AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: LSG ತಂಡದಿಂದ ಗೌತಮ್ ಗಂಭೀರ್​ಗೆ ಗೇಟ್ ಪಾಸ್..?

IPL 2024: ಕಳೆದ ಸೀಸನ್ ಐಪಿಎಲ್ ವೇಳೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳ ವಿರುದ್ಧ ಅನುಚಿತವಾಗಿ ವರ್ತಿಸಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಮೈದಾನದಲ್ಲೇ ಜಗಳಕ್ಕಿಳಿದಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Aug 19, 2023 | 10:08 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಆರಂಭಕ್ಕೂ ಮುನ್ನವೇ ಎಲ್ಲಾ ತಂಡಗಳಿಗೂ ಮೇಜರ್ ಸರ್ಜರಿ ನಡೆಯುತ್ತಿದೆ. ಇದರ ಮೊದಲ ಭಾಗವಾಗಿ ಈಗಾಗಲೇ ಆರ್​ಸಿಬಿ ಸೇರಿದಂತೆ ಕೆಲ ತಂಡಗಳ ಕೋಚ್​ಗಳು ಬದಲಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಆರಂಭಕ್ಕೂ ಮುನ್ನವೇ ಎಲ್ಲಾ ತಂಡಗಳಿಗೂ ಮೇಜರ್ ಸರ್ಜರಿ ನಡೆಯುತ್ತಿದೆ. ಇದರ ಮೊದಲ ಭಾಗವಾಗಿ ಈಗಾಗಲೇ ಆರ್​ಸಿಬಿ ಸೇರಿದಂತೆ ಕೆಲ ತಂಡಗಳ ಕೋಚ್​ಗಳು ಬದಲಾಗಿದ್ದಾರೆ.

1 / 7
ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದಲ್ಲೂ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತವಾಗಿದೆ. ಈ ಹಿಂದೆ LSG ತಂಡದ ಕೋಚ್ ಸ್ಥಾನದಿಂದ ಆ್ಯಂಡಿ ಫ್ಲವರ್​ ಅವರನ್ನು ಕೆಳಗಿಳಿಸಲಾಗಿತ್ತು. ಇದೀಗ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಹೊರಬರುವುದು ಸಹ ಬಹುತೇಕ ಖಚಿತವಾಗಿದೆ.

ಇದೀಗ ಲಕ್ನೋ ಸೂಪರ್ ಜೈಂಟ್ಸ್​ ತಂಡದಲ್ಲೂ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತವಾಗಿದೆ. ಈ ಹಿಂದೆ LSG ತಂಡದ ಕೋಚ್ ಸ್ಥಾನದಿಂದ ಆ್ಯಂಡಿ ಫ್ಲವರ್​ ಅವರನ್ನು ಕೆಳಗಿಳಿಸಲಾಗಿತ್ತು. ಇದೀಗ ತಂಡದ ಮೆಂಟರ್ ಗೌತಮ್ ಗಂಭೀರ್ ಕೂಡ ಹೊರಬರುವುದು ಸಹ ಬಹುತೇಕ ಖಚಿತವಾಗಿದೆ.

2 / 7
ಪ್ರಸ್ತುತ ಮಾಹಿತಿ ಪ್ರಕಾರ, ಗೌತಮ್ ಗಂಭೀರ್ ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದೊಂದಿಗೆ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ನಿಖರ ಕಾರಣಗಳೇನು ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ.

ಪ್ರಸ್ತುತ ಮಾಹಿತಿ ಪ್ರಕಾರ, ಗೌತಮ್ ಗಂಭೀರ್ ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ತಂಡದೊಂದಿಗೆ ಕಾಣಿಸಿಕೊಳ್ಳುವುದಿಲ್ಲ ಎಂದು ತಿಳಿದು ಬಂದಿದೆ. ಇದಕ್ಕೆ ನಿಖರ ಕಾರಣಗಳೇನು ಎಂಬುದು ಇನ್ನೂ ಕೂಡ ಬಹಿರಂಗವಾಗಿಲ್ಲ.

