AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 1,115 ದಿನಗಳ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ CSK

IPL 2024 CSK vs PBKS: ಈ ಬಾರಿಯ ಐಪಿಎಲ್​ನ (IPL 2024) ಮೊದಲ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಯಶಸ್ವಿಯಾಗಿದೆ. ಈ ಮೂಲಕ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.

TV9 Web
| Edited By: |

Updated on: May 06, 2024 | 7:38 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕ ಸ್ಯಾಮ್ ಕರನ್ ಬೌಲಿಂಗ್ ಆಯ್ದುಕೊಂಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕ ಸ್ಯಾಮ್ ಕರನ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅಜಿಂಕ್ಯ ರಹಾನೆ (9) ಬೇಗನೆ ವಿಕೆಟ್ ಒಪ್ಪಿಸಿ ಹೊರ ನಡೆದರೆ, ಆ ಬಳಿಕ ರುತುರಾಜ್ ಗಾಯಕ್ವಾಡ್ (32) ಔಟಾದರು. ಇನ್ನು ಶಿವಂ ದುಬೆ (0) ಶೂನ್ಯದೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅಜಿಂಕ್ಯ ರಹಾನೆ (9) ಬೇಗನೆ ವಿಕೆಟ್ ಒಪ್ಪಿಸಿ ಹೊರ ನಡೆದರೆ, ಆ ಬಳಿಕ ರುತುರಾಜ್ ಗಾಯಕ್ವಾಡ್ (32) ಔಟಾದರು. ಇನ್ನು ಶಿವಂ ದುಬೆ (0) ಶೂನ್ಯದೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು.

2 / 7
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ರವೀಂದ್ರ ಜಡೇಜಾ 26 ಎಸೆತಗಳಲ್ಲಿ 43 ರನ್ ಬಾರಿಸಿದರು. ಈ ರನ್​ಗಳೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 167 ರನ್​ ಕಲೆಹಾಕಿತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ರವೀಂದ್ರ ಜಡೇಜಾ 26 ಎಸೆತಗಳಲ್ಲಿ 43 ರನ್ ಬಾರಿಸಿದರು. ಈ ರನ್​ಗಳೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 167 ರನ್​ ಕಲೆಹಾಕಿತು.

3 / 7
168 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಪಂಜಾಬ್ ಕಿಂಗ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸಿಎಸ್​ಕೆ ವೇಗಿ ತುಷಾರ್ ದೇಶಪಾಂಡೆ ಯಶಸ್ವಿಯಾದರು. 2ನೇ ಓವರ್​ನಲ್ಲಿ ಜಾನಿ ಬೈರ್​ಸ್ಟೋವ್ (7), ರೈಲಿ ರೊಸ್ಸೊವ್ (0) ವಿಕೆಟ್ ಕಬಳಿಸಿದ ತುಷಾರ್ ಸಿಎಸ್​ಕೆ ತಂಡಕ್ಕೆ ಆರಂಭದಲ್ಲೇ ಯಶಸ್ಸು ತಂದುಕೊಟ್ಟರು.

168 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಪಂಜಾಬ್ ಕಿಂಗ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸಿಎಸ್​ಕೆ ವೇಗಿ ತುಷಾರ್ ದೇಶಪಾಂಡೆ ಯಶಸ್ವಿಯಾದರು. 2ನೇ ಓವರ್​ನಲ್ಲಿ ಜಾನಿ ಬೈರ್​ಸ್ಟೋವ್ (7), ರೈಲಿ ರೊಸ್ಸೊವ್ (0) ವಿಕೆಟ್ ಕಬಳಿಸಿದ ತುಷಾರ್ ಸಿಎಸ್​ಕೆ ತಂಡಕ್ಕೆ ಆರಂಭದಲ್ಲೇ ಯಶಸ್ಸು ತಂದುಕೊಟ್ಟರು.

