AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ‘ನನ್ನ ಕೊನೆಯ ಪಂದ್ಯವಾಗಿತ್ತು’; ನಿವೃತ್ತಿ ಖಚಿತಪಡಿಸಿದ ದಿನೇಶ್ ಕಾರ್ತಿಕ್

IPL 2024, Dinesh Karthik: ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದ ತಂಡದ ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ತಮ್ಮ ನಿವೃತ್ತಿ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಿಪಡಿಸಿದ್ದಾರೆ.

ಪೃಥ್ವಿಶಂಕರ
|

Updated on: Mar 23, 2024 | 4:22 PM

ನಿನ್ನೆ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದ ತಂಡದ ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ತಮ್ಮ ನಿವೃತ್ತಿ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಿಪಡಿಸಿದ್ದಾರೆ.

ನಿನ್ನೆ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ ಪರ ನಿರ್ಣಾಯಕ ಇನ್ನಿಂಗ್ಸ್ ಆಡಿದ ತಂಡದ ಅನುಭವಿ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ತಮ್ಮ ನಿವೃತ್ತಿ ನಿರ್ಧಾರವನ್ನು ಮತ್ತೊಮ್ಮೆ ಸ್ಪಷ್ಟಿಪಡಿಸಿದ್ದಾರೆ.

1 / 7
ಭಾರತದ ಪ್ರತಿಭಾವಂತ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಆರಂಭದಿಂದಲೂ ಐಪಿಎಲ್‌ನ ಭಾಗವಾಗಿದ್ದಾರೆ. ಇದುವರೆಗೆ ಅವರು ಆರು ತಂಡಗಳನ್ನು ಪ್ರತಿನಿಧಿಸಿದ್ದಾರೆ. ಅಲ್ಲದೆ ಕಾರ್ತಿಕ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ನಾಯಕರೂ ಆಗಿದ್ದರು.

ಭಾರತದ ಪ್ರತಿಭಾವಂತ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಆರಂಭದಿಂದಲೂ ಐಪಿಎಲ್‌ನ ಭಾಗವಾಗಿದ್ದಾರೆ. ಇದುವರೆಗೆ ಅವರು ಆರು ತಂಡಗಳನ್ನು ಪ್ರತಿನಿಧಿಸಿದ್ದಾರೆ. ಅಲ್ಲದೆ ಕಾರ್ತಿಕ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡದ ನಾಯಕರೂ ಆಗಿದ್ದರು.

2 / 7
ಐಪಿಎಲ್ 17ನೇ ಸೀಸನ್ ಆರಂಭಕ್ಕೂ ಮುನ್ನವೇ ಇದು ಕಾರ್ತಿಕ್ ಅವರ ಐಪಿಎಲ್ ಕೊನೆಯ ಸೀಸನ್ ಎಂಬ ವರದಿಗಳು ಬಂದಿದ್ದವು. ಅದರಂತೆ ಸಿಎಸ್​ಕೆ ವಿರುದ್ಧದ ಪಂದ್ಯದ ನಂತರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ತಿಕ್​ಗೆ ಚೆಪಾಕ್‌ನಲ್ಲಿ ಇದು ನಿಮ್ಮ ಕೊನೆಯ ಪಂದ್ಯವೇ ಎಂಬ ಪ್ರಶ್ನೆ ಕೇಳಲಾಯಿತು.

ಐಪಿಎಲ್ 17ನೇ ಸೀಸನ್ ಆರಂಭಕ್ಕೂ ಮುನ್ನವೇ ಇದು ಕಾರ್ತಿಕ್ ಅವರ ಐಪಿಎಲ್ ಕೊನೆಯ ಸೀಸನ್ ಎಂಬ ವರದಿಗಳು ಬಂದಿದ್ದವು. ಅದರಂತೆ ಸಿಎಸ್​ಕೆ ವಿರುದ್ಧದ ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ತಿಕ್​ಗೆ ಚೆಪಾಕ್‌ನಲ್ಲಿ ಇದು ನಿಮ್ಮ ಕೊನೆಯ ಪಂದ್ಯವೇ ಎಂಬ ಪ್ರಶ್ನೆ ಕೇಳಲಾಯಿತು.

