AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಡೆಲ್ಲಿ ಆಲ್​ರೌಂಡರ್ ಮಿಚೆಲ್ ಮಾರ್ಷ್​ಗೆ ಗಾಯ! ಐಪಿಎಲ್​ನಿಂದ ಔಟ್?

IPL 2024, Mitchell Marsh: ತಂಡದ ಸ್ಟಾರ್ ಆಲ್ ರೌಂಡರ್ ಮಿಚೆಲ್ ಮಾರ್ಷ್ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ. ನಿನ್ನೆ ನಡೆದ ಮುಂಬೈ ವಿರುದ್ಧದ ಪಂದ್ಯಕ್ಕೆ ಗೈರಾಗಿದ್ದ ಮಾರ್ಷ್​ ಆಟಕ್ಕೆ ಮರಳುವ ಬಗ್ಗೆ ಇನ್ನು ಖಚಿತ ಮಾಹಿತಿ ಸಿಕ್ಕಿಲ್ಲ.

ಪೃಥ್ವಿಶಂಕರ
|

Updated on: Apr 08, 2024 | 5:56 PM

Share
ನಡೆಯುತ್ತಿರುವ ಐಪಿಎಲ್ 17ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಳಪೆ ಪ್ರದರ್ಶನ ಮುಂದುವರೆಸಿದೆ. ಏಪ್ರಿಲ್ 7 ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ತಮ್ಮ ನಾಲ್ಕನೇ ಪಂದ್ಯದಲ್ಲಿ ಸೋತ ಡೆಲ್ಲಿ ಪಾಯಿಂಟ್​ ಪಟ್ಟಿಯಲ್ಲಿ ಭಾರಿ ಕುಸಿತ ಕಂಡಿದೆ.

ನಡೆಯುತ್ತಿರುವ ಐಪಿಎಲ್ 17ನೇ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಳಪೆ ಪ್ರದರ್ಶನ ಮುಂದುವರೆಸಿದೆ. ಏಪ್ರಿಲ್ 7 ರಂದು ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ತಮ್ಮ ನಾಲ್ಕನೇ ಪಂದ್ಯದಲ್ಲಿ ಸೋತ ಡೆಲ್ಲಿ ಪಾಯಿಂಟ್​ ಪಟ್ಟಿಯಲ್ಲಿ ಭಾರಿ ಕುಸಿತ ಕಂಡಿದೆ.

1 / 6
ಈ ನಡುವೆ ತಂಡದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ಆಲ್ ರೌಂಡರ್ ಮಿಚೆಲ್ ಮಾರ್ಷ್ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ. ನಿನ್ನೆ ನಡೆದ ಮುಂಬೈ ವಿರುದ್ಧದ ಪಂದ್ಯಕ್ಕೆ ಗೈರಾಗಿದ್ದ ಮಾರ್ಷ್​ ಆಟಕ್ಕೆ ಮರಳುವ ಬಗ್ಗೆ ಇನ್ನು ಖಚಿತ ಮಾಹಿತಿ ಸಿಕ್ಕಿಲ್ಲ.

ಈ ನಡುವೆ ತಂಡದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ಆಲ್ ರೌಂಡರ್ ಮಿಚೆಲ್ ಮಾರ್ಷ್ ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ. ನಿನ್ನೆ ನಡೆದ ಮುಂಬೈ ವಿರುದ್ಧದ ಪಂದ್ಯಕ್ಕೆ ಗೈರಾಗಿದ್ದ ಮಾರ್ಷ್​ ಆಟಕ್ಕೆ ಮರಳುವ ಬಗ್ಗೆ ಇನ್ನು ಖಚಿತ ಮಾಹಿತಿ ಸಿಕ್ಕಿಲ್ಲ.

2 / 6
ಮಂಡಿರಜ್ಜು ಗಾಯದಿಂದಾಗಿ ಮಿಚೆಲ್ ಮಾರ್ಷ್ ಮುಂಬೈ ವಿರುದ್ಧ ಕಣಕ್ಕಿಳಿದಿರಲಿಲ್ಲ. ಹೀಗಾಗಿ ವೇಗಿ ಜೇ ರಿಚರ್ಡ್‌ಸನ್‌ರನ್ನು ಆಡಿಸಲಾಯಿತು. ಇದರ ಪರಿಣಾಮವಾಗಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಒಬ್ಬ ಆಲ್​ರೌಂಡರ್ ಕೊರತೆ ಉಂಟಾಯಿತು. ಅಂತಿಮವಾಗಿ ತಂಡ ಇದರ ಭಾರವನ್ನು ಸೋಲಿನ ರೂಪದಲ್ಲಿ ಹೊರಬೇಕಾಯಿತು.

ಮಂಡಿರಜ್ಜು ಗಾಯದಿಂದಾಗಿ ಮಿಚೆಲ್ ಮಾರ್ಷ್ ಮುಂಬೈ ವಿರುದ್ಧ ಕಣಕ್ಕಿಳಿದಿರಲಿಲ್ಲ. ಹೀಗಾಗಿ ವೇಗಿ ಜೇ ರಿಚರ್ಡ್‌ಸನ್‌ರನ್ನು ಆಡಿಸಲಾಯಿತು. ಇದರ ಪರಿಣಾಮವಾಗಿ ಡೆಲ್ಲಿ ಕ್ಯಾಪಿಟಲ್ಸ್‌ಗೆ ಒಬ್ಬ ಆಲ್​ರೌಂಡರ್ ಕೊರತೆ ಉಂಟಾಯಿತು. ಅಂತಿಮವಾಗಿ ತಂಡ ಇದರ ಭಾರವನ್ನು ಸೋಲಿನ ರೂಪದಲ್ಲಿ ಹೊರಬೇಕಾಯಿತು.

