AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK vs RCB: ಚೆನ್ನೈನಲ್ಲಿ ಚಮಕ್ ಕೊಡೋರು ಯಾರು?

IPL 2024 CSK vs RCB: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2024) ಸೀಸನ್ 17 ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಚೆನ್ನೈನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಸಿಎಸ್​ಕೆ ಮತ್ತು ಆರ್​ಸಿಬಿ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯವು ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ಸಿಎಸ್​ಕೆ ಪಾಲಿಗೆ ಪ್ಲಸ್ ಪಾಯಿಂಟ್.

TV9 Web
| Edited By: |

Updated on: Mar 21, 2024 | 1:52 PM

Share
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಆರಂಭಕ್ಕೆ ವೇದಿಕೆ ಸಿದ್ಧವಾಗಿದೆ. ಶುಕ್ರವಾರ (ಮಾ.22) ಶುರುವಾಗಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ವಿಶೇಷ.

ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್-17 ಆರಂಭಕ್ಕೆ ವೇದಿಕೆ ಸಿದ್ಧವಾಗಿದೆ. ಶುಕ್ರವಾರ (ಮಾ.22) ಶುರುವಾಗಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವುದು ವಿಶೇಷ.

1 / 7
ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಪಂದ್ಯವನ್ನು ತವರಿನಲ್ಲಿ ಆಡುತ್ತಿರುವುದು ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಸಿಎಸ್​ಕೆ ತಂಡವು ಎಂಎ ಚಿದಂಬರಂ ಮೈದಾನದಲ್ಲಿ ಸೋತಿದಕ್ಕಿಂತ ಗೆದ್ದಿದ್ದೇ ಹೆಚ್ಚು. ಅದರಲ್ಲೂ ಸಿಎಸ್​ಕೆ ತವರಿನಲ್ಲಿ ಆರ್​ಸಿಬಿ ವಿರುದ್ಧ ಸೋತಿರುವುದು ಕೇವಲ 1 ಬಾರಿ ಎಂದರೆ ನಂಬಲೇಬಕು.

ಅಂದರೆ ಚೆನ್ನೈ ಸೂಪರ್ ಕಿಂಗ್ಸ್ ತನ್ನ ಮೊದಲ ಪಂದ್ಯವನ್ನು ತವರಿನಲ್ಲಿ ಆಡುತ್ತಿರುವುದು ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಸಿಎಸ್​ಕೆ ತಂಡವು ಎಂಎ ಚಿದಂಬರಂ ಮೈದಾನದಲ್ಲಿ ಸೋತಿದಕ್ಕಿಂತ ಗೆದ್ದಿದ್ದೇ ಹೆಚ್ಚು. ಅದರಲ್ಲೂ ಸಿಎಸ್​ಕೆ ತವರಿನಲ್ಲಿ ಆರ್​ಸಿಬಿ ವಿರುದ್ಧ ಸೋತಿರುವುದು ಕೇವಲ 1 ಬಾರಿ ಎಂದರೆ ನಂಬಲೇಬಕು.

2 / 7
ಉಭಯ ತಂಡಗಳು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇದುವರೆಗೆ 8 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 7 ಬಾರಿ ಭರ್ಜರಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ತಂಡ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅದು ಕೂಡ 2008 ರಲ್ಲಿ. ಇದಾದ ಬಳಿಕ ಚೆನ್ನೈನಲ್ಲಿ ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆಲುವಿನ ನಗೆ ಬೀರಿಲ್ಲ.

ಉಭಯ ತಂಡಗಳು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇದುವರೆಗೆ 8 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 7 ಬಾರಿ ಭರ್ಜರಿ ಜಯ ಸಾಧಿಸಿದೆ. ಇನ್ನು ಆರ್​ಸಿಬಿ ತಂಡ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅದು ಕೂಡ 2008 ರಲ್ಲಿ. ಇದಾದ ಬಳಿಕ ಚೆನ್ನೈನಲ್ಲಿ ಸಿಎಸ್​ಕೆ ವಿರುದ್ಧ ಆರ್​ಸಿಬಿ ಗೆಲುವಿನ ನಗೆ ಬೀರಿಲ್ಲ.

3 / 7
ಇನ್ನು ಸಿಎಸ್​ಕೆ ತಂಡವು ತವರು ಮೈದಾನದಲ್ಲಿ ಇದುವರೆಗೆ 64 ಪಂದ್ಯಗಳನ್ನಾಡಿದೆ. ಈ ವೇಳೆ 18 ಪಂದ್ಯಗಳಲ್ಲಿ ಸೋತರೆ, 46 ಪಂದ್ಯಗಳಲ್ಲಿ ಜಯಬೇರಿ ಬಾರಿಸಿದೆ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತವರಿನ ಹುಲಿಗಳೆಂದು ಕರೆಯಲಾಗುತ್ತದೆ.

