Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: LSG ತಂಡದಿಂದ ಗೌತಮ್ ಗಂಭೀರ್​ಗೆ ಗೇಟ್ ಪಾಸ್..?

IPL 2024: ಕಳೆದ ಸೀಸನ್ ಐಪಿಎಲ್ ವೇಳೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳ ವಿರುದ್ಧ ಅನುಚಿತವಾಗಿ ವರ್ತಿಸಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಮೈದಾನದಲ್ಲೇ ಜಗಳಕ್ಕಿಳಿದಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2023 | 10:08 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಆರಂಭಕ್ಕೂ ಮುನ್ನವೇ ಎಲ್ಲಾ ತಂಡಗಳಿಗೂ ಮೇಜರ್ ಸರ್ಜರಿ ನಡೆಯುತ್ತಿದೆ. ಇದರ ಮೊದಲ ಭಾಗವಾಗಿ ಈಗಾಗಲೇ ಆರ್​ಸಿಬಿ ಸೇರಿದಂತೆ ಕೆಲ ತಂಡಗಳ ಕೋಚ್​ಗಳು ಬದಲಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಆರಂಭಕ್ಕೂ ಮುನ್ನವೇ ಎಲ್ಲಾ ತಂಡಗಳಿಗೂ ಮೇಜರ್ ಸರ್ಜರಿ ನಡೆಯುತ್ತಿದೆ. ಇದರ ಮೊದಲ ಭಾಗವಾಗಿ ಈಗಾಗಲೇ ಆರ್​ಸಿಬಿ ಸೇರಿದಂತೆ ಕೆಲ ತಂಡಗಳ ಕೋಚ್​ಗಳು ಬದಲಾಗಿದ್ದಾರೆ.

1 / 7
ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದಲ್ಲೂ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತವಾಗಿದೆ. ಈ ಹಿಂದೆ LSG ತಂಡದ ಕೋಚ್ ಸ್ಥಾನದಿಂದ ಆ್ಯಂಡಿ ಫ್ಲವರ್​ ಅವರನ್ನು ಕೆಳಗಿಳಿಸಲಾಗಿತ್ತು. ಇದೀಗ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಹೊರಬರುವುದು ಸಹ ಬಹುತೇಕ ಖಚಿತವಾಗಿದೆ.

ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದಲ್ಲೂ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತವಾಗಿದೆ. ಈ ಹಿಂದೆ LSG ತಂಡದ ಕೋಚ್ ಸ್ಥಾನದಿಂದ ಆ್ಯಂಡಿ ಫ್ಲವರ್​ ಅವರನ್ನು ಕೆಳಗಿಳಿಸಲಾಗಿತ್ತು. ಇದೀಗ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಹೊರಬರುವುದು ಸಹ ಬಹುತೇಕ ಖಚಿತವಾಗಿದೆ.

2 / 7
ಪ್ರಸ್ತುತ ಮಾಹಿತಿ ಪ್ರಕಾರ, ಗೌತಮ್ ಗಂಭೀರ್ ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದೊಂದಿಗೆ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ನಿಖರ ಕಾರಣಗಳೇನು ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ.

ಪ್ರಸ್ತುತ ಮಾಹಿತಿ ಪ್ರಕಾರ, ಗೌತಮ್ ಗಂಭೀರ್ ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದೊಂದಿಗೆ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ನಿಖರ ಕಾರಣಗಳೇನು ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ.

3 / 7
ಇದಾಗ್ಯೂ ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಗುಳಿಯಲು ಗೌತಮ್ ಗಂಭೀರ್ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಪೂರ್ವ ದೆಹಲಿ ಸಂಸದರಾಗಿರುವ ಗಂಭೀರ್ ಮುಂದಿನ ಚುನಾವಣೆಯಲ್ಲೂ ಸ್ಪರ್ಧಿಸಲಿದ್ದು, ಹೀಗಾಗಿ ಐಪಿಎಲ್​ನಿಂದ ಬ್ರೇಕ್ ಪಡೆಯಲು ಮುಂದಾಗಿದ್ದಾರಂತೆ.

ಇದಾಗ್ಯೂ ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಗುಳಿಯಲು ಗೌತಮ್ ಗಂಭೀರ್ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಪೂರ್ವ ದೆಹಲಿ ಸಂಸದರಾಗಿರುವ ಗಂಭೀರ್ ಮುಂದಿನ ಚುನಾವಣೆಯಲ್ಲೂ ಸ್ಪರ್ಧಿಸಲಿದ್ದು, ಹೀಗಾಗಿ ಐಪಿಎಲ್​ನಿಂದ ಬ್ರೇಕ್ ಪಡೆಯಲು ಮುಂದಾಗಿದ್ದಾರಂತೆ.

