AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಡೆಲ್ಲಿ ದಾಳಿಗೆ ತತ್ತರಿಸಿದ ಗುಜರಾತ್! ನೂತನ ದಾಖಲೆ ಬರೆದ ಪಂತ್ ಪಡೆ

IPL 2024: ಇಂದಿನ ಪಂದ್ಯದಲ್ಲಿ ಗುಜರಾತ್ ತಂಡವನ್ನು 89 ರನ್​ಗಳಿಗೆ ಆಲೌಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಐಪಿಎಲ್ ಇತಿಹಾಸದಲ್ಲಿ ಶುಭ್​ಮನ್ ಗಿಲ್ ಪಡೆಯನ್ನು ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ.

ಪೃಥ್ವಿಶಂಕರ
|

Updated on: Apr 17, 2024 | 10:07 PM

Share
ಗುಜರಾತ್​ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ರ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ 32ನೇ ಪಂದ್ಯದಲ್ಲಿ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.

ಗುಜರಾತ್​ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ರ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ 32ನೇ ಪಂದ್ಯದಲ್ಲಿ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಪರೂಪದ ದಾಖಲೆಯೊಂದನ್ನು ನಿರ್ಮಿಸಿದೆ.

1 / 7
ತನ್ನ ತವರು ನೆಲದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ, ಡೆಲ್ಲಿ ಬೌಲರ್​ಗಳ ದಾಳಿಗೆ ತತ್ತರಿಸಿ ಕೇವಲ 89 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ರಶೀದ್ ಖಾನ್ 31 ರನ್ ಕಲೆಹಾಕಿದ್ದನ್ನು ಬಿಟ್ಟರೆ ಉಳಿದವರಿಂದ ಯಾವುದೇ ಕೊಡುಗೆ ಕಂಡುಬರಲಿಲ್ಲ.

ತನ್ನ ತವರು ನೆಲದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ, ಡೆಲ್ಲಿ ಬೌಲರ್​ಗಳ ದಾಳಿಗೆ ತತ್ತರಿಸಿ ಕೇವಲ 89 ರನ್​ಗಳಿಗೆ ಆಲೌಟ್ ಆಯಿತು. ತಂಡದ ಪರ ರಶೀದ್ ಖಾನ್ 31 ರನ್ ಕಲೆಹಾಕಿದ್ದನ್ನು ಬಿಟ್ಟರೆ ಉಳಿದವರಿಂದ ಯಾವುದೇ ಕೊಡುಗೆ ಕಂಡುಬರಲಿಲ್ಲ.

2 / 7
ಇತ್ತ ಲೀಗ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟು ಕಳೆದ ಪಂದ್ಯದಿಂದ ಗೆಲುವಿನ ಲಯ ಕಂಡುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಇತಿಹಾಸದಲ್ಲಿ ಗುಜರಾತ್ ಟೈಟಾನ್ಸ್‌ ತಂಡದ ವಿರುದ್ಧ ಬೇರೆ ಯಾವ ತಂಡವೂ ಮಾಡಲಾಗದ ಸಾಧನೆಯೊಂದನ್ನು ಮಾಡಿದೆ.

ಇತ್ತ ಲೀಗ್​ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟು ಕಳೆದ ಪಂದ್ಯದಿಂದ ಗೆಲುವಿನ ಲಯ ಕಂಡುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಐಪಿಎಲ್ ಇತಿಹಾಸದಲ್ಲಿ ಗುಜರಾತ್ ಟೈಟಾನ್ಸ್‌ ತಂಡದ ವಿರುದ್ಧ ಬೇರೆ ಯಾವ ತಂಡವೂ ಮಾಡಲಾಗದ ಸಾಧನೆಯೊಂದನ್ನು ಮಾಡಿದೆ.

3 / 7
ಅದೆನೆಂದರೆ ಇಂದಿನ ಪಂದ್ಯದಲ್ಲಿ ಗುಜರಾತ್ ತಂಡವನ್ನು 89 ರನ್​ಗಳಿಗೆ ಆಲೌಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಐಪಿಎಲ್ ಇತಿಹಾಸದಲ್ಲಿ ಶುಭ್​ಮನ್ ಗಿಲ್ ಪಡೆಯನ್ನು ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ.