ಇನ್ನು ಸಿಎಸ್​ಕೆ ತಂಡವು ತವರು ಮೈದಾನದಲ್ಲಿ ಇದುವರೆಗೆ 64 ಪಂದ್ಯಗಳನ್ನಾಡಿದೆ. ಈ ವೇಳೆ 18 ಪಂದ್ಯಗಳಲ್ಲಿ ಸೋತರೆ, 46 ಪಂದ್ಯಗಳಲ್ಲಿ ಜಯಬೇರಿ ಬಾರಿಸಿದೆ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತವರಿನ ಹುಲಿಗಳೆಂದು ಕರೆಯಲಾಗುತ್ತದೆ.

4 / 7
ಹಾಗೆಯೇ ಆರ್​ಸಿಬಿ ತಂಡವು ಚೆನ್ನೈ ಮೈದಾನದಲ್ಲಿ ಒಟ್ಟು 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು. ಅಂದರೆ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ.

ಹಾಗೆಯೇ ಆರ್​ಸಿಬಿ ತಂಡವು ಚೆನ್ನೈ ಮೈದಾನದಲ್ಲಿ ಒಟ್ಟು 12 ಪಂದ್ಯಗಳನ್ನಾಡಿದೆ. ಈ ವೇಳೆ ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು. ಅಂದರೆ 5 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 7 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ.

5 / 7
ಇದಾಗ್ಯೂ ಈ ಮೈದಾನದಲ್ಲಿ ಟಾಸ್ ಕೂಡ ಪ್ರಮುಖ ಪಾತ್ರವಹಿಸುತ್ತದೆ. ಇದಕ್ಕೆ ಸಾಕ್ಷಿಯೇ ಸಿಎಸ್​ಕೆ ಗೆದ್ದಿರುವ ಪಂದ್ಯಗಳ ಸಂಖ್ಯೆ. ಅಂದರೆ ಚೆನ್ನೈನಲ್ಲಿ ಧೋನಿ ಪಡೆ ಗೆದ್ದಿರುವ 46 ಪಂದ್ಯಗಳಲ್ಲಿ ಸಿಎಸ್​ಕೆ 30 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಇಲ್ಲಿ ಸಿಎಸ್​ಕೆ ತಂಡ ಮೇಲುಗೈ ಹೊಂದಿದ್ದರೂ, ಟಾಸ್ ಅದೃಷ್ಟ ಕೈ ಹಿಡಿದರೆ ಅಚ್ಚರಿಯ ಫಲಿತಾಂಶವನ್ನು ನಿರೀಕ್ಷಿಸಬಹುದು.

ಇದಾಗ್ಯೂ ಈ ಮೈದಾನದಲ್ಲಿ ಟಾಸ್ ಕೂಡ ಪ್ರಮುಖ ಪಾತ್ರವಹಿಸುತ್ತದೆ. ಇದಕ್ಕೆ ಸಾಕ್ಷಿಯೇ ಸಿಎಸ್​ಕೆ ಗೆದ್ದಿರುವ ಪಂದ್ಯಗಳ ಸಂಖ್ಯೆ. ಅಂದರೆ ಚೆನ್ನೈನಲ್ಲಿ ಧೋನಿ ಪಡೆ ಗೆದ್ದಿರುವ 46 ಪಂದ್ಯಗಳಲ್ಲಿ ಸಿಎಸ್​ಕೆ 30 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ. ಹೀಗಾಗಿ ಇಲ್ಲಿ ಸಿಎಸ್​ಕೆ ತಂಡ ಮೇಲುಗೈ ಹೊಂದಿದ್ದರೂ, ಟಾಸ್ ಅದೃಷ್ಟ ಕೈ ಹಿಡಿದರೆ ಅಚ್ಚರಿಯ ಫಲಿತಾಂಶವನ್ನು ನಿರೀಕ್ಷಿಸಬಹುದು.

6 / 7
ಅದರಲ್ಲೂ 2021 ರ ಬಳಿಕ ಇದೇ ಮೊದಲ ಬಾರಿಗೆ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ ತಂಡವು ಹೊಸ ಹುಮ್ಮಸ್ಸಿನಲ್ಲಿದ್ದು, ಹೀಗಾಗಿ ಈ ಪಂದ್ಯದಲ್ಲಿ CSK ಗೆ ಕಠಿಣ ಪೈಪೋಟಿ ನೀಡಿ RCB ಶುಭಾರಂಭ ಮಾಡುವ ನಿರೀಕ್ಷೆಯಿದೆ.

ಅದರಲ್ಲೂ 2021 ರ ಬಳಿಕ ಇದೇ ಮೊದಲ ಬಾರಿಗೆ ಐಪಿಎಲ್​ನ ಉದ್ಘಾಟನಾ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವ ಆರ್​ಸಿಬಿ ತಂಡವು ಹೊಸ ಹುಮ್ಮಸ್ಸಿನಲ್ಲಿದ್ದು, ಹೀಗಾಗಿ ಈ ಪಂದ್ಯದಲ್ಲಿ CSK ಗೆ ಕಠಿಣ ಪೈಪೋಟಿ ನೀಡಿ RCB ಶುಭಾರಂಭ ಮಾಡುವ ನಿರೀಕ್ಷೆಯಿದೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್