AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: RCB ಬೌಲಿಂಗ್ ವೀಕು: ಗೆಲ್ಲೋಕೆ ರಣತಂತ್ರ ತಿಳಿಸಿದ ಫಾಫ್ ಡುಪ್ಲೆಸಿಸ್

IPL 2024: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2024) 17ನೇ ಆವೃತ್ತಿಯಲ್ಲಿ ಆರ್​ಸಿಬಿ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್ ಮಾತ್ರ. ಉಳಿದ ಐದು ಪಂದ್ಯಗಳಲ್ಲಿ ಹೀನಾಯ ಸೋಲನುಭವಿಸಿ ಇದೀಗ IPL 2024 ರ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ.

TV9 Web
| Edited By: |

Updated on: Apr 14, 2024 | 2:22 PM

Share
ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) ಸೀಸನ್ 17 ರಲ್ಲಿ ಹೊಸ ಅಧ್ಯಾಯ ಬರೆಯುವ ಹುರುಪಿನೊಂದಿಗೆ ಕಣಕ್ಕಿಳಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಆಡಿರುವ 6 ಪಂದ್ಯಗಳಲ್ಲಿ ಆರ್​ಸಿಬಿ ಗೆದ್ದಿರುವುದು ಕೇವಲ 1 ಮ್ಯಾಚ್​ನಲ್ಲಿ ಮಾತ್ರ.

1 / 6
ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

ಸಿಎಸ್​ಕೆ ವಿರುದ್ಧದ ಸೋಲಿನೊಂದಿಗೆ ಐಪಿಎಲ್ ಸೀಸನ್​-17 ಆರಂಭಿಸಿದ ಆರ್​ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿತ್ತು. ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್, ಲಕ್ನೋ ಸೂಪರ್ ಜೈಂಟ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೋಲನುಭವಿಸಿದೆ.

2 / 6
ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಆರ್​ಸಿಬಿ ತಂಡದ ಈ ಸೋಲುಗಳಿಗೆ ಮುಖ್ಯ ಕಾರಣ ಬೌಲರ್​ಗಳು ಎಂದಿದ್ದಾರೆ ಫಾಫ್ ಡುಪ್ಲೆಸಿಸ್. ಆರ್​ಸಿಬಿ ತಂಡದ ಬೌಲಿಂಗ್ ವಿಭಾಗವು ಅಷ್ಟೊಂದು ಹರಿತವಾಗಿಲ್ಲ. ಹೀಗಾಗಿಯೇ ನಾವು ಉತ್ತಮ ಮೊತ್ತ ಪೇರಿಸಿದರೂ ಸೋಲುತ್ತಿದ್ದೇವೆ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

3 / 6
ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

ಇನ್ನು ಈ ಸೋಲಿನ ಸಂಕೋಲೆಯಿಂದ ಆರ್​ಸಿಬಿಗೆ ಹೊರಬರಲು ಇರುವುದು ಒಂದೇ ಮಾರ್ಗ. ಅದುವೇ ಬೃಹತ್ ರನ್ ಮೊತ್ತದ ಗುರಿ ನೀಡುವುದು. ನಾವು ಏನೇ ಮಾಡುವುದಿದ್ದರೂ ಇನ್ನು ಬ್ಯಾಟಿಂಗ್​ನಲ್ಲಿ ಮಾಡಬೇಕಿದೆ. ನನ್ನ ಪ್ರಕಾರ, ಇನ್ಮುಂದೆ ನಾವು ಬಿಗ್ ಟಾರ್ಗೆಟ್​ ನೀಡಿದರೆ ಮಾತ್ರ ಗೆಲ್ಲೋಕೆ ಸಾಧ್ಯ ಎಂದು ಡುಪ್ಲೆಸಿಸ್ ಹೇಳಿದ್ದಾರೆ.

4 / 6
ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

ಈ ಮೂಲಕ ಮುಂಬರುವ ಪಂದ್ಯಗಳಲ್ಲಿ ಆರ್​ಸಿಬಿ ಬ್ಯಾಟರ್​ಗಳು ಆತ್ಮವಿಶ್ವಾಸದಿಂದ ಬ್ಯಾಟ್ ಬೀಸಬೇಕಿದೆ. ಅಲ್ಲದೆ ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಮೂಲಕ ಬೃಹತ್ ಮೊತ್ತ ಪೇರಿಸಿ ಗೆಲ್ಲುವ ದಾರಿ ಕಂಡುಕೊಳ್ಳಬೇಕಿದೆ ಎಂದು ಆರ್​ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದ್ದಾರೆ.

5 / 6
ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

ಆರ್​ಸಿಬಿ ತಂಡವು ತನ್ನ ಮುಂದಿನ ಪಂದ್ಯವನ್ನು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಏಪ್ರಿಲ್ 15 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಹೊಸ ರಣತಂತ್ರದೊಂದಿಗೆ ಕಣಕ್ಕಿಳಿಯುವ ಇರಾದೆಯಲ್ಲಿದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್