AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ನಿಂದ ಹೊರಬಿದ್ದ ಡೆಲ್ಲಿ ತಂಡದ ಸ್ಟಾರ್ ಆಲ್‌ರೌಂಡರ್..!

IPL 2024: ಈ ಸೀಸನ್​ನಲ್ಲಿ ಗೆಲುವಿಗಿಂತ ಹೆಚ್ಚು ಸೋಲುಗಳನ್ನೇ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲೀಗ್​ನಿಂದ ಹೊರಬೀಳುವ ಆತಂಕದಲ್ಲಿದೆ. ಈ ನಡುವೆ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯದ ಕಾರಣದಿಂದಾಗಿ ತಂಡದ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್​ ಲೀಗ್​ನಿಂದಲೇ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: Apr 22, 2024 | 8:35 PM

Share
ಈ ಸೀಸನ್​ನಲ್ಲಿ ಗೆಲುವಿಗಿಂತ ಹೆಚ್ಚು ಸೋಲುಗಳನ್ನೇ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲೀಗ್​ನಿಂದ ಹೊರಬೀಳುವ ಆತಂಕದಲ್ಲಿದೆ. ಈ ನಡುವೆ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯದ ಕಾರಣದಿಂದಾಗಿ ತಂಡದ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್​ ಲೀಗ್​ನಿಂದಲೇ ಹೊರಬಿದ್ದಿದ್ದಾರೆ.

ಈ ಸೀಸನ್​ನಲ್ಲಿ ಗೆಲುವಿಗಿಂತ ಹೆಚ್ಚು ಸೋಲುಗಳನ್ನೇ ಕಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಲೀಗ್​ನಿಂದ ಹೊರಬೀಳುವ ಆತಂಕದಲ್ಲಿದೆ. ಈ ನಡುವೆ ತಂಡಕ್ಕೆ ಆಘಾತ ಎದುರಾಗಿದ್ದು, ಗಾಯದ ಕಾರಣದಿಂದಾಗಿ ತಂಡದ ಸ್ಟಾರ್ ಆಲ್‌ರೌಂಡರ್ ಮಿಚೆಲ್ ಮಾರ್ಷ್​ ಲೀಗ್​ನಿಂದಲೇ ಹೊರಬಿದ್ದಿದ್ದಾರೆ.

1 / 7
ಮಿಚೆಲ್ ಮಾರ್ಷ್ ಆರಂಭಿಕ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು. ಆದರೆ ಆ ಬಳಿಕ ಮಾರ್ಷ್​ ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದಿದ್ದರು. ಇದೀಗ ಮಾರ್ಷ್​ ಇಡೀ ಲೀಗ್​ನಿಂದಲೇ ಹೊರಗುಳಿಯಲ್ಲಿದ್ದಾರೆ.

ಮಿಚೆಲ್ ಮಾರ್ಷ್ ಆರಂಭಿಕ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದರು. ಆದರೆ ಆ ಬಳಿಕ ಮಾರ್ಷ್​ ಗಾಯದ ಕಾರಣದಿಂದಾಗಿ ತಂಡದಿಂದ ಹೊರಗುಳಿದಿದ್ದರು. ಇದೀಗ ಮಾರ್ಷ್​ ಇಡೀ ಲೀಗ್​ನಿಂದಲೇ ಹೊರಗುಳಿಯಲ್ಲಿದ್ದಾರೆ.

2 / 7
ಅಷ್ಟಕ್ಕೂ ಮಿಚೆಲ್ ಮಾರ್ಷ್​ ಐಪಿಎಲ್​ನಿಂದ ಹೊರಬಿದ್ದಿರುವುದು ಡೆಲ್ಲಿ ತಂಡಕ್ಕೆ ಹೆಚ್ಚು ಹೊರೆ ಎನಿಸುವ ಸಾಧ್ಯತೆಗಳಿಲ್ಲ. ಏಕೆಂದರೆ ಆರಂಭಿಕ ಪಂದ್ಯಗಳಲ್ಲಿ ಡೆಲ್ಲಿ ಪರ ಆಡಿದ್ದ ಮಾರ್ಷ್​ಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.

