IPL 2024: ಪ್ಲೇಆಫ್ ರೇಸ್​ನಿಂದ ಮೂರು ತಂಡಗಳು ಔಟ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ (ಐಪಿಎಲ್​ 2024) ಸೀಸನ್ 17 ರ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತದತ್ತ ಸಾಗುತ್ತಿದೆ. ಇನ್ನುಳಿದಿರುವುದು ಕೇವಲ 7 ಮ್ಯಾಚ್​ಗಳು ಮಾತ್ರ. ಈ ಏಳು ಪಂದ್ಯಗಳಲ್ಲಿ ಪ್ಲೇಆಫ್ ಆಡಲಿರುವ ಉಳಿದ ಮೂರು ತಂಡಗಳಾವುವು ಎಂಬುದು ನಿರ್ಧಾರವಾಗಲಿದೆ. ಅಂದರೆ ಕೆಕೆಆರ್ ತಂಡವು ಈಗಾಗಲೇ ಪ್ಲೇಆಫ್ ಪ್ರವೇಶಿಸಿದ್ದು, ಇನ್ನುಳಿದ ಮೂರು ಸ್ಥಾನಗಳಿಗಾಗಿ 6 ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

| Updated By: ಝಾಹಿರ್ ಯೂಸುಫ್

Updated on: May 14, 2024 | 6:52 AM

ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 63 ಪಂದ್ಯಗಳು ಮುಗಿದಿದ್ದು, ಈ ವೇಳೆಗೆ ಒಂದು ತಂಡ ಪ್ಲೇಆಫ್​​ಗೆ ಅರ್ಹತೆ ಪಡೆದುಕೊಂಡರೆ, ಮೂರು ತಂಡಗಳು ಹೊರಬಿದ್ದಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ​ (IPL 2024) 17ನೇ ಆವೃತ್ತಿಯು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 63 ಪಂದ್ಯಗಳು ಮುಗಿದಿದ್ದು, ಈ ವೇಳೆಗೆ ಒಂದು ತಂಡ ಪ್ಲೇಆಫ್​​ಗೆ ಅರ್ಹತೆ ಪಡೆದುಕೊಂಡರೆ, ಮೂರು ತಂಡಗಳು ಹೊರಬಿದ್ದಿದೆ.

1 / 6
ಇಲ್ಲಿ 13 ಪಂದ್ಯಗಳಲ್ಲಿ 9 ಜಯ, 3 ಸೋಲುಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 19 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿದೆ.

ಇಲ್ಲಿ 13 ಪಂದ್ಯಗಳಲ್ಲಿ 9 ಜಯ, 3 ಸೋಲುಗಳೊಂದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಒಟ್ಟು 19 ಅಂಕಗಳನ್ನು ಕಲೆಹಾಕಿದೆ. ಈ ಮೂಲಕ ಅಧಿಕೃತವಾಗಿ ಪ್ಲೇಆಫ್​ಗೆ ಪ್ರವೇಶಿಸಿದೆ.

2 / 6
ಮತ್ತೊಂದೆಡೆ 12 ಪಂದ್ಯಗಳಲ್ಲಿ ಕೇವಲ 4 ಜಯ ಸಾಧಿಸಿ, 8 ಸೋಲನುಭವಿಸಿರುವ ಪಂಜಾಬ್ ಕಿಂಗ್ಸ್ ತಂಡ ಪ್ಲೇಆಫ್​ನಿಂದ ಹೊರಬಿದ್ದಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡಕ್ಕೆ ಇನ್ನೆರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆದ್ದರೂ ಪ್ಲೇಆಫ್​ಗೆ ಅರ್ಹತೆ ಪಡೆಯುವುದಿಲ್ಲ.

ಮತ್ತೊಂದೆಡೆ 12 ಪಂದ್ಯಗಳಲ್ಲಿ ಕೇವಲ 4 ಜಯ ಸಾಧಿಸಿ, 8 ಸೋಲನುಭವಿಸಿರುವ ಪಂಜಾಬ್ ಕಿಂಗ್ಸ್ ತಂಡ ಪ್ಲೇಆಫ್​ನಿಂದ ಹೊರಬಿದ್ದಿದೆ. ಇದಾಗ್ಯೂ ಪಂಜಾಬ್ ಕಿಂಗ್ಸ್ ತಂಡಕ್ಕೆ ಇನ್ನೆರಡು ಪಂದ್ಯಗಳಿದ್ದು, ಈ ಮ್ಯಾಚ್​ಗಳಲ್ಲಿ ಗೆದ್ದರೂ ಪ್ಲೇಆಫ್​ಗೆ ಅರ್ಹತೆ ಪಡೆಯುವುದಿಲ್ಲ.

3 / 6
ಹಾಗೆಯೇ 13 ಮ್ಯಾಚ್​ಗಳಲ್ಲಿ 4 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಐಪಿಎಲ್​ನಿಂದ ಹೊರಬಿದ್ದಿದೆ. ಈಗಾಗಲೇ 9 ಸೋಲನುಭವಿಸಿರುವ ಮುಂಬೈ ಪಡೆ ಕೊನೆಯ ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಪ್ರವೇಶಿಸಲು ಅವಕಾಶವಿಲ್ಲ.

