IPL 2024: ಕ್ರೀಡಾಂಗಣದಲ್ಲಿ ಹಾರ್ದಿಕ್​ರನ್ನು ನಿಂದಿಸಿದರೆ ಕಠಿಣ ಕ್ರಮ! ಎಂಸಿಎ ಎಚ್ಚರಿಕೆ

IPL 2024: ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಉಪಸ್ಥಿತರಿರುವ ಅಭಿಮಾನಿಗಳು ಹಾರ್ದಿಕ್​ರನ್ನು ನಿಂದಿಸುವ ಕೆಲಸವನ್ನು ಮಾಡಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಅದರಂತೆ ಟ್ರೋಲ್ ಮಾಡುವವರನ್ನು ಹಾಗೂ ನಿಂದಿಸುವವರನ್ನು ಮೈದಾನದಿಂದ ಹೊರಹಾಕಲು ತೀರ್ಮಾನಿಸಿದೆ.

|

Updated on: Mar 30, 2024 | 10:41 PM

ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ ದಿನದಿಂದಲೂ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಒಂದಲ್ಲ ಒಂದು ರೀತಿಯಲ್ಲಿ ಭಾರಿ ನಿಂದನೆಗೆ ಒಳಗಾಗುತ್ತಿದ್ದಾರೆ. ಮೊದಲು ರೋಹಿತ್​ರಿಂದ ನಾಯಕತ್ವ ಕಿತ್ತುಕೊಂಡರು ಎಂಬ ವಿಚಾರದಲ್ಲಿ ನಿಂದನೆಗೆ ಒಳಗಾಗಿದ್ದ ಪಾಂಡ್ಯ ಆ ಬಳಿಕ ತಂಡದ ಸತತ ಸೋಲಿನೊಂದಿಗೆ ಟ್ರೋಲಿಗರಿಗೆ ಆಹಾರವಾಗಿದ್ದರು.

ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿದ ದಿನದಿಂದಲೂ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಒಂದಲ್ಲ ಒಂದು ರೀತಿಯಲ್ಲಿ ಭಾರಿ ನಿಂದನೆಗೆ ಒಳಗಾಗುತ್ತಿದ್ದಾರೆ. ಮೊದಲು ರೋಹಿತ್​ರಿಂದ ನಾಯಕತ್ವ ಕಿತ್ತುಕೊಂಡರು ಎಂಬ ವಿಚಾರದಲ್ಲಿ ನಿಂದನೆಗೆ ಒಳಗಾಗಿದ್ದ ಪಾಂಡ್ಯ ಆ ಬಳಿಕ ತಂಡದ ಸತತ ಸೋಲಿನೊಂದಿಗೆ ಟ್ರೋಲಿಗರಿಗೆ ಆಹಾರವಾಗಿದ್ದರು.

1 / 8
ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಆಡಿದ ಎರಡೂ ಪಂದ್ಯಗಳನ್ನು ಸೋತಿದೆ. ಈ ವೇಳೆ ಹಾರ್ದಿಕ್ ಪಾಂಡ್ಯರ ನಾಯಕತ್ವದ ಮೇಲೆ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಅಲ್ಲದೆ ಪಂದ್ಯ ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳು ಹಾರ್ದಿಕ್​ರನ್ನು ಮನಬಂದಂತೆ ನಿಂದಿಸುತ್ತಿದ್ದಾರೆ. ಅದರ ವಿಡಿಯೋಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದವು.

ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ತಂಡ ಆಡಿದ ಎರಡೂ ಪಂದ್ಯಗಳನ್ನು ಸೋತಿದೆ. ಈ ವೇಳೆ ಹಾರ್ದಿಕ್ ಪಾಂಡ್ಯರ ನಾಯಕತ್ವದ ಮೇಲೆ ಸಾಕಷ್ಟು ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಅಲ್ಲದೆ ಪಂದ್ಯ ನೋಡಲು ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳು ಹಾರ್ದಿಕ್​ರನ್ನು ಮನಬಂದಂತೆ ನಿಂದಿಸುತ್ತಿದ್ದಾರೆ. ಅದರ ವಿಡಿಯೋಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದವು.

