AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: 1,115 ದಿನಗಳ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದ CSK

IPL 2024 CSK vs PBKS: ಈ ಬಾರಿಯ ಐಪಿಎಲ್​ನ (IPL 2024) ಮೊದಲ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡವು 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಪಂಜಾಬ್ ಕಿಂಗ್ಸ್ ತಂಡಕ್ಕೆ ಸೋಲುಣಿಸುವಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ಯಶಸ್ವಿಯಾಗಿದೆ. ಈ ಮೂಲಕ ಸಿಎಸ್​ಕೆ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: May 06, 2024 | 7:38 AM

Share
ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕ ಸ್ಯಾಮ್ ಕರನ್ ಬೌಲಿಂಗ್ ಆಯ್ದುಕೊಂಡಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL 2024) 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ (PBKS) ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್​ (CSK) ತಂಡ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​ಪಿಸಿಎ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ಹಂಗಾಮಿ ನಾಯಕ ಸ್ಯಾಮ್ ಕರನ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 7
ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅಜಿಂಕ್ಯ ರಹಾನೆ (9) ಬೇಗನೆ ವಿಕೆಟ್ ಒಪ್ಪಿಸಿ ಹೊರ ನಡೆದರೆ, ಆ ಬಳಿಕ ರುತುರಾಜ್ ಗಾಯಕ್ವಾಡ್ (32) ಔಟಾದರು. ಇನ್ನು ಶಿವಂ ದುಬೆ (0) ಶೂನ್ಯದೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅಜಿಂಕ್ಯ ರಹಾನೆ (9) ಬೇಗನೆ ವಿಕೆಟ್ ಒಪ್ಪಿಸಿ ಹೊರ ನಡೆದರೆ, ಆ ಬಳಿಕ ರುತುರಾಜ್ ಗಾಯಕ್ವಾಡ್ (32) ಔಟಾದರು. ಇನ್ನು ಶಿವಂ ದುಬೆ (0) ಶೂನ್ಯದೊಂದಿಗೆ ಪೆವಿಲಿಯನ್​ಗೆ ಹಿಂತಿರುಗಿದರು.

2 / 7
ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ರವೀಂದ್ರ ಜಡೇಜಾ 26 ಎಸೆತಗಳಲ್ಲಿ 43 ರನ್ ಬಾರಿಸಿದರು. ಈ ರನ್​ಗಳೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 167 ರನ್​ ಕಲೆಹಾಕಿತು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ರವೀಂದ್ರ ಜಡೇಜಾ 26 ಎಸೆತಗಳಲ್ಲಿ 43 ರನ್ ಬಾರಿಸಿದರು. ಈ ರನ್​ಗಳೊಂದಿಗೆ ಸಿಎಸ್​ಕೆ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 167 ರನ್​ ಕಲೆಹಾಕಿತು.

3 / 7
168 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಪಂಜಾಬ್ ಕಿಂಗ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸಿಎಸ್​ಕೆ ವೇಗಿ ತುಷಾರ್ ದೇಶಪಾಂಡೆ ಯಶಸ್ವಿಯಾದರು. 2ನೇ ಓವರ್​ನಲ್ಲಿ ಜಾನಿ ಬೈರ್​ಸ್ಟೋವ್ (7), ರೈಲಿ ರೊಸ್ಸೊವ್ (0) ವಿಕೆಟ್ ಕಬಳಿಸಿದ ತುಷಾರ್ ಸಿಎಸ್​ಕೆ ತಂಡಕ್ಕೆ ಆರಂಭದಲ್ಲೇ ಯಶಸ್ಸು ತಂದುಕೊಟ್ಟರು.

168 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಪಂಜಾಬ್ ಕಿಂಗ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಸಿಎಸ್​ಕೆ ವೇಗಿ ತುಷಾರ್ ದೇಶಪಾಂಡೆ ಯಶಸ್ವಿಯಾದರು. 2ನೇ ಓವರ್​ನಲ್ಲಿ ಜಾನಿ ಬೈರ್​ಸ್ಟೋವ್ (7), ರೈಲಿ ರೊಸ್ಸೊವ್ (0) ವಿಕೆಟ್ ಕಬಳಿಸಿದ ತುಷಾರ್ ಸಿಎಸ್​ಕೆ ತಂಡಕ್ಕೆ ಆರಂಭದಲ್ಲೇ ಯಶಸ್ಸು ತಂದುಕೊಟ್ಟರು.

