AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ‘ತಂಡದಿಂದ ಹೊರಗಿಡಿ’; ಧೋನಿ ವಿರುದ್ಧ ಗುಡುಗಿದ ಟರ್ಬನೇಟರ್..!

IPL 2024: ಗೆಲುವಿನ ಹೊರತಾಗಿಯೂ ಚೆನ್ನೈ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸತತ ವಿಕೆಟ್​ಗಳ ಪತನದ ನಡುವೆವೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಟರ್ಬನೇಟರ್ ಕೋಪಕ್ಕೆ ಕಾರಣವಾಗಿದೆ.

ಪೃಥ್ವಿಶಂಕರ
|

Updated on: May 06, 2024 | 6:22 PM

Share
ನಿನ್ನೆ ನಡೆದ ಐಪಿಎಲ್ 53 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 28 ರನ್​ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಗೆಲುವಿಗೆ 167 ರನ್​ಗಳ ಸಾಧಾರಣ ಗುರಿ ಪಡೆದ ಹೊರತಾಗಿಯೂ ಪಂಜಾಬ್​ಗೆ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ನಿನ್ನೆ ನಡೆದ ಐಪಿಎಲ್ 53 ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 28 ರನ್​ಗಳಿಂದ ಮಣಿಸಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಗೆಲುವಿಗೆ 167 ರನ್​ಗಳ ಸಾಧಾರಣ ಗುರಿ ಪಡೆದ ಹೊರತಾಗಿಯೂ ಪಂಜಾಬ್​ಗೆ ಗೆಲುವು ದಕ್ಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.

1 / 8
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡ ನಿಯಮಿತ ಅಂತರದಲ್ಲಿ ವಿಕೆಟ್​ ಕಳೆದುಕೊಳ್ಳುತ್ತ ಅಲ್ಪ ಮೊತ್ತ ಕಲೆಹಾಕುವ ಆತಂಕದಲ್ಲಿತ್ತು. ಆದರೆ ತಂಡದ ಪರ ಏಕಾಂಗಿಯಾಗಿ ಹೋರಾಡಿದ ರವೀಂದ್ರ ಜಡೇಜಾ ಗೆಲುವಿನ ಇನ್ನಿಂಗ್ಸ್‌ ಆಡಿದರು. ಹಾಗೆಯೇ ಬೌಲಿಂಗ್​ನಲ್ಲೂ ಕಮಾಲ್ ಮಾಡಿದರು. ಇದು ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿತು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸಿಎಸ್​ಕೆ ತಂಡ ನಿಯಮಿತ ಅಂತರದಲ್ಲಿ ವಿಕೆಟ್​ ಕಳೆದುಕೊಳ್ಳುತ್ತ ಅಲ್ಪ ಮೊತ್ತ ಕಲೆಹಾಕುವ ಆತಂಕದಲ್ಲಿತ್ತು. ಆದರೆ ತಂಡದ ಪರ ಏಕಾಂಗಿಯಾಗಿ ಹೋರಾಡಿದ ರವೀಂದ್ರ ಜಡೇಜಾ ಗೆಲುವಿನ ಇನ್ನಿಂಗ್ಸ್‌ ಆಡಿದರು. ಹಾಗೆಯೇ ಬೌಲಿಂಗ್​ನಲ್ಲೂ ಕಮಾಲ್ ಮಾಡಿದರು. ಇದು ಚೆನ್ನೈ ತಂಡವನ್ನು ಗೆಲುವಿನ ದಡ ಸೇರಿತು.

2 / 8
ಈ ಗೆಲುವಿನ ಹೊರತಾಗಿಯೂ ಚೆನ್ನೈ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸತತ ವಿಕೆಟ್​ಗಳ ಪತನದ ನಡುವೆವೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಟರ್ಬನೇಟರ್ ಕೋಪಕ್ಕೆ ಕಾರಣವಾಗಿದೆ.

ಈ ಗೆಲುವಿನ ಹೊರತಾಗಿಯೂ ಚೆನ್ನೈ ತಂಡದ ಮಾಜಿ ನಾಯಕ ಎಂಎಸ್ ಧೋನಿ ವಿರುದ್ಧ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ. ಸತತ ವಿಕೆಟ್​ಗಳ ಪತನದ ನಡುವೆವೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಟರ್ಬನೇಟರ್ ಕೋಪಕ್ಕೆ ಕಾರಣವಾಗಿದೆ.

