AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಸಮರಾಭ್ಯಾಸ ಶುರು ಮಾಡಿದ ಸಿಎಸ್​ಕೆ, ಚೆನ್ನೈಗೆ ಬಂದಿಳಿದ ಆಟಗಾರರು; ಧೋನಿ ಮಿಸ್ಸಿಂಗ್

IPL 2024: ಮುಂಬರುವ ಟೂರ್ನಿಗೆ ಇಂದಿನಿಂದಲೇ ಅಭ್ಯಾಸ ಶುರು ಮಾಡಿರುವ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಚೆನ್ನೈನಲ್ಲಿ ವಿಶೇಷ ಶಿಬಿರ ಆಯೋಜಿಸಿದೆ. ಶುಕ್ರವಾರ ಕೆಲವು ಆಟಗಾರರು ಈ ಶಿಬಿರಕ್ಕೆ ಆಗಮಿಸಿದ್ದಾರೆ.

ಪೃಥ್ವಿಶಂಕರ
|

Updated on: Mar 02, 2024 | 5:14 PM

Share
17ನೇ ಆವೃತ್ತಿಯ ಐಪಿಎಲ್ ಇದೇ ತಿಂಗಳ ಮಾರ್ಚ್ 22 ರಿಂದ ಪ್ರಾರಂಭವಾಗುತ್ತದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಮೂರು ವಾರಗಳಿಗಿಂತ ಕಡಿಮೆ ಸಮಯ ಉಳಿದಿದೆ.

17ನೇ ಆವೃತ್ತಿಯ ಐಪಿಎಲ್ ಇದೇ ತಿಂಗಳ ಮಾರ್ಚ್ 22 ರಿಂದ ಪ್ರಾರಂಭವಾಗುತ್ತದೆ. ಟೂರ್ನಿಯ ಮೊದಲ ಪಂದ್ಯ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ. ಈ ಪಂದ್ಯಕ್ಕೆ ಮೂರು ವಾರಗಳಿಗಿಂತ ಕಡಿಮೆ ಸಮಯ ಉಳಿದಿದೆ.

1 / 8
ಹೀಗಾಗಿ ಮುಂಬರುವ ಟೂರ್ನಿಗೆ ಇಂದಿನಿಂದಲೇ ಅಭ್ಯಾಸ ಶುರು ಮಾಡಿರುವ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಚೆನ್ನೈನಲ್ಲಿ ವಿಶೇಷ ಶಿಬಿರ ಆಯೋಜಿಸಿದೆ. ಶುಕ್ರವಾರ ಕೆಲವು ಆಟಗಾರರು ಈ ಶಿಬಿರಕ್ಕೆ ಆಗಮಿಸಿದ್ದಾರೆ. ಪಿಟಿಐ ಇನ್‌ಪುಟ್ ಪ್ರಕಾರ, ಎಂಎಸ್ ಧೋನಿ ಯಾವಾಗ ಆಗಮಿಸುತ್ತಾರೆ ಎಂಬುದರ ಕುರಿತು ಯಾವುದೇ ದೃಢೀಕರಣವಿಲ್ಲ ಎಂದು ತಿಳಿದುಬಂದಿದೆ.

ಹೀಗಾಗಿ ಮುಂಬರುವ ಟೂರ್ನಿಗೆ ಇಂದಿನಿಂದಲೇ ಅಭ್ಯಾಸ ಶುರು ಮಾಡಿರುವ ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿ ಚೆನ್ನೈನಲ್ಲಿ ವಿಶೇಷ ಶಿಬಿರ ಆಯೋಜಿಸಿದೆ. ಶುಕ್ರವಾರ ಕೆಲವು ಆಟಗಾರರು ಈ ಶಿಬಿರಕ್ಕೆ ಆಗಮಿಸಿದ್ದಾರೆ. ಪಿಟಿಐ ಇನ್‌ಪುಟ್ ಪ್ರಕಾರ, ಎಂಎಸ್ ಧೋನಿ ಯಾವಾಗ ಆಗಮಿಸುತ್ತಾರೆ ಎಂಬುದರ ಕುರಿತು ಯಾವುದೇ ದೃಢೀಕರಣವಿಲ್ಲ ಎಂದು ತಿಳಿದುಬಂದಿದೆ.

