IPL 2024 Final KKR vs SRH: ಮಳೆ ಬರುವ ಸಾಧ್ಯತೆ: ಮೀಸಲು ದಿನದಾಟದ ನಿಯಮಗಳೇನು?

IPL 2024 Final KKR vs SRH: ಐಪಿಎಲ್​ನ ಅಂತಿಮ ಹಣಾಹಣಿಯಲ್ಲಿ ಕೆಕೆಆರ್ ಮತ್ತು ಎಸ್​ಆರ್​ಹೆಚ್ ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನಲ್ಲಿ ಜರುಗಲಿರುವ ಈ ಮ್ಯಾಚ್​ ವೇಳೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದಾಗ್ಯೂ ಪಂದ್ಯ ಮುಂದುವರೆಯಬಹುದು. ಒಂದು ವೇಳೆ ಮಳೆಯಿಂದಾಗಿ ಇಂದು ಮ್ಯಾಚ್ ಕ್ಯಾನ್ಸಲ್ ಆದರೆ, ನಾಳೆ ಪಂದ್ಯ ನಡೆಯಲಿದೆ.

|

Updated on: May 26, 2024 | 10:22 AM

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17ರ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17ರ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ.

1 / 10
ಭಾನುವಾರ (ಮೇ 26) ನಡೆಯಲಿರುವ ಈ ಪಂದ್ಯದ ವೇಳೆ ಸಣ್ಣ ಪ್ರಮಾಣದಲ್ಲಿ  ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯುಂಟಾದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ...

ಭಾನುವಾರ (ಮೇ 26) ನಡೆಯಲಿರುವ ಈ ಪಂದ್ಯದ ವೇಳೆ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಚೆನ್ನೈ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯುಂಟಾದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ...

2 / 10
ಫೈನಲ್ ಪಂದ್ಯದ ಟಾಸ್ ಪ್ರಕ್ರಿಯೆಗೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೂ ಓವರ್​ಗಳನ್ನು ಕಡಿತಗೊಳಿಸುವುದಿಲ್ಲ. ಅಂದರೆ ಪಂದ್ಯವು ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. ಅದರಂತೆ 2 ತಂಡಗಳು 20 ಓವರ್​ಗಳನ್ನು ಆಡಲಿದೆ. (ಒಂದು ವೇಳೆ ಮತ್ತೆ ಅಡಚಣೆ ಉಂಟಾಗಲಿದೆ ಎಂಬ ಸೂಚನೆಯಿದ್ದರೆ ಮಾತ್ರ ಓವರ್​ಗಳ ಕಡಿತಕ್ಕೆ ಮುಂದಾಗಬಹುದು)

ಫೈನಲ್ ಪಂದ್ಯದ ಟಾಸ್ ಪ್ರಕ್ರಿಯೆಗೂ ಮುನ್ನ ಮಳೆ ಬಂದು ಪಂದ್ಯ ತಡವಾಗಿ ಆರಂಭವಾದರೂ ಓವರ್​ಗಳನ್ನು ಕಡಿತಗೊಳಿಸುವುದಿಲ್ಲ. ಅಂದರೆ ಪಂದ್ಯವು ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. ಅದರಂತೆ 2 ತಂಡಗಳು 20 ಓವರ್​ಗಳನ್ನು ಆಡಲಿದೆ. (ಒಂದು ವೇಳೆ ಮತ್ತೆ ಅಡಚಣೆ ಉಂಟಾಗಲಿದೆ ಎಂಬ ಸೂಚನೆಯಿದ್ದರೆ ಮಾತ್ರ ಓವರ್​ಗಳ ಕಡಿತಕ್ಕೆ ಮುಂದಾಗಬಹುದು)

3 / 10
ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಂದರೆ ಪ್ರತಿ ಎಂಟು ನಿಮಿಷಗಳ ನಷ್ಟಕ್ಕೆ ಒಂದು ಓವರ್ ಅನ್ನು ಕಡಿತಗೊಳಿಸಲಾಗುತ್ತದೆ.

ಮಳೆಯಿಂದ ವಿಳಂಬವಾಗಿ ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳ ಕಡಿತ ಮಾಡಲಾಗುತ್ತದೆ. ಅಂದರೆ ಪ್ರತಿ ಎಂಟು ನಿಮಿಷಗಳ ನಷ್ಟಕ್ಕೆ ಒಂದು ಓವರ್ ಅನ್ನು ಕಡಿತಗೊಳಿಸಲಾಗುತ್ತದೆ.