2 / 8
ಇದೀಗ ಕ್ರೀಡಾಂಗಣದಲ್ಲಿ ಹಾರ್ದಿಕ್​ರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ. ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತನ್ನ ತವರು ನೆಲವಾದ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಇದೀಗ ಕ್ರೀಡಾಂಗಣದಲ್ಲಿ ಹಾರ್ದಿಕ್​ರನ್ನು ನಿಂದಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಮುಂದಾಗಿದೆ. ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತನ್ನ ತವರು ನೆಲವಾದ ವಾಂಖೆಡೆ ಸ್ಟೇಡಿಯಂನಲ್ಲಿ ಸೋಮವಾರ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

3 / 8
ಈ ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಉಪಸ್ಥಿತರಿರುವ ಅಭಿಮಾನಿಗಳು ಹಾರ್ದಿಕ್​ರನ್ನು ನಿಂದಿಸುವ ಕೆಲಸವನ್ನು ಮಾಡಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಅದರಂತೆ ಟ್ರೋಲ್ ಮಾಡುವವರನ್ನು ಹಾಗೂ ನಿಂದಿಸುವವರನ್ನು ಮೈದಾನದಿಂದ ಹೊರಹಾಕಲು ತೀರ್ಮಾನಿಸಿದೆ.

ಈ ಪಂದ್ಯದ ಸಮಯದಲ್ಲಿ ಕ್ರೀಡಾಂಗಣದಲ್ಲಿ ಉಪಸ್ಥಿತರಿರುವ ಅಭಿಮಾನಿಗಳು ಹಾರ್ದಿಕ್​ರನ್ನು ನಿಂದಿಸುವ ಕೆಲಸವನ್ನು ಮಾಡಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಅದರಂತೆ ಟ್ರೋಲ್ ಮಾಡುವವರನ್ನು ಹಾಗೂ ನಿಂದಿಸುವವರನ್ನು ಮೈದಾನದಿಂದ ಹೊರಹಾಕಲು ತೀರ್ಮಾನಿಸಿದೆ.

4 / 8
ಲೋಕಮಾತ್ ಮರಾಠಿ ವರದಿಯ ಪ್ರಕಾರ, ಹಾರ್ದಿಕ್ ವಿರುದ್ಧ ಈ ರೀತಿಯ ಕೃತ್ಯ ಎಸಗುವವರನ್ನು ಪತ್ತೆ ಹಚ್ಚುವ ಸಲುವಾಗಿ ಎಂಸಿಎ ಭದ್ರತೆಯನ್ನು ಹೆಚ್ಚಿಸಿದೆ ಮತ್ತು ಪಂದ್ಯದ ಸಮಯದಲ್ಲಿ ವೀಕ್ಷಕರ ಮೇಲೆ ಕಟ್ಟುನಿಟ್ಟಾದ ನಿಗಾ ಇರಿಸಲಾಗುತ್ತದೆ.

ಲೋಕಮಾತ್ ಮರಾಠಿ ವರದಿಯ ಪ್ರಕಾರ, ಹಾರ್ದಿಕ್ ವಿರುದ್ಧ ಈ ರೀತಿಯ ಕೃತ್ಯ ಎಸಗುವವರನ್ನು ಪತ್ತೆ ಹಚ್ಚುವ ಸಲುವಾಗಿ ಎಂಸಿಎ ಭದ್ರತೆಯನ್ನು ಹೆಚ್ಚಿಸಿದೆ ಮತ್ತು ಪಂದ್ಯದ ಸಮಯದಲ್ಲಿ ವೀಕ್ಷಕರ ಮೇಲೆ ಕಟ್ಟುನಿಟ್ಟಾದ ನಿಗಾ ಇರಿಸಲಾಗುತ್ತದೆ.