2 / 8
ನಿನ್ನೆಯಿಂದ ಆರಂಭವಾಗಿರುವ ಶಿಬಿರ ಇಂದು ಕೂಡ ಮುಂದುವರೆದಿದ್ದು, ಅದರಲ್ಲಿ ಸ್ಟಾರ್ ವೇಗಿ ದೀಪಕ್ ಚಹಾರ್ ಕೂಡ ಕಾಣಿಸಿಕೊಂಡರು. ಭಾರತೀಯ ಆಟಗಾರರ ಮೊದಲ ಬ್ಯಾಚ್ ಶುಕ್ರವಾರ ಶಿಬಿರವನ್ನು ತಲುಪಿದೆ ಎಂದು ತಮಿಳುನಾಡು ಕ್ರಿಕೆಟ್ ಸಂಸ್ಥೆಯ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದರು.

ನಿನ್ನೆಯಿಂದ ಆರಂಭವಾಗಿರುವ ಶಿಬಿರ ಇಂದು ಕೂಡ ಮುಂದುವರೆದಿದ್ದು, ಅದರಲ್ಲಿ ಸ್ಟಾರ್ ವೇಗಿ ದೀಪಕ್ ಚಹಾರ್ ಕೂಡ ಕಾಣಿಸಿಕೊಂಡರು. ಭಾರತೀಯ ಆಟಗಾರರ ಮೊದಲ ಬ್ಯಾಚ್ ಶುಕ್ರವಾರ ಶಿಬಿರವನ್ನು ತಲುಪಿದೆ ಎಂದು ತಮಿಳುನಾಡು ಕ್ರಿಕೆಟ್ ಸಂಸ್ಥೆಯ ಅಧಿಕಾರಿಯೊಬ್ಬರು ಪಿಟಿಐಗೆ ಮಾಹಿತಿ ನೀಡಿದ್ದರು.

3 / 8
ಅಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಆಟಗಾರರು ಶಿಬಿರಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ ಮುಖೇಶ್ ಚೌಧರಿ, ಸಿಮರ್ಜೀತ್ ಸಿಂಗ್, ರಾಜವರ್ಧನ್ ಹಂಗರ್ಗೇಕರ್, ಪ್ರಶಾಂತ್ ಸೋಲಂಕಿ, ಅಜಯ್ ಮಂಡಲ್ ಮತ್ತು ದೀಪಕ್ ಚಹಾರ್ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

ಅಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಕೆಲವು ಆಟಗಾರರು ಶಿಬಿರಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಪ್ರಸ್ತುತ ಮುಖೇಶ್ ಚೌಧರಿ, ಸಿಮರ್ಜೀತ್ ಸಿಂಗ್, ರಾಜವರ್ಧನ್ ಹಂಗರ್ಗೇಕರ್, ಪ್ರಶಾಂತ್ ಸೋಲಂಕಿ, ಅಜಯ್ ಮಂಡಲ್ ಮತ್ತು ದೀಪಕ್ ಚಹಾರ್ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ.

4 / 8
ಈ ಶಿಬಿರದಲ್ಲಿ ಎಲ್ಲರ ಕಣ್ಣು ದೀಪಕ್ ಚಹಾರ್ ಮೇಲಿರಲಿದೆ. ಏಕೆಂದರೆ ನಿರಂತರವಾಗಿ ಗಾಯಗಳಿಂದ ಬಸವಳಿದಿರುವ ಚಹಾರ್, ಡಿಸೆಂಬರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಮಧ್ಯದಲ್ಲಿಯೇ ತೊರೆದು ತಮ್ಮ ತಂದೆಯ ಆರೋಗ್ಯದ ಕಾರಣ ತವರಿಗೆ ವಾಪಸ್ಸಾಗಿದ್ದರು.

ಈ ಶಿಬಿರದಲ್ಲಿ ಎಲ್ಲರ ಕಣ್ಣು ದೀಪಕ್ ಚಹಾರ್ ಮೇಲಿರಲಿದೆ. ಏಕೆಂದರೆ ನಿರಂತರವಾಗಿ ಗಾಯಗಳಿಂದ ಬಸವಳಿದಿರುವ ಚಹಾರ್, ಡಿಸೆಂಬರ್‌ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಮಧ್ಯದಲ್ಲಿಯೇ ತೊರೆದು ತಮ್ಮ ತಂದೆಯ ಆರೋಗ್ಯದ ಕಾರಣ ತವರಿಗೆ ವಾಪಸ್ಸಾಗಿದ್ದರು.