4 / 7
ಪಂಜಾಬ್ ಕಿಂಗ್ಸ್ ತಂಡವು ಆರಂಭಿಕ ಆಘಾತದಿಂದ ಪಾರಾಗುವ ಮುನ್ನವೇ ಸಿಎಸ್​ಕೆ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಪರಿಣಾಮ 69 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಅಂತಿಮವಾಗಿ 20 ಓವರ್​ಗಳಲ್ಲಿ 9 ವಿಕೆಟ್ ಕಬಳಿಸಿದ ಸಿಎಸ್​ಕೆ ಪಂಜಾಬ್ ಕಿಂಗ್ಸ್ ತಂಡವನ್ನು 139 ರನ್​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಈ ಮೂಲಕ CSK 28 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಪಂಜಾಬ್ ಕಿಂಗ್ಸ್ ತಂಡವು ಆರಂಭಿಕ ಆಘಾತದಿಂದ ಪಾರಾಗುವ ಮುನ್ನವೇ ಸಿಎಸ್​ಕೆ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಪರಿಣಾಮ 69 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಅಂತಿಮವಾಗಿ 20 ಓವರ್​ಗಳಲ್ಲಿ 9 ವಿಕೆಟ್ ಕಬಳಿಸಿದ ಸಿಎಸ್​ಕೆ ಪಂಜಾಬ್ ಕಿಂಗ್ಸ್ ತಂಡವನ್ನು 139 ರನ್​ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾದರು. ಈ ಮೂಲಕ CSK 28 ರನ್​ಗಳ ಭರ್ಜರಿ ಜಯ ಸಾಧಿಸಿದೆ.

5 / 7
ಇದು 1,115 ದಿನಗಳ ಬಳಿಕ ಸಿಎಸ್​ಕೆ ತಂಡಕ್ಕೆ ಸಿಕ್ಕ ಗೆಲುವು ಎಂಬುದು ವಿಶೇಷ. ಅಂದರೆ ಪಂಜಾಬ್ ಕಿಂಗ್ಸ್ ತಂಡವನ್ನು ಸಿಎಸ್​ಕೆ ತಂಡ ಸೋಲಿಸಿ ಬರೋಬ್ಬರಿ 1,115 ದಿನಗಳಾಗಿತ್ತು. ಐಪಿಎಲ್ 2021 ರಿಂದ ಪಂಜಾಬ್ ಕಿಂಗ್ಸ್ ತಂಡವು ಸಿಎಸ್​ಕೆ ವಿರುದ್ಧ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದೆ.

ಇದು 1,115 ದಿನಗಳ ಬಳಿಕ ಸಿಎಸ್​ಕೆ ತಂಡಕ್ಕೆ ಸಿಕ್ಕ ಗೆಲುವು ಎಂಬುದು ವಿಶೇಷ. ಅಂದರೆ ಪಂಜಾಬ್ ಕಿಂಗ್ಸ್ ತಂಡವನ್ನು ಸಿಎಸ್​ಕೆ ತಂಡ ಸೋಲಿಸಿ ಬರೋಬ್ಬರಿ 1,115 ದಿನಗಳಾಗಿತ್ತು. ಐಪಿಎಲ್ 2021 ರಿಂದ ಪಂಜಾಬ್ ಕಿಂಗ್ಸ್ ತಂಡವು ಸಿಎಸ್​ಕೆ ವಿರುದ್ಧ ಸತತವಾಗಿ ಗೆಲುವು ಸಾಧಿಸುತ್ತಾ ಬಂದಿದೆ.

6 / 7
ಈ ವೇಳೆ ಆಡಿದ 5 ಪಂದ್ಯಗಳಲ್ಲೂ ಸಿಎಸ್​ಕೆಗೆ ಸೋಲುಣಿಸಿ ಪಂಜಾಬ್ ಕಿಂಗ್ಸ್ ಪಾರುಪತ್ಯ ಮೆರೆದಿದೆ. ಇದೀಗ 1,115 ದಿನಗಳ ಬಳಿಕ ಈ ಸೋಲಿನ ಸಂಕೋಲೆಯಿಂದ ಹೊರಬರುವಲ್ಲಿ ಕೊನೆಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿರುವುದು ವಿಶೇಷ.

ಈ ವೇಳೆ ಆಡಿದ 5 ಪಂದ್ಯಗಳಲ್ಲೂ ಸಿಎಸ್​ಕೆಗೆ ಸೋಲುಣಿಸಿ ಪಂಜಾಬ್ ಕಿಂಗ್ಸ್ ಪಾರುಪತ್ಯ ಮೆರೆದಿದೆ. ಇದೀಗ 1,115 ದಿನಗಳ ಬಳಿಕ ಈ ಸೋಲಿನ ಸಂಕೋಲೆಯಿಂದ ಹೊರಬರುವಲ್ಲಿ ಕೊನೆಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಶಸ್ವಿಯಾಗಿರುವುದು ವಿಶೇಷ.

7 / 7
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!