AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: LSG ತಂಡದಿಂದ ಗೌತಮ್ ಗಂಭೀರ್​ಗೆ ಗೇಟ್ ಪಾಸ್..?

IPL 2024: ಕಳೆದ ಸೀಸನ್ ಐಪಿಎಲ್ ವೇಳೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳ ವಿರುದ್ಧ ಅನುಚಿತವಾಗಿ ವರ್ತಿಸಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಮೈದಾನದಲ್ಲೇ ಜಗಳಕ್ಕಿಳಿದಿದ್ದರು.

TV9 Web
| Edited By: |

Updated on: Aug 19, 2023 | 10:08 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಆರಂಭಕ್ಕೂ ಮುನ್ನವೇ ಎಲ್ಲಾ ತಂಡಗಳಿಗೂ ಮೇಜರ್ ಸರ್ಜರಿ ನಡೆಯುತ್ತಿದೆ. ಇದರ ಮೊದಲ ಭಾಗವಾಗಿ ಈಗಾಗಲೇ ಆರ್​ಸಿಬಿ ಸೇರಿದಂತೆ ಕೆಲ ತಂಡಗಳ ಕೋಚ್​ಗಳು ಬದಲಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಆರಂಭಕ್ಕೂ ಮುನ್ನವೇ ಎಲ್ಲಾ ತಂಡಗಳಿಗೂ ಮೇಜರ್ ಸರ್ಜರಿ ನಡೆಯುತ್ತಿದೆ. ಇದರ ಮೊದಲ ಭಾಗವಾಗಿ ಈಗಾಗಲೇ ಆರ್​ಸಿಬಿ ಸೇರಿದಂತೆ ಕೆಲ ತಂಡಗಳ ಕೋಚ್​ಗಳು ಬದಲಾಗಿದ್ದಾರೆ.

1 / 7
ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದಲ್ಲೂ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತವಾಗಿದೆ. ಈ ಹಿಂದೆ LSG ತಂಡದ ಕೋಚ್ ಸ್ಥಾನದಿಂದ ಆ್ಯಂಡಿ ಫ್ಲವರ್​ ಅವರನ್ನು ಕೆಳಗಿಳಿಸಲಾಗಿತ್ತು. ಇದೀಗ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಹೊರಬರುವುದು ಸಹ ಬಹುತೇಕ ಖಚಿತವಾಗಿದೆ.

ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದಲ್ಲೂ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತವಾಗಿದೆ. ಈ ಹಿಂದೆ LSG ತಂಡದ ಕೋಚ್ ಸ್ಥಾನದಿಂದ ಆ್ಯಂಡಿ ಫ್ಲವರ್​ ಅವರನ್ನು ಕೆಳಗಿಳಿಸಲಾಗಿತ್ತು. ಇದೀಗ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಹೊರಬರುವುದು ಸಹ ಬಹುತೇಕ ಖಚಿತವಾಗಿದೆ.

2 / 7
ಪ್ರಸ್ತುತ ಮಾಹಿತಿ ಪ್ರಕಾರ, ಗೌತಮ್ ಗಂಭೀರ್ ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದೊಂದಿಗೆ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ನಿಖರ ಕಾರಣಗಳೇನು ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ.

ಪ್ರಸ್ತುತ ಮಾಹಿತಿ ಪ್ರಕಾರ, ಗೌತಮ್ ಗಂಭೀರ್ ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದೊಂದಿಗೆ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ನಿಖರ ಕಾರಣಗಳೇನು ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ.

3 / 7
ಇದಾಗ್ಯೂ ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಗುಳಿಯಲು ಗೌತಮ್ ಗಂಭೀರ್ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಪೂರ್ವ ದೆಹಲಿ ಸಂಸದರಾಗಿರುವ ಗಂಭೀರ್ ಮುಂದಿನ ಚುನಾವಣೆಯಲ್ಲೂ ಸ್ಪರ್ಧಿಸಲಿದ್ದು, ಹೀಗಾಗಿ ಐಪಿಎಲ್​ನಿಂದ ಬ್ರೇಕ್ ಪಡೆಯಲು ಮುಂದಾಗಿದ್ದಾರಂತೆ.

ಇದಾಗ್ಯೂ ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಗುಳಿಯಲು ಗೌತಮ್ ಗಂಭೀರ್ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಪೂರ್ವ ದೆಹಲಿ ಸಂಸದರಾಗಿರುವ ಗಂಭೀರ್ ಮುಂದಿನ ಚುನಾವಣೆಯಲ್ಲೂ ಸ್ಪರ್ಧಿಸಲಿದ್ದು, ಹೀಗಾಗಿ ಐಪಿಎಲ್​ನಿಂದ ಬ್ರೇಕ್ ಪಡೆಯಲು ಮುಂದಾಗಿದ್ದಾರಂತೆ.

4 / 7
ಮತ್ತೊಂದೆಡೆ ಮುಖ್ಯ ಕೋಚ್ ಆ್ಯಂಡಿ ಫ್ಲವರ್​ ಹಾಗೂ ಗೌತಮ್ ಗಂಭೀರ್ ಜೊತೆಯಾಗಿ ಕಳೆದ 2 ವರ್ಷಗಳ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಆ್ಯಂಡಿ ಫ್ಲವರ್ ಅವರನ್ನು ಕೋಚ್ ಸ್ಥಾನದಿಂದ ತೆಗೆದು ಹಾಕಲಾಗಿದೆ. ಇದರ ಬೆನ್ನಲ್ಲೇ ಗಂಭೀರ್ ಕೂಡ ಹೊರಬೀಳಲಿದ್ದಾರೆ ಎನ್ನಲಾಗಿತ್ತು.

ಮತ್ತೊಂದೆಡೆ ಮುಖ್ಯ ಕೋಚ್ ಆ್ಯಂಡಿ ಫ್ಲವರ್​ ಹಾಗೂ ಗೌತಮ್ ಗಂಭೀರ್ ಜೊತೆಯಾಗಿ ಕಳೆದ 2 ವರ್ಷಗಳ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಆ್ಯಂಡಿ ಫ್ಲವರ್ ಅವರನ್ನು ಕೋಚ್ ಸ್ಥಾನದಿಂದ ತೆಗೆದು ಹಾಕಲಾಗಿದೆ. ಇದರ ಬೆನ್ನಲ್ಲೇ ಗಂಭೀರ್ ಕೂಡ ಹೊರಬೀಳಲಿದ್ದಾರೆ ಎನ್ನಲಾಗಿತ್ತು.

5 / 7
ಏಕೆಂದರೆ ಕಳೆದ ಸೀಸನ್ ಐಪಿಎಲ್ ವೇಳೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳ ವಿರುದ್ಧ ಅನುಚಿತವಾಗಿ ವರ್ತಿಸಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಮೈದಾನದಲ್ಲೇ ಜಗಳಕ್ಕಿಳಿದಿದ್ದರು. ಇವೆಲ್ಲವೂ ಲಕ್ನೋ ಸೂಪರ್ ಜೈಂಟ್ಸ್ ಬ್ರ್ಯಾಂಡ್​ ಮೇಲೆ ಪರಿಣಾಮ ಬೀರಿರುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿಯೇ ಗಂಭೀರ್ ಅವರನ್ನು ಕೈ ಬಿಡಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅದಕ್ಕೂ ಮುನ್ನವೇ ಗೌತಮ್ ಗಂಭೀರ್ ಲಕ್ನೋ ತಂಡದಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಏಕೆಂದರೆ ಕಳೆದ ಸೀಸನ್ ಐಪಿಎಲ್ ವೇಳೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳ ವಿರುದ್ಧ ಅನುಚಿತವಾಗಿ ವರ್ತಿಸಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಮೈದಾನದಲ್ಲೇ ಜಗಳಕ್ಕಿಳಿದಿದ್ದರು. ಇವೆಲ್ಲವೂ ಲಕ್ನೋ ಸೂಪರ್ ಜೈಂಟ್ಸ್ ಬ್ರ್ಯಾಂಡ್​ ಮೇಲೆ ಪರಿಣಾಮ ಬೀರಿರುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿಯೇ ಗಂಭೀರ್ ಅವರನ್ನು ಕೈ ಬಿಡಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅದಕ್ಕೂ ಮುನ್ನವೇ ಗೌತಮ್ ಗಂಭೀರ್ ಲಕ್ನೋ ತಂಡದಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

6 / 7
ಒಟ್ಟಿನಲ್ಲಿ ಮುಂದಿನ ಸೀಸನ್​ನಲ್ಲಿ ಲಕ್ನೋ ಬಳಗದಲ್ಲಿ ಗಂಭೀರ್ ಕಾಣಿಸಿಕೊಳ್ಳುವುದು ಅನುಮಾನ. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರ ಬಳಗವೇ ಎಲ್​ಎಸ್​ಜಿ ತಂಡದ ಸಿಬ್ಬಂದಿ ವರ್ಗದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಎಲ್​ಎಸ್​ಜಿ ತಂಡದ ಮುಂದಿನ ಮೆಂಟರ್ ಆಗಿ ಯಾರು ಬರಲಿದ್ದಾರೆ ಎಂಬುದಷ್ಟೇ ಈಗ ಕುತೂಹಲ.

ಒಟ್ಟಿನಲ್ಲಿ ಮುಂದಿನ ಸೀಸನ್​ನಲ್ಲಿ ಲಕ್ನೋ ಬಳಗದಲ್ಲಿ ಗಂಭೀರ್ ಕಾಣಿಸಿಕೊಳ್ಳುವುದು ಅನುಮಾನ. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರ ಬಳಗವೇ ಎಲ್​ಎಸ್​ಜಿ ತಂಡದ ಸಿಬ್ಬಂದಿ ವರ್ಗದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಎಲ್​ಎಸ್​ಜಿ ತಂಡದ ಮುಂದಿನ ಮೆಂಟರ್ ಆಗಿ ಯಾರು ಬರಲಿದ್ದಾರೆ ಎಂಬುದಷ್ಟೇ ಈಗ ಕುತೂಹಲ.

7 / 7
Web contact
Web contact

TV9 Kannada

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