3 / 8
ವಾಸ್ತವವಾಗಿ ಚೆನ್ನೈ ತಂಡ 101 ರನ್​ಗಳಿಗೆ 5ನೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ಧೋನಿ ಬ್ಯಾಟಿಂಗ್​ಗೆ ಬರುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದರು. ಆದರೆ ಧೋನಿ, ಸ್ಯಾಂಟ್ನರ್ ಅವರನ್ನು ಬ್ಯಾಟಿಂಗ್​ಗೆ ಕಳುಹಿಸಿದರು. ಸ್ಯಾಂಟ್ನರ್ ಔಟಾದ ಬಳಿಕ ಶಾರ್ದೂಲ್ ಠಾಕೂರ್​ ಬ್ಯಾಟಿಂಗ್​ಗೆ ಬಂದರು.

ವಾಸ್ತವವಾಗಿ ಚೆನ್ನೈ ತಂಡ 101 ರನ್​ಗಳಿಗೆ 5ನೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ಧೋನಿ ಬ್ಯಾಟಿಂಗ್​ಗೆ ಬರುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದರು. ಆದರೆ ಧೋನಿ, ಸ್ಯಾಂಟ್ನರ್ ಅವರನ್ನು ಬ್ಯಾಟಿಂಗ್​ಗೆ ಕಳುಹಿಸಿದರು. ಸ್ಯಾಂಟ್ನರ್ ಔಟಾದ ಬಳಿಕ ಶಾರ್ದೂಲ್ ಠಾಕೂರ್​ ಬ್ಯಾಟಿಂಗ್​ಗೆ ಬಂದರು.

4 / 8
ಈ ಇಬ್ಬರು ಹೇಳಿಕೊಳ್ಳುವಂತಹ ಕೊಡುಗೆ ನೀಡಲಿಲ್ಲ. ಈ ಇಬ್ಬರ ವಿಕೆಟ್ ಪತನದ ಬಳಿಕ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದರು. ತಂಡ ಸಂಕಷ್ಟದ ಸಮಯದಲ್ಲಿದ್ದಾಗ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಹರ್ಭಜನ್​ರನ್ನು ಅಸಮಾಧಾನಗೊಳ್ಳುವಂತೆ ಮಾಡಿದೆ.

ಈ ಇಬ್ಬರು ಹೇಳಿಕೊಳ್ಳುವಂತಹ ಕೊಡುಗೆ ನೀಡಲಿಲ್ಲ. ಈ ಇಬ್ಬರ ವಿಕೆಟ್ ಪತನದ ಬಳಿಕ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದರು. ತಂಡ ಸಂಕಷ್ಟದ ಸಮಯದಲ್ಲಿದ್ದಾಗ ಧೋನಿ ಮೇಲಿನ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬರದಿರುವುದು ಹರ್ಭಜನ್​ರನ್ನು ಅಸಮಾಧಾನಗೊಳ್ಳುವಂತೆ ಮಾಡಿದೆ.

5 / 8
ಈ ಕುರಿತು ಮಾತನಾಡಿದ ಟೀಂ ಇಂಡಿಯಾದ ಮಾಜಿ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್, ಈ ಸೀಸನ್‌ನಲ್ಲಿ ಧೋನಿ ಸಿಎಸ್‌ಕೆ ಪರ ವೇಗವಾಗಿ ರನ್ ಗಳಿಸಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರ್ಧಾರ ಸರಿ ಇರಲಿಲ್ಲ. ಈ ಪಂದ್ಯದಲ್ಲಿ ಸಿಎಸ್​ಕೆ ಗೆದ್ದಿರಬಹುದು. ಆದರೆ ನಾನು ಧೋನಿ ಮಾಡಿದ್ದು ತಪ್ಪು ಎಂದೇ ಹೇಳುತ್ತೇನೆ.