5 / 8
ಪಂದ್ಯದ ವೇಳೆ ಹಾರ್ದಿಕ್ ವಿರುದ್ಧ ಕಾಮೆಂಟ್ ಮಾಡುವ ಅಥವಾ ಘೋಷಣೆಗಳನ್ನು ಕೂಗುವ ಯಾವುದೇ ಪ್ರೇಕ್ಷಕರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ. ಆ ಬಳಿಕ ಅವರನ್ನು ಕ್ರೀಡಾಂಗಣದಿಂದ ಹೊರಹಾಕಲಾಗುತ್ತದೆ ಎಂದು ವರದಿಯಾಗಿದೆ.

ಪಂದ್ಯದ ವೇಳೆ ಹಾರ್ದಿಕ್ ವಿರುದ್ಧ ಕಾಮೆಂಟ್ ಮಾಡುವ ಅಥವಾ ಘೋಷಣೆಗಳನ್ನು ಕೂಗುವ ಯಾವುದೇ ಪ್ರೇಕ್ಷಕರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುತ್ತದೆ. ಆ ಬಳಿಕ ಅವರನ್ನು ಕ್ರೀಡಾಂಗಣದಿಂದ ಹೊರಹಾಕಲಾಗುತ್ತದೆ ಎಂದು ವರದಿಯಾಗಿದೆ.

6 / 8
ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ಪ್ರದರ್ಶನವು ಇಲ್ಲಿಯವರೆಗೆ ನಿರಾಶಾದಾಯಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ತಂಡ ಸೋತಿದೆ. ಲೀಗ್‌ನ 5ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿತು. ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 31 ರನ್ ಗಳಿಂದ ಸೋತಿತ್ತು.

ಐಪಿಎಲ್ 2024 ರಲ್ಲಿ ಮುಂಬೈ ಇಂಡಿಯನ್ಸ್ ಪ್ರದರ್ಶನವು ಇಲ್ಲಿಯವರೆಗೆ ನಿರಾಶಾದಾಯಕವಾಗಿದೆ. ಮೊದಲೆರಡು ಪಂದ್ಯಗಳಲ್ಲಿ ತಂಡ ಸೋತಿದೆ. ಲೀಗ್‌ನ 5ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿತು. ತನ್ನ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 31 ರನ್ ಗಳಿಂದ ಸೋತಿತ್ತು.

7 / 8
ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ಅವರ ಈವರೆಗಿನ ಪ್ರದರ್ಶನವು ವಿಶೇಷವೇನಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧ ಹಾರ್ದಿಕ್ 11 ರನ್ ಗಳಿಸಿದ್ದರು. ಅಲ್ಲದೆ 3 ಓವರ್ ಗಳಲ್ಲಿ 30 ರನ್ ನೀಡಿ ಯಾವುದೇ ವಿಕೆಟ್ ಪಡೆಯಲಿಲ್ಲ. ಹಾಗೆಯೇ ಎಸ್​ಆರ್​ಹೆಚ್ ವಿರುದ್ಧವೂ ನಿದಾನಗತಿಯ ಬ್ಯಾಟಿಂಗ್ ಮಾಡಿ ತಂಡದ ಸೋಲಿಗೆ ಪ್ರಮುಖ ಕಾರಣರಾಗಿದ್ದರು.

ಐಪಿಎಲ್ 2024 ರಲ್ಲಿ ಹಾರ್ದಿಕ್ ಪಾಂಡ್ಯ ಅವರ ಈವರೆಗಿನ ಪ್ರದರ್ಶನವು ವಿಶೇಷವೇನಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧ ಹಾರ್ದಿಕ್ 11 ರನ್ ಗಳಿಸಿದ್ದರು. ಅಲ್ಲದೆ 3 ಓವರ್ ಗಳಲ್ಲಿ 30 ರನ್ ನೀಡಿ ಯಾವುದೇ ವಿಕೆಟ್ ಪಡೆಯಲಿಲ್ಲ. ಹಾಗೆಯೇ ಎಸ್​ಆರ್​ಹೆಚ್ ವಿರುದ್ಧವೂ ನಿದಾನಗತಿಯ ಬ್ಯಾಟಿಂಗ್ ಮಾಡಿ ತಂಡದ ಸೋಲಿಗೆ ಪ್ರಮುಖ ಕಾರಣರಾಗಿದ್ದರು.

8 / 8
Follow us
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