AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ರನ್ ಮೆಷಿನ್… ಪಂಜಾಬ್ ಕಿಂಗ್ಸ್​ ಚಿಂತೆ ಹೆಚ್ಚಿಸಿದ ಹರ್ಷಲ್ ಪಟೇಲ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 11ನೇ ಪಂದ್ಯದಲ್ಲೂ ಪಂಜಾಬ್ ಕಿಂಗ್ಸ್ ವೇಗಿ ಹರ್ಷಲ್ ಪಟೇಲ್ ದುಬಾರಿಯಾಗಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ 4 ಓವರ್​ಗಳನ್ನು ಬೌಲಿಂಗ್ ಮಾಡಿರುವ ಹರ್ಷಲ್ ಪಟೇಲ್ ಬರೋಬ್ಬರಿ 45 ರನ್ ನೀಡಿದ್ದಾರೆ. ಇದಕ್ಕೂ ಮುನ್ನ ನಡೆದ ಎರಡೂ ಪಂದ್ಯಗಳಲ್ಲೂ ಹರ್ಷಲ್ ಪಟೇಲ್ 10ರ ಸರಾಸರಿಯಲ್ಲಿ ರನ್ ಬಿಟ್ಟು ಕೊಟ್ಟಿದ್ದರು.

TV9 Web
| Edited By: |

Updated on: Mar 31, 2024 | 7:11 AM

Share
ಈ ಬಾರಿಯ ಐಪಿಎಲ್ (IPL 2024)​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಹರ್ಷಲ್ ಪಟೇಲ್ (Harshal Patel) ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬರೋಬ್ಬರಿ 11.75 ಕೋಟಿ ರೂ. ನೀಡಿ ಖರೀದಿಸಿತ್ತು. ಈ ದುಬಾರಿ ಖರೀದಿಯೂ ಇದೀಗ ಪಂಜಾಬ್ ಕಿಂಗ್ಸ್ ಪಾಲಿಗೆ ದುಬಾರಿಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಸಾಕ್ಷಿಯೇ ಕಳೆದ ಮೂರು ಪಂದ್ಯಗಳಲ್ಲಿನ ಹರ್ಷಲ್ ಅವರ ಪ್ರದರ್ಶನ.

ಈ ಬಾರಿಯ ಐಪಿಎಲ್ (IPL 2024)​ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಹರ್ಷಲ್ ಪಟೇಲ್ (Harshal Patel) ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಬರೋಬ್ಬರಿ 11.75 ಕೋಟಿ ರೂ. ನೀಡಿ ಖರೀದಿಸಿತ್ತು. ಈ ದುಬಾರಿ ಖರೀದಿಯೂ ಇದೀಗ ಪಂಜಾಬ್ ಕಿಂಗ್ಸ್ ಪಾಲಿಗೆ ದುಬಾರಿಯಾಗಿ ಪರಿಣಮಿಸುತ್ತಿದೆ. ಇದಕ್ಕೆ ಸಾಕ್ಷಿಯೇ ಕಳೆದ ಮೂರು ಪಂದ್ಯಗಳಲ್ಲಿನ ಹರ್ಷಲ್ ಅವರ ಪ್ರದರ್ಶನ.

1 / 6
ಟೀಮ್ ಇಂಡಿಯಾ ವೇಗಿಯ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಪಂಜಾಬ್ ಕಿಂಗ್ಸ್ ಪಾಲಿಗೆ ಹರ್ಷಲ್ ಪಂದ್ಯದಿಂದ ಪಂದ್ಯಕ್ಕೆ ದುಬಾರಿಯಾಗುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 4 ಓವರ್​ ಎಸೆದಿದ್ದ ಹರ್ಷಲ್ ನೀಡಿದ್ದು ಬರೋಬ್ಬರಿ 47 ರನ್​ಗಳು.

ಟೀಮ್ ಇಂಡಿಯಾ ವೇಗಿಯ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದ ಪಂಜಾಬ್ ಕಿಂಗ್ಸ್ ಪಾಲಿಗೆ ಹರ್ಷಲ್ ಪಂದ್ಯದಿಂದ ಪಂದ್ಯಕ್ಕೆ ದುಬಾರಿಯಾಗುತ್ತಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ 4 ಓವರ್​ ಎಸೆದಿದ್ದ ಹರ್ಷಲ್ ನೀಡಿದ್ದು ಬರೋಬ್ಬರಿ 47 ರನ್​ಗಳು.

2 / 6
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಹರ್ಷಲ್ ಪಟೇಲ್ 4 ಓವರ್​ಗಳಲ್ಲಿ 45 ರನ್​ಗಳು ಬಿಟ್ಟುಕೊಟ್ಟಿದ್ದರು. ಇದುವೇ ಆರ್​ಸಿಬಿ ವಿರುದ್ಧ ಪಂಜಾಬ್ ತಂಡದ ಸೋಲಿಗೆ ಕಾರಣವಾಗಿತ್ತು.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಹರ್ಷಲ್ ಪಟೇಲ್ 4 ಓವರ್​ಗಳಲ್ಲಿ 45 ರನ್​ಗಳು ಬಿಟ್ಟುಕೊಟ್ಟಿದ್ದರು. ಇದುವೇ ಆರ್​ಸಿಬಿ ವಿರುದ್ಧ ಪಂಜಾಬ್ ತಂಡದ ಸೋಲಿಗೆ ಕಾರಣವಾಗಿತ್ತು.