ಅದೆನೆಂದರೆ ಇಂದಿನ ಪಂದ್ಯದಲ್ಲಿ ಗುಜರಾತ್ ತಂಡವನ್ನು 89 ರನ್​ಗಳಿಗೆ ಆಲೌಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ, ಐಪಿಎಲ್ ಇತಿಹಾಸದಲ್ಲಿ ಶುಭ್​ಮನ್ ಗಿಲ್ ಪಡೆಯನ್ನು ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ.

4 / 7
ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಐಪಿಎಲ್‌ನಲ್ಲಿ ಯಾವುದೇ ತಂಡ, ಗುಜರಾತ್ ತಂಡವನ್ನು 100 ರನ್‌ಗಳಿಗಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿರಲಿಲ್ಲ. ಅಥವಾ ಕಟ್ಟಿ ಹಾಕಿರಲಿಲ್ಲ. ಇದೀಗ ಈ ಸಾಧನೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಮಾಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಐಪಿಎಲ್‌ನಲ್ಲಿ ಯಾವುದೇ ತಂಡ, ಗುಜರಾತ್ ತಂಡವನ್ನು 100 ರನ್‌ಗಳಿಗಿಂತ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿರಲಿಲ್ಲ. ಅಥವಾ ಕಟ್ಟಿ ಹಾಕಿರಲಿಲ್ಲ. ಇದೀಗ ಈ ಸಾಧನೆಯನ್ನು ಡೆಲ್ಲಿ ಕ್ಯಾಪಿಟಲ್ಸ್ ಮಾಡಿದೆ.

5 / 7
ಇದಲ್ಲದೆ ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ತಂಡವೊಂದನ್ನು ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿರುವುದು ಕೂಡ ಇದೇ ಮೊದಲು. ಇದಕ್ಕೂ ಮೊದಲು ಡೆಲ್ಲಿ ತಂಡ, ಮುಂಬೈ ಇಂಡಿಯನ್ಸ್ ತಂಡವನ್ನು 92 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿತ್ತು.

ಇದಲ್ಲದೆ ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ತಂಡವೊಂದನ್ನು ಅತಿ ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಿರುವುದು ಕೂಡ ಇದೇ ಮೊದಲು. ಇದಕ್ಕೂ ಮೊದಲು ಡೆಲ್ಲಿ ತಂಡ, ಮುಂಬೈ ಇಂಡಿಯನ್ಸ್ ತಂಡವನ್ನು 92 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿತ್ತು.

6 / 7
ಗುಜರಾತ್ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಡೆಲ್ಲಿ ಬೌಲರ್​ಗಳ ಚಮತ್ಕಾರ ಅಮೋಘವಾಗಿತ್ತು. ಡೆಲ್ಲಿ ಪರ ಮುಖೇಶ್ ಕುಮಾರ್ ಗರಿಷ್ಠ 3 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ ಮತ್ತು ಟ್ರಿಸ್ಟಾನ್ ಸ್ಟಬ್ಸ್ ತಲಾ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ಖಲೀಲ್ ಅಹ್ಮದ್ ತಲಾ 1 ವಿಕೆಟ್ ಪಡೆದರು.

ಗುಜರಾತ್ ತಂಡವನ್ನು ಇಷ್ಟು ಕಡಿಮೆ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಡೆಲ್ಲಿ ಬೌಲರ್​ಗಳ ಚಮತ್ಕಾರ ಅಮೋಘವಾಗಿತ್ತು. ಡೆಲ್ಲಿ ಪರ ಮುಖೇಶ್ ಕುಮಾರ್ ಗರಿಷ್ಠ 3 ವಿಕೆಟ್ ಪಡೆದರೆ, ಇಶಾಂತ್ ಶರ್ಮಾ ಮತ್ತು ಟ್ರಿಸ್ಟಾನ್ ಸ್ಟಬ್ಸ್ ತಲಾ 2 ವಿಕೆಟ್ ಪಡೆದರು. ಅಕ್ಷರ್ ಪಟೇಲ್ ಮತ್ತು ಖಲೀಲ್ ಅಹ್ಮದ್ ತಲಾ 1 ವಿಕೆಟ್ ಪಡೆದರು.

7 / 7
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್