AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಿಎಸ್​ಕೆ ತೊರೆಯಲ್ಲಿದ್ದಾರೆ ಬಾಂಗ್ಲಾ ವೇಗಿ ಮುಸ್ತಾಫಿಜುರ್ ರೆಹಮಾನ್..!

IPL 2024: ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿ ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಲೀಗ್ ಮಧ್ಯದಲ್ಲೇ ತಮ್ಮ ದೇಶಕ್ಕೆ ವಾಪಸ್ಸಾಗಲಿದ್ದಾರೆ. ಚೆನ್ನೈ ಪರ ಡೆತ್ ಓವರ್​ಗಳಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶನ ನೀಡುತ್ತಿರುವ ವೇಗಿ ಮುಸ್ತಾಫಿಜುರ್ ರೆಹಮಾನ್ ಮೇ 1 ರ ನಂತರ ಐಪಿಎಲ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ.

ಪೃಥ್ವಿಶಂಕರ
|

Updated on: Apr 17, 2024 | 5:20 PM

17ನೇ ಆವೃತ್ತಿಯ ಐಪಿಎಲ್‌ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಸಮತೋಲಿತ ಪ್ರದರ್ಶನ ನೀಡುತ್ತಿರುವ ತಂಡವೆಂದರೆ ಅದು ಸಿಎಸ್​ಕೆ. ರುತುರಾಜ್ ನಾಯಕತ್ವದ ಚೆನ್ನೈ ತಂಡ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದೆ.

17ನೇ ಆವೃತ್ತಿಯ ಐಪಿಎಲ್‌ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಸಮತೋಲಿತ ಪ್ರದರ್ಶನ ನೀಡುತ್ತಿರುವ ತಂಡವೆಂದರೆ ಅದು ಸಿಎಸ್​ಕೆ. ರುತುರಾಜ್ ನಾಯಕತ್ವದ ಚೆನ್ನೈ ತಂಡ ಇದುವರೆಗೆ ಅತ್ಯುತ್ತಮ ಪ್ರದರ್ಶನ ನೀಡಿದೆ.

1 / 8
ತಂಡ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು 4ರಲ್ಲಿ ಜಯ ಸಾಧಿಸಿದ್ದು, ಉಳಿದಂತೆ 2ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಒಟ್ಟಾರೆ 8 ಅಂಕಗಳೊಂದಿಗೆ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿ ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಲೀಗ್ ಮಧ್ಯದಲ್ಲೇ ತಮ್ಮ ದೇಶಕ್ಕೆ ವಾಪಸ್ಸಾಗಲಿದ್ದಾರೆ.

ತಂಡ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು 4ರಲ್ಲಿ ಜಯ ಸಾಧಿಸಿದ್ದು, ಉಳಿದಂತೆ 2ಪಂದ್ಯಗಳಲ್ಲಿ ಸೋಲನ್ನು ಎದುರಿಸಿದೆ. ಒಟ್ಟಾರೆ 8 ಅಂಕಗಳೊಂದಿಗೆ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತಕ್ಕಾರಿ ಸುದ್ದಿ ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಲೀಗ್ ಮಧ್ಯದಲ್ಲೇ ತಮ್ಮ ದೇಶಕ್ಕೆ ವಾಪಸ್ಸಾಗಲಿದ್ದಾರೆ.

2 / 8
ಚೆನ್ನೈ ಪರ ಡೆತ್ ಓವರ್​ಗಳಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶನ ನೀಡುತ್ತಿರುವ ವೇಗಿ ಮುಸ್ತಾಫಿಜುರ್ ರೆಹಮಾನ್ ಮೇ 1 ರ ನಂತರ ಐಪಿಎಲ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ. ಮೇ 3 ರಿಂದ ಬಾಂಗ್ಲಾದೇಶ ತಂಡ ತನ್ನ ತವರಿನಲ್ಲಿ ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

ಚೆನ್ನೈ ಪರ ಡೆತ್ ಓವರ್​ಗಳಲ್ಲಿ ಅದ್ಭುತ ಬೌಲಿಂಗ್‌ ಪ್ರದರ್ಶನ ನೀಡುತ್ತಿರುವ ವೇಗಿ ಮುಸ್ತಾಫಿಜುರ್ ರೆಹಮಾನ್ ಮೇ 1 ರ ನಂತರ ಐಪಿಎಲ್​ನಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದುಬಂದಿದೆ. ಮೇ 3 ರಿಂದ ಬಾಂಗ್ಲಾದೇಶ ತಂಡ ತನ್ನ ತವರಿನಲ್ಲಿ ಜಿಂಬಾಬ್ವೆ ವಿರುದ್ಧ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ.

3 / 8
ಹೀಗಾಗಿ ಮುಸ್ತಾಫಿಜುರ್ ರೆಹಮಾನ್ ದೇಶದ ಪರ ಆಡುವ ಸಲುವಾಗಿ ಐಪಿಎಲ್ ತೊರೆಯಲ್ಲಿದ್ದಾರೆ. ಅಲ್ಲದೆ ಈ ಸರಣಿ ಮುಗಿದ ನಂತರವೂ ರೆಹಮಾನ್ ಮತ್ತೆ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಆ ಬಳಿಕವೂ ಬಾಂಗ್ಲಾ ತಂಡ ಟಿ20 ವಿಶ್ವಕಪ್‌ಗೂ ಮುನ್ನ ಅಮೆರಿಕ ವಿರುದ್ಧ ಮೂರು ಟಿ20 ಪಂದ್ಯಗಳನ್ನು ಆಡಲಿದೆ.

