AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಕಿಂಗ್ ಕೊಹ್ಲಿಯ ನಂತರದ ಸ್ಥಾನದಲ್ಲಿ ರಾಹುಲ್ ದ್ರಾವಿಡ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಶುಕ್ರವಾರದಿಂದ (ಮಾ.22) ಶುರುವಾಗಲಿರುವ ಐಪಿಎಲ್​ನ 17ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕಣಕ್ಕಿಳಿಯಲಿರುವುದು ವಿಶೇಷ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆರ್​ಸಿಬಿ-ಸಿಎಸ್​ಕೆ ತಂಡಗಳು ಮುಖಾಮುಖಿಯಾಗಲಿದೆ.

TV9 Web
| Edited By: |

Updated on: Mar 21, 2024 | 11:24 AM

Share
ಇಂಡಿಯನ್ ಪ್ರೀಮಿಯರ್ ಲೀಗ್ 16 ಸೀಸನ್ ಮುಗಿದು, ಇದೀಗ 17ನೇ ಸೀಸನ್ ಆರಂಭದ ಹೊಸ್ತಿಲಲ್ಲಿದ್ದೇವೆ. ಕಳೆದ ಹದಿನಾರು ಸೀಸನ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪರ ಅತಿರಥ ಮಹಾರಥರಂತಹ ಆಟಗಾರರು ಕಣಕ್ಕಿಳಿದಿದ್ದಾರೆ. ಈ ಆಟಗಾರರಲ್ಲಿ ಭಾರತದ ಕೆಲ ಲೆಜೆಂಡ್ಸ್ ಕ್ರಿಕೆಟಿಗರು ಕೂಡ ಸೇರಿದ್ದಾರೆ. ಆದರೆ ಅವರಲ್ಲಿ ಸಾವಿರ ರನ್​ಗಳ ಗಡಿದಾಟಿದ್ದು ಕೇವಲ ಇಬ್ಬರು ಆಟಗಾರರು ಎಂದರೆ ನಂಬಲೇಬೇಕು.

ಇಂಡಿಯನ್ ಪ್ರೀಮಿಯರ್ ಲೀಗ್ 16 ಸೀಸನ್ ಮುಗಿದು, ಇದೀಗ 17ನೇ ಸೀಸನ್ ಆರಂಭದ ಹೊಸ್ತಿಲಲ್ಲಿದ್ದೇವೆ. ಕಳೆದ ಹದಿನಾರು ಸೀಸನ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪರ ಅತಿರಥ ಮಹಾರಥರಂತಹ ಆಟಗಾರರು ಕಣಕ್ಕಿಳಿದಿದ್ದಾರೆ. ಈ ಆಟಗಾರರಲ್ಲಿ ಭಾರತದ ಕೆಲ ಲೆಜೆಂಡ್ಸ್ ಕ್ರಿಕೆಟಿಗರು ಕೂಡ ಸೇರಿದ್ದಾರೆ. ಆದರೆ ಅವರಲ್ಲಿ ಸಾವಿರ ರನ್​ಗಳ ಗಡಿದಾಟಿದ್ದು ಕೇವಲ ಇಬ್ಬರು ಆಟಗಾರರು ಎಂದರೆ ನಂಬಲೇಬೇಕು.

1 / 6
ಅಂದರೆ ಆರ್​ಸಿಬಿ ಪರ ಕಣಕ್ಕಿಳಿದು ಅತ್ಯಧಿಕ ರನ್ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ಆರ್​ಸಿಬಿ ಪರ ಆಡಿದ ಆಟಗಾರರಲ್ಲಿ 1000 ಕ್ಕೂ ಅಧಿಕ ರನ್ ಕಲೆಹಾಕಿರುವುದು ರಾಹುಲ್ ದ್ರಾವಿಡ್ ಮಾತ್ರ. ಉಳಿದ ಯಾವುದೇ ಭಾರತೀಯ ಬ್ಯಾಟರ್​ಗಳು ಆರ್​ಸಿಬಿ ಪರ ಮಿಂಚಿಲ್ಲ ಎಂಬುದೇ ಅಚ್ಚರಿ.

ಅಂದರೆ ಆರ್​ಸಿಬಿ ಪರ ಕಣಕ್ಕಿಳಿದು ಅತ್ಯಧಿಕ ರನ್ ಬಾರಿಸಿದ ಭಾರತೀಯ ಬ್ಯಾಟರ್​ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕಿಂಗ್ ಕೊಹ್ಲಿಯನ್ನು ಹೊರತುಪಡಿಸಿ ಆರ್​ಸಿಬಿ ಪರ ಆಡಿದ ಆಟಗಾರರಲ್ಲಿ 1000 ಕ್ಕೂ ಅಧಿಕ ರನ್ ಕಲೆಹಾಕಿರುವುದು ರಾಹುಲ್ ದ್ರಾವಿಡ್ ಮಾತ್ರ. ಉಳಿದ ಯಾವುದೇ ಭಾರತೀಯ ಬ್ಯಾಟರ್​ಗಳು ಆರ್​ಸಿಬಿ ಪರ ಮಿಂಚಿಲ್ಲ ಎಂಬುದೇ ಅಚ್ಚರಿ.