3 / 7
ಇದಕ್ಕೆ ಉತ್ತರಿಸಿದ ಅವರು ‘ಚೆಪಾಕ್​ನಲ್ಲಿ ಪ್ಲೇಆಫ್ ಪಂದ್ಯವನ್ನು ಆಯೋಜಿಸುವ ಸಾಧ್ಯತೆ ಇರುವುದರಿಂದ ನಾನು ಇಲ್ಲಿ ಇನ್ನೊಂದು ಪಂದ್ಯ ಆಡಬಹುದು. ಒಂದು ವೇಳೆ ನಮ್ಮ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆಯದಿದ್ದರೆ, ಇದು ಈ ಮೈದಾನದಲ್ಲಿ ನನ್ನ ಕೊನೆಯ ಪಂದ್ಯ ಎಂದಿದ್ದಾರೆ.

ಇದಕ್ಕೆ ಉತ್ತರಿಸಿದ ಅವರು ‘ಚೆಪಾಕ್​ನಲ್ಲಿ ಪ್ಲೇಆಫ್ ಪಂದ್ಯವನ್ನು ಆಯೋಜಿಸುವ ಸಾಧ್ಯತೆ ಇರುವುದರಿಂದ ನಾನು ಇಲ್ಲಿ ಇನ್ನೊಂದು ಪಂದ್ಯ ಆಡಬಹುದು. ಒಂದು ವೇಳೆ ನಮ್ಮ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆಯದಿದ್ದರೆ, ಇದು ಈ ಮೈದಾನದಲ್ಲಿ ನನ್ನ ಕೊನೆಯ ಪಂದ್ಯ ಎಂದಿದ್ದಾರೆ.

4 / 7
ನಿವೃತ್ತಿಯ ನಂತರವೂ ಕ್ರಿಕೆಟ್​ನಲ್ಲಿ ಉಳಿಯುವ ನಿರ್ಧಾರ ಮಾಡಿರುವ ಕಾರ್ತಿಕ್ ಕಾಮೆಂಟರಿಯ ಮೇಲೆ ಹೆಚ್ಚು ಆಸಕ್ತಿ ತೊರುತ್ತಿದ್ದಾರೆ.ಇದಕ್ಕೆ ಪೂರಕವಾಗಿ ಕಾರ್ತಿಕ್ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಸಮಯದಲ್ಲಿ ಕಾಮೆಂಟರಿ ಮಾಡುತ್ತಿದ್ದರು. ಆದರೆ ಐಪಿಎಲ್‌ಗೆ ತಯಾರಿ ನಡೆಸಬೇಕಾದ್ದರಿಂದ ಅವರು ಕಾಮೆಂಟರಿಯನ್ನು ಮಧ್ಯದಲ್ಲಿಯೇ ತೊರೆಯಬೇಕಾಯಿತು.

ನಿವೃತ್ತಿಯ ನಂತರವೂ ಕ್ರಿಕೆಟ್​ನಲ್ಲಿ ಉಳಿಯುವ ನಿರ್ಧಾರ ಮಾಡಿರುವ ಕಾರ್ತಿಕ್ ಕಾಮೆಂಟರಿಯ ಮೇಲೆ ಹೆಚ್ಚು ಆಸಕ್ತಿ ತೊರುತ್ತಿದ್ದಾರೆ.ಇದಕ್ಕೆ ಪೂರಕವಾಗಿ ಕಾರ್ತಿಕ್ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸರಣಿಯ ಸಮಯದಲ್ಲಿ ಕಾಮೆಂಟರಿ ಮಾಡುತ್ತಿದ್ದರು. ಆದರೆ ಐಪಿಎಲ್‌ಗೆ ತಯಾರಿ ನಡೆಸಬೇಕಾದ್ದರಿಂದ ಅವರು ಕಾಮೆಂಟರಿಯನ್ನು ಮಧ್ಯದಲ್ಲಿಯೇ ತೊರೆಯಬೇಕಾಯಿತು.

