AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಯಾವತ್ತೂ ಕಪ್ ಗೆಲ್ಲಲ್ಲ ಎಂದ CSK ಮಾಜಿ ಆಟಗಾರ

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ರಲ್ಲಿ ಆಡಿದ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಇನ್ನುಳಿದ ಮೂರು ಪಂದ್ಯಗಳಲ್ಲೂ ಪರಾಜಯಗೊಂಡಿದೆ. ಇದೀಗ ತನ್ನ ಐದನೇ ಪಂದ್ಯಕ್ಕಾಗಿ ಆರ್​ಸಿಬಿ ಸಜ್ಜಾಗುತ್ತಿದ್ದು, ಏಪ್ರಿಲ್ 6 ರಂದು ನಡೆಯುವ ಈ ಪಂದ್ಯದಲ್ಲಿ ಆರ್ಪ​ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 04, 2024 | 8:08 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 16 ಪಂದ್ಯಗಳು ಮುಗಿದಿವೆ. ಇದರ ಬೆನ್ನಲ್ಲೇ ಯಾರು ಬಲಿಷ್ಠ, ಯಾವ ತಂಡ ಕನಿಷ್ಠ ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನವನ್ನು ವಿಮರ್ಶಿಸಿದ್ದಾರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 16 ಪಂದ್ಯಗಳು ಮುಗಿದಿವೆ. ಇದರ ಬೆನ್ನಲ್ಲೇ ಯಾರು ಬಲಿಷ್ಠ, ಯಾವ ತಂಡ ಕನಿಷ್ಠ ಎಂಬ ಚರ್ಚೆಗಳು ಶುರುವಾಗಿದೆ. ಈ ಚರ್ಚೆಗಳ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರದರ್ಶನವನ್ನು ವಿಮರ್ಶಿಸಿದ್ದಾರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು.

1 / 6
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ಅಂಬಾಟಿ ರಾಯುಡು, ಆರ್​ಸಿಬಿ ತಂಡದ್ದು ಯಾವಾಗಲೂ ಇದೇ ಪರಿಸ್ಥಿತಿ. ಅವರು ಎಂದಿಗೂ ಒತ್ತಡವನ್ನು ಮೀರಿ ಪಂದ್ಯವಾಡಿಲ್ಲ. ತಂಡದ ಅಗ್ರಸ್ಥಾನದಲ್ಲಿರುವ ಪ್ರಮುಖ ಆಟಗಾರರು ಎಂದಿಗೂ ಉತ್ತಮ ಪ್ರದರ್ಶನ ನೀಡುವುದಿಲ್ಲ. ಇದುವೇ ಆರ್​ಸಿಬಿ ಸೋಲಿಗೆ ಕಾರಣವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದ ಅಂಬಾಟಿ ರಾಯುಡು, ಆರ್​ಸಿಬಿ ತಂಡದ್ದು ಯಾವಾಗಲೂ ಇದೇ ಪರಿಸ್ಥಿತಿ. ಅವರು ಎಂದಿಗೂ ಒತ್ತಡವನ್ನು ಮೀರಿ ಪಂದ್ಯವಾಡಿಲ್ಲ. ತಂಡದ ಅಗ್ರಸ್ಥಾನದಲ್ಲಿರುವ ಪ್ರಮುಖ ಆಟಗಾರರು ಎಂದಿಗೂ ಉತ್ತಮ ಪ್ರದರ್ಶನ ನೀಡುವುದಿಲ್ಲ. ಇದುವೇ ಆರ್​ಸಿಬಿ ಸೋಲಿಗೆ ಕಾರಣವಾಗುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

2 / 6
ಕಳೆದ 16 ಸೀಸನ್​ಗಳಿಂದಲೂ ಆರ್​ಸಿಬಿ ಪ್ರಶಸ್ತಿ ಗೆದ್ದಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಬೌಲಿಂಗ್ ಲೈನಪ್. ಆರ್​ಸಿಬಿ ತಂಡದ ಬೌಲಿಂಗ್ ಘಟಕ ಯಾವಾಗಲೂ ಸಾಕಷ್ಟು ರನ್ ಸೋರಿಕೆ ಮಾಡುತ್ತದೆ. ಅವರ ಬ್ಯಾಟರ್​ಗಳು ಕಲೆಹಾಕುವ ರನ್​ ಗತಿಗಿಂತ ಆರ್​ಸಿಬಿ ಬೌಲರ್​ಗಳು ಹೆಚ್ಚಿನ ರನ್​ಗಳನ್ನು ಬಿಟ್ಟು ಕೊಡುತ್ತಿರುತ್ತಾರೆ ಎಂದು ರಾಯುಡು ಹೇಳಿದ್ದಾರೆ.

