AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪ್ಲೇಆಫ್ ರೇಸ್​ನಿಂದ ಮೂರು ತಂಡಗಳು ಔಟ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್​ 2024) ಸೀಸನ್ 17 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತದತ್ತ ಸಾಗುತ್ತಿದೆ. ಇನ್ನುಳಿದಿರುವುದು ಕೇವಲ 7 ಮ್ಯಾಚ್​ಗಳು ಮಾತ್ರ. ಈ ಏಳು ಪಂದ್ಯಗಳಲ್ಲಿ ಪ್ಲೇಆಫ್ ಆಡಲಿರುವ ಉಳಿದ ಮೂರು ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಅಂದರೆ ಕೆಕೆಆರ್ ತಂಡವು ಈಗಾಗಲೇ ಪ್ಲೇಆಫ್ ಪ್ರವೇಶಿಸಿದ್ದು, ಇನ್ನುಳಿದ ಮೂರು ಸ್ಥಾನಗಳಿಗಾಗಿ 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: May 14, 2024 | 6:52 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 63 ಪಂದ್ಯಗಳು ಮುಗಿದಿದ್ದು, ಈ ವೇಳೆಗೆ ಒಂದು ತಂಡ ಪ್ಲೇಆಫ್​​ಗೆ ಅರ್ಹತೆ ಪಡೆದುಕೊಂಡರೆ, ಮೂರು ತಂಡಗಳು ಹೊರಬಿದ್ದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 63 ಪಂದ್ಯಗಳು ಮುಗಿದಿದ್ದು, ಈ ವೇಳೆಗೆ ಒಂದು ತಂಡ ಪ್ಲೇಆಫ್​​ಗೆ ಅರ್ಹತೆ ಪಡೆದುಕೊಂಡರೆ, ಮೂರು ತಂಡಗಳು ಹೊರಬಿದ್ದಿದೆ.

1 / 6
ಇಲ್ಲಿ 13 ಪಂದ್ಯಗಳಲ್ಲಿ 9 ಜಯ, 3 ಸೋಲುಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 19 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿದೆ.

ಇಲ್ಲಿ 13 ಪಂದ್ಯಗಳಲ್ಲಿ 9 ಜಯ, 3 ಸೋಲುಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 19 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿದೆ.

2 / 6
ಮತ್ತೊಂದೆಡೆ 12 ಪಂದ್ಯಗಳಲ್ಲಿ ಕೇವಲ 4 ಜಯ ಸಾಧಿಸಿ, 8 ಸೋಲನುಭವಿಸಿರುವ ಪಂಜಾಬ್ ಕಿಂಗ್ಸ್ ತಂಡ ಪ್ಲೇಆಫ್​ನಿಂದ ಹೊರಬಿದ್ದಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡಕ್ಕೆ ಇನ್ನೆರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆದ್ದರೂ ಪ್ಲೇಆಫ್​ಗೆ ಅರ್ಹತೆ ಪಡೆಯುವುದಿಲ್ಲ.

ಮತ್ತೊಂದೆಡೆ 12 ಪಂದ್ಯಗಳಲ್ಲಿ ಕೇವಲ 4 ಜಯ ಸಾಧಿಸಿ, 8 ಸೋಲನುಭವಿಸಿರುವ ಪಂಜಾಬ್ ಕಿಂಗ್ಸ್ ತಂಡ ಪ್ಲೇಆಫ್​ನಿಂದ ಹೊರಬಿದ್ದಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡಕ್ಕೆ ಇನ್ನೆರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆದ್ದರೂ ಪ್ಲೇಆಫ್​ಗೆ ಅರ್ಹತೆ ಪಡೆಯುವುದಿಲ್ಲ.

3 / 6
ಹಾಗೆಯೇ 13 ಮ್ಯಾಚ್​ಗಳಲ್ಲಿ 4 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಐಪಿಎಲ್​ನಿಂದ ಹೊರಬಿದ್ದಿದೆ. ಈಗಾಗಲೇ 9 ಸೋಲನುಭವಿಸಿರುವ ಮುಂಬೈ ಪಡೆ ಕೊನೆಯ ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಪ್ರವೇಶಿಸಲು ಅವಕಾಶವಿಲ್ಲ.

