AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ‘ತಂಡದಿಂದ ಹೊರಗಿಡಿ’; ಧೋನಿ ವಿರುದ್ಧ ಗುಡುಗಿದ ಟರ್ಬನೇಟರ್..!

IPL 2024: ಗೆಲುವಿನ ಹೊರತಾಗಿಯೂ ಚೆನ್ನೈ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸತತ ವಿಕೆಟ್​ಗಳ ಪತನದ ನಡುವೆವೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಟರ್ಬನೇಟರ್ ಕೋಪಕ್ಕೆ ಕಾರಣವಾಗಿದೆ.

ಪೃಥ್ವಿಶಂಕರ
|

Updated on: May 06, 2024 | 6:22 PM

Share
ನಿನ್ನೆ ನಡೆದ ಐಪಿಎಲ್ 53 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 28 ರನ್​ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಗೆಲುವಿಗೆ 167 ರನ್​ಗಳ ಸಾಧಾರಣ ಗುರಿ ಪಡೆದ ಹೊರತಾಗಿಯೂ ಪಂಜಾಬ್​ಗೆ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ನಿನ್ನೆ ನಡೆದ ಐಪಿಎಲ್ 53 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 28 ರನ್​ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಗೆಲುವಿಗೆ 167 ರನ್​ಗಳ ಸಾಧಾರಣ ಗುರಿ ಪಡೆದ ಹೊರತಾಗಿಯೂ ಪಂಜಾಬ್​ಗೆ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

1 / 8
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡ ನಿಯಮಿತ ಅಂತರದಲ್ಲಿ ವಿಕೆಟ್​ ಕಳೆದುಕೊಳ್ಳುತ್ತ ಅಲ್ಪ ಮೊತ್ತ ಕಲೆಹಾಕುವ ಆತಂಕದಲ್ಲಿತ್ತು. ಆದರೆ ತಂಡದ ಪರ ಏಕಾಂಗಿಯಾಗಿ ಹೋರಾಡಿದ ರವೀಂದ್ರ ಜಡೇಜಾ ಗೆಲುವಿನ ಇನ್ನಿಂಗ್ಸ್‌ ಆಡಿದರು. ಹಾಗೆಯೇ ಬೌಲಿಂಗ್​ನಲ್ಲೂ ಕಮಾಲ್ ಮಾಡಿದರು. ಇದು ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿತು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡ ನಿಯಮಿತ ಅಂತರದಲ್ಲಿ ವಿಕೆಟ್​ ಕಳೆದುಕೊಳ್ಳುತ್ತ ಅಲ್ಪ ಮೊತ್ತ ಕಲೆಹಾಕುವ ಆತಂಕದಲ್ಲಿತ್ತು. ಆದರೆ ತಂಡದ ಪರ ಏಕಾಂಗಿಯಾಗಿ ಹೋರಾಡಿದ ರವೀಂದ್ರ ಜಡೇಜಾ ಗೆಲುವಿನ ಇನ್ನಿಂಗ್ಸ್‌ ಆಡಿದರು. ಹಾಗೆಯೇ ಬೌಲಿಂಗ್​ನಲ್ಲೂ ಕಮಾಲ್ ಮಾಡಿದರು. ಇದು ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿತು.

2 / 8
ಈ ಗೆಲುವಿನ ಹೊರತಾಗಿಯೂ ಚೆನ್ನೈ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸತತ ವಿಕೆಟ್​ಗಳ ಪತನದ ನಡುವೆವೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಟರ್ಬನೇಟರ್ ಕೋಪಕ್ಕೆ ಕಾರಣವಾಗಿದೆ.

ಈ ಗೆಲುವಿನ ಹೊರತಾಗಿಯೂ ಚೆನ್ನೈ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸತತ ವಿಕೆಟ್​ಗಳ ಪತನದ ನಡುವೆವೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಟರ್ಬನೇಟರ್ ಕೋಪಕ್ಕೆ ಕಾರಣವಾಗಿದೆ.

3 / 8
ವಾಸ್ತವವಾಗಿ ಚೆನ್ನೈ ತಂಡ 101 ರನ್​ಗಳಿಗೆ 5ನೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ಧೋನಿ ಬ್ಯಾಟಿಂಗ್​ಗೆ ಬರುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದರು. ಆದರೆ ಧೋನಿ, ಸ್ಯಾಂಟ್ನರ್ ಅವರನ್ನು ಬ್ಯಾಟಿಂಗ್​ಗೆ ಕಳುಹಿಸಿದರು. ಸ್ಯಾಂಟ್ನರ್ ಔಟಾದ ಬಳಿಕ ಶಾರ್ದೂಲ್ ಠಾಕೂರ್​ ಬ್ಯಾಟಿಂಗ್​ಗೆ ಬಂದರು.

ವಾಸ್ತವವಾಗಿ ಚೆನ್ನೈ ತಂಡ 101 ರನ್​ಗಳಿಗೆ 5ನೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ಧೋನಿ ಬ್ಯಾಟಿಂಗ್​ಗೆ ಬರುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದರು. ಆದರೆ ಧೋನಿ, ಸ್ಯಾಂಟ್ನರ್ ಅವರನ್ನು ಬ್ಯಾಟಿಂಗ್​ಗೆ ಕಳುಹಿಸಿದರು. ಸ್ಯಾಂಟ್ನರ್ ಔಟಾದ ಬಳಿಕ ಶಾರ್ದೂಲ್ ಠಾಕೂರ್​ ಬ್ಯಾಟಿಂಗ್​ಗೆ ಬಂದರು.

