AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024 DC vs LSG: ಇಂದಿನ ಪಂದ್ಯದಲ್ಲಿ ಯಾರು ಗೆದ್ದರೆ RCB ತಂಡಕ್ಕೆ ಪ್ಲಸ್ ಪಾಯಿಂಟ್

IPL 2024: ಐಪಿಎಲ್​ನ 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್​ಸಿಬಿ ತಂಡವನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಲಿದೆ. ಇದಾಗ್ಯೂ ನೆಟ್ ರನ್ ರೇಟ್​ನಲ್ಲಿ ಆರ್​ಸಿಬಿ ತಂಡ ಮುಂದಿರಲಿದೆ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಹಿಂದಿಕ್ಕುವ ಅವಕಾಶ ಆರ್​ಸಿಬಿ ತಂಡಕ್ಕಿರಲಿದೆ.

TV9 Web
| Edited By: |

Updated on: May 14, 2024 | 8:52 AM

Share
ಐಪಿಎಲ್​ನ (IPL 2024) 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಹೀಗಾಗಿ ಉಭಯ ತಂಡಗಳ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

ಐಪಿಎಲ್​ನ (IPL 2024) 64ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್ ರೇಸ್​ನಲ್ಲಿದೆ. ಹೀಗಾಗಿ ಉಭಯ ತಂಡಗಳ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ.

1 / 5
ಮತ್ತೊಂದೆಡೆ ಈ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯನ್ನು ಕೂಡ ನಿರ್ಧರಿಸಲಿದೆ. ಅಂದರೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

ಮತ್ತೊಂದೆಡೆ ಈ ಪಂದ್ಯದ ಫಲಿತಾಂಶ ಆರ್​ಸಿಬಿ ತಂಡದ ಪ್ಲೇಆಫ್ ಹಾದಿಯನ್ನು ಕೂಡ ನಿರ್ಧರಿಸಲಿದೆ. ಅಂದರೆ ಇಂದಿನ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂಬುದರ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ಲೇಆಫ್ ಹಾದಿ ಸುಗಮವಾಗಲಿದೆ.

2 / 5
ಅದರಂತೆ ಆರ್​ಸಿಬಿ ಪಾಲಿಗೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲುವುದು ಉತ್ತಮ. ಏಕೆಂದರೆ 12 ಅಂಕಗಳನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.482 ನೆಟ್ ರನ್ ರೇಟ್ ಹೊಂದಿದೆ. ಇನ್ನು ಆರ್​ಸಿಬಿ (+0.387) ತಂಡವನ್ನು ನೆಟ್ ರನ್​ ರೇಟ್​ನಲ್ಲಿ ಹಿಂದಿಕ್ಕಲು  ಡೆಲ್ಲಿ ಕ್ಯಾಪಿಟಲ್ಸ್​ ಏನಿಲ್ಲಾ ಅಂದರೂ ಕನಿಷ್ಠ 100 ಕ್ಕಿಂತ ಹೆಚ್ಚಿನ ರನ್​ಗಳ ಅಂತರದಿಂದ ಗೆಲ್ಲಬೇಕು. ಅಂತಹ ಅಮೋಘ ಗೆಲುವು ಸಾಧಿಸಿದರೆ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ​ಆರ್​ಸಿಬಿಯನ್ನು ನೆಟ್ ರನ್​ ರೇಟ್​ನಲ್ಲಿ ಹಿಂದಿಕ್ಕಲು ಸಾಧ್ಯ.