4 / 7
ಮತ್ತೊಂದೆಡೆ ಮುಖ್ಯ ಕೋಚ್ ಆ್ಯಂಡಿ ಫ್ಲವರ್​ ಹಾಗೂ ಗೌತಮ್ ಗಂಭೀರ್ ಜೊತೆಯಾಗಿ ಕಳೆದ 2 ವರ್ಷಗಳ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಆ್ಯಂಡಿ ಫ್ಲವರ್ ಅವರನ್ನು ಕೋಚ್ ಸ್ಥಾನದಿಂದ ತೆಗೆದು ಹಾಕಲಾಗಿದೆ. ಇದರ ಬೆನ್ನಲ್ಲೇ ಗಂಭೀರ್ ಕೂಡ ಹೊರಬೀಳಲಿದ್ದಾರೆ ಎನ್ನಲಾಗಿತ್ತು.

ಮತ್ತೊಂದೆಡೆ ಮುಖ್ಯ ಕೋಚ್ ಆ್ಯಂಡಿ ಫ್ಲವರ್​ ಹಾಗೂ ಗೌತಮ್ ಗಂಭೀರ್ ಜೊತೆಯಾಗಿ ಕಳೆದ 2 ವರ್ಷಗಳ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಆ್ಯಂಡಿ ಫ್ಲವರ್ ಅವರನ್ನು ಕೋಚ್ ಸ್ಥಾನದಿಂದ ತೆಗೆದು ಹಾಕಲಾಗಿದೆ. ಇದರ ಬೆನ್ನಲ್ಲೇ ಗಂಭೀರ್ ಕೂಡ ಹೊರಬೀಳಲಿದ್ದಾರೆ ಎನ್ನಲಾಗಿತ್ತು.

5 / 7
ಏಕೆಂದರೆ ಕಳೆದ ಸೀಸನ್ ಐಪಿಎಲ್ ವೇಳೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳ ವಿರುದ್ಧ ಅನುಚಿತವಾಗಿ ವರ್ತಿಸಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಮೈದಾನದಲ್ಲೇ ಜಗಳಕ್ಕಿಳಿದಿದ್ದರು. ಇವೆಲ್ಲವೂ ಲಕ್ನೋ ಸೂಪರ್ ಜೈಂಟ್ಸ್ ಬ್ರ್ಯಾಂಡ್​ ಮೇಲೆ ಪರಿಣಾಮ ಬೀರಿರುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿಯೇ ಗಂಭೀರ್ ಅವರನ್ನು ಕೈ ಬಿಡಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅದಕ್ಕೂ ಮುನ್ನವೇ ಗೌತಮ್ ಗಂಭೀರ್ ಲಕ್ನೋ ತಂಡದಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಏಕೆಂದರೆ ಕಳೆದ ಸೀಸನ್ ಐಪಿಎಲ್ ವೇಳೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳ ವಿರುದ್ಧ ಅನುಚಿತವಾಗಿ ವರ್ತಿಸಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಮೈದಾನದಲ್ಲೇ ಜಗಳಕ್ಕಿಳಿದಿದ್ದರು. ಇವೆಲ್ಲವೂ ಲಕ್ನೋ ಸೂಪರ್ ಜೈಂಟ್ಸ್ ಬ್ರ್ಯಾಂಡ್​ ಮೇಲೆ ಪರಿಣಾಮ ಬೀರಿರುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿಯೇ ಗಂಭೀರ್ ಅವರನ್ನು ಕೈ ಬಿಡಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅದಕ್ಕೂ ಮುನ್ನವೇ ಗೌತಮ್ ಗಂಭೀರ್ ಲಕ್ನೋ ತಂಡದಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

6 / 7
ಒಟ್ಟಿನಲ್ಲಿ ಮುಂದಿನ ಸೀಸನ್​ನಲ್ಲಿ ಲಕ್ನೋ ಬಳಗದಲ್ಲಿ ಗಂಭೀರ್ ಕಾಣಿಸಿಕೊಳ್ಳುವುದು ಅನುಮಾನ. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರ ಬಳಗವೇ ಎಲ್​ಎಸ್​ಜಿ ತಂಡದ ಸಿಬ್ಬಂದಿ ವರ್ಗದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಎಲ್​ಎಸ್​ಜಿ ತಂಡದ ಮುಂದಿನ ಮೆಂಟರ್ ಆಗಿ ಯಾರು ಬರಲಿದ್ದಾರೆ ಎಂಬುದಷ್ಟೇ ಈಗ ಕುತೂಹಲ.

ಒಟ್ಟಿನಲ್ಲಿ ಮುಂದಿನ ಸೀಸನ್​ನಲ್ಲಿ ಲಕ್ನೋ ಬಳಗದಲ್ಲಿ ಗಂಭೀರ್ ಕಾಣಿಸಿಕೊಳ್ಳುವುದು ಅನುಮಾನ. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರ ಬಳಗವೇ ಎಲ್​ಎಸ್​ಜಿ ತಂಡದ ಸಿಬ್ಬಂದಿ ವರ್ಗದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಎಲ್​ಎಸ್​ಜಿ ತಂಡದ ಮುಂದಿನ ಮೆಂಟರ್ ಆಗಿ ಯಾರು ಬರಲಿದ್ದಾರೆ ಎಂಬುದಷ್ಟೇ ಈಗ ಕುತೂಹಲ.

7 / 7
Follow us
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು