ ಶರ್ಮಾ ಅವರ ಸಿಡಿಲಬ್ಬರದ ಬ್ಯಾಟಿಂಗ್ ಮುಂಬೈ ಪಾಳಯದಲ್ಲಿ ಸೋಲಿನ ಭಯ ಹುಟ್ಟಿಸಿತ್ತು.

1 / 10
ಪಂದ್ಯದಲ್ಲಿ ಮುಂಬೈ ನೀಡಿದ್ದ  192 ರನ್​ಗಳ ಗುರಿ ಬೆನ್ನಟ್ಟಿದ್ದ ಪಂಜಾಬ್ ಕೇವಲ 14 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಉಳಿದ ಎರಡು ವಿಕೆಟ್​ಗಳು ಕೂಡ 77 ರನ್​ಗಳ ವೇಳೆಗೆ ಪತನಗೊಂಡಿದ್ದವು.

ಪಂದ್ಯದಲ್ಲಿ ಮುಂಬೈ ನೀಡಿದ್ದ 192 ರನ್​ಗಳ ಗುರಿ ಬೆನ್ನಟ್ಟಿದ್ದ ಪಂಜಾಬ್ ಕೇವಲ 14 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಉಳಿದ ಎರಡು ವಿಕೆಟ್​ಗಳು ಕೂಡ 77 ರನ್​ಗಳ ವೇಳೆಗೆ ಪತನಗೊಂಡಿದ್ದವು.

2 / 10
ಆದರೆ ಪಂಜಾಬ್ ಪರ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಆಶುತೋಷ್ ಶರ್ಮಾ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಮುಂಬೈ ಬೌಲರ್​ಗಳ ಮಾರಕ ದಾಳಿಗೆ ತಕ್ಕ ಉತ್ತರ ನೀಡಿದ ಆಶುತೋಷ್, ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು.

ಆದರೆ ಪಂಜಾಬ್ ಪರ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಆಶುತೋಷ್ ಶರ್ಮಾ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶಿಸಿದರು. ಮುಂಬೈ ಬೌಲರ್​ಗಳ ಮಾರಕ ದಾಳಿಗೆ ತಕ್ಕ ಉತ್ತರ ನೀಡಿದ ಆಶುತೋಷ್, ಬೌಂಡರಿ ಹಾಗೂ ಸಿಕ್ಸರ್​ಗಳ ಮಳೆಗರೆದರು.

3 / 10
ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್​ಗೆ ಹೆಚ್ಚು ಒತ್ತು ನೀಡಿದ ಅಶುತೋಷ್ ಶರ್ಮಾ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಒಂದೆಡೆ ವಿಕೆಟ್​ಗಳ ಪತನದ ನಡುವೆಯೂ ಪಂಜಾಬ್ ಗೆಲುವಿಗಾಗಿ ಏಕಾಂಗಿ ಹೋರಾಟ ನೀಡಿದ ಆಶುತೋಷ್, ಅಂತಿಮವಾಗಿ 28 ಎಸೆತಗಳಲ್ಲಿ 2 ಬೌಂಡರಿ ಹಾಗೂ ಬರೋಬ್ಬರಿ 7 ಸಿಕ್ಸರ್ ಸಹಿತ 61 ರನ್ ಕಲೆಹಾಕಿದರು.

ಆರಂಭದಿಂದಲೂ ಸ್ಫೋಟಕ ಬ್ಯಾಟಿಂಗ್​ಗೆ ಹೆಚ್ಚು ಒತ್ತು ನೀಡಿದ ಅಶುತೋಷ್ ಶರ್ಮಾ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಒಂದೆಡೆ ವಿಕೆಟ್​ಗಳ ಪತನದ ನಡುವೆಯೂ ಪಂಜಾಬ್ ಗೆಲುವಿಗಾಗಿ ಏಕಾಂಗಿ ಹೋರಾಟ ನೀಡಿದ ಆಶುತೋಷ್, ಅಂತಿಮವಾಗಿ 28 ಎಸೆತಗಳಲ್ಲಿ 2 ಬೌಂಡರಿ ಹಾಗೂ ಬರೋಬ್ಬರಿ 7 ಸಿಕ್ಸರ್ ಸಹಿತ 61 ರನ್ ಕಲೆಹಾಕಿದರು.

