AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಯುವಿ ಗರಡಿ ಹುಡುಗನ ಅಬ್ಬರ: ಗುರುವಿಗೆ ಸ್ಪೆಷಲ್ ಥ್ಯಾಂಕ್ಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆಡುತ್ತಿರುವ ಪಂಜಾಬ್​ನ ಯುವ ಆಟಗಾರರಿಗೆ ಯುವರಾಜ್ ಸಿಂಗ್ ವಿಶೇಷ ತರಬೇತಿ ನೀಡಿದ್ದರು. ಈ ಆಟಗಾರರು ಇದೀಗ ಐಪಿಎಲ್​ನಲ್ಲಿ ಅಬ್ಬರಿಸುತ್ತಿರುವುದು ವಿಶೇಷ. ಹೀಗಾಗಿಯೇ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಬಳಿಕ ಎಸ್​ಆರ್​ಹೆಚ್ ತಂಡದ ಯುವ ದಾಂಡಿಗ ಅಭಿಷೇಕ್ ಶರ್ಮಾ ಯುವರಾಜ್ ಸಿಂಗ್ ಅವರಿಗೆ ಧನ್ಯವಾದ ಅರ್ಪಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Apr 06, 2024 | 8:53 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಆವೃತ್ತಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಯುವ ದಾಂಡಿಗ ಅಭಿಷೇಕ್ ಶರ್ಮಾ ತಮ್ಮ ಸ್ಪೋಟಕ ಬ್ಯಾಟಿಂಗ್ ಅನ್ನು ಮುಂದುವರೆಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 23 ಎಸೆತಗಳಲ್ಲಿ 63 ರನ್ ಬಾರಿಸಿ ಅಬ್ಬರಿಸಿದ್ದ ಅಭಿ, ಇದೀಗ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 12 ಎಸೆತಗಳಲ್ಲಿ 37 ರನ್​ ಚಚ್ಚಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 17ನೇ ಆವೃತ್ತಿಯಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಯುವ ದಾಂಡಿಗ ಅಭಿಷೇಕ್ ಶರ್ಮಾ ತಮ್ಮ ಸ್ಪೋಟಕ ಬ್ಯಾಟಿಂಗ್ ಅನ್ನು ಮುಂದುವರೆಸಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 23 ಎಸೆತಗಳಲ್ಲಿ 63 ರನ್ ಬಾರಿಸಿ ಅಬ್ಬರಿಸಿದ್ದ ಅಭಿ, ಇದೀಗ ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಕೇವಲ 12 ಎಸೆತಗಳಲ್ಲಿ 37 ರನ್​ ಚಚ್ಚಿದ್ದಾರೆ.

1 / 6
ಈ ಮೂಲಕ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿರುವ ಅಭಿಷೇಕ್ 4 ಪಂದ್ಯಗಳಿಂದ ಒಟ್ಟು 161 ರನ್ ಕಲೆಹಾಕಿದ್ದಾರೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪ್ರದರ್ಶಿಸಿದ ವಿಸ್ಪೋಟಕ ಬ್ಯಾಟಿಂಗ್ ಪರಿಣಾಮ ಯುವ ಎಡಗೈ ದಾಂಡಿಗನಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

ಈ ಮೂಲಕ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿರುವ ಅಭಿಷೇಕ್ 4 ಪಂದ್ಯಗಳಿಂದ ಒಟ್ಟು 161 ರನ್ ಕಲೆಹಾಕಿದ್ದಾರೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪ್ರದರ್ಶಿಸಿದ ವಿಸ್ಪೋಟಕ ಬ್ಯಾಟಿಂಗ್ ಪರಿಣಾಮ ಯುವ ಎಡಗೈ ದಾಂಡಿಗನಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು.

