AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಪೂರನ್​ ಸಿಕ್ಸರ್​ಗೆ ಹೆದರಿ ಮೈದಾನ ತೊರೆದ ಅರ್ಜುನ್ ತೆಂಡೂಲ್ಕರ್

IPL 2024 MI vs LSG: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 67ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಲ್​ಎಸ್​ಜಿ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 214 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ 196 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 18 ರನ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on:May 18, 2024 | 12:11 PM

Share
IPL 2024: ಐಪಿಎಲ್ 2024ರ 67ನೇ ಪಂದ್ಯದಲ್ಲಿ ಕಣಕ್ಕಿಳಿದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಇದೀಗ ಟ್ರೋಲ್​ಗೆ ಒಳಗಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅರ್ಧದಲ್ಲೇ ಮೈದಾನ ತೊರೆದಿರುವುದು.

IPL 2024: ಐಪಿಎಲ್ 2024ರ 67ನೇ ಪಂದ್ಯದಲ್ಲಿ ಕಣಕ್ಕಿಳಿದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ (Arjun Tendulkar) ಇದೀಗ ಟ್ರೋಲ್​ಗೆ ಒಳಗಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅರ್ಧದಲ್ಲೇ ಮೈದಾನ ತೊರೆದಿರುವುದು.

1 / 6
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ 2 ಓವರ್​ಗಳಲ್ಲಿ ಕೇವಲ 10 ರನ್ ನೀಡಿದ್ದರು. ಹೀಗಾಗಿಯೇ ನಾಯಕ ಹಾರ್ದಿಕ್ ಪಾಂಡ್ಯ ಪಂದ್ಯದ 15ನೇ ಓವರ್​ ಅನ್ನು ಅರ್ಜುನ್​ಗೆ ನೀಡಿದ್ದರು.

ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಜುನ್ ತೆಂಡೂಲ್ಕರ್ 2 ಓವರ್​ಗಳಲ್ಲಿ ಕೇವಲ 10 ರನ್ ನೀಡಿದ್ದರು. ಹೀಗಾಗಿಯೇ ನಾಯಕ ಹಾರ್ದಿಕ್ ಪಾಂಡ್ಯ ಪಂದ್ಯದ 15ನೇ ಓವರ್​ ಅನ್ನು ಅರ್ಜುನ್​ಗೆ ನೀಡಿದ್ದರು.

2 / 6
ಅದರಂತೆ 15ನೇ ಓವರ್​ ಆರಂಭಿಸಿದ ಅರ್ಜುನ್ ತೆಂಡೂಲ್ಕರ್​ ಅವರ ಮೊದಲ ಎಸೆತದಲ್ಲಿ ನಿಕೋಲಸ್ ಪೂರನ್ ಭರ್ಜರಿ ಸಿಕ್ಸ್ ಸಿಡಿಸಿದರು. 2ನೇ ಎಸೆತದಲ್ಲಿ ಡೀಪ್ ಸ್ಕ್ವೇರ್ ಲೆಗ್​ನತ್ತ ಆಕರ್ಷಕ ಸಿಕ್ಸ್ ಬಾರಿಸಿದರು. ಇತ್ತ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಯುತ್ತಿದ್ದಂತೆ ಅರ್ಜುನ್ ತೆಂಡೂಲ್ಕರ್ ಮೈದಾನ ತೊರೆದರು.

ಅದರಂತೆ 15ನೇ ಓವರ್​ ಆರಂಭಿಸಿದ ಅರ್ಜುನ್ ತೆಂಡೂಲ್ಕರ್​ ಅವರ ಮೊದಲ ಎಸೆತದಲ್ಲಿ ನಿಕೋಲಸ್ ಪೂರನ್ ಭರ್ಜರಿ ಸಿಕ್ಸ್ ಸಿಡಿಸಿದರು. 2ನೇ ಎಸೆತದಲ್ಲಿ ಡೀಪ್ ಸ್ಕ್ವೇರ್ ಲೆಗ್​ನತ್ತ ಆಕರ್ಷಕ ಸಿಕ್ಸ್ ಬಾರಿಸಿದರು. ಇತ್ತ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಯುತ್ತಿದ್ದಂತೆ ಅರ್ಜುನ್ ತೆಂಡೂಲ್ಕರ್ ಮೈದಾನ ತೊರೆದರು.

3 / 6
ಮೊದಲೆರಡು ಎಸೆತಗಳನ್ನು ಸಂಪೂರ್ಣ ಫಿಟ್​ನೆಸ್​ನೊಂದಿಗೆ ಎಸೆದಿದ್ದ ಅರ್ಜುನ್ ತೆಂಡೂಲ್ಕರ್ 3ನೇ ಎಸೆತಕ್ಕೂ ಮುನ್ನ ಸ್ನಾಯು ಸೆಳೆತಕ್ಕೊಳಗಾಗಿದ್ದರು. ಅಲ್ಲದೆ ಓವರ್​ ಅನ್ನು ಪೂರ್ಣಗೊಳಿಸದೇ ಪೆವಿಲಿಯನ್​ನತ್ತ ಮುಖ ಮಾಡಿದರು. ಆದರೆ ಡಗೌಟ್​ಗೆ ತಲುಪಿದ ಬಳಿಕ ಅರ್ಜುನ್ ತೆಂಡೂಲ್ಕರ್ ಫಿಸಿಯೋ ಕಡೆಯಿಂದ ಯಾವುದೇ ಚಿಕಿತ್ಸೆ ಪಡೆದಿರಲಿಲ್ಲ ಎಂಬುದು ವಿಶೇಷ.