3 / 6
ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ 45 ರನ್ ನೀಡಿದ್ದಾರೆ. ಡೆತ್ ಓವರ್​ಗಳ ವೇಳೆ ಹೆಚ್ಚಿನ ರನ್ ನೀಡುವ ಮೂಲಕ ಮತ್ತೊಮ್ಮೆ ಹರ್ಷಲ್ ಪಟೇಲ್ ಪಂಜಾಬ್ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದಾರೆ.

ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 4 ಓವರ್​ಗಳಲ್ಲಿ 45 ರನ್ ನೀಡಿದ್ದಾರೆ. ಡೆತ್ ಓವರ್​ಗಳ ವೇಳೆ ಹೆಚ್ಚಿನ ರನ್ ನೀಡುವ ಮೂಲಕ ಮತ್ತೊಮ್ಮೆ ಹರ್ಷಲ್ ಪಟೇಲ್ ಪಂಜಾಬ್ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದಾರೆ.

4 / 6
ಈ ಮೂಲಕ ಕೇವಲ ಮೂರು ಪಂದ್ಯಗಳಲ್ಲೇ ಹರ್ಷಲ್ ಪಟೇಲ್ 137 ರನ್​ ಬಿಟ್ಟುಕೊಟ್ಟಿದ್ದಾರೆ. ಅಂದರೆ ಪಂಜಾಬ್ ಕಿಂಗ್ಸ್ ತಂಡದ ಇತರೆ ಬೌಲರ್​ಗಳು ಉತ್ತಮ ಪ್ರದರ್ಶನ ನೀಡಿದರೂ ಹರ್ಷಲ್ ಪಟೇಲ್ ಮಾತ್ರ ಪ್ರತಿ ಪಂದ್ಯದಲ್ಲೂ 10 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ರನ್ ನೀಡುತ್ತಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್​ ತಂಡದ ಸೋಲಿಗೆ ಕಾರಣವಾಗುತ್ತಿದ್ದಾರೆ.

ಈ ಮೂಲಕ ಕೇವಲ ಮೂರು ಪಂದ್ಯಗಳಲ್ಲೇ ಹರ್ಷಲ್ ಪಟೇಲ್ 137 ರನ್​ ಬಿಟ್ಟುಕೊಟ್ಟಿದ್ದಾರೆ. ಅಂದರೆ ಪಂಜಾಬ್ ಕಿಂಗ್ಸ್ ತಂಡದ ಇತರೆ ಬೌಲರ್​ಗಳು ಉತ್ತಮ ಪ್ರದರ್ಶನ ನೀಡಿದರೂ ಹರ್ಷಲ್ ಪಟೇಲ್ ಮಾತ್ರ ಪ್ರತಿ ಪಂದ್ಯದಲ್ಲೂ 10 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ರನ್ ನೀಡುತ್ತಿದ್ದಾರೆ. ಈ ಮೂಲಕ ಪಂಜಾಬ್ ಕಿಂಗ್ಸ್​ ತಂಡದ ಸೋಲಿಗೆ ಕಾರಣವಾಗುತ್ತಿದ್ದಾರೆ.

5 / 6
ಅಂದಹಾಗೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿದ್ದ ಹರ್ಷಲ್ ಪಟೇಲ್ 13 ಪಂದ್ಯಗಳಲ್ಲಿ ಪ್ರತಿ ಓವರ್​ಗೆ 9.66 ರ ಸರಾಸರಿಯಲ್ಲಿ ರನ್ ನೀಡಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ಅವರನ್ನು ಬಿಡುಗಡೆ ಮಾಡಿತ್ತು. ಆದರೆ ಆರ್​ಸಿಬಿ ಕೈಬಿಟ್ಟ ಬೆನ್ನಲ್ಲೇ 11.75 ಕೋಟಿ ರೂ. ನೀಡಿ ಖರೀದಿಸಿರುವ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಇದೀಗ ಸಂಕಷ್ಟಕ್ಕೆ ಸಿಲುಕಿದೆ.

ಅಂದಹಾಗೆ ಕಳೆದ ಸೀಸನ್​ನಲ್ಲಿ ಆರ್​ಸಿಬಿ ತಂಡದಲ್ಲಿದ್ದ ಹರ್ಷಲ್ ಪಟೇಲ್ 13 ಪಂದ್ಯಗಳಲ್ಲಿ ಪ್ರತಿ ಓವರ್​ಗೆ 9.66 ರ ಸರಾಸರಿಯಲ್ಲಿ ರನ್ ನೀಡಿದ್ದರು. ಇದೇ ಕಾರಣದಿಂದಾಗಿ ಆರ್​ಸಿಬಿ ಅವರನ್ನು ಬಿಡುಗಡೆ ಮಾಡಿತ್ತು. ಆದರೆ ಆರ್​ಸಿಬಿ ಕೈಬಿಟ್ಟ ಬೆನ್ನಲ್ಲೇ 11.75 ಕೋಟಿ ರೂ. ನೀಡಿ ಖರೀದಿಸಿರುವ ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯು ಇದೀಗ ಸಂಕಷ್ಟಕ್ಕೆ ಸಿಲುಕಿದೆ.

6 / 6
Follow Us
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