AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಈ ಸಲ RCB ಕಪ್ ಗೆದ್ದೇ ಗೆಲ್ಲುತ್ತೆ ಎಂದ ವಿಜಯ ಮಲ್ಯ..!

IPL 2024 RR vs RCB: ಐಪಿಎಲ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಮೇ22) ಅಹಮದಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ನಿರ್ಣಾಯಕ. ಅಂದರೆ ಈ ಮ್ಯಾಚ್​ನಲ್ಲಿ ಸೋತ ತಂಡ ಐಪಿಎಲ್​ನಿಂದ ಹೊರಬೀಳಲಿದೆ.

ಝಾಹಿರ್ ಯೂಸುಫ್
|

Updated on:May 22, 2024 | 10:37 AM

Share
IPL 2024: ಐಪಿಎಲ್​ನ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ಮಾಲೀಕ ವಿಜಯ ಮಲ್ಯ ಆರ್​ಸಿಬಿ ತಂಡಕ್ಕೆ ಶುಭಕೋರಿದ್ದಾರೆ. ಈ ಶುಭಕೋರುವಿಕೆಯೊಂದಿಗೆ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

IPL 2024: ಐಪಿಎಲ್​ನ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ಮಾಲೀಕ ವಿಜಯ ಮಲ್ಯ ಆರ್​ಸಿಬಿ ತಂಡಕ್ಕೆ ಶುಭಕೋರಿದ್ದಾರೆ. ಈ ಶುಭಕೋರುವಿಕೆಯೊಂದಿಗೆ ಈ ಸಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಪ್ ಗೆಲ್ಲುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

1 / 6
ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ವಿಜಯ ಮಲ್ಯ, ನಾನು ಆರ್​ಸಿಬಿ ಫ್ರಾಂಚೈಸಿ ಖರೀದಿಗಾಗಿ ಬಿಡ್ ಮಾಡಿದಾಗ ಮತ್ತು ವಿರಾಟ್ ಕೊಹ್ಲಿಗಾಗಿ ಬಿಡ್ ಮಾಡಿದಾಗ, ಇದಕ್ಕಿಂತ ಉತ್ತಮ ಆಯ್ಕೆಗಳಿಲ್ಲ ಎಂದು ನನ್ನ ಒಳ ಮನಸ್ಸು ಹೇಳುತ್ತಿತ್ತು. ಇದೀಗ ಆರ್​ಸಿಬಿ ತಂಡಕ್ಕೆ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ನನ್ನ ಒಳ ಮನಸ್ಸು ಹೇಳ್ತಿದೆ. ಯಾವುದೇ ಚಿಂತೆಯಿಲ್ಲದೆ ಮುನ್ನುಗ್ಗಿ...ಬೆಸ್ಟ್ ಆಫ್ ಲಕ್ ಎಂದು ಆರ್​ಸಿಬಿ ತಂಡಕ್ಕೆ ಶುಭಕೋರಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಬರೆದುಕೊಂಡಿರುವ ವಿಜಯ ಮಲ್ಯ, ನಾನು ಆರ್​ಸಿಬಿ ಫ್ರಾಂಚೈಸಿ ಖರೀದಿಗಾಗಿ ಬಿಡ್ ಮಾಡಿದಾಗ ಮತ್ತು ವಿರಾಟ್ ಕೊಹ್ಲಿಗಾಗಿ ಬಿಡ್ ಮಾಡಿದಾಗ, ಇದಕ್ಕಿಂತ ಉತ್ತಮ ಆಯ್ಕೆಗಳಿಲ್ಲ ಎಂದು ನನ್ನ ಒಳ ಮನಸ್ಸು ಹೇಳುತ್ತಿತ್ತು. ಇದೀಗ ಆರ್​ಸಿಬಿ ತಂಡಕ್ಕೆ ಟ್ರೋಫಿ ಗೆಲ್ಲಲು ಉತ್ತಮ ಅವಕಾಶವಿದೆ ಎಂದು ನನ್ನ ಒಳ ಮನಸ್ಸು ಹೇಳ್ತಿದೆ. ಯಾವುದೇ ಚಿಂತೆಯಿಲ್ಲದೆ ಮುನ್ನುಗ್ಗಿ...ಬೆಸ್ಟ್ ಆಫ್ ಲಕ್ ಎಂದು ಆರ್​ಸಿಬಿ ತಂಡಕ್ಕೆ ಶುಭಕೋರಿದ್ದಾರೆ.

2 / 6
ಇದಕ್ಕೂ ಮುನ್ನ ಸಿಎಸ್​ಕೆ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದಾಗ ವಿಜಯ ಮಲ್ಯ ಅಭಿನಂದನೆ ಸಲ್ಲಿಸಿದ್ದರು. ಪ್ಲೇಆಫ್​ಗೆ ಅರ್ಹತೆ ಪಡೆದಿದ್ದಕ್ಕಾಗಿ ಆರ್​ಸಿಬಿಗೆ ಅಭಿನಂದನೆಗಳು. ನಿರಾಶಾದಾಯಕ ಆರಂಭದ ಹೊರತಾಗಿಯೂ ಸತತ ಗೆಲುವುಗಳ ಮೂಲಕ ಈ ಹಂತಕ್ಕೇರಿದೆ. ಇದೇ ಹಾದಿಯಲ್ಲಿ ಮುನ್ನುಗ್ಗಿ ಟ್ರೋಫಿ ಗೆಲ್ಲುವುದೊಂದೇ ಬಾಕಿ ಎಂದು ಎಕ್ಸ್​​ನಲ್ಲಿ ಆರ್​ಸಿಬಿ ತಂಡದ ಮಾಜಿ ಮಾಲೀಕ ಬರೆದುಕೊಂಡಿದ್ದರು.