5 / 7
ಸಿಎಸ್‌ಕೆ ವಿರುದ್ಧದ ಮೊದಲ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಕಂಗೆಟ್ಟಿದ್ದ ಆರ್‌ಸಿಬಿ ಪರ ಕಾರ್ತಿಕ್ ಅನುಜ್ ರಾವತ್ ಜೊತೆಗೂಡಿ ಆರನೇ ವಿಕೆಟ್​ಗೆ 50 ಎಸೆತಗಳಲ್ಲಿ 95 ರನ್ ಗಳ ಜೊತೆಯಾಟ ನೀಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

ಸಿಎಸ್‌ಕೆ ವಿರುದ್ಧದ ಮೊದಲ ಪಂದ್ಯದಲ್ಲಿ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಕಂಗೆಟ್ಟಿದ್ದ ಆರ್‌ಸಿಬಿ ಪರ ಕಾರ್ತಿಕ್ ಅನುಜ್ ರಾವತ್ ಜೊತೆಗೂಡಿ ಆರನೇ ವಿಕೆಟ್​ಗೆ 50 ಎಸೆತಗಳಲ್ಲಿ 95 ರನ್ ಗಳ ಜೊತೆಯಾಟ ನೀಡುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು.

6 / 7
ಈ ವೇಳೆ ಕಾರ್ತಿಕ್ 26 ಎಸೆತಗಳಲ್ಲಿ ಔಟಾಗದೆ 38 ರನ್ ಗಳಿಸಿ ಮಹತ್ವದ ಇನ್ನಿಂಗ್ಸ್ ಆಡಿದರು. ರಾವತ್ ಮತ್ತು ಕಾರ್ತಿಕ್ ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಆರ್‌ಸಿಬಿ 173 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಆದಾಗ್ಯೂ, ಈ ಪಂದ್ಯವನ್ನು ಚೆನ್ನೈ ಆರು ವಿಕೆಟ್‌ಗಳಿಂದ ಗೆದ್ದುಕೊಂಡಿತು.

ಈ ವೇಳೆ ಕಾರ್ತಿಕ್ 26 ಎಸೆತಗಳಲ್ಲಿ ಔಟಾಗದೆ 38 ರನ್ ಗಳಿಸಿ ಮಹತ್ವದ ಇನ್ನಿಂಗ್ಸ್ ಆಡಿದರು. ರಾವತ್ ಮತ್ತು ಕಾರ್ತಿಕ್ ಅವರ ಅದ್ಭುತ ಇನ್ನಿಂಗ್ಸ್ ನೆರವಿನಿಂದ ಆರ್‌ಸಿಬಿ 173 ರನ್ ಗಳಿಸುವಲ್ಲಿ ಯಶಸ್ವಿಯಾಯಿತು. ಆದಾಗ್ಯೂ, ಈ ಪಂದ್ಯವನ್ನು ಚೆನ್ನೈ ಆರು ವಿಕೆಟ್‌ಗಳಿಂದ ಗೆದ್ದುಕೊಂಡಿತು.

7 / 7
Follow us
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಸೋಮಶೇಖರ್‌, ಹೆಬ್ಬಾರ್‌ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ಯಾಕೆ?ಇಲ್ಲಿದೆ ಕಾರಣ
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್
ಯಡಿಯೂರಪ್ಪ ಕುಟುಂಬ ವಿರುದ್ಧ ಮಾತಾಡಿದ್ದಕ್ಕೆ ಕ್ಷಮೆ ಕೇಳಲ್ಲ: ಯತ್ಮಾಳ್