3 / 7
ಇದಾಗ್ಯೂ ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಗುಳಿಯಲು ಗೌತಮ್ ಗಂಭೀರ್ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಪೂರ್ವ ದೆಹಲಿ ಸಂಸದರಾಗಿರುವ ಗಂಭೀರ್ ಮುಂದಿನ ಚುನಾವಣೆಯಲ್ಲೂ ಸ್ಪರ್ಧಿಸಲಿದ್ದು, ಹೀಗಾಗಿ ಐಪಿಎಲ್​ನಿಂದ ಬ್ರೇಕ್ ಪಡೆಯಲು ಮುಂದಾಗಿದ್ದಾರಂತೆ.

ಇದಾಗ್ಯೂ ಮುಂಬರುವ ಲೋಕಸಭಾ ಚುನಾವಣೆ ನಿಮಿತ್ತ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಗುಳಿಯಲು ಗೌತಮ್ ಗಂಭೀರ್ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಪೂರ್ವ ದೆಹಲಿ ಸಂಸದರಾಗಿರುವ ಗಂಭೀರ್ ಮುಂದಿನ ಚುನಾವಣೆಯಲ್ಲೂ ಸ್ಪರ್ಧಿಸಲಿದ್ದು, ಹೀಗಾಗಿ ಐಪಿಎಲ್​ನಿಂದ ಬ್ರೇಕ್ ಪಡೆಯಲು ಮುಂದಾಗಿದ್ದಾರಂತೆ.

4 / 7
ಮತ್ತೊಂದೆಡೆ ಮುಖ್ಯ ಕೋಚ್ ಆ್ಯಂಡಿ ಫ್ಲವರ್​ ಹಾಗೂ ಗೌತಮ್ ಗಂಭೀರ್ ಜೊತೆಯಾಗಿ ಕಳೆದ 2 ವರ್ಷಗಳ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಆ್ಯಂಡಿ ಫ್ಲವರ್ ಅವರನ್ನು ಕೋಚ್ ಸ್ಥಾನದಿಂದ ತೆಗೆದು ಹಾಕಲಾಗಿದೆ. ಇದರ ಬೆನ್ನಲ್ಲೇ ಗಂಭೀರ್ ಕೂಡ ಹೊರಬೀಳಲಿದ್ದಾರೆ ಎನ್ನಲಾಗಿತ್ತು.

ಮತ್ತೊಂದೆಡೆ ಮುಖ್ಯ ಕೋಚ್ ಆ್ಯಂಡಿ ಫ್ಲವರ್​ ಹಾಗೂ ಗೌತಮ್ ಗಂಭೀರ್ ಜೊತೆಯಾಗಿ ಕಳೆದ 2 ವರ್ಷಗಳ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಕಾರ್ಯ ನಿರ್ವಹಿಸಿದ್ದರು. ಇದೀಗ ಆ್ಯಂಡಿ ಫ್ಲವರ್ ಅವರನ್ನು ಕೋಚ್ ಸ್ಥಾನದಿಂದ ತೆಗೆದು ಹಾಕಲಾಗಿದೆ. ಇದರ ಬೆನ್ನಲ್ಲೇ ಗಂಭೀರ್ ಕೂಡ ಹೊರಬೀಳಲಿದ್ದಾರೆ ಎನ್ನಲಾಗಿತ್ತು.