ಹಾಗೆಯೇ 13 ಮ್ಯಾಚ್​ಗಳಲ್ಲಿ 4 ಜಯ ಸಾಧಿಸಿರುವ ಮುಂಬೈ ಇಂಡಿಯನ್ಸ್ ತಂಡ ಕೂಡ ಐಪಿಎಲ್​ನಿಂದ ಹೊರಬಿದ್ದಿದೆ. ಈಗಾಗಲೇ 9 ಸೋಲನುಭವಿಸಿರುವ ಮುಂಬೈ ಪಡೆ ಕೊನೆಯ ಪಂದ್ಯದಲ್ಲಿ ಗೆದ್ದರೂ ಪ್ಲೇಆಫ್ ಪ್ರವೇಶಿಸಲು ಅವಕಾಶವಿಲ್ಲ.

4 / 6
ಇನ್ನು ಪ್ಲೇಆಫ್ ರೇಸ್​ನಲ್ಲಿದ್ದ ಗುಜರಾತ್ ಟೈಟಾನ್ಸ್ ಪಾಲಿಗೆ ವರುಣ ಅವಕೃಪೆ ತೋರಿದ್ದಾನೆ. ಸೋಮವಾರ ಕೆಕೆಆರ್ ವಿರುದ್ಧ ನಡೆಯಬೇಕಿದ್ದ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದ್ದು, ಹೀಗಾಗಿ ಪಂದ್ಯವನ್ನು ರದ್ದು ಮಾಡಲಾಗಿದೆ. ಪಂದ್ಯದ ರದ್ದಾದ ಕಾರಣ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ಇದರೊಂದಿಗೆ 11 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಂತಾಗಿದೆ.

ಇನ್ನು ಪ್ಲೇಆಫ್ ರೇಸ್​ನಲ್ಲಿದ್ದ ಗುಜರಾತ್ ಟೈಟಾನ್ಸ್ ಪಾಲಿಗೆ ವರುಣ ಅವಕೃಪೆ ತೋರಿದ್ದಾನೆ. ಸೋಮವಾರ ಕೆಕೆಆರ್ ವಿರುದ್ಧ ನಡೆಯಬೇಕಿದ್ದ ಪಂದ್ಯಕ್ಕೆ ಮಳೆ ಅಡಚಣೆಯನ್ನುಂಟು ಮಾಡಿದ್ದು, ಹೀಗಾಗಿ ಪಂದ್ಯವನ್ನು ರದ್ದು ಮಾಡಲಾಗಿದೆ. ಪಂದ್ಯದ ರದ್ದಾದ ಕಾರಣ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡಿದೆ. ಇದರೊಂದಿಗೆ 11 ಅಂಕಗಳನ್ನು ಹೊಂದಿರುವ ಗುಜರಾತ್ ಟೈಟಾನ್ಸ್ ಕೂಡ ಪ್ಲೇಆಫ್ ರೇಸ್​ನಿಂದ ಹೊರಬಿದ್ದಂತಾಗಿದೆ.

5 / 6
ಸದ್ಯ ಪ್ಲೇಆಫ್ ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಸಿಎಸ್​ಕೆ, ಎಸ್​ಆರ್​ಹೆಚ್, ಆರ್​ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳಿವೆ. ಈ ಆರು ತಂಡಗಳಲ್ಲಿ ಮೂರು ತಂಡಗಳು ಪ್ಲೇಆಫ್​ ಪ್ರವೇಶಿಸಲಿದ್ದು, ಇದರಲ್ಲಿ ಟಾಪ್-2 ನಲ್ಲಿ ಕಾಣಿಸಿಕೊಳ್ಳುವ ತಂಡ ಕೆಕೆಆರ್ ವಿರುದ್ಧ ಕ್ವಾಲಿಫೈಯರ್ ಪಂದ್ಯವಾಡಲಿದೆ.

ಸದ್ಯ ಪ್ಲೇಆಫ್ ರೇಸ್​ನಲ್ಲಿ ರಾಜಸ್ಥಾನ್ ರಾಯಲ್ಸ್, ಸಿಎಸ್​ಕೆ, ಎಸ್​ಆರ್​ಹೆಚ್, ಆರ್​ಸಿಬಿ, ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳಿವೆ. ಈ ಆರು ತಂಡಗಳಲ್ಲಿ ಮೂರು ತಂಡಗಳು ಪ್ಲೇಆಫ್​ ಪ್ರವೇಶಿಸಲಿದ್ದು, ಇದರಲ್ಲಿ ಟಾಪ್-2 ನಲ್ಲಿ ಕಾಣಿಸಿಕೊಳ್ಳುವ ತಂಡ ಕೆಕೆಆರ್ ವಿರುದ್ಧ ಕ್ವಾಲಿಫೈಯರ್ ಪಂದ್ಯವಾಡಲಿದೆ.

6 / 6
Follow us
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