AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪಂಜಾಬ್ ಕಿಂಗ್ಸ್ ತಂಡಕ್ಕೆ ಹೊಸ ನಾಯಕ ಆಯ್ಕೆ

IPL 2024: ಈ ಬಾರಿಯ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್ ತಂಡವು 13 ಪಂದ್ಯಗಳನ್ನಾಡಿದೆ. ಇದೀಗ ಲೀಗ್ ಹಂತದ ಕೊನೆಯ ಪಂದ್ಯಕ್ಕೆ ಪ್ರಮುಖ ಆಟಗಾರರು ಅಲಭ್ಯರಾಗಿದ್ದಾರೆ. ಹೀಗಾಗಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯಕ್ಕಾಗಿ ಹೊಸ ನಾಯಕನನ್ನು ಆಯ್ಕೆ ಮಾಡಿದೆ.

ಝಾಹಿರ್ ಯೂಸುಫ್
|

Updated on:May 19, 2024 | 2:21 PM

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ಇಂದು (ಮೇ 19) ಮಧ್ಯಾಹ್ನ ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) ತನ್ನ ಕೊನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯಲಿದೆ. ಇಂದು (ಮೇ 19) ಮಧ್ಯಾಹ್ನ ಹೈದರಾಬಾದ್​ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.

1 / 5
ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಭುಜದ ಗಾಯದ ಕಾರಣ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇನ್ನು ಹಂಗಾಮಿ ನಾಯಕರಾಗಿದ್ದ ಸ್ಯಾಮ್ ಕರನ್ ಅಂತಾರಾಷ್ಟ್ರೀಯ ಪಂದ್ಯವಾಡಲು ಇಂಗ್ಲೆಂಡ್​ಗೆ ಮರಳಿದ್ದಾರೆ. ಹೀಗಾಗಿ ಬದಲಿ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಪಂಜಾಬ್ ಕಿಂಗ್ಸ್ ಮುಂದಿತ್ತು.

ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್ ಭುಜದ ಗಾಯದ ಕಾರಣ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಇನ್ನು ಹಂಗಾಮಿ ನಾಯಕರಾಗಿದ್ದ ಸ್ಯಾಮ್ ಕರನ್ ಅಂತಾರಾಷ್ಟ್ರೀಯ ಪಂದ್ಯವಾಡಲು ಇಂಗ್ಲೆಂಡ್​ಗೆ ಮರಳಿದ್ದಾರೆ. ಹೀಗಾಗಿ ಬದಲಿ ನಾಯಕನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಪಂಜಾಬ್ ಕಿಂಗ್ಸ್ ಮುಂದಿತ್ತು.

2 / 5
ಅದರಂತೆ ಇದೀಗ 30 ವರ್ಷದ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಪಂಜಾಬ್ ಕಿಂಗ್ಸ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ 16ನೇ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೂ ಜಿತೇಶ್ ಶರ್ಮಾ ಪಾತ್ರರಾಗಲಿದ್ದಾರೆ.

ಅದರಂತೆ ಇದೀಗ 30 ವರ್ಷದ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಪಂಜಾಬ್ ಕಿಂಗ್ಸ್ ತಂಡದ ನೂತನ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ 16ನೇ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೂ ಜಿತೇಶ್ ಶರ್ಮಾ ಪಾತ್ರರಾಗಲಿದ್ದಾರೆ.

3 / 5
ಈ ಬಾರಿಯ ಐಪಿಎಲ್​ನಲ್ಲಿ 13 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ ತಂಡವು 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು 8 ಪಂದ್ಯಗಳಲ್ಲಿ ಸೋಲನುಭವಿಸಿರುವ ಕಿಂಗ್ಸ್ ಪಡೆ ತನ್ನ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್​ನಲ್ಲಿ ಪಂಜಾಬ್ ಕಿಂಗ್ಸ್ ಸೋತರೆ 9ನೇ ಸ್ಥಾನದಿಂದ 10ನೇ ಸ್ಥಾನಕ್ಕೆ ಕುಸಿಯಲಿದೆ.