4 / 8
ಈ ಇಬ್ಬರು ಹೇಳಿಕೊಳ್ಳುವಂತಹ ಕೊಡುಗೆ ನೀಡಲಿಲ್ಲ. ಈ ಇಬ್ಬರ ವಿಕೆಟ್ ಪತನದ ಬಳಿಕ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದರು. ತಂಡ ಸಂಕಷ್ಟದ ಸಮಯದಲ್ಲಿದ್ದಾಗ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಹರ್ಭಜನ್​ರನ್ನು ಅಸಮಾಧಾನಗೊಳ್ಳುವಂತೆ ಮಾಡಿದೆ.

ಈ ಇಬ್ಬರು ಹೇಳಿಕೊಳ್ಳುವಂತಹ ಕೊಡುಗೆ ನೀಡಲಿಲ್ಲ. ಈ ಇಬ್ಬರ ವಿಕೆಟ್ ಪತನದ ಬಳಿಕ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದರು. ತಂಡ ಸಂಕಷ್ಟದ ಸಮಯದಲ್ಲಿದ್ದಾಗ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಹರ್ಭಜನ್​ರನ್ನು ಅಸಮಾಧಾನಗೊಳ್ಳುವಂತೆ ಮಾಡಿದೆ.

5 / 8
ಈ ಕುರಿತು ಮಾತನಾಡಿದ ಟೀಂ ಇಂಡಿಯಾದ ಮಾಜಿ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್, ಈ ಸೀಸನ್‌ನಲ್ಲಿ ಧೋನಿ ಸಿಎಸ್‌ಕೆ ಪರ ವೇಗವಾಗಿ ರನ್ ಗಳಿಸಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರ್ಧಾರ ಸರಿ ಇರಲಿಲ್ಲ. ಈ ಪಂದ್ಯದಲ್ಲಿ ಸಿಎಸ್​ಕೆ ಗೆದ್ದಿರಬಹುದು. ಆದರೆ ನಾನು ಧೋನಿ ಮಾಡಿದ್ದು ತಪ್ಪು ಎಂದೇ ಹೇಳುತ್ತೇನೆ.

ಈ ಕುರಿತು ಮಾತನಾಡಿದ ಟೀಂ ಇಂಡಿಯಾದ ಮಾಜಿ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್, ಈ ಸೀಸನ್‌ನಲ್ಲಿ ಧೋನಿ ಸಿಎಸ್‌ಕೆ ಪರ ವೇಗವಾಗಿ ರನ್ ಗಳಿಸಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರ್ಧಾರ ಸರಿ ಇರಲಿಲ್ಲ. ಈ ಪಂದ್ಯದಲ್ಲಿ ಸಿಎಸ್​ಕೆ ಗೆದ್ದಿರಬಹುದು. ಆದರೆ ನಾನು ಧೋನಿ ಮಾಡಿದ್ದು ತಪ್ಪು ಎಂದೇ ಹೇಳುತ್ತೇನೆ.

6 / 8
ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾದರೆ ಅವರು ಇನ್ನು ಮುಂದೆ ತಂಡದಲ್ಲಿ ಆಡಬಾರದು. ಅವರ ಬದಲಿಗೆ ಸಿಎಸ್‌ಕೆ ಫ್ರಾಂಚೈಸಿ ವೇಗದ ಬೌಲರ್​ನನ್ನು ಆಡಿಸಬೇಕು ಎಂದು ಭಜ್ಜಿ ಹೇಳಿದ್ದಾರೆ.

ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾದರೆ ಅವರು ಇನ್ನು ಮುಂದೆ ತಂಡದಲ್ಲಿ ಆಡಬಾರದು. ಅವರ ಬದಲಿಗೆ ಸಿಎಸ್‌ಕೆ ಫ್ರಾಂಚೈಸಿ ವೇಗದ ಬೌಲರ್​ನನ್ನು ಆಡಿಸಬೇಕು ಎಂದು ಭಜ್ಜಿ ಹೇಳಿದ್ದಾರೆ.

7 / 8
ಇನ್ನು ಪಂಜಾಬ್ ವಿರುದ್ಧ ಮೊದಲ ಬಾರಿಗೆ ಧೋನಿ 9 ನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಬಂದರೂ ವಿಶೇಷವಾದುದ್ದು ಏನನ್ನು ಮಾಡಲು ಸಾಧ್ಯವಾಗಲಿಲ್ಲ. ಹರ್ಷಲ್ ಪಟೇಲ್ ಎಸೆದ ಮೊದಲ ಎಸೆತದಲ್ಲಿ ಮಹಿ ಔಟಾದರು.

ಇನ್ನು ಪಂಜಾಬ್ ವಿರುದ್ಧ ಮೊದಲ ಬಾರಿಗೆ ಧೋನಿ 9 ನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಬಂದರೂ ವಿಶೇಷವಾದುದ್ದು ಏನನ್ನು ಮಾಡಲು ಸಾಧ್ಯವಾಗಲಿಲ್ಲ. ಹರ್ಷಲ್ ಪಟೇಲ್ ಎಸೆದ ಮೊದಲ ಎಸೆತದಲ್ಲಿ ಮಹಿ ಔಟಾದರು.

8 / 8
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