2 / 6
ಈ ಪ್ರಶಸ್ತಿಯನ್ನು ಪಡೆದ ಬಳಿಕ ಮಾತನಾಡಿದ ಅಭಿಷೇಕ್, ಈ ಸಂತಸದ ಸಮಯದಲ್ಲಿ ನಾನು ಯುವರಾಜ್ ಸಿಂಗ್, ಬ್ರಿಯಾನ್ ಲಾರಾ ಹಾಗೂ ನಮ್ಮ ತಂದೆಗೆ ಧನ್ಯವಾದಗಳು ಹೇಳಲು ಬಯಸುತ್ತೇನೆ. ನನ್ನ ಬ್ಯಾಟಿಂಗ್​ನಲ್ಲಿ ಇವರ ಕೊಡುಗೆ ತುಂಬಾ ಇದೆ ಎಂದಿದ್ದರು. ಇಲ್ಲಿ ಬ್ರಿಯಾನ್ ಲಾರಾ ಈ ಹಿಂದೆ ಎಸ್​ಆರ್​ಹೆಚ್ ತಂಡದ ಕೋಚ್ ಆಗಿದ್ದರು. ಹೀಗಾಗಿ ಅಭಿಷೇಕ್ ಮಾಜಿ ಕೋಚ್​ಗೆ ಧನ್ಯವಾದ ತಿಳಿಸಿದ್ದರು.

ಈ ಪ್ರಶಸ್ತಿಯನ್ನು ಪಡೆದ ಬಳಿಕ ಮಾತನಾಡಿದ ಅಭಿಷೇಕ್, ಈ ಸಂತಸದ ಸಮಯದಲ್ಲಿ ನಾನು ಯುವರಾಜ್ ಸಿಂಗ್, ಬ್ರಿಯಾನ್ ಲಾರಾ ಹಾಗೂ ನಮ್ಮ ತಂದೆಗೆ ಧನ್ಯವಾದಗಳು ಹೇಳಲು ಬಯಸುತ್ತೇನೆ. ನನ್ನ ಬ್ಯಾಟಿಂಗ್​ನಲ್ಲಿ ಇವರ ಕೊಡುಗೆ ತುಂಬಾ ಇದೆ ಎಂದಿದ್ದರು. ಇಲ್ಲಿ ಬ್ರಿಯಾನ್ ಲಾರಾ ಈ ಹಿಂದೆ ಎಸ್​ಆರ್​ಹೆಚ್ ತಂಡದ ಕೋಚ್ ಆಗಿದ್ದರು. ಹೀಗಾಗಿ ಅಭಿಷೇಕ್ ಮಾಜಿ ಕೋಚ್​ಗೆ ಧನ್ಯವಾದ ತಿಳಿಸಿದ್ದರು.

3 / 6
ಆದರೆ ಯುವರಾಜ್ ಸಿಂಗ್ ಹೆಸರನ್ನು ಪ್ರಸ್ತಾಪಿಸುವ ಮೂಲಕ ಅಭಿಷೇಕ್ ಎಲ್ಲರ ಗಮನ ಸೆಳೆದರು. ಇದಕ್ಕೆ ಮುಖ್ಯ ಕಾರಣ ಅಭಿಷೇಕ್ ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ಹುಡುಗ. ಈ ಹಿಂದೆ ಪಂಜಾಬ್​ನ ಹಲವು ಯುವ ಆಟಗಾರರಿಗೆ ಯುವರಾಜ್ ಸಿಂಗ್ ತರಬೇತಿ ನೀಡಿದ್ದಾರೆ.

ಆದರೆ ಯುವರಾಜ್ ಸಿಂಗ್ ಹೆಸರನ್ನು ಪ್ರಸ್ತಾಪಿಸುವ ಮೂಲಕ ಅಭಿಷೇಕ್ ಎಲ್ಲರ ಗಮನ ಸೆಳೆದರು. ಇದಕ್ಕೆ ಮುಖ್ಯ ಕಾರಣ ಅಭಿಷೇಕ್ ಯುವರಾಜ್ ಸಿಂಗ್ ಗರಡಿಯಲ್ಲಿ ಪಳಗಿದ ಹುಡುಗ. ಈ ಹಿಂದೆ ಪಂಜಾಬ್​ನ ಹಲವು ಯುವ ಆಟಗಾರರಿಗೆ ಯುವರಾಜ್ ಸಿಂಗ್ ತರಬೇತಿ ನೀಡಿದ್ದಾರೆ.