4 / 10
ಫೈನಲ್ ಪಂದ್ಯಕ್ಕೆ ಹೆಚ್ಚುವರಿ 120 ನಿಮಿಷಗಳನ್ನು ನಿಗದಿ ಮಾಡಲಾಗಿದೆ. ಅಂದರೆ ಐಪಿಎಲ್​ ಪಂದ್ಯದ ನಿಗದಿತ ಸಮಯ 3 ಗಂಟೆ 15 ನಿಮಿಷಗಳು. ಒಂದು ವೇಳೆ ಮಳೆ ಬಂದು ಅಥವಾ ಇನ್ನಿತರ ಕಾರಣಗಳಿಂದ ಪಂದ್ಯಕ್ಕೆ ಅಡಚಣೆಯಾದರೆ ಹೆಚ್ಚುವರಿ 2 ಗಂಟೆಯನ್ನು ಬಳಸಲಾಗುತ್ತದೆ. ಅಂದರೆ ಫೈನಲ್ ಪಂದ್ಯಕ್ಕೆ 7.30 ರಿಂದ 1 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.

ಫೈನಲ್ ಪಂದ್ಯಕ್ಕೆ ಹೆಚ್ಚುವರಿ 120 ನಿಮಿಷಗಳನ್ನು ನಿಗದಿ ಮಾಡಲಾಗಿದೆ. ಅಂದರೆ ಐಪಿಎಲ್​ ಪಂದ್ಯದ ನಿಗದಿತ ಸಮಯ 3 ಗಂಟೆ 15 ನಿಮಿಷಗಳು. ಒಂದು ವೇಳೆ ಮಳೆ ಬಂದು ಅಥವಾ ಇನ್ನಿತರ ಕಾರಣಗಳಿಂದ ಪಂದ್ಯಕ್ಕೆ ಅಡಚಣೆಯಾದರೆ ಹೆಚ್ಚುವರಿ 2 ಗಂಟೆಯನ್ನು ಬಳಸಲಾಗುತ್ತದೆ. ಅಂದರೆ ಫೈನಲ್ ಪಂದ್ಯಕ್ಕೆ 7.30 ರಿಂದ 1 ಗಂಟೆಯವರೆಗೆ ಸಮಯ ನಿಗದಿ ಮಾಡಲಾಗಿದೆ.

5 / 10
ಇದಾಗ್ಯೂ ಪಂದ್ಯ ನಡೆಯದಿದ್ದರೆ ಅಥವಾ ಪೂರ್ಣಗೊಳ್ಳದಿದ್ದರೆ ಮ್ಯಾಚ್ ಅನ್ನು ಮೀಸಲು ದಿನದಾಟವನ್ನು ಬಳಸಲಾಗುತ್ತದೆ. ಮೀಸಲು ದಿನದಾಟದಲ್ಲಿ ಆರಂಭದಿಂದಲೇ ಪಂದ್ಯವನ್ನು ಆಡಲಾಗುತ್ತದೆ. ಅಂದರೆ ನಿಗದಿತ ದಿನದಲ್ಲಿ ಅರ್ಧ ಪಂದ್ಯ ನಡೆದಿದ್ದರೆ ಮೀಸಲು ದಿನದಾಟದಲ್ಲಿ ಮುಂದುವರೆಸಲಾಗುವುದಿಲ್ಲ. ಬದಲಾಗಿ ಹೊಸದಾಗಿ ಮೊದಲಿಂದಲೇ ಪಂದ್ಯವನ್ನು ಆರಂಭಿಸಲಾಗುತ್ತದೆ.

ಇದಾಗ್ಯೂ ಪಂದ್ಯ ನಡೆಯದಿದ್ದರೆ ಅಥವಾ ಪೂರ್ಣಗೊಳ್ಳದಿದ್ದರೆ ಮ್ಯಾಚ್ ಅನ್ನು ಮೀಸಲು ದಿನದಾಟವನ್ನು ಬಳಸಲಾಗುತ್ತದೆ. ಮೀಸಲು ದಿನದಾಟದಲ್ಲಿ ಆರಂಭದಿಂದಲೇ ಪಂದ್ಯವನ್ನು ಆಡಲಾಗುತ್ತದೆ. ಅಂದರೆ ನಿಗದಿತ ದಿನದಲ್ಲಿ ಅರ್ಧ ಪಂದ್ಯ ನಡೆದಿದ್ದರೆ ಮೀಸಲು ದಿನದಾಟದಲ್ಲಿ ಮುಂದುವರೆಸಲಾಗುವುದಿಲ್ಲ. ಬದಲಾಗಿ ಹೊಸದಾಗಿ ಮೊದಲಿಂದಲೇ ಪಂದ್ಯವನ್ನು ಆರಂಭಿಸಲಾಗುತ್ತದೆ.