ಇದಕ್ಕೂ ಮುನ್ನ ಸಿಎಸ್​ಕೆ ತಂಡವನ್ನು ಬಗ್ಗು ಬಡಿದು ಆರ್​ಸಿಬಿ ಪ್ಲೇಆಫ್ ಪ್ರವೇಶಿಸಿದಾಗ ವಿಜಯ ಮಲ್ಯ ಅಭಿನಂದನೆ ಸಲ್ಲಿಸಿದ್ದರು. ಪ್ಲೇಆಫ್​ಗೆ ಅರ್ಹತೆ ಪಡೆದಿದ್ದಕ್ಕಾಗಿ ಆರ್​ಸಿಬಿಗೆ ಅಭಿನಂದನೆಗಳು. ನಿರಾಶಾದಾಯಕ ಆರಂಭದ ಹೊರತಾಗಿಯೂ ಸತತ ಗೆಲುವುಗಳ ಮೂಲಕ ಈ ಹಂತಕ್ಕೇರಿದೆ. ಇದೇ ಹಾದಿಯಲ್ಲಿ ಮುನ್ನುಗ್ಗಿ ಟ್ರೋಫಿ ಗೆಲ್ಲುವುದೊಂದೇ ಬಾಕಿ ಎಂದು ಎಕ್ಸ್​​ನಲ್ಲಿ ಆರ್​ಸಿಬಿ ತಂಡದ ಮಾಜಿ ಮಾಲೀಕ ಬರೆದುಕೊಂಡಿದ್ದರು.

3 / 6
ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ವಿಜಯ ಮಲ್ಯ ಆರ್​ಸಿಬಿ ತಂಡಕ್ಕೆ ಶುಭಕೋರಿದ್ದು, ಈ ಮೂಲಕ ಈ ಸಲ ರಾಯಲ್ ಚಾಲೆಂಜರ್ಸ್ ಹುಡುಗರು ಟ್ರೋಫಿ ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಎಲಿಮಿನೇಟರ್ ಪಂದ್ಯಕ್ಕೂ ಮುನ್ನ ವಿಜಯ ಮಲ್ಯ ಆರ್​ಸಿಬಿ ತಂಡಕ್ಕೆ ಶುಭಕೋರಿದ್ದು, ಈ ಮೂಲಕ ಈ ಸಲ ರಾಯಲ್ ಚಾಲೆಂಜರ್ಸ್ ಹುಡುಗರು ಟ್ರೋಫಿ ಗೆದ್ದೇ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

4 / 6
ಅಂದಹಾಗೆ ವಿಜಯ್ ಮಲ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್​ನಲ್ಲಿ ಮಲ್ಯ ಅವರು ಆರ್​ಸಿಬಿ ತಂಡವನ್ನು ಬರೋಬ್ಬರಿ 455 ಕೋಟಿ ರೂ. ನೀಡಿ ಖರೀದಿಸಿದ್ದರು.

ಅಂದಹಾಗೆ ವಿಜಯ್ ಮಲ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ ಸಂಸ್ಥಾಪಕರು. 2008 ರಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ತಂಡಗಳ ಬಿಡ್ಡಿಂಗ್​ನಲ್ಲಿ ಮಲ್ಯ ಅವರು ಆರ್​ಸಿಬಿ ತಂಡವನ್ನು ಬರೋಬ್ಬರಿ 455 ಕೋಟಿ ರೂ. ನೀಡಿ ಖರೀದಿಸಿದ್ದರು.

5 / 6
ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ ಇಂಗ್ಲೆಂಡ್​ನಲ್ಲಿ ನೆಲೆಸಿದ್ದಾರೆ. ಇದೀಗ ಆರ್​ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪೆನಿಯ ಅಧೀನದಲ್ಲಿದೆ.

ಆದರೆ 2016 ರಲ್ಲಿ ಆರ್ಥಿಕ ಮುಗ್ಗಟ್ಟು ಎದುರಿಸಿ ಸಾಲದ ಸುಳಿಗೆ ಸಿಲುಕಿದ ವಿಜಯ ಮಲ್ಯ ಭಾರತದಿಂದ ಪಾಲಾಯನ ಮಾಡಿ, ಈಗ ಇಂಗ್ಲೆಂಡ್​ನಲ್ಲಿ ನೆಲೆಸಿದ್ದಾರೆ. ಇದೀಗ ಆರ್​ಸಿಬಿ ತಂಡದ ಮಾಲೀಕತ್ವವು ಯುನೈಟೆಡ್ ಸ್ಪಿರಿಟ್ಸ್ ಕಂಪೆನಿಯ ಹೆಸರಿನಲ್ಲಿದ್ದರೂ, ತಂಡದ ಮಾಲಕತ್ವದ ಶೇ. 54.8 ರಷ್ಟು ಭಾಗ ಡಿಯಾಜಿಯೊ ಕಂಪೆನಿಯ ಅಧೀನದಲ್ಲಿದೆ.

6 / 6

Published On - 10:30 am, Wed, 22 May 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