ಕಳೆದ 16 ಸೀಸನ್​ಗಳಿಂದಲೂ ಆರ್​ಸಿಬಿ ಪ್ರಶಸ್ತಿ ಗೆದ್ದಿಲ್ಲ. ಇದಕ್ಕೆ ಮುಖ್ಯ ಕಾರಣ ಅವರ ಬೌಲಿಂಗ್ ಲೈನಪ್. ಆರ್​ಸಿಬಿ ತಂಡದ ಬೌಲಿಂಗ್ ಘಟಕ ಯಾವಾಗಲೂ ಸಾಕಷ್ಟು ರನ್ ಸೋರಿಕೆ ಮಾಡುತ್ತದೆ. ಅವರ ಬ್ಯಾಟರ್​ಗಳು ಕಲೆಹಾಕುವ ರನ್​ ಗತಿಗಿಂತ ಆರ್​ಸಿಬಿ ಬೌಲರ್​ಗಳು ಹೆಚ್ಚಿನ ರನ್​ಗಳನ್ನು ಬಿಟ್ಟು ಕೊಡುತ್ತಿರುತ್ತಾರೆ ಎಂದು ರಾಯುಡು ಹೇಳಿದ್ದಾರೆ.

3 / 6
ಆರ್​ಸಿಬಿ ಬ್ಯಾಟರ್​ಗಳು ಕಲೆಹಾಕುವ ಪ್ರತಿ ಓವರ್​ ಸರಾಸರಿ ರನ್​ಗಿಂತ ಬೌಲರ್​ಗಳು ನೀಡುವ ಸರಾಸರಿ ರನ್​ಗಳೇ ಜಾಸ್ತಿ ಇರುತ್ತದೆ. ಒಂದು ರೀತಿಯಲ್ಲಿ ಬ್ಯಾಟರ್​ ಮತ್ತು ಬೌಲರ್​ಗಳು ಸರಿ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇನ್ನು ಆರ್‌ಸಿಬಿ ತಂಡ ಒತ್ತಡದಲ್ಲಿರುವಾಗ ಅವರ ಯಾವುದೇ ಪ್ರಮುಖ ಬ್ಯಾಟರ್ ಆಡಲ್ಲ. ಹೀಗಾಗಿಯೇ ಆರ್​ಸಿಬಿ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

ಆರ್​ಸಿಬಿ ಬ್ಯಾಟರ್​ಗಳು ಕಲೆಹಾಕುವ ಪ್ರತಿ ಓವರ್​ ಸರಾಸರಿ ರನ್​ಗಿಂತ ಬೌಲರ್​ಗಳು ನೀಡುವ ಸರಾಸರಿ ರನ್​ಗಳೇ ಜಾಸ್ತಿ ಇರುತ್ತದೆ. ಒಂದು ರೀತಿಯಲ್ಲಿ ಬ್ಯಾಟರ್​ ಮತ್ತು ಬೌಲರ್​ಗಳು ಸರಿ ಸಮಾನವಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ. ಇನ್ನು ಆರ್‌ಸಿಬಿ ತಂಡ ಒತ್ತಡದಲ್ಲಿರುವಾಗ ಅವರ ಯಾವುದೇ ಪ್ರಮುಖ ಬ್ಯಾಟರ್ ಆಡಲ್ಲ. ಹೀಗಾಗಿಯೇ ಆರ್​ಸಿಬಿ ಕಪ್ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

4 / 6
ಅಷ್ಟೇ ಅಲ್ಲದೆ ಹೀಗೆ ಬ್ಯಾಟಿಂಗ್-ಬೌಲಿಂಗ್ ಸರಿ ಸಮಾನವಾಗಿ ರನ್​ ಸರಾಸರಿ ಹೊಂದಿರುವ ಆರ್​ಸಿಬಿ ತಂಡವು ಎಂದಿಗೂ ಕಪ್ ಗೆಲ್ಲಲು ಸಾಧ್ಯವಾಗುವುದಿಲ್ಲ. ಇದಕ್ಕೆ ಸಾಕ್ಷಿಯೇ ಕಳೆದ 16 ಸೀಸನ್​ಗಳು. ಈ ಕಥೆ ಈ ಬಾರಿ ಕೂಡ ಮುಂದುವರೆಯುವ ಸಾಧ್ಯತೆಯಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಅಷ್ಟೇ ಅಲ್ಲದೆ ಹೀಗೆ ಬ್ಯಾಟಿಂಗ್-ಬೌಲಿಂಗ್ ಸರಿ ಸಮಾನವಾಗಿ ರನ್​ ಸರಾಸರಿ ಹೊಂದಿರುವ ಆರ್​ಸಿಬಿ ತಂಡವು ಎಂದಿಗೂ ಕಪ್ ಗೆಲ್ಲಲು ಸಾಧ್ಯವಾಗುವುದಿಲ್ಲ. ಇದಕ್ಕೆ ಸಾಕ್ಷಿಯೇ ಕಳೆದ 16 ಸೀಸನ್​ಗಳು. ಈ ಕಥೆ ಈ ಬಾರಿ ಕೂಡ ಮುಂದುವರೆಯುವ ಸಾಧ್ಯತೆಯಿದೆ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

5 / 6
ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 3 ರಲ್ಲಿ ಸೋಲನುಭವಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಫಾಫ್ ಪಡೆ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳ ವಿರುದ್ಧ ಮುಗ್ಗರಿಸಿದೆ.

ಈ ಬಾರಿಯ ಐಪಿಎಲ್​ನಲ್ಲಿ 4 ಪಂದ್ಯಗಳನ್ನಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 3 ರಲ್ಲಿ ಸೋಲನುಭವಿಸಿದೆ. ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದ ಫಾಫ್ ಪಡೆ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿತ್ತು. ಇದಾದ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್​ ತಂಡಗಳ ವಿರುದ್ಧ ಮುಗ್ಗರಿಸಿದೆ.

6 / 6
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