5 / 7
ಏಕೆಂದರೆ ಕಳೆದ ಸೀಸನ್ ಐಪಿಎಲ್ ವೇಳೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳ ವಿರುದ್ಧ ಅನುಚಿತವಾಗಿ ವರ್ತಿಸಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಮೈದಾನದಲ್ಲೇ ಜಗಳಕ್ಕಿಳಿದಿದ್ದರು. ಇವೆಲ್ಲವೂ ಲಕ್ನೋ ಸೂಪರ್ ಜೈಂಟ್ಸ್ ಬ್ರ್ಯಾಂಡ್​ ಮೇಲೆ ಪರಿಣಾಮ ಬೀರಿರುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿಯೇ ಗಂಭೀರ್ ಅವರನ್ನು ಕೈ ಬಿಡಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅದಕ್ಕೂ ಮುನ್ನವೇ ಗೌತಮ್ ಗಂಭೀರ್ ಲಕ್ನೋ ತಂಡದಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಏಕೆಂದರೆ ಕಳೆದ ಸೀಸನ್ ಐಪಿಎಲ್ ವೇಳೆ ಗೌತಮ್ ಗಂಭೀರ್ ಆರ್​ಸಿಬಿ ಅಭಿಮಾನಿಗಳ ವಿರುದ್ಧ ಅನುಚಿತವಾಗಿ ವರ್ತಿಸಿದ್ದರು. ಇದಲ್ಲದೆ ವಿರಾಟ್ ಕೊಹ್ಲಿ ಜೊತೆಗೂ ಮೈದಾನದಲ್ಲೇ ಜಗಳಕ್ಕಿಳಿದಿದ್ದರು. ಇವೆಲ್ಲವೂ ಲಕ್ನೋ ಸೂಪರ್ ಜೈಂಟ್ಸ್ ಬ್ರ್ಯಾಂಡ್​ ಮೇಲೆ ಪರಿಣಾಮ ಬೀರಿರುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಲಕ್ನೋ ಫ್ರಾಂಚೈಸಿಯೇ ಗಂಭೀರ್ ಅವರನ್ನು ಕೈ ಬಿಡಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅದಕ್ಕೂ ಮುನ್ನವೇ ಗೌತಮ್ ಗಂಭೀರ್ ಲಕ್ನೋ ತಂಡದಿಂದ ಹಿಂದೆ ಸರಿಯಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

6 / 7
ಒಟ್ಟಿನಲ್ಲಿ ಮುಂದಿನ ಸೀಸನ್​ನಲ್ಲಿ ಲಕ್ನೋ ಬಳಗದಲ್ಲಿ ಗಂಭೀರ್ ಕಾಣಿಸಿಕೊಳ್ಳುವುದು ಅನುಮಾನ. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರ ಬಳಗವೇ ಎಲ್​ಎಸ್​ಜಿ ತಂಡದ ಸಿಬ್ಬಂದಿ ವರ್ಗದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಎಲ್​ಎಸ್​ಜಿ ತಂಡದ ಮುಂದಿನ ಮೆಂಟರ್ ಆಗಿ ಯಾರು ಬರಲಿದ್ದಾರೆ ಎಂಬುದಷ್ಟೇ ಈಗ ಕುತೂಹಲ.

ಒಟ್ಟಿನಲ್ಲಿ ಮುಂದಿನ ಸೀಸನ್​ನಲ್ಲಿ ಲಕ್ನೋ ಬಳಗದಲ್ಲಿ ಗಂಭೀರ್ ಕಾಣಿಸಿಕೊಳ್ಳುವುದು ಅನುಮಾನ. ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದ ಹೊಸ ಕೋಚ್​ ಆಗಿ ಆಸ್ಟ್ರೇಲಿಯಾದ ಮಾಜಿ ಆಟಗಾರ ಜಸ್ಟಿನ್ ಲ್ಯಾಂಗರ್ ಆಯ್ಕೆಯಾಗಿದ್ದಾರೆ. ಹೀಗಾಗಿ ಅವರ ಬಳಗವೇ ಎಲ್​ಎಸ್​ಜಿ ತಂಡದ ಸಿಬ್ಬಂದಿ ವರ್ಗದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಎಲ್​ಎಸ್​ಜಿ ತಂಡದ ಮುಂದಿನ ಮೆಂಟರ್ ಆಗಿ ಯಾರು ಬರಲಿದ್ದಾರೆ ಎಂಬುದಷ್ಟೇ ಈಗ ಕುತೂಹಲ.

7 / 7
Follow us
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