4 / 6
ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಪ್ರಭ್​ ಸಿಮ್ರಾನ್ ಸಿಂಗ್ ಸೇರಿದಂತೆ ಪಂಜಾಬ್​ನ ಯುವ​ ಆಟಗಾರರಿಗೆ ಯುವರಾಜ್ ಸಿಂಗ್ ವಿಶೇಷ ಟ್ರೈನಿಂಗ್ ನೀಡಿದ್ದರು. ಇದೇ ವೇಳೆ ಯುವ ದಾಂಡಿಗರ ಬ್ಯಾಟಿಂಗ್​ನಲ್ಲಿನ ತಪ್ಪುಗಳನ್ನು ತಿದ್ದುವಂತಹ ಕೆಲಸವನ್ನು ಮಾಡಿದ್ದಾರೆ. ಅಲ್ಲದೆ ಪಂಜಾಬ್​ನ ಯುವ ಆಟಗಾರರಿಗೆ ಆತ್ಮವಿಶ್ವಾಸ ತುಂಬುವಲ್ಲಿ ಯುವಿ ಪಾತ್ರ ಬಹಳ ದೊಡ್ಡದು.

ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಪ್ರಭ್​ ಸಿಮ್ರಾನ್ ಸಿಂಗ್ ಸೇರಿದಂತೆ ಪಂಜಾಬ್​ನ ಯುವ​ ಆಟಗಾರರಿಗೆ ಯುವರಾಜ್ ಸಿಂಗ್ ವಿಶೇಷ ಟ್ರೈನಿಂಗ್ ನೀಡಿದ್ದರು. ಇದೇ ವೇಳೆ ಯುವ ದಾಂಡಿಗರ ಬ್ಯಾಟಿಂಗ್​ನಲ್ಲಿನ ತಪ್ಪುಗಳನ್ನು ತಿದ್ದುವಂತಹ ಕೆಲಸವನ್ನು ಮಾಡಿದ್ದಾರೆ. ಅಲ್ಲದೆ ಪಂಜಾಬ್​ನ ಯುವ ಆಟಗಾರರಿಗೆ ಆತ್ಮವಿಶ್ವಾಸ ತುಂಬುವಲ್ಲಿ ಯುವಿ ಪಾತ್ರ ಬಹಳ ದೊಡ್ಡದು.

5 / 6
ಹೀಗಾಗಿಯೇ ಎಡಗೈ ದಾಂಡಿಗನಾಗಿರುವ ಅಭಿಷೇಕ್ ಶರ್ಮಾ ಯುವರಾಜ್ ಸಿಂಗ್ ಅವರನ್ನು ರೋಲ್ ಮಾಡೆಲ್ ಆಗಿ ಇರಿಸಿದ್ದಾರೆ. ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತನ್ನ ಗುರುವಿಗೆ ಧನ್ಯವಾದ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಹೀಗಾಗಿಯೇ ಎಡಗೈ ದಾಂಡಿಗನಾಗಿರುವ ಅಭಿಷೇಕ್ ಶರ್ಮಾ ಯುವರಾಜ್ ಸಿಂಗ್ ಅವರನ್ನು ರೋಲ್ ಮಾಡೆಲ್ ಆಗಿ ಇರಿಸಿದ್ದಾರೆ. ಇದೀಗ ಐಪಿಎಲ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತನ್ನ ಗುರುವಿಗೆ ಧನ್ಯವಾದ ತಿಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

6 / 6
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?