AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಗುಜರಾತ್​ಗೆ ಮತ್ತೊಂದು ಬಿಗ್ ಶಾಕ್; 3.6 ಕೋಟಿಯ ಪ್ಲೇಯರ್ ಐಪಿಎಲ್​ನಿಂದ ಔಟ್..!

IPL 2024: ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡಕ್ಕೆ ಎದುರಾಗಿರುವಷ್ಟು ಸಂಕಷ್ಟ ಮತ್ತ್ತ್ಯಾವ ತಂಡಕ್ಕೂ ಆಗಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ಸ್ಟಾರ್ ಕ್ರಿಕೆಟಿಗರ ಅಲಭ್ಯತೆಯಿಂದ ಬಳಲುತ್ತಿರುವ ತಂಡಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ತಂಡದ ಯುವ ಆಟಗಾರ ರಾಬಿನ್ ಮಿಂಜ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಪೃಥ್ವಿಶಂಕರ
|

Updated on: Mar 16, 2024 | 6:36 PM

Share
ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡಕ್ಕೆ ಎದುರಾಗಿರುವಷ್ಟು ಸಂಕಷ್ಟ ಮತ್ತ್ತ್ಯಾವ ತಂಡಕ್ಕೂ ಆಗಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ಸ್ಟಾರ್ ಕ್ರಿಕೆಟಿಗರ ಅಲಭ್ಯತೆಯಿಂದ ಬಳಲುತ್ತಿರುವ ತಂಡಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ತಂಡದ ಯುವ ಆಟಗಾರ ರಾಬಿನ್ ಮಿಂಜ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಗುಜರಾತ್‌ ಟೈಟಾನ್ಸ್‌ ತಂಡಕ್ಕೆ ಎದುರಾಗಿರುವಷ್ಟು ಸಂಕಷ್ಟ ಮತ್ತ್ತ್ಯಾವ ತಂಡಕ್ಕೂ ಆಗಿಲ್ಲ. ಟೂರ್ನಿ ಆರಂಭಕ್ಕೂ ಮುನ್ನ ಸ್ಟಾರ್ ಕ್ರಿಕೆಟಿಗರ ಅಲಭ್ಯತೆಯಿಂದ ಬಳಲುತ್ತಿರುವ ತಂಡಕ್ಕೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ತಂಡದ ಯುವ ಆಟಗಾರ ರಾಬಿನ್ ಮಿಂಜ್ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

1 / 7
ಕೆಲವು ದಿನಗಳ ಹಿಂದೆ ಬೈಕ್ ಅಪಘಾತಕ್ಕೀಡಾಗಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಬಿನ್ ಮಿಂಜ್ ಚೇತರಿಕೆಯ ಹಾದಿಯಲ್ಲಿದ್ದರು. ಆದರೀಗ ರಾಬಿನ್ ಮಿಂಜ್ ಲಭ್ಯತೆಯ ಬಗ್ಗೆ ಮಾಹಿತಿ ನೀಡಿರುವ ತಂಡದ ಮುಖ್ಯ ಕೋಚ್ ಆಶಿಷ್ ನೆಹ್ರಾ, ರಾಬಿನ್ ಲೀಗ್​ನಿಂದ ಹೊರಬಿದ್ದಿದ್ದಾರೆ ಎಂದಿದ್ದಾರೆ.

ಕೆಲವು ದಿನಗಳ ಹಿಂದೆ ಬೈಕ್ ಅಪಘಾತಕ್ಕೀಡಾಗಿದ್ದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಾಬಿನ್ ಮಿಂಜ್ ಚೇತರಿಕೆಯ ಹಾದಿಯಲ್ಲಿದ್ದರು. ಆದರೀಗ ರಾಬಿನ್ ಮಿಂಜ್ ಲಭ್ಯತೆಯ ಬಗ್ಗೆ ಮಾಹಿತಿ ನೀಡಿರುವ ತಂಡದ ಮುಖ್ಯ ಕೋಚ್ ಆಶಿಷ್ ನೆಹ್ರಾ, ರಾಬಿನ್ ಲೀಗ್​ನಿಂದ ಹೊರಬಿದ್ದಿದ್ದಾರೆ ಎಂದಿದ್ದಾರೆ.

2 / 7
ಈ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ಗುಜರಾತ್ ಟೈಟಾನ್ಸ್ ತಂಡದ ಕೋಚ್ ಆಶಿಶ್ ನೆಹ್ರಾ, ಇದು ರಾಬಿನ್‌ ಮಿಂಜ್​ಗೆ ಚೊಚ್ಚಲ ಐಪಿಎಲ್ ಆಗಿದೆ. ಆದರೆ ದುರದೃಷ್ಟವಶಾತ್ ಅವರನ್ನು ತಂಡದಿಂದ ಕೈಬಿಡಬೇಕಾಯಿತು ಎಂದಿದ್ದಾರೆ.

ಈ ಬಗ್ಗೆ ಪಿಟಿಐ ಜೊತೆ ಮಾತನಾಡಿರುವ ಗುಜರಾತ್ ಟೈಟಾನ್ಸ್ ತಂಡದ ಕೋಚ್ ಆಶಿಶ್ ನೆಹ್ರಾ, ಇದು ರಾಬಿನ್‌ ಮಿಂಜ್​ಗೆ ಚೊಚ್ಚಲ ಐಪಿಎಲ್ ಆಗಿದೆ. ಆದರೆ ದುರದೃಷ್ಟವಶಾತ್ ಅವರನ್ನು ತಂಡದಿಂದ ಕೈಬಿಡಬೇಕಾಯಿತು ಎಂದಿದ್ದಾರೆ.