4 / 10
10ನೇ ಓವರ್​ನಲ್ಲಿ ಜಿತೇಶ್ ಶರ್ಮಾ ಔಟಾದ ಬಳಿಕ ಕ್ರೀಸ್​ಗೆ ಬಂದ ಅಶುತೋಷ್ ಶರ್ಮಾ, ತಾನು ಎದುರಿಸಿದ ತನ್ನ ಎರಡನೇ ಎಸೆತದಲ್ಲಿ ಆಕಾಶ್ ಮಧ್ವಲ್ ಎಸೆತದಲ್ಲಿ ಫೈನ್ ಲೆಗ್ ಮೇಲೆ ಸಿಕ್ಸರ್ ಬಾರಿಸಿದರು. ಇದಾದ ನಂತರ ಅಶುತೋಷ್ ಪ್ರತಿ ಓವರ್‌ನಲ್ಲಿ ಸಿಕ್ಸರ್ ಅಥವಾ ಬೌಂಡರಿ ಬಾರಿಸಿದರು.

10ನೇ ಓವರ್​ನಲ್ಲಿ ಜಿತೇಶ್ ಶರ್ಮಾ ಔಟಾದ ಬಳಿಕ ಕ್ರೀಸ್​ಗೆ ಬಂದ ಅಶುತೋಷ್ ಶರ್ಮಾ, ತಾನು ಎದುರಿಸಿದ ತನ್ನ ಎರಡನೇ ಎಸೆತದಲ್ಲಿ ಆಕಾಶ್ ಮಧ್ವಲ್ ಎಸೆತದಲ್ಲಿ ಫೈನ್ ಲೆಗ್ ಮೇಲೆ ಸಿಕ್ಸರ್ ಬಾರಿಸಿದರು. ಇದಾದ ನಂತರ ಅಶುತೋಷ್ ಪ್ರತಿ ಓವರ್‌ನಲ್ಲಿ ಸಿಕ್ಸರ್ ಅಥವಾ ಬೌಂಡರಿ ಬಾರಿಸಿದರು.

5 / 10
ಹೀಗಾಗಿ ಪಂದ್ಯ ರೋಚಕ ಘಟ್ಟ ತಲುಪಿತ್ತು. ಒಂದು ಹಂತದಲ್ಲಿ ಮುಂಬೈ ಸುಲಭವಾಗಿ ಪಂದ್ಯವನ್ನು ಗೆದ್ದುಕೊಳ್ಳುತ್ತದೆ ಎಂದು ತೊರುತ್ತಿತ್ತು. ಆದರೆ ಬಾಲಂಗೋಚಿಗಳ ಜೊತೆ ಅದ್ಭುತ ಇನ್ನಿಂಗ್ಸ್ ಕಟ್ಟಿದ್ದ ಅಶುತೋಷ್ ಶರ್ಮಾ ಮುಂಬೈ ಪಾಳಯಕ್ಕೆ ಸೋಲಿನ ಭಯ ಹುಟ್ಟಿಸಿದ್ದರು.

ಹೀಗಾಗಿ ಪಂದ್ಯ ರೋಚಕ ಘಟ್ಟ ತಲುಪಿತ್ತು. ಒಂದು ಹಂತದಲ್ಲಿ ಮುಂಬೈ ಸುಲಭವಾಗಿ ಪಂದ್ಯವನ್ನು ಗೆದ್ದುಕೊಳ್ಳುತ್ತದೆ ಎಂದು ತೊರುತ್ತಿತ್ತು. ಆದರೆ ಬಾಲಂಗೋಚಿಗಳ ಜೊತೆ ಅದ್ಭುತ ಇನ್ನಿಂಗ್ಸ್ ಕಟ್ಟಿದ್ದ ಅಶುತೋಷ್ ಶರ್ಮಾ ಮುಂಬೈ ಪಾಳಯಕ್ಕೆ ಸೋಲಿನ ಭಯ ಹುಟ್ಟಿಸಿದ್ದರು.

