AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: DKಯ ಅತಿಯಾದ ಆತ್ವವಿಶ್ವಾಸದಿಂದ ಸೋತ RCB

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 36ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಕಾರಣವಾಗಿತ್ತು. ಆದರೆ ಈ ಹೋರಾಟದಲ್ಲಿ ಆರ್​ಸಿಬಿ ಕೇವಲ 1 ರನ್​ನಿಂದ ಸೋಲಬೇಕಾಯಿತು. ಈ ಸೋಲಿಗೆ ಮುಖ್ಯ ಕಾರಣ ದಿನೇಶ್ ಕಾರ್ತಿಕ್ ಎಂಬ ವಾದಗಳು ಕೇಳಿ ಬರುತ್ತಿದೆ. ಇದಕ್ಕೆ ಕಾರಣ 19ನೇ ಓವರ್​ನಲ್ಲಿ ಡಿಕೆ ತೋರಿಸಿದ ಅತಿಯಾದ ಆತ್ಮವಿಶ್ವಾಸ.

TV9 Web
| Edited By: |

Updated on: Apr 22, 2024 | 11:40 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಆರ್​ಸಿಬಿ ತಂಡವು 7ನೇ ಬಾರಿ ಸೋಲನುಭವಿಸಿದೆ. ಆದರೆ ಈ ಬಾರಿ ಸೋಲಿನ ಅಂತರ ಕೇವಲ 1 ರನ್​ ಮಾತ್ರ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಕೊನೆಯ ಎಸೆತದಲ್ಲಿ ಸೋಲನುಭವಿಸಿತು. ಅದು ಕೂಡ ರನೌಟ್ ಆಗುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಆರ್​ಸಿಬಿ ತಂಡವು 7ನೇ ಬಾರಿ ಸೋಲನುಭವಿಸಿದೆ. ಆದರೆ ಈ ಬಾರಿ ಸೋಲಿನ ಅಂತರ ಕೇವಲ 1 ರನ್​ ಮಾತ್ರ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಕೊನೆಯ ಎಸೆತದಲ್ಲಿ ಸೋಲನುಭವಿಸಿತು. ಅದು ಕೂಡ ರನೌಟ್ ಆಗುವ ಮೂಲಕ ಎಂಬುದು ವಿಶೇಷ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 222 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಪರಿಣಾಮ ಆರ್​ಸಿಬಿ ತಂಡಕ್ಕೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿತ್ತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 222 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ದಿಟ್ಟ ಹೋರಾಟವನ್ನೇ ಪ್ರದರ್ಶಿಸಿತು. ಪರಿಣಾಮ ಆರ್​ಸಿಬಿ ತಂಡಕ್ಕೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳು ಬೇಕಿತ್ತು.

2 / 7
ಅತ್ತ ದಿನೇಶ್ ಕಾರ್ತಿಕ್ ಹಾಗೂ ಕರ್ಣ್ ಶರ್ಮಾ ಕ್ರೀಸ್​ನಲ್ಲಿದ್ದರು. ಹೀಗಾಗಿಯೇ ಆರ್​ಸಿಬಿ ತಂಡವು ಚೇಸ್ ಮಾಡಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಆ್ಯಂಡ್ರೆ ರಸೆಲ್ ಎಸೆತದ 19ನೇ ಓವರ್​ನ ಮೊದಲ ಎರಡು ಎಸೆತಗಳಲ್ಲಿ ದಿನೇಶ್ ಕಾರ್ತಿಕ್ ಯಾವುದೇ ರನ್ ಓಡಿರಲಿಲ್ಲ. ಇನ್ನು ಮೂರನೇ ಎಸೆತದಲ್ಲಿ ಸಿಕ್ಸ್ ಬಾರಿಸಿದರು.