3 / 7
ಈ ಬಾರಿ ದುಬೈನಲ್ಲಿ ನಡೆದ ಮಿನಿ ಹರಾಜಿನಲ್ಲಿ ಈ ಯುವ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್​ನನ್ನು ಗುಜರಾತ್ ಟೈಟಾನ್ಸ್ ತಂಡ 3.60 ಕೋಟಿ ರೂ. ನೀಡಿ ಖರೀದಿಸಿತ್ತು. ದೇಶೀ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಾಬಿನ್​​ಗೆ ಐಪಿಎಲ್​ನ ಭಾಗ್ಯದ ಬಾಗಿಲು ತೆರೆದಿತ್ತು. ಆದರೀಗ ಐಪಿಎಲ್​ಗೆ ಪದಾರ್ಪಣೆ ಮಾಡುವ ರಾಬಿನ್ ಕನಸು ಇನ್ನು ಕನಸಾಗೆ ಉಳಿಯಲಿದೆ.

ಈ ಬಾರಿ ದುಬೈನಲ್ಲಿ ನಡೆದ ಮಿನಿ ಹರಾಜಿನಲ್ಲಿ ಈ ಯುವ ವಿಕೆಟ್​ಕೀಪರ್ ಬ್ಯಾಟ್ಸ್‌ಮನ್​ನನ್ನು ಗುಜರಾತ್ ಟೈಟಾನ್ಸ್ ತಂಡ 3.60 ಕೋಟಿ ರೂ. ನೀಡಿ ಖರೀದಿಸಿತ್ತು. ದೇಶೀ ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಾಬಿನ್​​ಗೆ ಐಪಿಎಲ್​ನ ಭಾಗ್ಯದ ಬಾಗಿಲು ತೆರೆದಿತ್ತು. ಆದರೀಗ ಐಪಿಎಲ್​ಗೆ ಪದಾರ್ಪಣೆ ಮಾಡುವ ರಾಬಿನ್ ಕನಸು ಇನ್ನು ಕನಸಾಗೆ ಉಳಿಯಲಿದೆ.

4 / 7
ರಾಬಿನ್ ಮಿಂಜ್ ತಂಡದಿಂದ ಹೊರಗುಳಿಯುವುದರ ಜೊತೆಗೆ ಗುಜರಾತ್ ತಂಡಕ್ಕೆ ಸಾಕಷ್ಟು ಹಿನ್ನಡೆಯುಂಟಾಗಿದೆ. ಏಕೆಂದರೆ ಈಗಾಗಲೇ ತಂಡ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಕಳೆದುಕೊಂಡಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಮಿ ಸದ್ಯ ಚೇತರಿಕೆಯ ಹಾದಿಯಲ್ಲಿದ್ದು, ಅವರು ಈ ಬಾರಿಯ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

ರಾಬಿನ್ ಮಿಂಜ್ ತಂಡದಿಂದ ಹೊರಗುಳಿಯುವುದರ ಜೊತೆಗೆ ಗುಜರಾತ್ ತಂಡಕ್ಕೆ ಸಾಕಷ್ಟು ಹಿನ್ನಡೆಯುಂಟಾಗಿದೆ. ಏಕೆಂದರೆ ಈಗಾಗಲೇ ತಂಡ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಕಳೆದುಕೊಂಡಿದೆ. ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಶಮಿ ಸದ್ಯ ಚೇತರಿಕೆಯ ಹಾದಿಯಲ್ಲಿದ್ದು, ಅವರು ಈ ಬಾರಿಯ ಐಪಿಎಲ್​ನಿಂದ ಹೊರಬಿದ್ದಿದ್ದಾರೆ.

5 / 7
ಅವರಲ್ಲದೆ ತಂಡದ ಅನುಭವಿ ವಿಕೆಟ್​ಕೀಪರ್ ಬ್ಯಾಟ್ಸ್​ಮನ್ ಮ್ಯಾಥ್ಯೂ ವೇಡ್​ ಕೂ ಲೀಗ್​ನ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ಇದೆ. ಇದೆಲ್ಲದ್ದಕ್ಕೂ ಮಿಗಿಲಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡಿದ್ದಾರೆ.

ಅವರಲ್ಲದೆ ತಂಡದ ಅನುಭವಿ ವಿಕೆಟ್​ಕೀಪರ್ ಬ್ಯಾಟ್ಸ್​ಮನ್ ಮ್ಯಾಥ್ಯೂ ವೇಡ್​ ಕೂ ಲೀಗ್​ನ ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ಮಾಹಿತಿ ಇದೆ. ಇದೆಲ್ಲದ್ದಕ್ಕೂ ಮಿಗಿಲಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ನಾಯಕ ಹಾರ್ದಿಕ್ ಪಾಂಡ್ಯ ಇದೀಗ ಮುಂಬೈ ಇಂಡಿಯನ್ಸ್‌ ತಂಡವನ್ನು ಸೇರಿಕೊಂಡಿದ್ದಾರೆ.

6 / 7
ಹೀಗಾಗಿ ತಂಡದ ನಾಯಕತ್ವವಹಿಸಿಕೊಂಡಿರುವ ಯುವ ಆಟಗಾರ ಶುಭ್​ಮನ್ ಗಿಲ್, ಸ್ಟಾರ್ ಆಟಗಾರರ ಅಲಭ್ಯತೆಯ ನಡುವೆ ತಂಡವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ಹೀಗಾಗಿ ತಂಡದ ನಾಯಕತ್ವವಹಿಸಿಕೊಂಡಿರುವ ಯುವ ಆಟಗಾರ ಶುಭ್​ಮನ್ ಗಿಲ್, ಸ್ಟಾರ್ ಆಟಗಾರರ ಅಲಭ್ಯತೆಯ ನಡುವೆ ತಂಡವನ್ನು ಹೇಗೆ ಮುನ್ನಡೆಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್