AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: CSK ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಟಗಾರ ಐಪಿಎಲ್​ನಿಂದ ಔಟ್..!

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್​) 17ನೇ ಆವೃತ್ತಿಗೆ ಮಾರ್ಚ್ 22 ರಂದು ಚಾಲನೆ ಸಿಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. IPL 2024 ರ ಮೊದಲ ಪಂದ್ಯಕ್ಕೆ ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ಡೆವೊನ್ ಕಾನ್ವೆ ಅಲಭ್ಯರಾಗುವುದು ಖಚಿತವಾಗಿದೆ.

TV9 Web
| Edited By: |

Updated on:Mar 04, 2024 | 8:32 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ಈ ಬಾರಿಯ ಐಪಿಎಲ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡಕ್ಕೆ ಆಘಾತ ಎದುರಾಗಿದೆ. ಸಿಎಸ್​ಕೆ ತಂಡದ ಸ್ಟಾರ್ ಆಟಗಾರ ಈ ಬಾರಿಯ ಐಪಿಎಲ್​ನಿಂದ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ.

1 / 6
ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ (Devon Conway) ಗಾಯಗೊಂಡಿದ್ದು, ಅವರು ಮೇ ತಿಂಗಳ ತನಕ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್​ಗೆ ಕಾನ್ವೆ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

ಹೌದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆರಂಭಿಕ ಆಟಗಾರ ಡೆವೊನ್ ಕಾನ್ವೆ (Devon Conway) ಗಾಯಗೊಂಡಿದ್ದು, ಅವರು ಮೇ ತಿಂಗಳ ತನಕ ಮೈದಾನಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎಂದು ವರದಿಯಾಗಿದೆ. ಹೀಗಾಗಿ ಈ ಬಾರಿಯ ಐಪಿಎಲ್​ಗೆ ಕಾನ್ವೆ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

2 / 6
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ವೇಳೆ ನ್ಯೂಝಿಲೆಂಡ್ ಆಟಗಾರ ಡೆವೊನ್ ಕಾನ್ವೆ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಇದೀಗ ವೈದ್ಯಕೀಯ ವರದಿಯಲ್ಲಿ ಶಸ್ತ್ರಚಿಕಿತ್ಸೆ ಅನಿವಾರ್ಯ ಎಂದು ತಿಳಿದು ಬಂದಿದ್ದು, ಹೀಗಾಗಿ ಈ ವಾರ ಅವರು ಸರ್ಜರಿಗೆ ಒಳಗಾಗಲಿದ್ದಾರೆ. ಅಲ್ಲದೆ ಕನಿಷ್ಠ ಎಂಟು ವಾರಗಳವರೆಗೆ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ವೇಳೆ ನ್ಯೂಝಿಲೆಂಡ್ ಆಟಗಾರ ಡೆವೊನ್ ಕಾನ್ವೆ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು. ಇದೀಗ ವೈದ್ಯಕೀಯ ವರದಿಯಲ್ಲಿ ಶಸ್ತ್ರಚಿಕಿತ್ಸೆ ಅನಿವಾರ್ಯ ಎಂದು ತಿಳಿದು ಬಂದಿದ್ದು, ಹೀಗಾಗಿ ಈ ವಾರ ಅವರು ಸರ್ಜರಿಗೆ ಒಳಗಾಗಲಿದ್ದಾರೆ. ಅಲ್ಲದೆ ಕನಿಷ್ಠ ಎಂಟು ವಾರಗಳವರೆಗೆ ಅವರು ವಿಶ್ರಾಂತಿ ಪಡೆಯಲಿದ್ದಾರೆ.

3 / 6
ಅಂದರೆ ಮೇ ತಿಂಗಳ ತನಕ ಡೆವೊನ್ ಕಾನ್ವೆ ಕಣಕ್ಕಿಳಿಯುವುದಿಲ್ಲ. ಇತ್ತ ಐಪಿಎಲ್ ಮಾರ್ಚ್ 22 ರಿಂದ ಶುರುವಾಗಲಿದ್ದು, ಮೇ ತಿಂಗಳಾಂತ್ಯದಲ್ಲಿ ಮುಗಿಯಲಿದೆ. ಹಾಗೆಯೇ ಟಿ20 ವಿಶ್ವಕಪ್ ಜೂನ್ 1 ರಿಂದ ಆರಂಭವಾಗಲಿದೆ.

ಅಂದರೆ ಮೇ ತಿಂಗಳ ತನಕ ಡೆವೊನ್ ಕಾನ್ವೆ ಕಣಕ್ಕಿಳಿಯುವುದಿಲ್ಲ. ಇತ್ತ ಐಪಿಎಲ್ ಮಾರ್ಚ್ 22 ರಿಂದ ಶುರುವಾಗಲಿದ್ದು, ಮೇ ತಿಂಗಳಾಂತ್ಯದಲ್ಲಿ ಮುಗಿಯಲಿದೆ. ಹಾಗೆಯೇ ಟಿ20 ವಿಶ್ವಕಪ್ ಜೂನ್ 1 ರಿಂದ ಆರಂಭವಾಗಲಿದೆ.

4 / 6
ಹೀಗಾಗಿ ಕಾನ್ವೆ ಐಪಿಎಲ್​ನಿಂದ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಹೊಸ ಆರಂಭಿಕ ಆಟಗಾರ ಇನಿಂಗ್ಸ್ ಆರಂಭಿಸಲಿದ್ದಾರೆ.

ಹೀಗಾಗಿ ಕಾನ್ವೆ ಐಪಿಎಲ್​ನಿಂದ ಹೊರಗುಳಿಯುವುದು ಬಹುತೇಕ ಖಚಿತ. ಅಲ್ಲದೆ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚು. ಅದರಂತೆ ಈ ಬಾರಿಯ ಐಪಿಎಲ್​ನಲ್ಲಿ ಸಿಎಸ್​ಕೆ ಪರ ಹೊಸ ಆರಂಭಿಕ ಆಟಗಾರ ಇನಿಂಗ್ಸ್ ಆರಂಭಿಸಲಿದ್ದಾರೆ.

5 / 6
ಕಳೆದ ಐಪಿಎಲ್​ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 16 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಡೆವೊನ್ ಕಾನ್ವೆ 6 ಅರ್ಧಶತಕಗಳೊಂದಿಗೆ ಒಟ್ಟು 672 ರನ್ ಕಲೆಹಾಕಿದ್ದರು. ಈ ಮೂಲಕ ಸಿಎಸ್​ಕೆ ತಂಡವು ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಈ ಬಾರಿ ಅವರ ಅಲಭ್ಯತೆಯು ಸಿಎಸ್​ಕೆ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು.

ಕಳೆದ ಐಪಿಎಲ್​ ಸೀಸನ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 16 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಡೆವೊನ್ ಕಾನ್ವೆ 6 ಅರ್ಧಶತಕಗಳೊಂದಿಗೆ ಒಟ್ಟು 672 ರನ್ ಕಲೆಹಾಕಿದ್ದರು. ಈ ಮೂಲಕ ಸಿಎಸ್​ಕೆ ತಂಡವು ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಆದರೆ ಈ ಬಾರಿ ಅವರ ಅಲಭ್ಯತೆಯು ಸಿಎಸ್​ಕೆ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು.

6 / 6

Published On - 8:31 am, Mon, 4 March 24

Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