3 / 6
ಇನ್ನು ಮುಂಬೈ ವಿರುದ್ಧದ ಪಂದ್ಯ ಮುಗಿದ ಬಳಿಕ ಮಿಚೆಲ್ ಮಾರ್ಷ್​ ಗಾಯದ ಬಗ್ಗೆ ಮಾಹಿತಿ ನೀಡಿದ ಡೆಲ್ಲಿ ತಂಡದ ಸಹಾಯಕ ಕೋಚ್ ಪ್ರವೀಣ್ ಆಮ್ರೆ, ಮಿಚೆಲ್ ಮಾರ್ಷ್ ಕನಿಷ್ಠ ಒಂದು ವಾರ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದಿದ್ದಾರೆ.

ಇನ್ನು ಮುಂಬೈ ವಿರುದ್ಧದ ಪಂದ್ಯ ಮುಗಿದ ಬಳಿಕ ಮಿಚೆಲ್ ಮಾರ್ಷ್​ ಗಾಯದ ಬಗ್ಗೆ ಮಾಹಿತಿ ನೀಡಿದ ಡೆಲ್ಲಿ ತಂಡದ ಸಹಾಯಕ ಕೋಚ್ ಪ್ರವೀಣ್ ಆಮ್ರೆ, ಮಿಚೆಲ್ ಮಾರ್ಷ್ ಕನಿಷ್ಠ ಒಂದು ವಾರ ತಂಡದಿಂದ ಹೊರಗುಳಿಯುವ ಸಾಧ್ಯತೆಗಳಿವೆ ಎಂದಿದ್ದಾರೆ.

4 / 6
ಮುಂದುವರೆದು ಮಾತನಾಡಿದ ಅವರು, ನಮ್ಮ ಕೆಲವು ಆಟಗಾರರು ಗಾಯಗೊಂಡಿದ್ದಾರೆ. ಅದರಲ್ಲಿ ಕೊಂಚ ಆತಂಕ ಹುಟ್ಟಿಸುವುದೆಂದರೆ ಅದು ಮಿಚ್ ಮಾರ್ಷ್ ಇಂಜುರಿ. ಸದ್ಯ ಅವರು ಸ್ಕ್ಯಾನ್‌ಗೆ ಹೋಗಿದ್ದು, ಫಿಸಿಯೋ ಒಂದು ವಾರದಲ್ಲಿ ವರದಿಯನ್ನು ನಮಗೆ ನೀಡುತ್ತಾರೆ.

ಮುಂದುವರೆದು ಮಾತನಾಡಿದ ಅವರು, ನಮ್ಮ ಕೆಲವು ಆಟಗಾರರು ಗಾಯಗೊಂಡಿದ್ದಾರೆ. ಅದರಲ್ಲಿ ಕೊಂಚ ಆತಂಕ ಹುಟ್ಟಿಸುವುದೆಂದರೆ ಅದು ಮಿಚ್ ಮಾರ್ಷ್ ಇಂಜುರಿ. ಸದ್ಯ ಅವರು ಸ್ಕ್ಯಾನ್‌ಗೆ ಹೋಗಿದ್ದು, ಫಿಸಿಯೋ ಒಂದು ವಾರದಲ್ಲಿ ವರದಿಯನ್ನು ನಮಗೆ ನೀಡುತ್ತಾರೆ.

5 / 6
ಆಗ ವಾಸ್ತವ ಸ್ಥಿತಿ ಏನೆಂದು ತಿಳಿಯಲಿದೆ. ಆ ನಂತರ ಮಿಚೆಲ್ ಮಾರ್ಷ್​ ಇಡೀ ಸೀಸನ್ ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದು ವರದಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದಿದ್ದಾರೆ. ಆಮ್ರೆ ಹೇಳಿಕೆ ಡೆಲ್ಲಿಗೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ. ಏಕೆಂದರೆ ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡಕ್ಕೆ ಮಾರ್ಷ್​ ಅಲಭ್ಯತೆ ಇನ್ನಷ್ಟು ಸಂಕಷ್ಟ ತರಲಿದೆ.

ಆಗ ವಾಸ್ತವ ಸ್ಥಿತಿ ಏನೆಂದು ತಿಳಿಯಲಿದೆ. ಆ ನಂತರ ಮಿಚೆಲ್ ಮಾರ್ಷ್​ ಇಡೀ ಸೀಸನ್ ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದು ವರದಿಯ ಮೇಲೆ ಅವಲಂಬಿತವಾಗಿರುತ್ತದೆ ಎಂದಿದ್ದಾರೆ. ಆಮ್ರೆ ಹೇಳಿಕೆ ಡೆಲ್ಲಿಗೆ ಕೊಂಚ ಹಿನ್ನಡೆಯನ್ನುಂಟು ಮಾಡಿದೆ. ಏಕೆಂದರೆ ಸತತ ಸೋಲುಗಳಿಂದ ಕಂಗೆಟ್ಟಿರುವ ತಂಡಕ್ಕೆ ಮಾರ್ಷ್​ ಅಲಭ್ಯತೆ ಇನ್ನಷ್ಟು ಸಂಕಷ್ಟ ತರಲಿದೆ.

6 / 6
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