6 / 10
ಆದರೆ ಈ ಗೆಲುವಿನ ಹೋರಾಟದಲ್ಲಿ ಅಶುತೋಷ್ ಶರ್ಮಾಗೆ ಕೊನೆಗೂ ಯಶ ಸಿಗಲಿಲ್ಲ. ಪಂಜಾಬ್ ತಂಡವನ್ನು ಗೆಲುವಿನ ದಡ ಸೇರಿಸುವ ಉದ್ದೇಶದಲ್ಲಿ 18ನೇ ಓವರ್​ನಲ್ಲಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಅಶುತೋಷ್ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಅಶುತೋಷ್ ವಿಕೆಟ್ ಪತನವಾದ ಬಳಿಕವಷ್ಟೇ ಮುಂಬೈ ಪಾಳಯದಲ್ಲಿ ಗೆಲುವಿನ ಆಸೆ ಚಿಗುರಿದ್ದು.

ಆದರೆ ಈ ಗೆಲುವಿನ ಹೋರಾಟದಲ್ಲಿ ಅಶುತೋಷ್ ಶರ್ಮಾಗೆ ಕೊನೆಗೂ ಯಶ ಸಿಗಲಿಲ್ಲ. ಪಂಜಾಬ್ ತಂಡವನ್ನು ಗೆಲುವಿನ ದಡ ಸೇರಿಸುವ ಉದ್ದೇಶದಲ್ಲಿ 18ನೇ ಓವರ್​ನಲ್ಲಿ ಸಿಕ್ಸರ್ ಬಾರಿಸುವ ಯತ್ನದಲ್ಲಿ ಅಶುತೋಷ್ ಕ್ಯಾಚಿತ್ತು ವಿಕೆಟ್ ಒಪ್ಪಿಸಿದರು. ಅಶುತೋಷ್ ವಿಕೆಟ್ ಪತನವಾದ ಬಳಿಕವಷ್ಟೇ ಮುಂಬೈ ಪಾಳಯದಲ್ಲಿ ಗೆಲುವಿನ ಆಸೆ ಚಿಗುರಿದ್ದು.

7 / 10
ಅಷ್ಟಕ್ಕೂ ಪಂಜಾಬ್ ಪರ ಆಡಿರುವ ಎಲ್ಲಾ ಪಂದ್ಯಗಳಲ್ಲಿ ಅದ್ಭುತ ಇನ್ನಿಂಗ್ಸ್​ಗಳನ್ನು ಆಡಿರುವ ಅಶುತೋಷ್ ಶರ್ಮಾ ಯಾರು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು. ಅಶುತೋಷ್ ಶರ್ಮಾ ಅಪ್ಪಟ್ಟ ದೇಸಿ ಪ್ರತಿಭೆ. ಈ ಬಾರಿಯ ಮಿನಿ ಹರಾಜಿನಲ್ಲಿ ಕೇವಲ 20 ಲಕ್ಷ ರೂ ಮೂಲ ಬೆಲೆಗೆ ಅಶುತೋಷ್​ರನ್ನು ಪಂಜಾಬ್ ಕಿಂಗ್ಸ್ ಖರೀದಿಸಿತ್ತು.

ಅಷ್ಟಕ್ಕೂ ಪಂಜಾಬ್ ಪರ ಆಡಿರುವ ಎಲ್ಲಾ ಪಂದ್ಯಗಳಲ್ಲಿ ಅದ್ಭುತ ಇನ್ನಿಂಗ್ಸ್​ಗಳನ್ನು ಆಡಿರುವ ಅಶುತೋಷ್ ಶರ್ಮಾ ಯಾರು ಎಂಬ ಪ್ರಶ್ನೆ ನಿಮ್ಮಲ್ಲಿ ಮೂಡಿರಬಹುದು. ಅಶುತೋಷ್ ಶರ್ಮಾ ಅಪ್ಪಟ್ಟ ದೇಸಿ ಪ್ರತಿಭೆ. ಈ ಬಾರಿಯ ಮಿನಿ ಹರಾಜಿನಲ್ಲಿ ಕೇವಲ 20 ಲಕ್ಷ ರೂ ಮೂಲ ಬೆಲೆಗೆ ಅಶುತೋಷ್​ರನ್ನು ಪಂಜಾಬ್ ಕಿಂಗ್ಸ್ ಖರೀದಿಸಿತ್ತು.

