AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 CSK vs RR: RCB ಪಾಲಿಗೆ ಇಂದು ಯಾರು ಗೆಲ್ಲಬೇಕು?

IPL 2024: ಐಪಿಎಲ್​ನ 61ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾದರೆ, ಐಪಿಎಲ್​ನ 62ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಕಣಕ್ಕಿಳಿಯಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಪ್ಲೇಆಫ್ ಹಾದಿ ಮತ್ತಷ್ಟು ಸುಗಮವಾಗಲಿದೆ. ಆದರೆ ಅದಕ್ಕೂ ಮುನ್ನ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಕೂಡ ಗೆಲ್ಲಬೇಕಿದೆ.

ಝಾಹಿರ್ ಯೂಸುಫ್
|

Updated on:May 12, 2024 | 11:31 AM

Share
ಐಪಿಎಲ್ (IPL 2024) ಸೀಸನ್ 17ರ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ತುಂಬಾ ಮಹತ್ವದ್ದು. ಅದರಲ್ಲೂ ಆರ್​ಸಿಬಿ ಪಾಲಿಗೂ ನಿರ್ಣಾಯಕ.

ಐಪಿಎಲ್ (IPL 2024) ಸೀಸನ್ 17ರ 61ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಹಾಗೂ ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳಿಗೂ ತುಂಬಾ ಮಹತ್ವದ್ದು. ಅದರಲ್ಲೂ ಆರ್​ಸಿಬಿ ಪಾಲಿಗೂ ನಿರ್ಣಾಯಕ.

1 / 5
ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಅಧಿಕೃತವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಪ್ಲೇಆಫ್ ಹಂತಕ್ಕೇರುವ ಹಾದಿ ಸುಗಮವಾಗಲಿದೆ. ಮತ್ತೊಂದೆಡೆ ಇದೇ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಕನಸನ್ನು ಕೂಡ ನಿರ್ಧರಿಸಲಿದೆ.

ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಅಧಿಕೃತವಾಗಿ ಪ್ಲೇಆಫ್​​ಗೆ ಎಂಟ್ರಿ ಕೊಡಲಿದೆ. ಅತ್ತ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೆ ಪ್ಲೇಆಫ್ ಹಂತಕ್ಕೇರುವ ಹಾದಿ ಸುಗಮವಾಗಲಿದೆ. ಮತ್ತೊಂದೆಡೆ ಇದೇ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಕನಸನ್ನು ಕೂಡ ನಿರ್ಧರಿಸಲಿದೆ.

2 / 5
ಅಂದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆದ್ದರೆ ಒಟ್ಟು 14 ಅಂಕಗಳನ್ನು ಕಲೆಹಾಕಲಿದೆ. ಅದೇ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಸಿಎಸ್​ಕೆ ತಂಡದ ಪಾಯಿಂಟ್ಸ್ 12ರಲ್ಲೇ ಉಳಿಯಲಿದೆ. ಇತ್ತ ಆರ್​ಸಿಬಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಒಟ್ಟು 12 ಪಾಯಿಂಟ್ಸ್ ಸಂಪಾದಿಸಲಿದೆ.

ಅಂದರೆ ಈ ಮ್ಯಾಚ್​ನಲ್ಲಿ ಸಿಎಸ್​ಕೆ ತಂಡ ಗೆದ್ದರೆ ಒಟ್ಟು 14 ಅಂಕಗಳನ್ನು ಕಲೆಹಾಕಲಿದೆ. ಅದೇ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ ಸಿಎಸ್​ಕೆ ತಂಡದ ಪಾಯಿಂಟ್ಸ್ 12ರಲ್ಲೇ ಉಳಿಯಲಿದೆ. ಇತ್ತ ಆರ್​ಸಿಬಿ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಒಟ್ಟು 12 ಪಾಯಿಂಟ್ಸ್ ಸಂಪಾದಿಸಲಿದೆ.