ಹೀಗಾಗಿ ಮುಸ್ತಾಫಿಜುರ್ ರೆಹಮಾನ್ ದೇಶದ ಪರ ಆಡುವ ಸಲುವಾಗಿ ಐಪಿಎಲ್ ತೊರೆಯಲ್ಲಿದ್ದಾರೆ. ಅಲ್ಲದೆ ಈ ಸರಣಿ ಮುಗಿದ ನಂತರವೂ ರೆಹಮಾನ್ ಮತ್ತೆ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಗಳು ತೀರ ಕಡಿಮೆ ಇವೆ. ಏಕೆಂದರೆ ಆ ಬಳಿಕವೂ ಬಾಂಗ್ಲಾ ತಂಡ ಟಿ20 ವಿಶ್ವಕಪ್‌ಗೂ ಮುನ್ನ ಅಮೆರಿಕ ವಿರುದ್ಧ ಮೂರು ಟಿ20 ಪಂದ್ಯಗಳನ್ನು ಆಡಲಿದೆ.

4 / 8
ಮೇ 21ರಿಂದ ಈ ಸರಣಿ ಆರಂಭವಾಗಲಿರುವುದರಿಂದ ಮುಸ್ತಾಫಿಜುರ್ ರೆಹಮಾನ್ ಐಪಿಎಲ್‌ನಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಈ ಸರಣಿ ಆರಂಭವಾದ ಐದು ದಿನಗಳಲ್ಲಿ ಐಪಿಎಲ್ 2024 ರ ಫೈನಲ್ ಪಂದ್ಯ ನಡೆಯಲ್ಲಿದೆ.

ಮೇ 21ರಿಂದ ಈ ಸರಣಿ ಆರಂಭವಾಗಲಿರುವುದರಿಂದ ಮುಸ್ತಾಫಿಜುರ್ ರೆಹಮಾನ್ ಐಪಿಎಲ್‌ನಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಈ ಸರಣಿ ಆರಂಭವಾದ ಐದು ದಿನಗಳಲ್ಲಿ ಐಪಿಎಲ್ 2024 ರ ಫೈನಲ್ ಪಂದ್ಯ ನಡೆಯಲ್ಲಿದೆ.

5 / 8
ಈ ಹಿಂದೆಯೇ ಅಂದರೆ ರೆಹಮಾನ್ ಏಪ್ರಿಲ್ 30 ರಂದು ಬಾಂಗ್ಲಾದೇಶಕ್ಕೆ ತೆರಳಬೇಕಿತ್ತು. ಆದರೆ, ಸಿಎಸ್​ಕೆ ಕೋರಿಕೆಯ ನಂತರ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ರೆಹಮಾನ್ ಅವರಿಗೆ 1 ದಿನದ ಎನ್​ಒಸಿ ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಏಪ್ರಿಲ್ 1 ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ.

ಈ ಹಿಂದೆಯೇ ಅಂದರೆ ರೆಹಮಾನ್ ಏಪ್ರಿಲ್ 30 ರಂದು ಬಾಂಗ್ಲಾದೇಶಕ್ಕೆ ತೆರಳಬೇಕಿತ್ತು. ಆದರೆ, ಸಿಎಸ್​ಕೆ ಕೋರಿಕೆಯ ನಂತರ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ರೆಹಮಾನ್ ಅವರಿಗೆ 1 ದಿನದ ಎನ್​ಒಸಿ ನೀಡಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಏಪ್ರಿಲ್ 1 ರಂದು ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಲಭ್ಯವಾಗಲಿದ್ದಾರೆ.

6 / 8
ರೆಹಮಾನ್ ಈಗ ಏಪ್ರಿಲ್ 19 ಮತ್ತು 23 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ, ಏಪ್ರಿಲ್ 28 ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮತ್ತು ಮೇ 1 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯಗಳನ್ನು ಆಡಲಿದ್ದಾರೆ. ಇದರ ನಂತರ ಅವರು ತಮ್ಮ ದೇಶಕ್ಕೆ ಹಿಂತಿರುಗುತ್ತಾರೆ.

ರೆಹಮಾನ್ ಈಗ ಏಪ್ರಿಲ್ 19 ಮತ್ತು 23 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ, ಏಪ್ರಿಲ್ 28 ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮತ್ತು ಮೇ 1 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯಗಳನ್ನು ಆಡಲಿದ್ದಾರೆ. ಇದರ ನಂತರ ಅವರು ತಮ್ಮ ದೇಶಕ್ಕೆ ಹಿಂತಿರುಗುತ್ತಾರೆ.

7 / 8
ಐಪಿಎಲ್ 2024 ರಲ್ಲಿ ಮುಸ್ತಾಫಿಜುರ್ ರೆಹಮಾನ್ ಇಲ್ಲಿಯವರೆಗೆ ಆಡಿದ 5 ಪಂದ್ಯಗಳಲ್ಲಿ 18.30 ರ ಸರಾಸರಿಯಲ್ಲಿ ಮತ್ತು 9.15 ರ ಎಕಾನಮಿಯಲ್ಲಿ 10 ವಿಕೆಟ್ಗಳನ್ನು ಪಡೆದಿದ್ದಾರೆ.

ಐಪಿಎಲ್ 2024 ರಲ್ಲಿ ಮುಸ್ತಾಫಿಜುರ್ ರೆಹಮಾನ್ ಇಲ್ಲಿಯವರೆಗೆ ಆಡಿದ 5 ಪಂದ್ಯಗಳಲ್ಲಿ 18.30 ರ ಸರಾಸರಿಯಲ್ಲಿ ಮತ್ತು 9.15 ರ ಎಕಾನಮಿಯಲ್ಲಿ 10 ವಿಕೆಟ್ಗಳನ್ನು ಪಡೆದಿದ್ದಾರೆ.

8 / 8
Follow us
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್