ಅಷ್ಟಕ್ಕೂ ಮಿಚೆಲ್ ಮಾರ್ಷ್​ ಐಪಿಎಲ್​ನಿಂದ ಹೊರಬಿದ್ದಿರುವುದು ಡೆಲ್ಲಿ ತಂಡಕ್ಕೆ ಹೆಚ್ಚು ಹೊರೆ ಎನಿಸುವ ಸಾಧ್ಯತೆಗಳಿಲ್ಲ. ಏಕೆಂದರೆ ಆರಂಭಿಕ ಪಂದ್ಯಗಳಲ್ಲಿ ಡೆಲ್ಲಿ ಪರ ಆಡಿದ್ದ ಮಾರ್ಷ್​ಗೆ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ.

3 / 7
ಇನ್ನು ಮಾರ್ಷ್ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿರುವ ಡೆಲ್ಲಿ ಕೋಚ್ ರಿಕಿ ಪಾಂಟಿಂಗ್, ಮಾರ್ಷ್ ಅವರ ಚೇತರಿಕೆಯ ಪ್ರಕ್ರಿಯೆಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಾರಂಭಿಸಿದೆ. ಮಾರ್ಷ್​ ಗಾಯದಿಂದ ಚೇತರಿಸಿಕೊಳ್ಳಲು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದು ಕಾಣುತ್ತದೆ ಎಂದಿದ್ದಾರೆ.

ಇನ್ನು ಮಾರ್ಷ್ ಅಲಭ್ಯತೆಯ ಬಗ್ಗೆ ಮಾಹಿತಿ ನೀಡಿರುವ ಡೆಲ್ಲಿ ಕೋಚ್ ರಿಕಿ ಪಾಂಟಿಂಗ್, ಮಾರ್ಷ್ ಅವರ ಚೇತರಿಕೆಯ ಪ್ರಕ್ರಿಯೆಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಾರಂಭಿಸಿದೆ. ಮಾರ್ಷ್​ ಗಾಯದಿಂದ ಚೇತರಿಸಿಕೊಳ್ಳಲು ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದು ಕಾಣುತ್ತದೆ ಎಂದಿದ್ದಾರೆ.

4 / 7
ಮೇಲೆ ಹೇಳಿದಂತೆ ಈ ಆವೃತ್ತಿಯಲ್ಲಿ ಮಾರ್ಷ್ ಅವರ ಪ್ರದರ್ಶನವು ವಿಶೇಷವೇನಾಗಿರಲಿಲ್ಲ. ಆಡಿದ ನಾಲ್ಕು ಪಂದ್ಯಗಳಲ್ಲಿ ಅವರು ಕ್ರಮವಾಗಿ 20, 23, 18 ಮತ್ತು 0 ಸ್ಕೋರ್‌ ಕಲೆಹಾಕಿದ್ದರು. ಇದು ಅವರ ಕಳಪೆ ಫಾರ್ಮ್​ಗೆ ಹಿಡಿದ ಕೈಗನ್ನಡಿಯಾಗಿತ್ತು.

ಮೇಲೆ ಹೇಳಿದಂತೆ ಈ ಆವೃತ್ತಿಯಲ್ಲಿ ಮಾರ್ಷ್ ಅವರ ಪ್ರದರ್ಶನವು ವಿಶೇಷವೇನಾಗಿರಲಿಲ್ಲ. ಆಡಿದ ನಾಲ್ಕು ಪಂದ್ಯಗಳಲ್ಲಿ ಅವರು ಕ್ರಮವಾಗಿ 20, 23, 18 ಮತ್ತು 0 ಸ್ಕೋರ್‌ ಕಲೆಹಾಕಿದ್ದರು. ಇದು ಅವರ ಕಳಪೆ ಫಾರ್ಮ್​ಗೆ ಹಿಡಿದ ಕೈಗನ್ನಡಿಯಾಗಿತ್ತು.

