AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 CSK vs RR: RCB ಪಾಲಿಗೆ ಇಂದು ಯಾರು ಗೆಲ್ಲಬೇಕು?

IPL 2024: ಐಪಿಎಲ್​ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಐಪಿಎಲ್​ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ. ಆದರೆ ಅದಕ್ಕೂ ಮುನ್ನ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಗೆಲ್ಲಬೇಕಿದೆ.

ಝಾಹಿರ್ ಯೂಸುಫ್
|

Updated on:May 12, 2024 | 11:31 AM

Share
ಐಪಿಎಲ್ (IPL 2024) ಸೀಸನ್ 17ರ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ತುಂಬಾ ಮಹತ್ವದ್ದು. ಅದರಲ್ಲೂ ಆರ್​ಸಿಬಿ ಪಾಲಿಗೂ ನಿರ್ಣಾಯಕ.

ಐಪಿಎಲ್ (IPL 2024) ಸೀಸನ್ 17ರ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ತುಂಬಾ ಮಹತ್ವದ್ದು. ಅದರಲ್ಲೂ ಆರ್​ಸಿಬಿ ಪಾಲಿಗೂ ನಿರ್ಣಾಯಕ.

1 / 5
ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಅಧಿಕೃತವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಪ್ಲೇಆಫ್ ಹಂತಕ್ಕೇರುವ ಹಾದಿ ಸುಗಮವಾಗಲಿದೆ. ಮತ್ತೊಂದೆಡೆ ಇದೇ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಕನಸನ್ನು ಕೂಡ ನಿರ್ಧರಿಸಲಿದೆ.

ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಅಧಿಕೃತವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಪ್ಲೇಆಫ್ ಹಂತಕ್ಕೇರುವ ಹಾದಿ ಸುಗಮವಾಗಲಿದೆ. ಮತ್ತೊಂದೆಡೆ ಇದೇ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಕನಸನ್ನು ಕೂಡ ನಿರ್ಧರಿಸಲಿದೆ.

2 / 5
ಅಂದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆದ್ದರೆ ಒಟ್ಟು 14 ಅಂಕಗಳನ್ನು ಕಲೆಹಾಕಲಿದೆ. ಅದೇ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಸಿಎಸ್​ಕೆ ತಂಡದ ಪಾಯಿಂಟ್ಸ್ 12ರಲ್ಲೇ ಉಳಿಯಲಿದೆ. ಇತ್ತ ಆರ್​ಸಿಬಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಒಟ್ಟು 12 ಪಾಯಿಂಟ್ಸ್ ಸಂಪಾದಿಸಲಿದೆ.

ಅಂದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆದ್ದರೆ ಒಟ್ಟು 14 ಅಂಕಗಳನ್ನು ಕಲೆಹಾಕಲಿದೆ. ಅದೇ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಸಿಎಸ್​ಕೆ ತಂಡದ ಪಾಯಿಂಟ್ಸ್ 12ರಲ್ಲೇ ಉಳಿಯಲಿದೆ. ಇತ್ತ ಆರ್​ಸಿಬಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಒಟ್ಟು 12 ಪಾಯಿಂಟ್ಸ್ ಸಂಪಾದಿಸಲಿದೆ.

3 / 5
ಇದರಿಂದ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್​ಸಿಬಿ ತಂಡದ ಪಾಯಿಂಟ್ಸ್ ಸಮಗೊಳ್ಳಲಿದೆ. ಹೀಗೆ ಪಾಯಿಂಟ್ಸ್ ಸಮಗೊಂಡರೆ ಆರ್​ಸಿಬಿ ತಂಡಕ್ಕೆ ಕೊನೆಯ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಎದುರು ನೋಡಲಿದೆ.

ಇದರಿಂದ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್​ಸಿಬಿ ತಂಡದ ಪಾಯಿಂಟ್ಸ್ ಸಮಗೊಳ್ಳಲಿದೆ. ಹೀಗೆ ಪಾಯಿಂಟ್ಸ್ ಸಮಗೊಂಡರೆ ಆರ್​ಸಿಬಿ ತಂಡಕ್ಕೆ ಕೊನೆಯ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಎದುರು ನೋಡಲಿದೆ.

4 / 5
ಒಂದು ವೇಳೆ ಇಂದು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ, ಪ್ಲೇಆಫ್ ಹಂತಕ್ಕೇರಲು ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ನಾಕೌಟ್ ಪಂದ್ಯ ನಡೆಯಬಹುದು. ಅಂದರೆ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಿ 12 ಅಂಕಗಳನ್ನು ಪಡೆದುಕೊಂಡರೆ, ತನ್ನ ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಎದುರಿಸಲಿದೆ. ಇದರಿಂದ ಸಿಎಸ್​ಕೆ ಮತ್ತು ಆರ್​ಸಿಬಿ ನಡುವೆ ಪ್ಲೇಆಫ್ ಎಂಟ್ರಿ ಫೈಟ್ ಕಂಡು ಬರಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ಗೆದ್ದು ಆರ್​ಸಿಬಿ ಪ್ಲೇಆಫ್ ಪ್ರವೇಶಿಸಬಹುದು. ಈ ಎಲ್ಲಾ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲಲೇಬೇಕು.

ಒಂದು ವೇಳೆ ಇಂದು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ, ಪ್ಲೇಆಫ್ ಹಂತಕ್ಕೇರಲು ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ನಾಕೌಟ್ ಪಂದ್ಯ ನಡೆಯಬಹುದು. ಅಂದರೆ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಿ 12 ಅಂಕಗಳನ್ನು ಪಡೆದುಕೊಂಡರೆ, ತನ್ನ ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಎದುರಿಸಲಿದೆ. ಇದರಿಂದ ಸಿಎಸ್​ಕೆ ಮತ್ತು ಆರ್​ಸಿಬಿ ನಡುವೆ ಪ್ಲೇಆಫ್ ಎಂಟ್ರಿ ಫೈಟ್ ಕಂಡು ಬರಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ಗೆದ್ದು ಆರ್​ಸಿಬಿ ಪ್ಲೇಆಫ್ ಪ್ರವೇಶಿಸಬಹುದು. ಈ ಎಲ್ಲಾ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲಲೇಬೇಕು.

5 / 5

Published On - 10:28 am, Sun, 12 May 24

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