AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡ ನೇರವಾಗಿ ಫೈನಲ್​ ಆಡಲಿ: ಅಂಬಾಟಿ ರಾಯುಡು

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇದುವರೆಗೆ ಮೂರು ಪಂದ್ಯಗಳನ್ನಾಡಿರುವ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದ್ದ ಸಿಎಸ್​ಕೆ ಆ ಬಳಿಕ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ಬೀಗಿತ್ತು.

TV9 Web
| Edited By: |

Updated on: Apr 01, 2024 | 7:58 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (​IPL 2024) ಸೀಸನ್-17 ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಪ್ರದರ್ಶನ ಮುಂದುವರೆಸಿದೆ. ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಬೀಗಿದ್ದ ಸಿಎಸ್​ಕೆ ತಂಡವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 20 ರನ್​ಗಳಿಂದ ಸೋಲನುಭವಿಸಿದೆ. ಇದಾಗ್ಯೂ ಈ ಪಂದ್ಯದಲ್ಲಿ ಚೆನ್ನೈ ತಂಡವು ಕಳಪೆ ಪ್ರದರ್ಶನ ನೀಡಿಲ್ಲ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (​IPL 2024) ಸೀಸನ್-17 ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಪ್ರದರ್ಶನ ಮುಂದುವರೆಸಿದೆ. ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಬೀಗಿದ್ದ ಸಿಎಸ್​ಕೆ ತಂಡವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 20 ರನ್​ಗಳಿಂದ ಸೋಲನುಭವಿಸಿದೆ. ಇದಾಗ್ಯೂ ಈ ಪಂದ್ಯದಲ್ಲಿ ಚೆನ್ನೈ ತಂಡವು ಕಳಪೆ ಪ್ರದರ್ಶನ ನೀಡಿಲ್ಲ ಎಂಬುದು ವಿಶೇಷ.

1 / 5
ಇದೇ ಕಾರಣದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಾಡಿ ಹೊಗಳಿರುವ ಮಾಜಿ ಆಟಗಾರ ಅಂಬಾಟಿ ರಾಯುಡು, ಸಿಎಸ್​ಕೆ ತಂಡವು ಮೊದಲ ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದಿದೆ. ಎಂಎಸ್ ಧೋನಿ ನಾಯಕನಲ್ಲದಿದ್ದರೂ, ಚೆನ್ನೈ ತಂಡಕ್ಕೆ ಯಾವುದೇ ಸಮಸ್ಯೆಯಾಗುತ್ತಿಲ್ಲ ಎಂಬುದನ್ನು ಗಮನಿಸಬೇಕು. ರುತುರಾಜ್ ಗಾಯಕ್ವಾಡ್ ಉತ್ತಮವಾಗಿ ಸಿಎಸ್​ಕೆ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಇದೇ ಕಾರಣದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಾಡಿ ಹೊಗಳಿರುವ ಮಾಜಿ ಆಟಗಾರ ಅಂಬಾಟಿ ರಾಯುಡು, ಸಿಎಸ್​ಕೆ ತಂಡವು ಮೊದಲ ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದಿದೆ. ಎಂಎಸ್ ಧೋನಿ ನಾಯಕನಲ್ಲದಿದ್ದರೂ, ಚೆನ್ನೈ ತಂಡಕ್ಕೆ ಯಾವುದೇ ಸಮಸ್ಯೆಯಾಗುತ್ತಿಲ್ಲ ಎಂಬುದನ್ನು ಗಮನಿಸಬೇಕು. ರುತುರಾಜ್ ಗಾಯಕ್ವಾಡ್ ಉತ್ತಮವಾಗಿ ಸಿಎಸ್​ಕೆ ತಂಡವನ್ನು ಮುನ್ನಡೆಸುತ್ತಿದ್ದಾರೆ.

2 / 5
ಅಲ್ಲದೆ ಸಿಎಸ್​ಕೆ ತಂಡದ ಒಂದೆರಡು ಪ್ರಮುಖ ಆಟಗಾರರು ಗಾಯಾಳುಗಳಾಗಿದ್ದಾರೆ. ಇದರ ಹೊರತಾಗಿಯೂ ಆಟದ ಎಲ್ಲಾ ವಿಭಾಗಗಳಲ್ಲಿ ಚೆನ್ನೈ ತಂಡ ಈಗಲೂ ಬಲಿಷ್ಠವಾಗಿ ಕಾಣುತ್ತಿದೆ. ಈ ಎಲ್ಲಾ ಕಾರಣಗಳಿಂದ ಇತರ ಫ್ರಾಂಚೈಸಿಗಳು ಸಿಎಸ್‌ಕೆ ತಂಡನ್ನು ಸೋಲಿಸುವುದು ಕಷ್ಟ ಎಂದು ರಾಯುಡು ಹೇಳಿದ್ದಾರೆ.

ಅಲ್ಲದೆ ಸಿಎಸ್​ಕೆ ತಂಡದ ಒಂದೆರಡು ಪ್ರಮುಖ ಆಟಗಾರರು ಗಾಯಾಳುಗಳಾಗಿದ್ದಾರೆ. ಇದರ ಹೊರತಾಗಿಯೂ ಆಟದ ಎಲ್ಲಾ ವಿಭಾಗಗಳಲ್ಲಿ ಚೆನ್ನೈ ತಂಡ ಈಗಲೂ ಬಲಿಷ್ಠವಾಗಿ ಕಾಣುತ್ತಿದೆ. ಈ ಎಲ್ಲಾ ಕಾರಣಗಳಿಂದ ಇತರ ಫ್ರಾಂಚೈಸಿಗಳು ಸಿಎಸ್‌ಕೆ ತಂಡನ್ನು ಸೋಲಿಸುವುದು ಕಷ್ಟ ಎಂದು ರಾಯುಡು ಹೇಳಿದ್ದಾರೆ.

3 / 5
ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿರುವ ಸಿಎಸ್​ಕೆ ವಿರುದ್ಧ ಲೀಗ್ ಪಂದ್ಯಗಳನ್ನಾಡುವುದು ಸಮಯ ವ್ಯರ್ಥ. ನನ್ನ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್‌ಗೆ ನೇರವಾಗಿ ಫೈನಲ್​ ಆಡಲು ಅವಕಾಶ ನೀಡಬೇಕು.  ಇತರ ಫ್ರಾಂಚೈಸಿಗಳು ಲೀಗ್ ಹಂತದಲ್ಲಿ ಸ್ಪರ್ಧಿಸಿ ಫೈನಲ್​ಗೆ ಬರಲಿ. ಏಕೆಂದರೆ ಸಿಎಸ್​ಕೆ ಫೈನಲ್ ಆಡುವುದಂತು ಖಚಿತ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿರುವ ಸಿಎಸ್​ಕೆ ವಿರುದ್ಧ ಲೀಗ್ ಪಂದ್ಯಗಳನ್ನಾಡುವುದು ಸಮಯ ವ್ಯರ್ಥ. ನನ್ನ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್‌ಗೆ ನೇರವಾಗಿ ಫೈನಲ್​ ಆಡಲು ಅವಕಾಶ ನೀಡಬೇಕು. ಇತರ ಫ್ರಾಂಚೈಸಿಗಳು ಲೀಗ್ ಹಂತದಲ್ಲಿ ಸ್ಪರ್ಧಿಸಿ ಫೈನಲ್​ಗೆ ಬರಲಿ. ಏಕೆಂದರೆ ಸಿಎಸ್​ಕೆ ಫೈನಲ್ ಆಡುವುದಂತು ಖಚಿತ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

4 / 5
ಅಂದಹಾಗೆ ಐಪಿಎಲ್​ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿ ಕೂಡ ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿದೆ. ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಹಾಲಿ ಚಾಂಪಿಯನ್​ ಸಿಎಸ್​ಕೆ ತಂಡ ಈ ಬಾರಿ ಕೂಡ ಪ್ಲೇಆಫ್​ ಪ್ರವೇಶಿಸುವುದನ್ನು ಎದುರು ನೋಡಬಹುದು.

ಅಂದಹಾಗೆ ಐಪಿಎಲ್​ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿ ಕೂಡ ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿದೆ. ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಹಾಲಿ ಚಾಂಪಿಯನ್​ ಸಿಎಸ್​ಕೆ ತಂಡ ಈ ಬಾರಿ ಕೂಡ ಪ್ಲೇಆಫ್​ ಪ್ರವೇಶಿಸುವುದನ್ನು ಎದುರು ನೋಡಬಹುದು.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್