6 / 10
ಮೀಸಲು ದಿನದಾಟದಲ್ಲೂ ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಬಹುದು. ಈ 5 ಓವರ್​ಗಳ ಪಂದ್ಯವು ರಾತ್ರಿ 11.56 ರಿಂದ ಶುರುವಾಗಬಹುದು, ಅಲ್ಲದೆ 12.56 ರೊಳಗೆ ಮುಗಿಸುವ ಪರಿಸ್ಥಿತಿ ಇದೆಯಾ ಎಂಬುದನ್ನು ರೆಫರಿ ಅವಲೋಕಿಸಲಿದ್ದಾರೆ.

ಮೀಸಲು ದಿನದಾಟದಲ್ಲೂ ನಿಗದಿತ ಸಮಯದೊಳಗೆ ಪಂದ್ಯ ನಡೆಯದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಬಹುದು. ಈ 5 ಓವರ್​ಗಳ ಪಂದ್ಯವು ರಾತ್ರಿ 11.56 ರಿಂದ ಶುರುವಾಗಬಹುದು, ಅಲ್ಲದೆ 12.56 ರೊಳಗೆ ಮುಗಿಸುವ ಪರಿಸ್ಥಿತಿ ಇದೆಯಾ ಎಂಬುದನ್ನು ರೆಫರಿ ಅವಲೋಕಿಸಲಿದ್ದಾರೆ.

7 / 10
ಇನ್ನು 11.56 ರಿಂದ 12.56 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಮಾತ್ರ ಸೂಪರ್ ಓವರ್ ಆಡಿಸಲಾಗುತ್ತದೆ. ಅಂದರೆ ಮೀಸಲು ದಿನದಾಟದಲ್ಲಿ ಪಂದ್ಯ ನಡೆಯದಿದ್ದರೆ ಸೂಪರ್ ಓವರ್ ಫೈನಲ್ ಮ್ಯಾಚ್ ನಡೆಯಲಿದೆ.

ಇನ್ನು 11.56 ರಿಂದ 12.56 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಸಾಧ್ಯವಾಗದಿದ್ದರೆ ಮಾತ್ರ ಸೂಪರ್ ಓವರ್ ಆಡಿಸಲಾಗುತ್ತದೆ. ಅಂದರೆ ಮೀಸಲು ದಿನದಾಟದಲ್ಲಿ ಪಂದ್ಯ ನಡೆಯದಿದ್ದರೆ ಸೂಪರ್ ಓವರ್ ಫೈನಲ್ ಮ್ಯಾಚ್ ನಡೆಯಲಿದೆ.

8 / 10
ಒಂದು ವೇಳೆ ಮಳೆಯಿಂದಾಗಿ ಕನಿಷ್ಠ ಸೂಪರ್ ಓವರ್ ಪಂದ್ಯ ಕೂಡ ನಡೆಯದಿದ್ದರೆ ಮಾತ್ರ ಫೈನಲ್ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಅಲ್ಲದೆ ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

ಒಂದು ವೇಳೆ ಮಳೆಯಿಂದಾಗಿ ಕನಿಷ್ಠ ಸೂಪರ್ ಓವರ್ ಪಂದ್ಯ ಕೂಡ ನಡೆಯದಿದ್ದರೆ ಮಾತ್ರ ಫೈನಲ್ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ. ಅಲ್ಲದೆ ಲೀಗ್​ ಹಂತದ 70 ಪಂದ್ಯಗಳ ನಂತರ ಪಾಯಿಂಟ್ಸ್​ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

9 / 10
ಅದರಂತೆ ಫೈನಲ್ ಪಂದ್ಯವು ಮಳೆಗೆ ಅಹುತಿಯಾದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ರನ್ನರ್ ಅಪ್​ಗೆ ತೃಪ್ತಿ ಪಟ್ಟುಕೊಳ್ಳಬೇಕಾಗಿ ಬರಬಹುದು.

ಅದರಂತೆ ಫೈನಲ್ ಪಂದ್ಯವು ಮಳೆಗೆ ಅಹುತಿಯಾದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಲಿದೆ. ಇನ್ನು ದ್ವಿತೀಯ ಸ್ಥಾನದಲ್ಲಿರುವ ಸನ್​ರೈಸರ್ಸ್ ಹೈದರಾಬಾದ್ ತಂಡವು ರನ್ನರ್ ಅಪ್​ಗೆ ತೃಪ್ತಿ ಪಟ್ಟುಕೊಳ್ಳಬೇಕಾಗಿ ಬರಬಹುದು.

10 / 10
Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!