ಅತ್ತ ದಿನೇಶ್ ಕಾರ್ತಿಕ್ ಹಾಗೂ ಕರ್ಣ್ ಶರ್ಮಾ ಕ್ರೀಸ್​ನಲ್ಲಿದ್ದರು. ಹೀಗಾಗಿಯೇ ಆರ್​ಸಿಬಿ ತಂಡವು ಚೇಸ್ ಮಾಡಲಿದೆ ಎಂದೇ ಎಲ್ಲರೂ ಭಾವಿಸಿದ್ದರು. ಆದರೆ ಆ್ಯಂಡ್ರೆ ರಸೆಲ್ ಎಸೆತದ 19ನೇ ಓವರ್​ನ ಮೊದಲ ಎರಡು ಎಸೆತಗಳಲ್ಲಿ ದಿನೇಶ್ ಕಾರ್ತಿಕ್ ಯಾವುದೇ ರನ್ ಓಡಿರಲಿಲ್ಲ. ಇನ್ನು ಮೂರನೇ ಎಸೆತದಲ್ಲಿ ಸಿಕ್ಸ್ ಬಾರಿಸಿದರು.

3 / 7
ಆದರೆ 4ನೇ ಎಸೆತದಲ್ಲಿ ರನ್ ಓಡಲು ನಿರಾಕರಿಸಿದರು. 5ನೇ ಎಸೆತದಲ್ಲಿ ಫೋರ್ ಬಾರಿಸಿದರು. ಇನ್ನು ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಮೂರು ಬಾರಿ 1 ರನ್ ಓಡುವ ಅವಕಾಶವಿದ್ದರೂ ದಿನೇಶ್ ಕಾರ್ತಿಕ್ ಕರ್ಣ್ ಶರ್ಮಾಗೆ ಸ್ಟ್ರೈಕ್ ನೀಡಲು ನಿರಾಕರಿಸಿದ್ದರು.

ಆದರೆ 4ನೇ ಎಸೆತದಲ್ಲಿ ರನ್ ಓಡಲು ನಿರಾಕರಿಸಿದರು. 5ನೇ ಎಸೆತದಲ್ಲಿ ಫೋರ್ ಬಾರಿಸಿದರು. ಇನ್ನು ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಮೂರು ಬಾರಿ 1 ರನ್ ಓಡುವ ಅವಕಾಶವಿದ್ದರೂ ದಿನೇಶ್ ಕಾರ್ತಿಕ್ ಕರ್ಣ್ ಶರ್ಮಾಗೆ ಸ್ಟ್ರೈಕ್ ನೀಡಲು ನಿರಾಕರಿಸಿದ್ದರು.

4 / 7
ಆರ್​ಸಿಬಿ ತಂಡದಲ್ಲಿ ಆಲ್​ರೌಂಡರ್ ಆಗಿಯೇ ಸ್ಥಾನ ಪಡೆದಿರುವ ಕರ್ಣ್ ಶರ್ಮಾ ಮೇಲೆ ದಿನೇಶ್ ಕಾರ್ತಿಕ್ ಕಿಂಚಿತ್ತೂ ವಿಶ್ವಾಸ ಹೊಂದಿರಲಿಲ್ಲ. ಅಲ್ಲದೆ ತಾನೇ ಫಿನಿಶಿಂಗ್ ಮಾಡುತ್ತೇನೆ ಎಂಬ ಅತಿಯಾದ ಆತ್ವವಿಶ್ವಾಸದಲ್ಲಿ ಡಿಕೆ ಬ್ಯಾಟ್ ಬೀಸಿದ್ದರು.

ಆರ್​ಸಿಬಿ ತಂಡದಲ್ಲಿ ಆಲ್​ರೌಂಡರ್ ಆಗಿಯೇ ಸ್ಥಾನ ಪಡೆದಿರುವ ಕರ್ಣ್ ಶರ್ಮಾ ಮೇಲೆ ದಿನೇಶ್ ಕಾರ್ತಿಕ್ ಕಿಂಚಿತ್ತೂ ವಿಶ್ವಾಸ ಹೊಂದಿರಲಿಲ್ಲ. ಅಲ್ಲದೆ ತಾನೇ ಫಿನಿಶಿಂಗ್ ಮಾಡುತ್ತೇನೆ ಎಂಬ ಅತಿಯಾದ ಆತ್ವವಿಶ್ವಾಸದಲ್ಲಿ ಡಿಕೆ ಬ್ಯಾಟ್ ಬೀಸಿದ್ದರು.