5 / 7
ಮಾರ್ಷ್​ ಅವರ ಐಪಿಎಲ್ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. 2010 ರಿಂದ ಐಪಿಎಲ್ ಆಡುತ್ತಿರುವ ಮಾರ್ಷ್ ಇದುವರೆಗೆ 42 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ 19.59 ಸರಾಸರಿಯಲ್ಲಿ 666 ರನ್ ಗಳಿಸಿದ್ದಾರೆ. ಇದರಲ್ಲಿ 3 ಅರ್ಧಶತಕಗಳು ಸೇರಿವೆ.

ಮಾರ್ಷ್​ ಅವರ ಐಪಿಎಲ್ ವೃತ್ತಿಜೀವನದ ಬಗ್ಗೆ ಹೇಳುವುದಾದರೆ.. 2010 ರಿಂದ ಐಪಿಎಲ್ ಆಡುತ್ತಿರುವ ಮಾರ್ಷ್ ಇದುವರೆಗೆ 42 ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ 19.59 ಸರಾಸರಿಯಲ್ಲಿ 666 ರನ್ ಗಳಿಸಿದ್ದಾರೆ. ಇದರಲ್ಲಿ 3 ಅರ್ಧಶತಕಗಳು ಸೇರಿವೆ.

6 / 7
ಅದೇ ಸಮಯದಲ್ಲಿ, ಬೌಲಿಂಗ್​ನಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿರುವ ಮಾರ್ಷ್ ಆಡಿರುವ 42 ಪಂದ್ಯಗಳಲ್ಲಿ ಒಟ್ಟು 37 ವಿಕೆಟ್‌ಗಳನ್ನು ಪಡೆದಿದ್ದಾರೆ. ಕಳೆದ ಆವೃತ್ತಿ ಒಂದರಲ್ಲೇ ಮಾರ್ಷ್​ 12 ವಿಕೆಟ್ಗಳನ್ನು ಉರುಳಿಸಿದ್ದರು.

ಅದೇ ಸಮಯದಲ್ಲಿ, ಬೌಲಿಂಗ್​ನಲ್ಲಿಯೂ ಗಮನಾರ್ಹ ಪ್ರದರ್ಶನ ನೀಡಿರುವ ಮಾರ್ಷ್ ಆಡಿರುವ 42 ಪಂದ್ಯಗಳಲ್ಲಿ ಒಟ್ಟು 37 ವಿಕೆಟ್‌ಗಳನ್ನು ಪಡೆದಿದ್ದಾರೆ. ಕಳೆದ ಆವೃತ್ತಿ ಒಂದರಲ್ಲೇ ಮಾರ್ಷ್​ 12 ವಿಕೆಟ್ಗಳನ್ನು ಉರುಳಿಸಿದ್ದರು.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಹುಟ್ಟುಹಬ್ಬಕ್ಕೆ ಸ್ಪೆಷಲ್​​ ಗಿಫ್ಟ್​: ರಂಗೋಲಿಯಲ್ಲಿ ಮೂಡಿದ ಡಿಕೆಶಿ
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಡಿ.ಕೆ. ಶಿವಕುಮಾರ್ ಜನ್ಮದಿನ: ವೇದಘೋಷದೊಂದಿಗೆ ಆಶೀರ್ವದಿಸಿದ ವಿದ್ವಾಂಸರು!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಪೆಟ್ರೋಲ್​​, ಡೀಸೆಲ್ ದರ ಏರಿಕೆ ಬಗ್ಗೆ ಬೆಂಗಳೂರಿನಲ್ಲಿ ಜನ ಏನಂತಾರೆ ನೋಡಿ!
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ಅಭಿಮಾನಿಗಳ ಜತೆ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡ ಡಿಕೆ ಶಿ​ವಕುಮಾರ್
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ವಿಜಯಪುರದಲ್ಲಿ ಭೀಕರ ದುರಂತ: ಮನೆ ಮೇಲ್ಛಾವಣಿ ಕುಸಿದು ನಾಲ್ವರು ಜೀವಂತ ಸಮಾಧಿ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ಕೊನೆಯ ಓವರ್​ ರೋಚಕತೆ; ರೋಹಿತ್​​ಗೆ ತಿಲಕ್ ವರ್ಮ ವಿಶೇಷ ಗೌರವ
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ನುಗ್ಗೆಕಾಯಿ ಮರ ಮನೆ ಬಳಿ ಇರಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