ಮೊದಲೆರಡು ಎಸೆತಗಳನ್ನು ಸಂಪೂರ್ಣ ಫಿಟ್​ನೆಸ್​ನೊಂದಿಗೆ ಎಸೆದಿದ್ದ ಅರ್ಜುನ್ ತೆಂಡೂಲ್ಕರ್ 3ನೇ ಎಸೆತಕ್ಕೂ ಮುನ್ನ ಸ್ನಾಯು ಸೆಳೆತಕ್ಕೊಳಗಾಗಿದ್ದರು. ಅಲ್ಲದೆ ಓವರ್​ ಅನ್ನು ಪೂರ್ಣಗೊಳಿಸದೇ ಪೆವಿಲಿಯನ್​ನತ್ತ ಮುಖ ಮಾಡಿದರು. ಆದರೆ ಡಗೌಟ್​ಗೆ ತಲುಪಿದ ಬಳಿಕ ಅರ್ಜುನ್ ತೆಂಡೂಲ್ಕರ್ ಫಿಸಿಯೋ ಕಡೆಯಿಂದ ಯಾವುದೇ ಚಿಕಿತ್ಸೆ ಪಡೆದಿರಲಿಲ್ಲ ಎಂಬುದು ವಿಶೇಷ.

4 / 6
ಹೀಗಾಗಿಯೇ ನಿಕೋಲಸ್ ಪೂರನ್ ಅವರ ಅಬ್ಬರಕ್ಕೆ ಹೆದರಿ ಅರ್ಜುನ್ ತೆಂಡೂಲ್ಕರ್ ಮೈದಾನ ತೊರೆದಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿಯೇ ಡಗೌಟ್​ಗೆ ತೆರಳಿ ಅರ್ಜುನ್ ವಿಶ್ರಾಂತಿ ಪಡೆದುಕೊಳ್ಳುತ್ತಿರುವುದು ಎಂದು ಅನೇಕರು ಕಿಚಾಯಿಸುತ್ತಿದ್ದಾರೆ.

ಹೀಗಾಗಿಯೇ ನಿಕೋಲಸ್ ಪೂರನ್ ಅವರ ಅಬ್ಬರಕ್ಕೆ ಹೆದರಿ ಅರ್ಜುನ್ ತೆಂಡೂಲ್ಕರ್ ಮೈದಾನ ತೊರೆದಿದ್ದಾರೆ ಎಂದು ಟ್ರೋಲ್ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿಯೇ ಡಗೌಟ್​ಗೆ ತೆರಳಿ ಅರ್ಜುನ್ ವಿಶ್ರಾಂತಿ ಪಡೆದುಕೊಳ್ಳುತ್ತಿರುವುದು ಎಂದು ಅನೇಕರು ಕಿಚಾಯಿಸುತ್ತಿದ್ದಾರೆ.

5 / 6
ಇನ್ನು ಅರ್ಜುನ್ ತೆಂಡೂಲ್ಕರ್ ಅರ್ಧದಲ್ಲೇ ಮುಗಿಸಿದ ಓವರ್​ ಅನ್ನು ನಮನ್ ಧೀರ್ ಫೂರ್ಣಗೊಳಿಸಿದರು. ನಮನ್ ಎಸೆದ 4 ಎಸೆತಗಳಲ್ಲಿ ಪೂರನ್ ಸಿಕ್ಸ್, ಫೋರ್ ಬಾರಿಸಿದರೆ, ಕೊನೆಯ ಎಸೆತದಲ್ಲಿ ಕೆಎಲ್ ರಾಹು್ಲ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಮೂಲಕ 15ನೇ ಓವರ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟರ್​ಗಳು 29 ರನ್ ಕಲೆಹಾಕಿದರು.

ಇನ್ನು ಅರ್ಜುನ್ ತೆಂಡೂಲ್ಕರ್ ಅರ್ಧದಲ್ಲೇ ಮುಗಿಸಿದ ಓವರ್​ ಅನ್ನು ನಮನ್ ಧೀರ್ ಫೂರ್ಣಗೊಳಿಸಿದರು. ನಮನ್ ಎಸೆದ 4 ಎಸೆತಗಳಲ್ಲಿ ಪೂರನ್ ಸಿಕ್ಸ್, ಫೋರ್ ಬಾರಿಸಿದರೆ, ಕೊನೆಯ ಎಸೆತದಲ್ಲಿ ಕೆಎಲ್ ರಾಹು್ಲ ಭರ್ಜರಿ ಸಿಕ್ಸ್ ಸಿಡಿಸಿದರು. ಈ ಮೂಲಕ 15ನೇ ಓವರ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬ್ಯಾಟರ್​ಗಳು 29 ರನ್ ಕಲೆಹಾಕಿದರು.

6 / 6

Published On - 12:06 pm, Sat, 18 May 24

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