ಅದರಂತೆ ಆರ್​ಸಿಬಿ ಪಾಲಿಗೆ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲುವುದು ಉತ್ತಮ. ಏಕೆಂದರೆ 12 ಅಂಕಗಳನ್ನು ಹೊಂದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು -0.482 ನೆಟ್ ರನ್ ರೇಟ್ ಹೊಂದಿದೆ. ಇನ್ನು ಆರ್​ಸಿಬಿ (+0.387) ತಂಡವನ್ನು ನೆಟ್ ರನ್​ ರೇಟ್​ನಲ್ಲಿ ಹಿಂದಿಕ್ಕಲು ಡೆಲ್ಲಿ ಕ್ಯಾಪಿಟಲ್ಸ್​ ಏನಿಲ್ಲಾ ಅಂದರೂ ಕನಿಷ್ಠ 100 ಕ್ಕಿಂತ ಹೆಚ್ಚಿನ ರನ್​ಗಳ ಅಂತರದಿಂದ ಗೆಲ್ಲಬೇಕು. ಅಂತಹ ಅಮೋಘ ಗೆಲುವು ಸಾಧಿಸಿದರೆ ಮಾತ್ರ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ​ಆರ್​ಸಿಬಿಯನ್ನು ನೆಟ್ ರನ್​ ರೇಟ್​ನಲ್ಲಿ ಹಿಂದಿಕ್ಕಲು ಸಾಧ್ಯ.

3 / 5
ಇದೇ ವೇಳೆ ಲಕ್ನೋ ಸೂಪರ್ ಜೈಂಟ್ಸ್​ ತಂಡ ಸೋತರೆ 16 ಅಂಕಗಳನ್ನು ಕಲೆಗಹಾಕುವ ಅವಕಾಶ ಕಳೆದುಕೊಳ್ಳಲಿದೆ. ಅಂದರೆ ಎಲ್​ಎಸ್​ಜಿ ತಂಡಕ್ಕೆ ಇನ್ನು 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್​ಸಿಬಿ ಪ್ಲೇಆಫ್ ರೇಸ್​ನಿಂದ ಹೊರಬೀಳಬಹುದು. ಅದೇ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಸೋತರೆ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಾಗಲಿದೆ.

ಇದೇ ವೇಳೆ ಲಕ್ನೋ ಸೂಪರ್ ಜೈಂಟ್ಸ್​ ತಂಡ ಸೋತರೆ 16 ಅಂಕಗಳನ್ನು ಕಲೆಗಹಾಕುವ ಅವಕಾಶ ಕಳೆದುಕೊಳ್ಳಲಿದೆ. ಅಂದರೆ ಎಲ್​ಎಸ್​ಜಿ ತಂಡಕ್ಕೆ ಇನ್ನು 2 ಪಂದ್ಯಗಳಿದ್ದು, ಈ ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 16 ಅಂಕಗಳನ್ನು ಪಡೆಯಲಿದೆ. ಇದರಿಂದ ಆರ್​ಸಿಬಿ ಪ್ಲೇಆಫ್ ರೇಸ್​ನಿಂದ ಹೊರಬೀಳಬಹುದು. ಅದೇ ಇಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್​ ಸೋತರೆ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸುವ ಅವಕಾಶ ಹೆಚ್ಚಾಗಲಿದೆ.

4 / 5
ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಡಿಮೆ ರನ್​ಗಳ ಅಂತರದಿಂದ ಅಥವಾ ಸಾಮಾನ್ಯ ಗೆಲುವು ಸಾಧಿಸಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಇದಾಗ್ಯೂ ಸಿಎಸ್​ಕೆ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲು ಉತ್ತಮ ಅವಕಾಶ ಇರಲಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದು ಉತ್ತಮ.

ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕಡಿಮೆ ರನ್​ಗಳ ಅಂತರದಿಂದ ಅಥವಾ ಸಾಮಾನ್ಯ ಗೆಲುವು ಸಾಧಿಸಬೇಕು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಂಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಲಿದೆ. ಇದಾಗ್ಯೂ ಸಿಎಸ್​ಕೆ ತಂಡದ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಆರ್​ಸಿಬಿಗೆ ಅಂಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಲು ಉತ್ತಮ ಅವಕಾಶ ಇರಲಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದು ಉತ್ತಮ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್