ಈ ಬಾರಿಯ ಐಪಿಎಲ್​ನಲ್ಲಿ 13 ಪಂದ್ಯಗಳನ್ನಾಡಿರುವ ಪಂಜಾಬ್ ಕಿಂಗ್ಸ್ ತಂಡವು 5 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು 8 ಪಂದ್ಯಗಳಲ್ಲಿ ಸೋಲನುಭವಿಸಿರುವ ಕಿಂಗ್ಸ್ ಪಡೆ ತನ್ನ ಕೊನೆಯ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಮ್ಯಾಚ್​ನಲ್ಲಿ ಪಂಜಾಬ್ ಕಿಂಗ್ಸ್ ಸೋತರೆ 9ನೇ ಸ್ಥಾನದಿಂದ 10ನೇ ಸ್ಥಾನಕ್ಕೆ ಕುಸಿಯಲಿದೆ.

4 / 5
ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ 9ನೇ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸುವ ಇರಾದೆಯಲ್ಲಿದೆ ಪಂಜಾಬ್ ಕಿಂಗ್ಸ್ ತಂಡ. ಅದರಂತೆ ಚೊಚ್ಚಲ ಬಾರಿ ನಾಯಕನಾಗಿ ಕಣಕ್ಕಿಳಿಯುತ್ತಿರುವ ಜಿತೇಶ್ ಶರ್ಮಾ ಗೆಲುವಿನ ನಗೆ ಬೀರಲಿದ್ದಾರಾ ಕಾದು ನೋಡಬೇಕಿದೆ.

ಹೀಗಾಗಿ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ 9ನೇ ಸ್ಥಾನದೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸುವ ಇರಾದೆಯಲ್ಲಿದೆ ಪಂಜಾಬ್ ಕಿಂಗ್ಸ್ ತಂಡ. ಅದರಂತೆ ಚೊಚ್ಚಲ ಬಾರಿ ನಾಯಕನಾಗಿ ಕಣಕ್ಕಿಳಿಯುತ್ತಿರುವ ಜಿತೇಶ್ ಶರ್ಮಾ ಗೆಲುವಿನ ನಗೆ ಬೀರಲಿದ್ದಾರಾ ಕಾದು ನೋಡಬೇಕಿದೆ.

5 / 5

Published On - 11:31 am, Sun, 19 May 24

Follow us
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
ಕೇದಾರನಾಥದಲ್ಲಿ ಯುವಕರ ಹಾಡು, ಡ್ಯಾನ್ಸ್; ಯುವಕರ ವಿರುದ್ಧ ಕೇಸ್ ದಾಖಲು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
800 ಕಿ.ಮೀ. ನಾಶ; ಇದು ಭಾರತದ ಮಿಲಿಟರಿಯ ಬ್ರಹ್ಮೋಸ್ ಕ್ಷಿಪಣಿಯ ತಾಕತ್ತು
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
OMC Mining Case, ಜನಾರ್ದನ್​ ರೆಡ್ಡಿಗೆ ಜಾಮೀನು ಸಿಗುವ ಸಾಧ್ಯತೆ: ವಕೀಲ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಬೆಂಗಳೂರಿನ 35 ಭಾಗಗಳಲ್ಲಿ ಸೈರನ್ ಅಳವಡಿಕೆ, 32 ಕಾರ್ಯ ನಿರ್ವಹಿಸಲಿವೆ
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ಮಹಿಳೆ ವಿಚಾರಕ್ಕೆ ನಡೆಯಿತಾ ಮೈಸೂರಿನ ಕಾರ್ತಿಕ್​ ಕೊಲೆ? SP ಹೇಳಿದ್ದಿಷ್ಟು
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ನನ್ನ ಪತಿಯನ್ನು ಕೊಂದವರ ಎನ್ಕೌಂಟರ್ ಆಗಬೇಕು: ಶೃತಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ರಾಜ್ಯ ಸರ್ಕಾರಕ್ಕೆ ಸೋರಿಕೆ ಇಲ್ಲದೆ ಒಂದು ಪರೀಕ್ಷೆಯನ್ನೂ ನಡೆಸಲಾಗಲ್ಲ: ರವಿ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಬ್ಲ್ಯಾಂಕ್ ಲೆಟರ್ ಹೆಡ್ ಯತ್ನಾಳ್​ಗೆ ಕೊಡುತ್ತೇನೆ, ಅವರೇ ಬರೆಯಲಿ: ಶಿವಾನಂದ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ
ಭಾರತದ ಯುದ್ಧ ತಯಾರಿ ಕಂಡು ಪತರುಗುಟ್ಟಿದೆ ಪಾಕಿಸ್ತಾನ