AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ‘ತಂಡದಿಂದ ಹೊರಗಿಡಿ’; ಧೋನಿ ವಿರುದ್ಧ ಗುಡುಗಿದ ಟರ್ಬನೇಟರ್..!

IPL 2024: ಗೆಲುವಿನ ಹೊರತಾಗಿಯೂ ಚೆನ್ನೈ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸತತ ವಿಕೆಟ್​ಗಳ ಪತನದ ನಡುವೆವೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಟರ್ಬನೇಟರ್ ಕೋಪಕ್ಕೆ ಕಾರಣವಾಗಿದೆ.

ಪೃಥ್ವಿಶಂಕರ
|

Updated on: May 06, 2024 | 6:22 PM

Share
ನಿನ್ನೆ ನಡೆದ ಐಪಿಎಲ್ 53 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 28 ರನ್​ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಗೆಲುವಿಗೆ 167 ರನ್​ಗಳ ಸಾಧಾರಣ ಗುರಿ ಪಡೆದ ಹೊರತಾಗಿಯೂ ಪಂಜಾಬ್​ಗೆ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ನಿನ್ನೆ ನಡೆದ ಐಪಿಎಲ್ 53 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 28 ರನ್​ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಗೆಲುವಿಗೆ 167 ರನ್​ಗಳ ಸಾಧಾರಣ ಗುರಿ ಪಡೆದ ಹೊರತಾಗಿಯೂ ಪಂಜಾಬ್​ಗೆ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

1 / 8
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡ ನಿಯಮಿತ ಅಂತರದಲ್ಲಿ ವಿಕೆಟ್​ ಕಳೆದುಕೊಳ್ಳುತ್ತ ಅಲ್ಪ ಮೊತ್ತ ಕಲೆಹಾಕುವ ಆತಂಕದಲ್ಲಿತ್ತು. ಆದರೆ ತಂಡದ ಪರ ಏಕಾಂಗಿಯಾಗಿ ಹೋರಾಡಿದ ರವೀಂದ್ರ ಜಡೇಜಾ ಗೆಲುವಿನ ಇನ್ನಿಂಗ್ಸ್‌ ಆಡಿದರು. ಹಾಗೆಯೇ ಬೌಲಿಂಗ್​ನಲ್ಲೂ ಕಮಾಲ್ ಮಾಡಿದರು. ಇದು ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿತು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡ ನಿಯಮಿತ ಅಂತರದಲ್ಲಿ ವಿಕೆಟ್​ ಕಳೆದುಕೊಳ್ಳುತ್ತ ಅಲ್ಪ ಮೊತ್ತ ಕಲೆಹಾಕುವ ಆತಂಕದಲ್ಲಿತ್ತು. ಆದರೆ ತಂಡದ ಪರ ಏಕಾಂಗಿಯಾಗಿ ಹೋರಾಡಿದ ರವೀಂದ್ರ ಜಡೇಜಾ ಗೆಲುವಿನ ಇನ್ನಿಂಗ್ಸ್‌ ಆಡಿದರು. ಹಾಗೆಯೇ ಬೌಲಿಂಗ್​ನಲ್ಲೂ ಕಮಾಲ್ ಮಾಡಿದರು. ಇದು ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿತು.

2 / 8
ಈ ಗೆಲುವಿನ ಹೊರತಾಗಿಯೂ ಚೆನ್ನೈ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸತತ ವಿಕೆಟ್​ಗಳ ಪತನದ ನಡುವೆವೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಟರ್ಬನೇಟರ್ ಕೋಪಕ್ಕೆ ಕಾರಣವಾಗಿದೆ.

ಈ ಗೆಲುವಿನ ಹೊರತಾಗಿಯೂ ಚೆನ್ನೈ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸತತ ವಿಕೆಟ್​ಗಳ ಪತನದ ನಡುವೆವೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಟರ್ಬನೇಟರ್ ಕೋಪಕ್ಕೆ ಕಾರಣವಾಗಿದೆ.

3 / 8
ವಾಸ್ತವವಾಗಿ ಚೆನ್ನೈ ತಂಡ 101 ರನ್​ಗಳಿಗೆ 5ನೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ಧೋನಿ ಬ್ಯಾಟಿಂಗ್​ಗೆ ಬರುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದರು. ಆದರೆ ಧೋನಿ, ಸ್ಯಾಂಟ್ನರ್ ಅವರನ್ನು ಬ್ಯಾಟಿಂಗ್​ಗೆ ಕಳುಹಿಸಿದರು. ಸ್ಯಾಂಟ್ನರ್ ಔಟಾದ ಬಳಿಕ ಶಾರ್ದೂಲ್ ಠಾಕೂರ್​ ಬ್ಯಾಟಿಂಗ್​ಗೆ ಬಂದರು.

ವಾಸ್ತವವಾಗಿ ಚೆನ್ನೈ ತಂಡ 101 ರನ್​ಗಳಿಗೆ 5ನೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ಧೋನಿ ಬ್ಯಾಟಿಂಗ್​ಗೆ ಬರುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದರು. ಆದರೆ ಧೋನಿ, ಸ್ಯಾಂಟ್ನರ್ ಅವರನ್ನು ಬ್ಯಾಟಿಂಗ್​ಗೆ ಕಳುಹಿಸಿದರು. ಸ್ಯಾಂಟ್ನರ್ ಔಟಾದ ಬಳಿಕ ಶಾರ್ದೂಲ್ ಠಾಕೂರ್​ ಬ್ಯಾಟಿಂಗ್​ಗೆ ಬಂದರು.