ಹಾಗೆಯೇ 13 ಮ್ಯಾಚ್​ಗಳಲ್ಲಿ 4 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಐಪಿಎಲ್​ನಿಂದ ಹೊರಬಿದ್ದಿದೆ. ಈಗಾಗಲೇ 9 ಸೋಲನುಭವಿಸಿರುವ ಮುಂಬೈ ಪಡೆ ಕೊನೆಯ ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಪ್ರವೇಶಿಸಲು ಅವಕಾಶವಿಲ್ಲ.

4 / 6
ಇನ್ನು ಪ್ಲೇಆಫ್ ರೇಸ್​ನಲ್ಲಿದ್ದ ಗುಜರಾತ್ ಟೈಟಾನ್ಸ್ ಪಾಲಿಗೆ ವರುಣ ಅವಕೃಪೆ ತೋರಿದ್ದಾನೆ. ಸೋಮವಾರ ಕೆಕೆಆರ್ ವಿರುದ್ಧ ನಡೆಯಬೇಕಿದ್ದ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದ್ದು, ಹೀಗಾಗಿ ಪಂದ್ಯವನ್ನು ರದ್ದು ಮಾಡಲಾಗಿದೆ. ಪಂದ್ಯದ ರದ್ದಾದ ಕಾರಣ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ಇದರೊಂದಿಗೆ 11 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಂತಾಗಿದೆ.

ಇನ್ನು ಪ್ಲೇಆಫ್ ರೇಸ್​ನಲ್ಲಿದ್ದ ಗುಜರಾತ್ ಟೈಟಾನ್ಸ್ ಪಾಲಿಗೆ ವರುಣ ಅವಕೃಪೆ ತೋರಿದ್ದಾನೆ. ಸೋಮವಾರ ಕೆಕೆಆರ್ ವಿರುದ್ಧ ನಡೆಯಬೇಕಿದ್ದ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದ್ದು, ಹೀಗಾಗಿ ಪಂದ್ಯವನ್ನು ರದ್ದು ಮಾಡಲಾಗಿದೆ. ಪಂದ್ಯದ ರದ್ದಾದ ಕಾರಣ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ಇದರೊಂದಿಗೆ 11 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಂತಾಗಿದೆ.

5 / 6
ಸದ್ಯ ಪ್ಲೇಆಫ್ ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಸಿಎಸ್​ಕೆ, ಎಸ್​ಆರ್​ಹೆಚ್, ಆರ್​ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳಿವೆ. ಈ ಆರು ತಂಡಗಳಲ್ಲಿ ಮೂರು ತಂಡಗಳು ಪ್ಲೇಆಫ್​ ಪ್ರವೇಶಿಸಲಿದ್ದು, ಇದರಲ್ಲಿ ಟಾಪ್-2 ನಲ್ಲಿ ಕಾಣಿಸಿಕೊಳ್ಳುವ ತಂಡ ಕೆಕೆಆರ್ ವಿರುದ್ಧ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಸದ್ಯ ಪ್ಲೇಆಫ್ ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಸಿಎಸ್​ಕೆ, ಎಸ್​ಆರ್​ಹೆಚ್, ಆರ್​ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳಿವೆ. ಈ ಆರು ತಂಡಗಳಲ್ಲಿ ಮೂರು ತಂಡಗಳು ಪ್ಲೇಆಫ್​ ಪ್ರವೇಶಿಸಲಿದ್ದು, ಇದರಲ್ಲಿ ಟಾಪ್-2 ನಲ್ಲಿ ಕಾಣಿಸಿಕೊಳ್ಳುವ ತಂಡ ಕೆಕೆಆರ್ ವಿರುದ್ಧ ಕ್ವಾಲಿಫೈಯರ್ ಪಂದ್ಯವಾಡಲಿದೆ.

6 / 6
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?