8 / 10
ಹೀಗಾಗಿ ಇದು ಅಶುತೋಷ್ ಅವರ ಮೊದಲ ಐಪಿಎಲ್ ಸೀಸನ್. ಇದಕ್ಕು ಮೊದಲು ಅವರು ರೈಲ್ವೇಸ್ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡುತ್ತಿದ್ದು, ಕಳೆದ ವರ್ಷವಷ್ಟೇ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಯುವರಾಜ್ ಸಿಂಗ್ ದಾಖಲೆಯನ್ನು ಮುರಿದಿದ್ದರು. ಆ ನಂತರ ಅವರ ಹೆಸರು ಎಲ್ಲೆಡೆ ಪ್ರಸಿದ್ಧವಾಯಿತು.

ಹೀಗಾಗಿ ಇದು ಅಶುತೋಷ್ ಅವರ ಮೊದಲ ಐಪಿಎಲ್ ಸೀಸನ್. ಇದಕ್ಕು ಮೊದಲು ಅವರು ರೈಲ್ವೇಸ್ ಪರ ಪ್ರಥಮ ದರ್ಜೆ ಕ್ರಿಕೆಟ್ ಆಡುತ್ತಿದ್ದು, ಕಳೆದ ವರ್ಷವಷ್ಟೇ ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಯುವರಾಜ್ ಸಿಂಗ್ ದಾಖಲೆಯನ್ನು ಮುರಿದಿದ್ದರು. ಆ ನಂತರ ಅವರ ಹೆಸರು ಎಲ್ಲೆಡೆ ಪ್ರಸಿದ್ಧವಾಯಿತು.

9 / 10
ಈಗ ಐಪಿಎಲ್‌ನಲ್ಲೂ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿರುವ ಅಶುತೋಷ್ ಈ ಸೀಸನ್​ನಲ್ಲಿ ಒಟ್ಟು 13 ಸಿಕ್ಸರ್‌ಗಳ ಸಹಿತ 156 ರನ್ ಬಾರಿಸಿದ್ದಾರೆ, ಅವರ ಸ್ಟ್ರೈಕ್ ರೇಟ್ ಕೂಡ 200 ಕ್ಕಿಂತ ಹೆಚ್ಚಿದೆ. ಅಶುತೋಷ್ ಇದೇ ರೀತಿ ಆಟ ಮುಂದುವರಿಸಿದರೆ ಶೀಘ್ರದಲ್ಲೇ ಈ ಆಟಗಾರ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈಗ ಐಪಿಎಲ್‌ನಲ್ಲೂ ಸ್ಫೋಟಕ ಬ್ಯಾಟಿಂಗ್ ಮಾಡುತ್ತಿರುವ ಅಶುತೋಷ್ ಈ ಸೀಸನ್​ನಲ್ಲಿ ಒಟ್ಟು 13 ಸಿಕ್ಸರ್‌ಗಳ ಸಹಿತ 156 ರನ್ ಬಾರಿಸಿದ್ದಾರೆ, ಅವರ ಸ್ಟ್ರೈಕ್ ರೇಟ್ ಕೂಡ 200 ಕ್ಕಿಂತ ಹೆಚ್ಚಿದೆ. ಅಶುತೋಷ್ ಇದೇ ರೀತಿ ಆಟ ಮುಂದುವರಿಸಿದರೆ ಶೀಘ್ರದಲ್ಲೇ ಈ ಆಟಗಾರ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

10 / 10
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು