AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡ ನೇರವಾಗಿ ಫೈನಲ್​ ಆಡಲಿ: ಅಂಬಾಟಿ ರಾಯುಡು

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (ಐಪಿಎಲ್ 2024) ಇದುವರೆಗೆ ಮೂರು ಪಂದ್ಯಗಳನ್ನಾಡಿರುವ ರುತುರಾಜ್ ಗಾಯಕ್ವಾಡ್ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆರ್​ಸಿಬಿ ವಿರುದ್ಧದ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದ್ದ ಸಿಎಸ್​ಕೆ ಆ ಬಳಿಕ ಗುಜರಾತ್ ಟೈಟಾನ್ಸ್ ವಿರುದ್ಧ ಗೆದ್ದು ಬೀಗಿತ್ತು.

TV9 Web
| Edited By: |

Updated on: Apr 01, 2024 | 7:58 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (​IPL 2024) ಸೀಸನ್-17 ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಪ್ರದರ್ಶನ ಮುಂದುವರೆಸಿದೆ. ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಬೀಗಿದ್ದ ಸಿಎಸ್​ಕೆ ತಂಡವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 20 ರನ್​ಗಳಿಂದ ಸೋಲನುಭವಿಸಿದೆ. ಇದಾಗ್ಯೂ ಈ ಪಂದ್ಯದಲ್ಲಿ ಚೆನ್ನೈ ತಂಡವು ಕಳಪೆ ಪ್ರದರ್ಶನ ನೀಡಿಲ್ಲ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (​IPL 2024) ಸೀಸನ್-17 ರಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ಉತ್ತಮ ಪ್ರದರ್ಶನ ಮುಂದುವರೆಸಿದೆ. ಮೊದಲೆರಡು ಪಂದ್ಯಗಳಲ್ಲಿ ಗೆದ್ದು ಬೀಗಿದ್ದ ಸಿಎಸ್​ಕೆ ತಂಡವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 20 ರನ್​ಗಳಿಂದ ಸೋಲನುಭವಿಸಿದೆ. ಇದಾಗ್ಯೂ ಈ ಪಂದ್ಯದಲ್ಲಿ ಚೆನ್ನೈ ತಂಡವು ಕಳಪೆ ಪ್ರದರ್ಶನ ನೀಡಿಲ್ಲ ಎಂಬುದು ವಿಶೇಷ.

1 / 5
ಇದೇ ಕಾರಣದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಾಡಿ ಹೊಗಳಿರುವ ಮಾಜಿ ಆಟಗಾರ ಅಂಬಾಟಿ ರಾಯುಡು, ಸಿಎಸ್​ಕೆ ತಂಡವು ಮೊದಲ ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದಿದೆ. ಎಂಎಸ್ ಧೋನಿ ನಾಯಕನಲ್ಲದಿದ್ದರೂ, ಚೆನ್ನೈ ತಂಡಕ್ಕೆ ಯಾವುದೇ ಸಮಸ್ಯೆಯಾಗುತ್ತಿಲ್ಲ ಎಂಬುದನ್ನು ಗಮನಿಸಬೇಕು. ರುತುರಾಜ್ ಗಾಯಕ್ವಾಡ್ ಉತ್ತಮವಾಗಿ ಸಿಎಸ್​ಕೆ ತಂಡವನ್ನು ಮುನ್ನಡೆಸುತ್ತಿದ್ದಾರೆ.

ಇದೇ ಕಾರಣದಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಹಾಡಿ ಹೊಗಳಿರುವ ಮಾಜಿ ಆಟಗಾರ ಅಂಬಾಟಿ ರಾಯುಡು, ಸಿಎಸ್​ಕೆ ತಂಡವು ಮೊದಲ ಎರಡು ಪಂದ್ಯಗಳನ್ನು ಏಕಪಕ್ಷೀಯವಾಗಿ ಗೆದ್ದಿದೆ. ಎಂಎಸ್ ಧೋನಿ ನಾಯಕನಲ್ಲದಿದ್ದರೂ, ಚೆನ್ನೈ ತಂಡಕ್ಕೆ ಯಾವುದೇ ಸಮಸ್ಯೆಯಾಗುತ್ತಿಲ್ಲ ಎಂಬುದನ್ನು ಗಮನಿಸಬೇಕು. ರುತುರಾಜ್ ಗಾಯಕ್ವಾಡ್ ಉತ್ತಮವಾಗಿ ಸಿಎಸ್​ಕೆ ತಂಡವನ್ನು ಮುನ್ನಡೆಸುತ್ತಿದ್ದಾರೆ.

2 / 5
ಅಲ್ಲದೆ ಸಿಎಸ್​ಕೆ ತಂಡದ ಒಂದೆರಡು ಪ್ರಮುಖ ಆಟಗಾರರು ಗಾಯಾಳುಗಳಾಗಿದ್ದಾರೆ. ಇದರ ಹೊರತಾಗಿಯೂ ಆಟದ ಎಲ್ಲಾ ವಿಭಾಗಗಳಲ್ಲಿ ಚೆನ್ನೈ ತಂಡ ಈಗಲೂ ಬಲಿಷ್ಠವಾಗಿ ಕಾಣುತ್ತಿದೆ. ಈ ಎಲ್ಲಾ ಕಾರಣಗಳಿಂದ ಇತರ ಫ್ರಾಂಚೈಸಿಗಳು ಸಿಎಸ್‌ಕೆ ತಂಡನ್ನು ಸೋಲಿಸುವುದು ಕಷ್ಟ ಎಂದು ರಾಯುಡು ಹೇಳಿದ್ದಾರೆ.

ಅಲ್ಲದೆ ಸಿಎಸ್​ಕೆ ತಂಡದ ಒಂದೆರಡು ಪ್ರಮುಖ ಆಟಗಾರರು ಗಾಯಾಳುಗಳಾಗಿದ್ದಾರೆ. ಇದರ ಹೊರತಾಗಿಯೂ ಆಟದ ಎಲ್ಲಾ ವಿಭಾಗಗಳಲ್ಲಿ ಚೆನ್ನೈ ತಂಡ ಈಗಲೂ ಬಲಿಷ್ಠವಾಗಿ ಕಾಣುತ್ತಿದೆ. ಈ ಎಲ್ಲಾ ಕಾರಣಗಳಿಂದ ಇತರ ಫ್ರಾಂಚೈಸಿಗಳು ಸಿಎಸ್‌ಕೆ ತಂಡನ್ನು ಸೋಲಿಸುವುದು ಕಷ್ಟ ಎಂದು ರಾಯುಡು ಹೇಳಿದ್ದಾರೆ.

3 / 5
ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿರುವ ಸಿಎಸ್​ಕೆ ವಿರುದ್ಧ ಲೀಗ್ ಪಂದ್ಯಗಳನ್ನಾಡುವುದು ಸಮಯ ವ್ಯರ್ಥ. ನನ್ನ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್‌ಗೆ ನೇರವಾಗಿ ಫೈನಲ್​ ಆಡಲು ಅವಕಾಶ ನೀಡಬೇಕು.  ಇತರ ಫ್ರಾಂಚೈಸಿಗಳು ಲೀಗ್ ಹಂತದಲ್ಲಿ ಸ್ಪರ್ಧಿಸಿ ಫೈನಲ್​ಗೆ ಬರಲಿ. ಏಕೆಂದರೆ ಸಿಎಸ್​ಕೆ ಫೈನಲ್ ಆಡುವುದಂತು ಖಚಿತ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿರುವ ಸಿಎಸ್​ಕೆ ವಿರುದ್ಧ ಲೀಗ್ ಪಂದ್ಯಗಳನ್ನಾಡುವುದು ಸಮಯ ವ್ಯರ್ಥ. ನನ್ನ ಪ್ರಕಾರ, ಚೆನ್ನೈ ಸೂಪರ್ ಕಿಂಗ್ಸ್‌ಗೆ ನೇರವಾಗಿ ಫೈನಲ್​ ಆಡಲು ಅವಕಾಶ ನೀಡಬೇಕು. ಇತರ ಫ್ರಾಂಚೈಸಿಗಳು ಲೀಗ್ ಹಂತದಲ್ಲಿ ಸ್ಪರ್ಧಿಸಿ ಫೈನಲ್​ಗೆ ಬರಲಿ. ಏಕೆಂದರೆ ಸಿಎಸ್​ಕೆ ಫೈನಲ್ ಆಡುವುದಂತು ಖಚಿತ ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

4 / 5
ಅಂದಹಾಗೆ ಐಪಿಎಲ್​ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿ ಕೂಡ ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿದೆ. ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಹಾಲಿ ಚಾಂಪಿಯನ್​ ಸಿಎಸ್​ಕೆ ತಂಡ ಈ ಬಾರಿ ಕೂಡ ಪ್ಲೇಆಫ್​ ಪ್ರವೇಶಿಸುವುದನ್ನು ಎದುರು ನೋಡಬಹುದು.

ಅಂದಹಾಗೆ ಐಪಿಎಲ್​ ಇತಿಹಾಸದಲ್ಲಿ ಐದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿ ಕೂಡ ಬಲಿಷ್ಠ ಪಡೆಯಾಗಿ ಗುರುತಿಸಿಕೊಂಡಿದೆ. ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಹಾಲಿ ಚಾಂಪಿಯನ್​ ಸಿಎಸ್​ಕೆ ತಂಡ ಈ ಬಾರಿ ಕೂಡ ಪ್ಲೇಆಫ್​ ಪ್ರವೇಶಿಸುವುದನ್ನು ಎದುರು ನೋಡಬಹುದು.

5 / 5
Follow Us
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ಕಾಂಗ್ರೆಸ್​​ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಕ್ರಿಕೆಟ್​ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ರಾಯಚೂರಿನ ರೈಸ್ ಮಿಲ್​ಗಳಿಗೂ ಯುದ್ಧಾಘಾತ!
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ
ಯುವತಿಗೆ ಹಲ್ಲೆ ಯತ್ನ, ಯುವಕನ ಅಟ್ಟಹಾಸದ ವಿಡಿಯೋ ಸಿಸಿಟಿವಿಲಿ ಸೆರೆ