5 / 7
ಪರಿಣಾಮ 19ನೇ ಓವರ್​ನಲ್ಲಿ ಆರ್​ಸಿಬಿ 3 ರನ್​ಗಳನ್ನು ಕೈಚೆಲ್ಲಿಕೊಂಡಿತು. ಇತ್ತ ಕೊನೆಯ ಓವರ್​ನಲ್ಲಿ 21 ರನ್​ಗಳ ಗುರಿ ಪಡೆದ ಕರ್ಣ್ ಶರ್ಮಾ ತಾನು ಯಾವುದೇ ಫಿನಿಶರ್​ಗೂ ಕಮ್ಮಿ ಇಲ್ಲ ಎಂಬಂತೆ ಮಿಚೆಲ್ ಸ್ಟಾರ್ಕ್​ಗೆ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದರು. ಆದರೆ 5ನೇ ಎಸೆತದಲ್ಲಿ ಸ್ಟಾರ್ಕ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಕರ್ಣ್ ಶರ್ಮಾ ಹೊರನಡೆಯಬೇಕಾಯಿತು.

ಪರಿಣಾಮ 19ನೇ ಓವರ್​ನಲ್ಲಿ ಆರ್​ಸಿಬಿ 3 ರನ್​ಗಳನ್ನು ಕೈಚೆಲ್ಲಿಕೊಂಡಿತು. ಇತ್ತ ಕೊನೆಯ ಓವರ್​ನಲ್ಲಿ 21 ರನ್​ಗಳ ಗುರಿ ಪಡೆದ ಕರ್ಣ್ ಶರ್ಮಾ ತಾನು ಯಾವುದೇ ಫಿನಿಶರ್​ಗೂ ಕಮ್ಮಿ ಇಲ್ಲ ಎಂಬಂತೆ ಮಿಚೆಲ್ ಸ್ಟಾರ್ಕ್​ಗೆ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದರು. ಆದರೆ 5ನೇ ಎಸೆತದಲ್ಲಿ ಸ್ಟಾರ್ಕ್ ಹಿಡಿದ ಅದ್ಭುತ ಕ್ಯಾಚ್​ನಿಂದಾಗಿ ಕರ್ಣ್ ಶರ್ಮಾ ಹೊರನಡೆಯಬೇಕಾಯಿತು.

6 / 7
ಅಂತಿಮವಾಗಿ ಆರ್​ಸಿಬಿ ತಂಡವು 1 ರನ್​ನಿಂದ ಸೋಲೊಪ್ಪಿಕೊಂಡಿತು. ಒಂದು ವೇಳೆ ಡಿಕೆ 19ನೇ ಓವರ್​ನಲ್ಲಿ 3 ಬಾರಿ ಸಿಕ್ಕ ಅವಕಾಶದಲ್ಲಿ ಕನಿಷ್ಠ 1 ರನ್​ ಓಡಿದ್ದರೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಗೆಲುವು ದಕ್ಕುತ್ತಿತ್ತು. ಆದರೆ ದಿನೇಶ್ ಕಾರ್ತಿಕ್ ಅವರ ಅತಿಯಾದ ಆತ್ಮವಿಶ್ವಾಸವೇ ಆರ್​ಸಿಬಿ ಪಾಲಿಗೆ ಮುಳುವಾಯಿತು.

ಅಂತಿಮವಾಗಿ ಆರ್​ಸಿಬಿ ತಂಡವು 1 ರನ್​ನಿಂದ ಸೋಲೊಪ್ಪಿಕೊಂಡಿತು. ಒಂದು ವೇಳೆ ಡಿಕೆ 19ನೇ ಓವರ್​ನಲ್ಲಿ 3 ಬಾರಿ ಸಿಕ್ಕ ಅವಕಾಶದಲ್ಲಿ ಕನಿಷ್ಠ 1 ರನ್​ ಓಡಿದ್ದರೂ ಈ ಪಂದ್ಯದಲ್ಲಿ ಆರ್​ಸಿಬಿ ತಂಡಕ್ಕೆ ಗೆಲುವು ದಕ್ಕುತ್ತಿತ್ತು. ಆದರೆ ದಿನೇಶ್ ಕಾರ್ತಿಕ್ ಅವರ ಅತಿಯಾದ ಆತ್ಮವಿಶ್ವಾಸವೇ ಆರ್​ಸಿಬಿ ಪಾಲಿಗೆ ಮುಳುವಾಯಿತು.

7 / 7
Web contact
Web contact

TV9 Kannada

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