4 / 7
ಪಂಜಾಬ್ ಕಿಂಗ್ಸ್ ತಂಡವು ಆರಂಭಿಕ ಆಘಾತದಿಂದ ಪಾರಾಗುವ ಮುನ್ನವೇ ಸಿಎಸ್​ಕೆ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಪರಿಣಾಮ 69 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಅಂತಿಮವಾಗಿ 20 ಓವರ್​ಗಳಲ್ಲಿ 9 ವಿಕೆಟ್ ಕಬಳಿಸಿದ ಸಿಎಸ್​ಕೆ ಪಂಜಾಬ್ ಕಿಂಗ್ಸ್ ತಂಡವನ್ನು 139 ರನ್​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಈ ಮೂಲಕ CSK 28 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಪಂಜಾಬ್ ಕಿಂಗ್ಸ್ ತಂಡವು ಆರಂಭಿಕ ಆಘಾತದಿಂದ ಪಾರಾಗುವ ಮುನ್ನವೇ ಸಿಎಸ್​ಕೆ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಪರಿಣಾಮ 69 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಅಂತಿಮವಾಗಿ 20 ಓವರ್​ಗಳಲ್ಲಿ 9 ವಿಕೆಟ್ ಕಬಳಿಸಿದ ಸಿಎಸ್​ಕೆ ಪಂಜಾಬ್ ಕಿಂಗ್ಸ್ ತಂಡವನ್ನು 139 ರನ್​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಈ ಮೂಲಕ CSK 28 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 7
ಇದು 1,115 ದಿನಗಳ ಬಳಿಕ ಸಿಎಸ್​ಕೆ ತಂಡಕ್ಕೆ ಸಿಕ್ಕ ಗೆಲುವು ಎಂಬುದು ವಿಶೇಷ. ಅಂದರೆ ಪಂಜಾಬ್ ಕಿಂಗ್ಸ್ ತಂಡವನ್ನು ಸಿಎಸ್​ಕೆ ತಂಡ ಸೋಲಿಸಿ ಬರೋಬ್ಬರಿ 1,115 ದಿನಗಳಾಗಿತ್ತು. ಐಪಿಎಲ್ 2021 ರಿಂದ ಪಂಜಾಬ್ ಕಿಂಗ್ಸ್ ತಂಡವು ಸಿಎಸ್​ಕೆ ವಿರುದ್ಧ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದೆ.

ಇದು 1,115 ದಿನಗಳ ಬಳಿಕ ಸಿಎಸ್​ಕೆ ತಂಡಕ್ಕೆ ಸಿಕ್ಕ ಗೆಲುವು ಎಂಬುದು ವಿಶೇಷ. ಅಂದರೆ ಪಂಜಾಬ್ ಕಿಂಗ್ಸ್ ತಂಡವನ್ನು ಸಿಎಸ್​ಕೆ ತಂಡ ಸೋಲಿಸಿ ಬರೋಬ್ಬರಿ 1,115 ದಿನಗಳಾಗಿತ್ತು. ಐಪಿಎಲ್ 2021 ರಿಂದ ಪಂಜಾಬ್ ಕಿಂಗ್ಸ್ ತಂಡವು ಸಿಎಸ್​ಕೆ ವಿರುದ್ಧ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದೆ.

6 / 7
ಈ ವೇಳೆ ಆಡಿದ 5 ಪಂದ್ಯಗಳಲ್ಲೂ ಸಿಎಸ್​ಕೆಗೆ ಸೋಲುಣಿಸಿ ಪಂಜಾಬ್ ಕಿಂಗ್ಸ್ ಪಾರುಪತ್ಯ ಮೆರೆದಿದೆ. ಇದೀಗ 1,115 ದಿನಗಳ ಬಳಿಕ ಈ ಸೋಲಿನ ಸಂಕೋಲೆಯಿಂದ ಹೊರಬರುವಲ್ಲಿ ಕೊನೆಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿರುವುದು ವಿಶೇಷ.

ಈ ವೇಳೆ ಆಡಿದ 5 ಪಂದ್ಯಗಳಲ್ಲೂ ಸಿಎಸ್​ಕೆಗೆ ಸೋಲುಣಿಸಿ ಪಂಜಾಬ್ ಕಿಂಗ್ಸ್ ಪಾರುಪತ್ಯ ಮೆರೆದಿದೆ. ಇದೀಗ 1,115 ದಿನಗಳ ಬಳಿಕ ಈ ಸೋಲಿನ ಸಂಕೋಲೆಯಿಂದ ಹೊರಬರುವಲ್ಲಿ ಕೊನೆಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿರುವುದು ವಿಶೇಷ.

7 / 7
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