ಈ ಕುರಿತು ಮಾತನಾಡಿದ ಟೀಂ ಇಂಡಿಯಾದ ಮಾಜಿ ಸ್ಪಿನ್ ಬೌಲರ್ ಹರ್ಭಜನ್ ಸಿಂಗ್, ಈ ಸೀಸನ್‌ನಲ್ಲಿ ಧೋನಿ ಸಿಎಸ್‌ಕೆ ಪರ ವೇಗವಾಗಿ ರನ್ ಗಳಿಸಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರ್ಧಾರ ಸರಿ ಇರಲಿಲ್ಲ. ಈ ಪಂದ್ಯದಲ್ಲಿ ಸಿಎಸ್​ಕೆ ಗೆದ್ದಿರಬಹುದು. ಆದರೆ ನಾನು ಧೋನಿ ಮಾಡಿದ್ದು ತಪ್ಪು ಎಂದೇ ಹೇಳುತ್ತೇನೆ.

6 / 8
ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾದರೆ ಅವರು ಇನ್ನು ಮುಂದೆ ತಂಡದಲ್ಲಿ ಆಡಬಾರದು. ಅವರ ಬದಲಿಗೆ ಸಿಎಸ್‌ಕೆ ಫ್ರಾಂಚೈಸಿ ವೇಗದ ಬೌಲರ್​ನನ್ನು ಆಡಿಸಬೇಕು ಎಂದು ಭಜ್ಜಿ ಹೇಳಿದ್ದಾರೆ.

ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಾದರೆ ಅವರು ಇನ್ನು ಮುಂದೆ ತಂಡದಲ್ಲಿ ಆಡಬಾರದು. ಅವರ ಬದಲಿಗೆ ಸಿಎಸ್‌ಕೆ ಫ್ರಾಂಚೈಸಿ ವೇಗದ ಬೌಲರ್​ನನ್ನು ಆಡಿಸಬೇಕು ಎಂದು ಭಜ್ಜಿ ಹೇಳಿದ್ದಾರೆ.

7 / 8
ಇನ್ನು ಪಂಜಾಬ್ ವಿರುದ್ಧ ಮೊದಲ ಬಾರಿಗೆ ಧೋನಿ 9 ನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಬಂದರೂ ವಿಶೇಷವಾದುದ್ದು ಏನನ್ನು ಮಾಡಲು ಸಾಧ್ಯವಾಗಲಿಲ್ಲ. ಹರ್ಷಲ್ ಪಟೇಲ್ ಎಸೆದ ಮೊದಲ ಎಸೆತದಲ್ಲಿ ಮಹಿ ಔಟಾದರು.

ಇನ್ನು ಪಂಜಾಬ್ ವಿರುದ್ಧ ಮೊದಲ ಬಾರಿಗೆ ಧೋನಿ 9 ನೇ ಸ್ಥಾನದಲ್ಲಿ ಬ್ಯಾಟಿಂಗ್‌ಗೆ ಬಂದರೂ ವಿಶೇಷವಾದುದ್ದು ಏನನ್ನು ಮಾಡಲು ಸಾಧ್ಯವಾಗಲಿಲ್ಲ. ಹರ್ಷಲ್ ಪಟೇಲ್ ಎಸೆದ ಮೊದಲ ಎಸೆತದಲ್ಲಿ ಮಹಿ ಔಟಾದರು.

8 / 8
Follow Us
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಕಬ್ಬಿನ ತೋಟದಲ್ಲಿ 4 ಚಿರತೆ ಮರಿಗಳು
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 FIR: 8 ಮಂದಿ ಪೊಲೀಸ್ ವಶಕ್ಕೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಹಯಗ್ರೀವ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
6 ಬಾರಿ ಅಂಬಾರಿ ಹೊತ್ತು ನಿವೃತ್ತಿಯಾದ ಅಭಿಮನ್ಯುಗೆ ಮತ್ತೊಂದು ಹೊಣೆಗಾರಿಕೆ?
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
ಸಿಎಂ ಡಿಕೆ ಶಿವಕುಮಾರ್ ದಿಢೀರ್ ಸುದ್ದಿಗೋಷ್ಠಿಯ ನೇರಪ್ರಸಾರ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ
‘ಟಾಕ್ಸಿಕ್’ ಅದ್ದೂರಿ ರಿಲೀಸ್; ತುಮಕೂರಿನಲ್ಲೂ ಯಶ್ ಫ್ಯಾನ್ಸ್ ಸಂಭ್ರಮ