4 / 8
ಈ ಇಬ್ಬರು ಹೇಳಿಕೊಳ್ಳುವಂತಹ ಕೊಡುಗೆ ನೀಡಲಿಲ್ಲ. ಈ ಇಬ್ಬರ ವಿಕೆಟ್ ಪತನದ ಬಳಿಕ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದರು. ತಂಡ ಸಂಕಷ್ಟದ ಸಮಯದಲ್ಲಿದ್ದಾಗ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಹರ್ಭಜನ್​ರನ್ನು ಅಸಮಾಧಾನಗೊಳ್ಳುವಂತೆ ಮಾಡಿದೆ.

ಈ ಇಬ್ಬರು ಹೇಳಿಕೊಳ್ಳುವಂತಹ ಕೊಡುಗೆ ನೀಡಲಿಲ್ಲ. ಈ ಇಬ್ಬರ ವಿಕೆಟ್ ಪತನದ ಬಳಿಕ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದರು. ತಂಡ ಸಂಕಷ್ಟದ ಸಮಯದಲ್ಲಿದ್ದಾಗ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಹರ್ಭಜನ್​ರನ್ನು ಅಸಮಾಧಾನಗೊಳ್ಳುವಂತೆ ಮಾಡಿದೆ.

5 / 8
ಈ ಕುರಿತು ಮಾತನಾಡಿದ ಟೀಂ ಇಂಡಿಯಾದ ಮಾಜಿ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್, ಈ ಸೀಸನ್‌ನಲ್ಲಿ ಧೋನಿ ಸಿಎಸ್‌ಕೆ ಪರ ವೇಗವಾಗಿ ರನ್ ಗಳಿಸಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರ್ಧಾರ ಸರಿ ಇರಲಿಲ್ಲ. ಈ ಪಂದ್ಯದಲ್ಲಿ ಸಿಎಸ್​ಕೆ ಗೆದ್ದಿರಬಹುದು. ಆದರೆ ನಾನು ಧೋನಿ ಮಾಡಿದ್ದು ತಪ್ಪು ಎಂದೇ ಹೇಳುತ್ತೇನೆ.

ಈ ಕುರಿತು ಮಾತನಾಡಿದ ಟೀಂ ಇಂಡಿಯಾದ ಮಾಜಿ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್, ಈ ಸೀಸನ್‌ನಲ್ಲಿ ಧೋನಿ ಸಿಎಸ್‌ಕೆ ಪರ ವೇಗವಾಗಿ ರನ್ ಗಳಿಸಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರ್ಧಾರ ಸರಿ ಇರಲಿಲ್ಲ. ಈ ಪಂದ್ಯದಲ್ಲಿ ಸಿಎಸ್​ಕೆ ಗೆದ್ದಿರಬಹುದು. ಆದರೆ ನಾನು ಧೋನಿ ಮಾಡಿದ್ದು ತಪ್ಪು ಎಂದೇ ಹೇಳುತ್ತೇನೆ.

6 / 8
ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾದರೆ ಅವರು ಇನ್ನು ಮುಂದೆ ತಂಡದಲ್ಲಿ ಆಡಬಾರದು. ಅವರ ಬದಲಿಗೆ ಸಿಎಸ್‌ಕೆ ಫ್ರಾಂಚೈಸಿ ವೇಗದ ಬೌಲರ್​ನನ್ನು ಆಡಿಸಬೇಕು ಎಂದು ಭಜ್ಜಿ ಹೇಳಿದ್ದಾರೆ.

ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾದರೆ ಅವರು ಇನ್ನು ಮುಂದೆ ತಂಡದಲ್ಲಿ ಆಡಬಾರದು. ಅವರ ಬದಲಿಗೆ ಸಿಎಸ್‌ಕೆ ಫ್ರಾಂಚೈಸಿ ವೇಗದ ಬೌಲರ್​ನನ್ನು ಆಡಿಸಬೇಕು ಎಂದು ಭಜ್ಜಿ ಹೇಳಿದ್ದಾರೆ.

7 / 8
ಇನ್ನು ಪಂಜಾಬ್ ವಿರುದ್ಧ ಮೊದಲ ಬಾರಿಗೆ ಧೋನಿ 9 ನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಬಂದರೂ ವಿಶೇಷವಾದುದ್ದು ಏನನ್ನು ಮಾಡಲು ಸಾಧ್ಯವಾಗಲಿಲ್ಲ. ಹರ್ಷಲ್ ಪಟೇಲ್ ಎಸೆದ ಮೊದಲ ಎಸೆತದಲ್ಲಿ ಮಹಿ ಔಟಾದರು.

ಇನ್ನು ಪಂಜಾಬ್ ವಿರುದ್ಧ ಮೊದಲ ಬಾರಿಗೆ ಧೋನಿ 9 ನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಬಂದರೂ ವಿಶೇಷವಾದುದ್ದು ಏನನ್ನು ಮಾಡಲು ಸಾಧ್ಯವಾಗಲಿಲ್ಲ. ಹರ್ಷಲ್ ಪಟೇಲ್ ಎಸೆದ ಮೊದಲ ಎಸೆತದಲ್ಲಿ ಮಹಿ ಔಟಾದರು.

8 / 8
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