3 / 5
ಇದರಿಂದ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್​ಸಿಬಿ ತಂಡದ ಪಾಯಿಂಟ್ಸ್ ಸಮಗೊಳ್ಳಲಿದೆ. ಹೀಗೆ ಪಾಯಿಂಟ್ಸ್ ಸಮಗೊಂಡರೆ ಆರ್​ಸಿಬಿ ತಂಡಕ್ಕೆ ಕೊನೆಯ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಎದುರು ನೋಡಲಿದೆ.

ಇದರಿಂದ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಆರ್​ಸಿಬಿ ತಂಡದ ಪಾಯಿಂಟ್ಸ್ ಸಮಗೊಳ್ಳಲಿದೆ. ಹೀಗೆ ಪಾಯಿಂಟ್ಸ್ ಸಮಗೊಂಡರೆ ಆರ್​ಸಿಬಿ ತಂಡಕ್ಕೆ ಕೊನೆಯ ಪಂದ್ಯದಲ್ಲಿ ಗೆದ್ದು ಪ್ಲೇಆಫ್ ಹಂತಕ್ಕೇರುವ ಅವಕಾಶ ಹೆಚ್ಚಾಗಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುವುದನ್ನು ಆರ್​ಸಿಬಿ ಎದುರು ನೋಡಲಿದೆ.

4 / 5
ಒಂದು ವೇಳೆ ಇಂದು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ, ಪ್ಲೇಆಫ್ ಹಂತಕ್ಕೇರಲು ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ನಾಕೌಟ್ ಪಂದ್ಯ ನಡೆಯಬಹುದು. ಅಂದರೆ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಿ 12 ಅಂಕಗಳನ್ನು ಪಡೆದುಕೊಂಡರೆ, ತನ್ನ ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಎದುರಿಸಲಿದೆ. ಇದರಿಂದ ಸಿಎಸ್​ಕೆ ಮತ್ತು ಆರ್​ಸಿಬಿ ನಡುವೆ ಪ್ಲೇಆಫ್ ಎಂಟ್ರಿ ಫೈಟ್ ಕಂಡು ಬರಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ಗೆದ್ದು ಆರ್​ಸಿಬಿ ಪ್ಲೇಆಫ್ ಪ್ರವೇಶಿಸಬಹುದು. ಈ ಎಲ್ಲಾ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲಲೇಬೇಕು.

ಒಂದು ವೇಳೆ ಇಂದು ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದರೆ, ಪ್ಲೇಆಫ್ ಹಂತಕ್ಕೇರಲು ಆರ್​ಸಿಬಿ ಹಾಗೂ ಸಿಎಸ್​ಕೆ ನಡುವೆ ನಾಕೌಟ್ ಪಂದ್ಯ ನಡೆಯಬಹುದು. ಅಂದರೆ ಆರ್​ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸಿ 12 ಅಂಕಗಳನ್ನು ಪಡೆದುಕೊಂಡರೆ, ತನ್ನ ಕೊನೆಯ ಪಂದ್ಯದಲ್ಲಿ ಸಿಎಸ್​ಕೆ ತಂಡವನ್ನು ಎದುರಿಸಲಿದೆ. ಇದರಿಂದ ಸಿಎಸ್​ಕೆ ಮತ್ತು ಆರ್​ಸಿಬಿ ನಡುವೆ ಪ್ಲೇಆಫ್ ಎಂಟ್ರಿ ಫೈಟ್ ಕಂಡು ಬರಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲಿದೆ. ಈ ಮೂಲಕ ಸಿಎಸ್​ಕೆ ವಿರುದ್ಧ ಗೆದ್ದು ಆರ್​ಸಿಬಿ ಪ್ಲೇಆಫ್ ಪ್ರವೇಶಿಸಬಹುದು. ಈ ಎಲ್ಲಾ ಕಾರಣಗಳಿಂದಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲಲೇಬೇಕು.

5 / 5

Published On - 10:28 am, Sun, 12 May 24

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