2 / 6
ಆರ್​ಸಿಬಿ ಪರ ಇದುವರೆಗೆ 243 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 7687 ರನ್ ಕಲೆಹಾಕಿದ್ದಾರೆ. ಈ ವೇಳೆ 7 ಶತಕ ಹಾಗೂ 52 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್​ ಎಂಬ ದಾಖಲೆ ಬರೆದಿದ್ದಾರೆ.

ಆರ್​ಸಿಬಿ ಪರ ಇದುವರೆಗೆ 243 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 7687 ರನ್ ಕಲೆಹಾಕಿದ್ದಾರೆ. ಈ ವೇಳೆ 7 ಶತಕ ಹಾಗೂ 52 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ ಆರ್​ಸಿಬಿ ಪರ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್​ ಎಂಬ ದಾಖಲೆ ಬರೆದಿದ್ದಾರೆ.

3 / 6
ಇನ್ನು ಆರ್​ಸಿಬಿ ಪರ 45 ಇನಿಂಗ್ಸ್ ಆಡಿರುವ ರಾಹುಲ್ ದ್ರಾವಿಡ್ ಒಟ್ಟು 1132 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಅರ್ಧಶತಕಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಆರ್​ಸಿಬಿ ಪರ 45 ಇನಿಂಗ್ಸ್ ಆಡಿರುವ ರಾಹುಲ್ ದ್ರಾವಿಡ್ ಒಟ್ಟು 1132 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಅರ್ಧಶತಕಗಳನ್ನು ಬಾರಿಸುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ಆರ್​ಸಿಬಿ ಪರ ಅತ್ಯಧಿಕ ರನ್ ಕಲೆಹಾಕಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 6
ಹಾಗೆಯೇ ಆರ್​ಸಿಬಿ ಪರ 29 ಇನಿಂಗ್ಸ್ ಆಡಿರುವ ದೇವದತ್ ಪಡಿಕ್ಕಲ್ (884) ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, 32 ಇನಿಂಗ್ಸ್​ಗಳಿಂದ 731 ರನ್ ಕಲೆಹಾಕಿರುವ ಪಾರ್ಥಿವ್ ಪಟೇಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ ಆರ್​ಸಿಬಿ ಪರ 36 ಇನಿಂಗ್ಸ್ ಆಡಿರುವ ರಾಬಿನ್ ಉತ್ತಪ್ಪ 706 ರನ್ ಕಲೆಹಾಕಿ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

ಹಾಗೆಯೇ ಆರ್​ಸಿಬಿ ಪರ 29 ಇನಿಂಗ್ಸ್ ಆಡಿರುವ ದೇವದತ್ ಪಡಿಕ್ಕಲ್ (884) ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, 32 ಇನಿಂಗ್ಸ್​ಗಳಿಂದ 731 ರನ್ ಕಲೆಹಾಕಿರುವ ಪಾರ್ಥಿವ್ ಪಟೇಲ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅದೇ ರೀತಿ ಆರ್​ಸಿಬಿ ಪರ 36 ಇನಿಂಗ್ಸ್ ಆಡಿರುವ ರಾಬಿನ್ ಉತ್ತಪ್ಪ 706 ರನ್ ಕಲೆಹಾಕಿ ಈ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.

5 / 6
ಅಂದರೆ ಇಲ್ಲಿ ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್, ದೇವದತ್ ಪಡಿಕ್ಕಲ್, ಪಾರ್ಥಿವ್ ಪಟೇಲ್ ಹಾಗೂ ರಾಬಿನ್ ಉತ್ತಪ್ಪ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಆರ್​ಸಿಬಿ ಪರ 700 ಕ್ಕಿಂತ ಅಧಿಕ ರನ್ ಕಲೆಹಾಕಿಲ್ಲ ಎಂಬುದೇ ಅಚ್ಚರಿ. ಇದುವೇ ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಕಪ್ ಗೆಲ್ಲದಿರಲು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

ಅಂದರೆ ಇಲ್ಲಿ ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್, ದೇವದತ್ ಪಡಿಕ್ಕಲ್, ಪಾರ್ಥಿವ್ ಪಟೇಲ್ ಹಾಗೂ ರಾಬಿನ್ ಉತ್ತಪ್ಪ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಆರ್​ಸಿಬಿ ಪರ 700 ಕ್ಕಿಂತ ಅಧಿಕ ರನ್ ಕಲೆಹಾಕಿಲ್ಲ ಎಂಬುದೇ ಅಚ್ಚರಿ. ಇದುವೇ ಕಳೆದ 16 ಸೀಸನ್​ಗಳಿಂದ ಆರ್​ಸಿಬಿ ಕಪ್ ಗೆಲ್ಲದಿರಲು ಮುಖ್ಯ ಕಾರಣ ಎಂದರೆ ತಪ್ಪಾಗಲಾರದು.

6 / 6
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​