5 / 8
ಇದಾದ ಬಳಿಕ ಮತ್ತೆ ಗಾಯಗೊಂಡಿದ್ದ ಚಹಾರ್, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದರು. ಪ್ರಸ್ತುತ ಫಿಟ್ ಆಗಿರುವ ಅವರು ಐಪಿಎಲ್‌ನಲ್ಲಿ ಅಬ್ಬರಿಸಲು ತಯಾರಿ ಶುರು ಮಾಡಿದ್ದಾರೆ. ಈ ಮೂಲಕ 2024 ರ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವ ಇರಾದೆಯೂ ಚಹಾರ್​ಗಿದೆ.

ಇದಾದ ಬಳಿಕ ಮತ್ತೆ ಗಾಯಗೊಂಡಿದ್ದ ಚಹಾರ್, ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್‌ಸಿಎ)ಯಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದರು. ಪ್ರಸ್ತುತ ಫಿಟ್ ಆಗಿರುವ ಅವರು ಐಪಿಎಲ್‌ನಲ್ಲಿ ಅಬ್ಬರಿಸಲು ತಯಾರಿ ಶುರು ಮಾಡಿದ್ದಾರೆ. ಈ ಮೂಲಕ 2024 ರ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವ ಇರಾದೆಯೂ ಚಹಾರ್​ಗಿದೆ.

6 / 8
ಭಾರತದ ಆಟಗಾರರು ಶಿಬಿರದಲ್ಲಿ ಕಾಣಸಿಕೊಂಡರೂ, ತಂಡದ ನಾಯಕ ಧೋನಿ ಮಾತ್ರ ಇನ್ನು ಚೆನ್ನೈ ತಲುಪಿಲ್ಲ. ಪ್ರಸ್ತುತ ಧೋನಿ ಯಾವಾಗ ಈ ಶಿಬಿರಕ್ಕೆ ಸೇರುತ್ತಾರೆ ಎಂಬುದರ ಕುರಿತು ಯಾವುದೇ ಖಚಿತವಾದ ಸುದ್ದಿ ಇನ್ನೂ ಬಂದಿಲ್ಲ ಎಂದು ಪಿಟಿಐ ತನ್ನ ಮಾಹಿತಿಯಲ್ಲಿ ತಿಳಿಸಿದೆ.

ಭಾರತದ ಆಟಗಾರರು ಶಿಬಿರದಲ್ಲಿ ಕಾಣಸಿಕೊಂಡರೂ, ತಂಡದ ನಾಯಕ ಧೋನಿ ಮಾತ್ರ ಇನ್ನು ಚೆನ್ನೈ ತಲುಪಿಲ್ಲ. ಪ್ರಸ್ತುತ ಧೋನಿ ಯಾವಾಗ ಈ ಶಿಬಿರಕ್ಕೆ ಸೇರುತ್ತಾರೆ ಎಂಬುದರ ಕುರಿತು ಯಾವುದೇ ಖಚಿತವಾದ ಸುದ್ದಿ ಇನ್ನೂ ಬಂದಿಲ್ಲ ಎಂದು ಪಿಟಿಐ ತನ್ನ ಮಾಹಿತಿಯಲ್ಲಿ ತಿಳಿಸಿದೆ.

7 / 8
ಚೆನ್ನೈ ಸೂಪರ್ ಕಿಂಗ್ಸ್ ವೇಳಾಪಟ್ಟಿ: ಮಾರ್ಚ್ 22 ರಂದು ಆರ್​ಸಿಬಿ ತಂಡವನ್ನು ಎದುರಿಸಲಿರುವ ಸಿಎಸ್​ಕೆ, ಮಾರ್ಚ್ 26 ರಂದು ಗುಜರಾತ್ ಟೈಟಾನ್ಸ್, ಮಾರ್ಚ್ 31 ರಂದು ದೆಹಲಿ ಕ್ಯಾಪಿಟಲ್ಸ್, ಹಾಗೂ ಏಪ್ರಿಲ್ 5 ರಂದು ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣಸಾಡಲಿದೆ.

ಚೆನ್ನೈ ಸೂಪರ್ ಕಿಂಗ್ಸ್ ವೇಳಾಪಟ್ಟಿ: ಮಾರ್ಚ್ 22 ರಂದು ಆರ್​ಸಿಬಿ ತಂಡವನ್ನು ಎದುರಿಸಲಿರುವ ಸಿಎಸ್​ಕೆ, ಮಾರ್ಚ್ 26 ರಂದು ಗುಜರಾತ್ ಟೈಟಾನ್ಸ್, ಮಾರ್ಚ್ 31 ರಂದು ದೆಹಲಿ ಕ್ಯಾಪಿಟಲ್ಸ್, ಹಾಗೂ ಏಪ್ರಿಲ್ 5 ರಂದು ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣಸಾಡಲಿದೆ.

8 / 8
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